ಸ್ಯಾಂಡಲ್‌ವುಡ್ ಚಿತ್ರ ನಿರ್ದೇಶಕ ಹಾಗೂ ವಿತರಕ ಕಪಾಲಿ ಮೋಹನ್(60) ಜಾಲಳ್ಳಿ ಬಳಿಯ ಖಾಸಗಿ ಹೋಟೆಲ್‌ನಲ್ಲಿ ನೇಣಿಗೆ ಶರಣಾಗಿದ್ದಾರೆ. ಕಾರಣವಿನ್ನೂ ಸ್ಪಷ್ಟವಾಗಿಲ್ಲ. ಹಣಕಾಸಿನ ವ್ಯವಹಾರವೂ ಇರಬಹುದು ಅಥವಾ ಕೌಟುಂಬಿಕ ನೋವೂ ಕಾರಣವಿರಬಹುದು ಎನ್ನಲಾಗುತ್ತಿದೆ. 

ಗಾಂಧಿನಗರದ ಪ್ರತಿಯೊಬ್ಬ ನಿರ್ಮಾಪಕರು, ನಿರ್ದೇಶಕರು ಹಾಗೂ ಕಲಾವಿದರೊಂದಿಗೆ ಆಫ್ತ ಸಂಬಂಧ ಹೊಂದಿದ್ದ ಕಪಾಲಿ ಮೋಹನ್ ನೇಣಿಗೆ ಶರಣಾಗಿ, ಬಾರದ ಲೋಕಕ್ಕೆ ತೆರಳಿದ್ದಾರೆ.

Add Asianetnews Kannada as a Preferred SourcegooglePreferred

ಜಾಲಹಳ್ಳಿ ಸಮೀಪದ ತಮ್ಮ ಸುಪ್ರೀಂ ಸ್ಟಾರ್ ಹೋಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗಂಗಮ್ಮನ ಗುಡಿ ಪೊಲೀಸರು ಭೀಟಿ ನೀಡಿದ್ದಾರೆ. ಸ್ಯಾಂಡಲ್‌ವುಡ್‌ ಹೆಸರಾಂತ ಕಲಾವಿದರ ಜೊತೆ ಹಣ ಕಾಸಿನ ವ್ಯವಹಾರ ಮಾಡುತ್ತಿದ್ದ ಮೋಹನ್‌ ಅವರಿಗೆ ಸೇರಿರುವ ಹೊಟೇಲ್‌ವೊಂದರ ಮೇಲೆ ಕಳೆದ ವರ್ಷ ಸಿಸಿಬಿ ದಾಳಿ ನಡೆದಿತ್ತು.

ನಿರ್ಭಯಾ ಹಂತಕರ Hangmanಗೆ 1 ಲಕ್ಷ ರೂ; ನುಡಿದಂತೆ ನಡೆದ ಜಗ್ಗೇಶ್!

ಸಾವಿಗೂ ಮುನ್ನ ಆಡಿಯೋ ಮೂಲಕ ಸುವರ್ಣ ನ್ಯೂಸ್‌ ಬಳಿ ನ್ಯಾಯ ದೊರಕಿಸಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 7 ವರ್ಷಗಳಿದಂ ಬಸವೇಶ್ವರ ಬಸ್‌ ಸ್ಟ್ಯಾಂಡ್‌ನಲ್ಲಿ ಹೋಟೆಲ್‌ ನಡೆಸುತ್ತಿದ್ದರು. ಆದರೆ ಸಾಲ ಹೆಚ್ಚಾದ ಕಾರಣ 8 ತಿಂಗಳಿಂದ ಬಾಡಿಗೆಯನ್ನೂ ಕಟ್ಟಲು ಸಾಧ್ಯವಾಗದೇ ಸಹಾಯ ಮಾಡಲು ಸಿಎಂ ಯಡಿಯೂರಪ್ಪ ಹಾಗೂ ಲಕ್ಷಣ ಸವದಿ ಅವರ ಮೊರೆ ಹೋಗಿದ್ದಾರೆ. 

ಆತ್ಮಹತ್ಯೆಗೆ ಇದು ಒಂದು ತಿರುವಾದರೆ, ಕೆಲವು ಆಪ್ತರು ಹೇಳುವ ಪ್ರಕಾರ ಮೋಹನ್‌ ಮಗಳು ಅಂತರ್ಜಾತಿ ವಿವಾಹವಾದ ಬಳಿಕ ಮನನೊಂದಿದ್ದರು ಎನ್ನಲಾಗಿದೆ.