ತ್ರಿಕೋನ ಪೆರೋಲ್ ನಿರ್ದೇಶಕ ರಾಜಶೇಖರ್ ನಿರ್ಮಾಣದ ಚಿತ್ರ ಲಕ್ಷ್ಮೀ, ಅಚ್ಯುತ್ ಕುಮಾರ್, ಸುಧಾರಾಣಿ, ಸಾಧು ಕೋಕಿಲಾ, ಮಾರುತೇಶ್, ರಾಜ್‌ವೀರ್ ನಟಿಸಿದ್ದಾರೆ.

ಬಹುತೇಕ ಪೋಷಕ ಪಾತ್ರಧಾರಿಗಳೇ ನಟಿಸಿರುವ ‘ತ್ರಿಕೋನ’ ಸಿನಿಮಾ ಏಪ್ರಿಲ್ 1ರಂದು ತೆರೆಗೆ ಬರುತ್ತಿದೆ. ನಿರ್ಮಾಪಕ ರಾಜಶೇಖರ್ ಅವರೇ ಕತೆ ಹಾಗೂ ಚಿತ್ರಕಥೆ ಬರೆದು ನಿರ್ಮಿಸಿರುವ ಈ ಚಿತ್ರವನ್ನು 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಗೆ ತರಲು ಚಿತ್ರತಂಡ ತಯಾರಿ ಮಾಡಿಕೊಂಡಿದೆ. ಅಂದಹಾಗೆ ಈ ಹಿಂದೆ ‘143’ ಎನ್ನುವ ಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಕಾಂತ್ ಅವರೇ ಈ ಚಿತ್ರವನ್ನೂ ನಿರ್ದೇಶಿಸಿದ್ದಾರೆ. 

Add Asianetnews Kannada as a Preferred SourcegooglePreferred

ಸುರೇಶ್ ಹೆಬ್ಳಿಕರ್, ಲಕ್ಷ್ಮೀ, ಅಚ್ಯುತ್ ಕುಮಾರ್, ಸುಧಾರಾಣಿ, ಸಾಧು ಕೋಕಿಲಾ, ಮಾರುತೇಶ್, ರಾಜ್‌ವೀರ್, ಬೇಬಿ ಅದಿತ್ಯ, ಹಾಸಿನಿ, ಮನದೀಪ್ ರಾಯ್, ರಾಕ್‌ಲೈನ್ ಸುಧಾಕರ್... ಹೀಗೆ ದೊಡ್ಡ ತಾರಾಗಣ ಇರುವ ಚಿತ್ರವಿದು. ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ. ಇಲ್ಲಿ ಕಷ್ಟ ಎನ್ನುವ ಕ್ಯಾರೆಕ್ಟರ್ ಸುತ್ತ ಸಿನಿಮಾ ಸಾಗುತ್ತದೆ. ಅಂದರೆ ಕಷ್ಟ ಕೊಡುವ ವ್ಯಕ್ತಿಗೆ ಶಕ್ತಿ ಇದೆ, ಆ ಕಷ್ಟವನ್ನು ಎದುರಿಸುವವರಿಗೆ ಶಕ್ತಿ ಇರಲ್ಲ. ಇವರ ನಡುವೆ ಇಡೀ ಸಿನಿಮಾ ಸಾಗುತ್ತದೆ. ಆದರೆ, ಕಷ್ಟ ಯಾಕೆ ಇವರನ್ನು ಹಿಂಬಾಲಿಸುತ್ತದೆ ಎಂಬುದು ಚಿತ್ರದ ಮತ್ತೊಂದು ತಿರುವಂತೆ. 

Dear Sathya ಮಾ.10ಕ್ಕೆ ಡಿಯರ್‌ ಸತ್ಯ ಬಿಡುಗಡೆ!

ಇತ್ತೀಚೆಗಷ್ಟೆ ಸಾಧು ಕೋಕಿಲಾ ನಿರ್ದೇಶನದಲ್ಲಿ ‘ಜಾಲಿಡೇಸ್’ ಚಿತ್ರಕ್ಕೆ ಚಾಲನೆ ಕೊಟ್ಟಿರುವ ರಾಜಶೇಖರ್, ‘ತ್ರಿಕೋನ’ ಚಿತ್ರದ ಬಿಡುಗಡೆಯ ಸಂಭ್ರಮದಲ್ಲಿದ್ದಾರೆ. ‘ಪೆರೋಲ್, ಬರ್ಫಿ ಚಿತ್ರಗಳ ನಂತರ ನನ್ನ ಸಂಸ್ಥೆಯ ಮತ್ತೊಂದು ಸಿನಿಮಾ ತೆರೆ ಮೇಲೆ ಮೂಡುತ್ತಿದೆ. ನಾನೇ ನಿರ್ದೇಶಕನಾಗಿದ್ದರೂ ನಾನು ಬರೆದ ಕತೆ, ಚಿತ್ರಕತೆಯನ್ನು ಚಂದ್ರಕಾಂತ್ ಅವರಿಂದ ನಿರ್ದೇಶನ ಮಾಡಿಸುವುದಕ್ಕೆ ಕಾರಣ ಅವರ ಹಿಂದಿನ ಚಿತ್ರ ‘143’ ನೋಡಿದ್ದೆ.

ಕನ್ನಡ ಚಿತ್ರರಂಗದಲ್ಲಿ ಹಂಬಲ್‌ ಸ್ಟಾರ್‌ ಕಿರೀಟಿ ರೆಡ್ಡಿ ಹವಾ ಜೋರು!

ತುಂಬಾ ಚೆನ್ನಾಗಿ ಸಿನಿಮಾ ಮಾಡಿದ್ದರು. ಆದರೆ, ಆ ಚಿತ್ರದ ನಂತರ ಚಿತ್ರರಂಗವೇ ಬೇಡ ಎಂದು ಊರಿಗೆ ಹೋಗಿದ್ದ ಒಬ್ಬ ಪ್ರತಿಭಾವಂತ ನಿರ್ದೇಶಕನನ್ನು ನಾವು ಮರೆಯಬಾರದು ಎನ್ನುವ ಕಾರಣಕ್ಕೆ ‘ತ್ರಿಕೋನ’ ಚಿತ್ರವನ್ನು ನಿರ್ದೇಶನ ಮಾಡಿಸಿದ್ದೇನೆ. ನಾನು ಬರೆದ ಕತೆ ತುಂಬಾ ಚೆನ್ನಾಗಿ ತೆರೆ ಮೇಲೆ ತಂದಿದ್ದಾರೆ. ಪೋಷಕ ಪಾತ್ರಧಾರಿಗಳೇ ಚಿತ್ರದ ಮುಖ್ಯ ಕಲಾವಿದರು. ಸಾಮಾನ್ಯವಾಗಿ ಇಂಥ ಚಿತ್ರಗಳನ್ನು ತೋರಿಕೆಗೆ ಬಿಡುಗಡೆ ಮಾಡುತ್ತಾರೆ. ಆದರೆ, ನಾನು ಒಬ್ಬ ಸ್ಟಾರ್ ನಟನ ಚಿತ್ರದಷ್ಟೆ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುತ್ತಿದ್ದೇನೆ. ಏ.1ರಂದು 200 ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆ ಕಾಣುತ್ತಿದೆ’ ಎನ್ನುತ್ತಾರೆ ನಿರ್ಮಾಪಕ ರಾಜಶೇಖರ್.