ರಾಜಹಂಸ ಮತ್ತು ಜೋಕಾಲಿ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿರುವ ಗೌರಿಶಂಕರ್  ಅಕ್ಟೋಬರ್ 29ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅತ್ಯಂತ ಸರಳ, ಶಾಸ್ತ್ರೋಕ್ತವಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಟ ಗೌರಿಶಂಕರ್ ಹಾಗೂ ಅರುಣಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊರೋನಾ ಕಾರಣದಿಂದಾಗಿ ಸರಳ ಮದುವೆಗೆ ಸೈ ಎಂದ ನವ ಜೋಡಿಗೆ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಶುಭ ಹಾರೈಸುತ್ತಿದ್ದಾರೆ.

Add Asianetnews Kannada as a Preferred SourcegooglePreferred

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಲಕ್ಷ್ಮಿ ಬಾರಮ್ಮ ಚಂದನ್; ಸಂಭ್ರಮದ ಫೊಟೋಗಳು!

ಗುರು ಹಿರಿಯರು ನಿಶ್ಚಯಿಸಿರುವ ಮದುವೆ ಇದಾಗಿದ್ದು, ವಧು ಅರುಣಾ ಮೂಲತಃ ಶಿವಮೊಗ್ಗದವರಾಗಿದ್ದು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಅರುಣಾ ಫ್ಯಾಷನ್ ಡಿಸೈನರ್‌ ಪದವೀಧರೆ ಹಾಗೂ ಯೋಗ ಮತ್ತು ಹೋಮ್ ರೆಮಿಡೀಸ್‌ ಎಕ್ಸ್‌ಪರ್ಟ್. 

View post on Instagram

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಮದುವೆಯಾದ ನಂತರ ಅದೇ ದಿನ ಸಂಜೆ ವಧುವನ್ನು ತೀರ್ಥಹಳ್ಳಿ ತಾಲೂಕು ಶಂಕರ ಹಳ್ಳಿಯ ಸ್ವಗೃಹದಲ್ಲಿ ಮನೆ ತುಂಬಿಸಿಕೊಳ್ಳುವ ಶಾಸ್ತ್ರವೂ ಮಾಡಲಾಗಿತ್ತು. ಕೊರೋನಾದಿಂದ ಮದುವೆಯಲ್ಲಿ 20 ಜನರು ಮಾತ್ರ ಭಾಗಿಯಾಗಿದ್ದರು ಎನ್ನಲಾಗಿದೆ.

ನೇಹಾ ಕಕ್ಕರ್ ಧರಿಸಿದ ಡ್ರೀಮ್ ವೆಡ್ಡಿಂಗ್ ಲೆಹಂಗಾ ಖರೀದಿಸಿದ್ದಲ್ಲ, ಗಿಫ್ಟ್ ಸಿಕ್ಕಿದ್ದು: ಕೊಟ್ಟೋರ್ಯಾರು ಗೊತ್ತಾ 

ನಿರ್ದೇಶಕ ಹಾಗೂ ನಟನಾಗಿ ಗುರುತಿಸಿಕೊಂಡಿರುವ ಗೌರಿಶಂಕರ್ ಹಾಗೂ ಅರುಣಾ ಅವರಿಗೆ ಶುಭವಾಗಲಿ ಎಂದು ಆಶೀಸೋಣ.