ಶಿವರಾಜ್‌ಕುಮಾರ್ ವಿದೇಶದಲ್ಲಿ ಯಶಸ್ವಿ ಮೂತ್ರಕೋಶ ಪುನರ್‌ನಿರ್ಮಾಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಚೇತರಿಕೆ ಉತ್ತಮವಾಗಿದ್ದು, ದಿನಕ್ಕೆ ೩-೪ ಕಿ.ಮೀ. ನಡೆಯುತ್ತಿದ್ದಾರೆ. ಕರುಳಿನ ಭಾಗ ಬಳಸಿ ಮೂತ್ರಕೋಶ ನಿರ್ಮಿಸಲಾಗಿದೆ. ಅಭಿಮಾನಿಗಳ ಪ್ರೀತಿಗೆ ವೈದ್ಯರು ಭಾವುಕರಾಗಿದ್ದಾರೆ. ಶೀಘ್ರದಲ್ಲೇ ಸಂಪೂರ್ಣ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ.

ಕನ್ನಡ ಚಿತ್ರರಂಗ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅನಾರೋಗ್ಯದಿಂದ ಚಿಕಿತ್ಸೆ ಪಡೆಯಲು ವಿದೇಶಕ್ಕೆ ಪ್ರಯಾಣ ಮಾಡಿದ್ದರು. ಆಪರೇಷನ್ ನಂತರ ಒಂದು ತಿಂಗಳ ಕಾಲ ಅಲ್ಲೇ ಉಳಿದುಕೊಂಡು ಚೇತರಿಸಿಕೊಂಡು ಬರುವುದಾಗಿ ಹೇಳಿದ್ದರು. ಅಪರೇಷನ್ ಯಶಸ್ವಿಯಾಗಿ ನಡೆದಿದೆ ಎಂದು ಗೀತಾ ಶಿವರಾಜ್‌ಕುಮಾರ್, ಮಧು ಬಂಗಾರಪ್ಪ ಹಾಗೂ ಡಾ.ಮುರುಗೇಶ್ ಸ್ಪಷ್ಟನೆ ಕೊಟ್ಟಿದ್ದರು. ಅದಾದ ಮೇಲೆ ಶಿವಣ್ಣ ಅಲ್ಲಿ ಇಲ್ಲಿ ಓಡಾಡುತ್ತಿರುವುದು ವಾಕಿಂಗ್ ಮಾಡುತ್ತಿರುವ ಫೋಟೋ ವೈರಲ್ ಆಗಿತ್ತು. ಫೋಟೋಗಳನ್ನು ನೋಡಿದ ಮೇಲೆ ಶಿವಣ್ಣ ಅಭಿಮಾನಿಗಳಿಗೆ ಸಮಾಧಾನವಾಗಿತ್ತು. ಯಾವ ಆಪರೇಷನ್ ಆಗಿದ್ದು ಏನ್ ಅಗಿದ್ದು ಎಂದು ಮಧು ಬಂಗಾರಪ್ಪ ಹಂಚಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಡಾಕ್ಟರ್‌ ಅಂದ್ರೆ ನಮ್ಮ ಪಾಲಿನ ದೇವರು. ಡಾಕ್ಟರ್ ಮುರುಗೇಶ್ ಮನೋಹರ್‌ ಅವರ ಜೊತೆ ಮೊದಲ ಸಲ ಮಾತನಾಡಿದಾಗಲೇ ಧೈರ್ಯ ಬಂತು. ಸೋಷಿಯಲ್ ಮೀಡಿಯಾದಲ್ಲಿ ಕೆಲವರು ಬಹಳ ಹಗುರವಾಗಿ ಮಾತನಾಡುತ್ತಿದ್ದಾರೆ ಅದನ್ನು ಇಲ್ಲಿಗೆ ನಿಲ್ಲಿಸಬೇಕು. ಶಿವಣ್ಣ ಅವರೇ ಹೇಳಿರುವ ಪ್ರಕಾರ ಇದು bladder replacement bladder reconstruction ಅಂತ. ಮಾಹಿತಿ ಗೊತ್ತಿಲ್ಲದವರು ಕಿಡ್ನಿ ಫೆಲ್ಯೂರ್ ಹಾಗೆ ಹೀಗೆ ಅಂತ ಸುಳ್ಳು ಹಬ್ಬಿಸುತ್ತಿದ್ದಾರೆ. ಶಿವಣ್ಣ ಅವರಿಗೆ ನಿಜಕ್ಕೂ ದೇವರ ಆಶೀರ್ವಾದ ಇದೆ ಏಕೆಂದರೆ ಬ್ರೌನ್‌ನಲ್ಲಿ ಒಂದು ಸ್ಟಂಟ್‌ ಇದೆ, ಚಿಕ್ಕದಾಗಿ ಹಾರ್ಟ್ ಅಟ್ಯಾಕ್ ಆಗಿತ್ತು, ಕಾಲಿಗೆ ಪೆಟ್ಟಾಗಿತ್ತು ಈಗ ಆಪರೇಷನ್ ನಡೆದಿದೆ. ದಿನದಲ್ಲಿ ಸುಮಾರು 3-4 ಕಿಮೀ. ವಾಕಿಂಗ್ ಮಾಡುತ್ತಾರೆ ಶಿವಣ್ಣ, ಮನೆಯಲ್ಲಿ ಸುಮಾರು 5 ಸಾವಿರ ಹೆಜ್ಜೆ ನಡೆಯುತ್ತಿದ್ದಾರೆ. ಯಾವುದೇ ತೊಂದರೆ ಇಲ್ಲ ಶಿವಣ್ಣ ಆರೋಗ್ಯವಾಗಿದ್ದಾರೆ. 6 ಆಪರೇಷನ್‌ಗಳಲ್ಲಿ ಒಂದೇ ಸಮಯದಲ್ಲಿ ಮಾಡುತ್ತಾರೆ ಅಲ್ಲಿ ಕರುಳಿನ ಒಂದು ಭಾಗವನ್ನು ತೆಗೆದು ಬ್ಲಾಡರ್‌ಗೆ ಕನ್‌ಸ್ಟರ್ಕ್ಟ್‌ ಮಾಡುತ್ತಾರೆ. ಒಳಗಡೆ ಸುಮಾರು 190 ಹೊಲಗೆಗಳನ್ನು ಹಾಕಲಾಗಿದೆ. 4.30- 5 ಗಂಟೆಗಳಲ್ಲಿ ಡಾಕ್ಟರ್ ಆಪರೇಷನ್ ಮಾಡಿದ್ದಾರೆ. ಮೊದಲು ರೋಮೋಟಿಕ್‌ನಲ್ಲಿ ಆಪರೇಷನ್ ಮಾಡಬೇಕಾ ಅಥವಾ ಮಾನ್ಯುಯಲಿ ಮಾಡಬೇಕಾ ಎಂದು ಯೋಚನೆ ಮಾಡಿದ್ದರು...ಕೊನೆಯಲ್ಲಿ ಕೈಯಲ್ಲಿ ಮಾಡುವುದು ಎಂದು ನಿರ್ಧರಿಸಿದ್ದರು' ಎಂದು ಮಧು ಬಂಗಾರಪ್ಪ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

ಕನ್ನಡದಲ್ಲಿ ಬೆಳೆಗೆ ಹಿಂದಿಗೆ ಮಾರಿಕೊಂಡು ಈಗ 2.5 ಲಕ್ಷ ಕೇಳ್ತಾರೆ; ಸಂಜಿತ್‌ ಹೆಗ್ಡೆ ವಿರುದ್ಧ ಕೆ.ಮಂಜು ಗರಂ

'ಶಿವಣ್ಣ ಅವರ ಫೋಟೋ ಜೊತೆಗೆ ಡಾಕ್ಟರ್ ಫೋಟೋಗೆ ಪೂಜೆ ಮಾಡಿದ್ದರು. ಅದನ್ನು ನೋಡಿ ಡಾಕ್ಟರ್ ಕಣ್ಣೀರಿಟ್ಟರು, ಶಿವಣ್ಣ ಅವರ ಅಭಿಮಾನಿಗಳು ನಮ್ಮನ್ನು ಎಷ್ಟು ಪ್ರೀತಿಸುತ್ತಾರೆ ಎಂದು ಖುಷಿ ಪಟ್ಟರು. ಈಗ ವೈದ್ಯರು ನಮಗೆ ಫ್ಯಾಮಿಲಿ ಆದರು. ಅಭಿಮಾನಿಗಳು ನನಗೆ ಕಳಹಿಸುತ್ತಿದ್ದ ಮೆಸೇಜ್ ನೋಡಿದಾಗ ನನಗೆ ಕಣ್ಣಲ್ಲಿ ನೀರು ಬರುತ್ತಿತ್ತು. ಇದು ಸಣ್ಣ ಆಪರೇಷನ್ ಅಲ್ಲವೇ ಅಲ್ಲ ಇದು ದೊಡ್ಡ ಆಪರೇಷನ್. ಶಿವಣ್ಣ ವಯಸ್ಸು 63 ಅಲ್ಲ 36. ಒಳಗೆ ಇರುವ ಗಾಯಗಳು ಸಂಪೂರ್ಣವಾಗಿ ಗುಣಮುಖ ಆಗಬೇಕು. 16ರಂದು ಒಂದು ಟ್ಯೂಬ್ ತೆಗೆಯಲಿದ್ದಾರೆ. ಅದಾದ ಮೇಲೆ ಎಲ್ಲರಂತೆ ನಾರ್ಮಲ್ ಆಗಿರುತ್ತಾರೆ' ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. 

ಫಾರಿನ್ ಬೆಕ್ಕು ಮುದ್ದು ಮಾಡುತ್ತಿರುವ ವಿಜಯಲಕ್ಷ್ಮಿ ದರ್ಶನ್: ಫೋಟೋ ವೈರಲ್