ರಾಘವೇಂದ್ರ ರಾಜ್‌ಕುಮಾರ್ ಪುತ್ರ ಯುವ ಅವರ ಹೊಸ ಸಿನಿಮಾ ಟೀಸರ್‌ ವೀಕ್ಷಿಸಿದ ಮೆಗಾ ಸ್ಟಾರ್ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. 

'ಯುವ ರಣಧೀರ ಕಂಠೀರವ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡುತ್ತಿರುವ ಡಾ. ರಾಜ್‌ಕುಮಾರ್ ಕುಟುಂಬದ ಮತ್ತೊಬ್ಬ ಕಲಾವಿದ ಯುವ ರಾಜ್‌ಕುಮಾರ್. ಟೀಸರ್‌ ಹಾಗೂ ಶೀರ್ಷಿಕೆ ರಿಲೀಸ್ ಮಾಡುವ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಪರಭಾಷೆ ಕಲಾವಿದರಿಂದಲೂ ಶುಭಾಶಯಗಳು ಹರಿದು ಬರುತ್ತಿದ್ದು, ಮೆಗಾಸ್ಟಾರ್‌ ಮಾತ್ರ ಟೀಸರ್‌ ಹಾಗೂ ಚಿತ್ರದ ಪ್ರತಿಯೊಂದೂ ವಿಚಾರಗಳನ್ನು ಸೂಕ್ಷ್ಮವಾಗಿ ಗಮನಿಸಿ, ವಿಶ್ಲೇಷಿಸಿದ್ದಾರೆ.

Add Asianetnews Kannada as a Preferred SourcegooglePreferred

ಕೆಲವು ದಿನಗಳ ಹಿಂದೆ ಮೆಗಾ ಸ್ಟಾರ್ ಚಿರಂಜೀವಿ ಕೊರೋನಾ ಪಾಸಿಟಿವ್ ಎಂದು ತಿಳಿದು ಬಂದಿದ್ದು, ಮನೆಯಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಅದಕ್ಕೂ ಮೊದಲೇ ಬಿಡುವಾದ ಸಮಯದಲ್ಲಿ ಟೀಸರ್‌ ನೋಡಿ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. 

ರಾಜ್ಯೋತ್ಸವದಂದೇ ಯುವರಾಜನ ಭರ್ಜರಿ ಎಂಟ್ರಿ; ರಾಘಣ್ಣ ಪುತ್ರನ ಜೊತೆ ಸಂದರ್ಶನ! 

ಚಿರು ಮಾತು:
'ಯುವ ಐತಿಹಾಸಿಕ ಕಥೆ ಆಯ್ಕೆ ಮಾಡಿಕೊಂಡಿರುವುದು ನಿಜಕ್ಕೂ ದೊಡ್ಡ ಸವಾಲು. ಇದನ್ನು ಉತ್ತಮವಾಗಿ ನಿಭಾಯಿಸುತ್ತಾರೆ ಎಂಬ ನಂಬಿಕೆ ಇದೆ. ಅವರ ತಂಡಕ್ಕೆ ತುಂಬಾ ಒಳ್ಳೆಯದಾಗಲಿ. ಲೆಜೆಂಡರಿ ನಟ, ಅವರ ಮೊಮ್ಮಗ ಎಂಬ ದೊಡ್ಡ ಜವಾಬ್ದಾರಿ ಯುವ ಮೇಲಿದೆ. ಚಿತ್ರಕ್ಕೆ ಅದ್ಭುತ ತಯಾರಿ ಮಾಡಿಕೊಂಡಿದ್ದಾರೆ. ಖಂಡಿತವಾಗಿಯೂ ಈ ಸಿನಿಮಾ ಮೈಲಿಗಲ್ಲು ಸೃಷ್ಟಿಸುತ್ತದೆ. ರಾಜ್‌ಕುಮಾರ್ ಅವರ ಪರಂಪರೆ ಹಾಗೆಯೇ ಮುಂದರಿಯಲಿದೆ,' ಎಂದು ಚಿರಂಜೀವಿ ಮಾತನಾಡಿದ್ದಾರೆ.

ಟೀಸರ್‌ ರಿಲೀಸ್‌ ಆದ ಕೆಲವು ದಿನಗಳಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಡೈಲಾಗ್ ಡೆಲಿವರಿ ಹಾಗೂ ಫೈಟ್‌ ಎರಡೂ ಟೀಸರ್‌ನಲ್ಲಿ ಅತ್ಯುತ್ತಮವಾಗಿ ತೋರಿಸಲಾಗಿದೆ.