ನನ್ನ ಪಂಪನಾಣೆ, ನನ್ನ ಪದ ಬಳಕೆ ಉದ್ದೇಶ ಪೂರಿತವಲ್ಲ: ಕ್ಷಮೆ ಯಾಚಿಸಿದ ಹಂಸಲೇಖ
ತ್ಯಾಗ, ಸಹನೆಯ ಸಂಸ್ಕೃತಿಯನ್ನು ಜಗತ್ತಿಗೆ ನೀಡಿದ ಜೈನ ಸುಮುದಾಯಕ್ಕೆ ಶಿರವಾಗಿ ಕ್ಷಮೆ ಕೋರುತ್ತೇನೆ ಎಂದು ಹಂಸಲೇಖ ಹೇಳಿದ್ದಾರೆ.
ಬೆಂಗಳೂರು: ಜೈನ ಸಮುದಾಯದ ಕುರಿತು ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆ ಕೇಳಿದ್ದಾರೆ. ಈ ಸಂಬಂಧ ಲಿಖಿತ ಹಾಗೂ ವಿಡಿಯೋ ಮೂಲಕ ತಮ್ಮ ಹೇಳಿಕೆಯನ್ನು ಹಂಸಲೇಖ ಬಿಡುಗಡೆಗೊಳಿಸಿದ್ದಾರೆ. ಸೋಮವಾರ ಗೌರಿ ಚಿತ್ರದ ಸಾಂಗ್ ಲಾಂಚ್ ಕಾರ್ಯಕ್ರಮದ ವೇಳೆ ಮಾತನಾಡಿದ್ದ ಹಂಸಲೇಖ, ಜೈನರ ಫಿಲಾಸಫಿಯಲ್ಲಿ 24 ಜನ್ಮಗಳಿವೆ ಅಂತಾರೆ ಅದೆಲ್ಲ ಬುಲ್ ಶಿಟ್ ಎಂಬ ಪದ ಬಳಸಿದ್ದರು. ಈ ಹೇಳಿಕೆ ಜೈನ ಸಮುದಾಯದ ಜನತೆಯ ಕೆಂಗಣ್ಣಿಗೆ ಗುರಿಯಾಗಿತ್ತು. ಇದರಿಂದ ಎಚ್ಚೆತ್ತ ಹಂಸಲೇಖ ಜೈನ ಸಮುದಾಯದ ಜನತೆ ಬಳಿ ಕ್ಷಮೆ ಯಾಚಿಸಿದ್ದಾರೆ.
ಕ್ಷಮೆಯಿರಲಿ, ಹಂಸಲೇಖ ಹೇಳಿಕೆ ಹೀಗಿದೆ…
ನನ್ನ ಪಂಪನಾಣೆ, ನನ್ನ ಪದ ಬಳಕೆ ಉದ್ದೇಶ ಪೂರಿತವಲ್ಲ. ಗಲಾಟೆ, ಒತ್ತಡದ ಆ ಕ್ಯಾಮೆರಾಗಳ ಗುಂಪಿನಲ್ಲಿ ಆ ಮಾತು ತೂರಿ ಬಂದಿದೆ. ತ್ಯಾಗ, ಸಹನೆಯ ಸಂಸ್ಕೃತಿಯನ್ನು ಜಗತ್ತಿಗೆ ನೀಡಿದ ಜೈನ ಸುಮುದಾಯಕ್ಕೆ ಶಿರವಾಗಿ ಕ್ಷಮೆ ಕೋರುತ್ತೇನೆ ಎಂದು ಹಂಸಲೇಖ ಹೇಳಿದ್ದಾರೆ.
ಸಿಟ್ಟನ್ನ ಸ್ಕ್ರಿಪ್ಟ್ ಮಾಡಬೇಕು, ದ್ವೇಷವನ್ನ ಕ್ಯಾರೆಕ್ಟರ್ ಮಾಡಬೇಕು: ದರ್ಶನ್ಗೆ ಹಂಸಲೇಖ ಕಿವಿಮಾತು
ಪ್ರಿಯ ಮಾಧ್ಯಮಗಳೇ, ದಯಮಾಡಿ, ನಾನು ದುಡುಕಿ ಮಾತಾಡಿದ ಆ Bullshit ಪದವನ್ನು Delete ಮಾಡಿ. ಕನ್ನಡದ ಕಾವ್ಯಪರಂಪರೆಯ ಬೇರು ಕಾಂಡಗಳಾಗಿರುವ ಜೈನಕವಿ ಮುನಿ ಪರಂಪರೆಗೆ ಆಗಿರುವ ಗಾಯವನ್ನು ವಾಸಿ ಮಾಡಲು ಈ ಮೂಲಕ ಕೋರುತ್ತಿದ್ದೇನೆ. ಆಡು ಮಾತುಗಳನ್ನು COIN ಮಾಡುವ ನನ್ನಂತ ಸಿನಿಮಾ ರೈಟರ್ಗಳಿಗೆ ಇದು ಶಾಸ್ತಿ ಮತ್ತು ಶಾಪ ಎಂದು ನಾನು ಭಾವಿಸಿದ್ದೇನೆ. ಆ ಮಾತು ನನ್ನ ಬಾಯಿಂದ ಅಲ್ಲಿ ಹೊರಟ ಹಿನ್ನೆಲೆ ಹೀಗಿದೆ.
ಆ ಕಾರ್ಯಕ್ರಮ ಮುಗಿಸಿ ಹೊರ ಬರುವಾಗ ಚಾನೆಲ್ ಅವರು Individual Biteಗಾಗಿ ಕೈ ಹಿಡಿದು ಎಳೆದಾಡಿದರು. ಆಗ ಸಿಟ್ಟು ತಡೆದುಕೊಂಡು ಹೊರ ಬಂದೆ. ನನ್ನ ಸಹಾಯಕ , ನನ್ನನ್ನ ಹೊಗಳಿದ. ಸಿಟ್ಟು ತಡೆಯಲಾಗಲಿಲ್ಲ ಆದರೂಈ ತಡೆದುಕೊಂಡಿದ್ದು ಒಳ್ಳೆದಾಯ್ತು ಸಾರ್ ಎಚಿದ. ಆಗ ನಾನು ಆತನಿಗೆ ಸಿಟ್ಟು ಹೋಗಿ ಬರೋ ಬುಲೆಟ್ಟು ಎಂದು ನಗಿಸಿದೆ. ನಾನು ಇನ್ನೂ ಮುಂದುವರೆದು, ಸಿಟ್ಟು ಒಂದು ಬುಲ್ಶಿಟ್ಟು ಎಂದೆ. ಆದರೆ ಆ ಪದ ಅಲ್ಲಿ ಬರಬಾರದಿತ್ತು. ಇಷ್ಟೆ ನಡೆದಿದ್ದು. ದಯವಿಷ್ಟು ಕ್ಷಮಿಸಿ ಎಂದು ಹಂಸಲೇಖ ಕೇಳಿಕೊಂಡಿದ್ದಾರೆ.
ಪ್ಯಾನ್ ಇಂಡಿಯಾದಿಂದ ದೇಹ, ದಾಡಿ ಬೆಳೆಸ್ತಿದ್ದಾರೆ ನಟರು, ಇದೊಂದು ಹುಚ್ಚು: ಕಲಾವಿದರಿಗೆ ಹಂಸಲೇಖ ಮಾತಿನೇಟು