ಪವರ್‌ ಸ್ಟಾರ್‌ಗೆ ಕತೆ ರೆಡಿ ಮಾಡಿದ ದಿನಾಕರ್ ತೂಗುದೀಪ್. ಜೇಮ್ಸ್‌ ಚಿತ್ರದ ನಂತರ ಸೆಟ್‌ ಏರುವುದು ಗ್ಯಾರಂಟಿ...

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ಯುವರತ್ನ ಸಿನಿಮಾ ಬಿಡುಗಡೆ ದಿನಾಂಕಕ್ಕೆ ಕಾಯುತ್ತಿರುವ ಅಭಿಮಾನಿಗಳಿಗೆ ಇಲ್ಲಿದೆ ಗುಡ್‌ ನ್ಯೂಸ್. ಜೇಮ್ಸ್‌ ಚಿತ್ರದ ನಂತರ ಪುನೀತ್ ಕೈಯಲ್ಲಿ ಯಾವ ಸಿನಿಮಾ ಇದೆ ಎಂಬ ಕುತೂಹಲ ಹೆಚ್ಚಾಗಿತ್ತು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ...

Add Asianetnews Kannada as a Preferred SourcegooglePreferred

ನವಗ್ರಹದಲ್ಲಿ ದರ್ಶನ್ ಪಾತ್ರ ವಿನೋದ್ ಪ್ರಭಾಕರ್ ಮಾಡಬೇಕಿತ್ತು; ಅಸಲಿ ಕತೆ ಬಯಲು ಮಾಡಿದ ದಿನಕರ್! 

ಹೌದು! ನಟ ದರ್ಶನ್ ಸಹೋದರ ದಿನಕರ್ ಪುನೀತ್‌ಗಾಗಿ ಚಿತ್ರಕತೆ ಒಂದನ್ನು ರೆಡಿ ಮಾಡಿದ್ದಾರೆ. ಲಾಕ್‌ಡೌನ್ ಅವಧಿಯಲ್ಲಿ ಚಿತ್ರಕತೆ ಬರೆಯುತ್ತಿದ್ದರು ಎಂಬ ಮಾಹಿತಿ ಇತ್ತು. ಆದರೀಗ ಅದು ಪುನೀತ್‌ಗೆ ಎಂಬ ಸತ್ಯ ಹೊರ ಬಂದಿದೆ.

"

ಈಗಾಗಲೇ ಮೂರು ಸೂಪರ್ ಹಿಟ್ ಸಿನಿಮಾಗಳಿಗೆ ಆ್ಯಕ್ಷನ್ ಕಟ್ ಹೇಳಿರುವ ದಿನಕರ್‌ ಈ ಕತೆಗೂ ಒಳ್ಳೆಯ ಟ್ವಿಸ್ಟ್‌ ಕೊಟ್ಟಿರುತ್ತಾರೆ ಎಂಬ ನಂಬಿಕೆ ಅಭಿಮಾನಿಗಳದ್ದು. ಇಷ್ಟು ದಿನ ದಿನಕರ್ ಹಾಗೂ ದರ್ಶನ್ ಕಾಂಬಿನೇಷನ್‌ ಕಾಣ ಬಯಸುತ್ತಿದ್ದ ಅಭಿಮಾನಿಗಳು, ಪುನೀತ್‌ ಜೊತೆ ಕೈ ಜೋಡಿಸಿರುವ ವಿಚಾರ ಕೇಳಿ ಥ್ರಿಲ್ ಆಗಿದ್ದಾರೆ. 

ಗಾಳಿ ಮಾತುಗಳಿಗೆ ದಿನಕರ್ ತೂಗುದೀಪ ಫುಲ್‌ ಸ್ಟಾಪ್‌: ದರ್ಶನ್ ಜೊತೆ ಸಿನಿಮಾ?

ಕೆಲವು ದಿನಗಳ ಹಿಂದೆ ಯುವರತ್ನ ಚಿತ್ರದ ಮೂರನೇ ಹಾಡು ಬಿಡುಗಡೆ ಆಗಬೇಕಿತ್ತು ಆದರೆ ಸಣ್ಣ ತಾಂತ್ರಿಕ ಸಮಸ್ಯೆಯಿಂದ ಶೀಘ್ರದಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ಸ್ವತಃ ಪುನೀತ್ ತಿಳಿಸಿದ್ದಾರೆ.