ರಾಗಿಣಿ ದ್ವಿವೇದಿ ವಿಚಾರಕ್ಕಾಗಿ ಹಳೆ ಬಾಯ್‌ಫ್ರೆಂಡ್‌, ಹೊಸ ಬಾಯ್‌ಫ್ರೆಂಡ್ ನಡುವೆ ಕಿತ್ತಾಟ |  ಅವರಿಬ್ಬರ ಜಗಳದ ಬಗ್ಗೆ ರಾಗಿಣಿ ಸ್ಪಷ್ಟನೆ | ನನಗೂ, ಈ ಘಟನೆಗೂ ಸಂಬಂಧವಿಲ್ಲ ಎಂದಿದ್ದಾರೆ. 

ಬೆಂಗಳೂರು (ಮಾ. 19): ಖ್ಯಾತ ಚಲನಚಿತ್ರ ನಟಿ ರಾಗಿಣಿ ದ್ವಿವೇದಿ ವಿಚಾರಕ್ಕಾಗಿ ಹಳೆ ಬಾಯ್‌ಫ್ರೆಂಡ್‌ ರಿಯಲ್‌ ಎಸ್ಟೇಟ್‌ ಉದ್ಯಮಿ ಹಾಗೂ ಹೊಸ ಬಾಯ್‌ಫ್ರೆಂಡ್‌ ಸಾರಿಗೆ ಇಲಾಖೆ ಅಧಿಕಾರಿ ನಡುವೆ ನಗರದ ಪಂಚತಾರಾ ಹೋಟೆಲ್‌ನಲ್ಲಿ ಮಾರಾಮಾರಿ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

‘ಟ್ಟೀಟರ್ ನಲ್ಲಿ ಇರಲಾರೆ’ ಅಭಿಮಾನಿಗಳಿಗೆ ಶಾಕ್ ಕೊಟ್ಟ ಸುದೀಪ್!

ಈ ಸಂಬಂಧ ನಟಿ ರಾಗಿಣಿ ಪ್ರತಿಕ್ರಿಯೆ ನೀಡಿದ್ದಾರೆ. " ಶಿವಪ್ರಕಾಶ್ ಹಾಗೂ ರವಿ ನಡುವಿನ ಕಿತ್ತಾಟ ಬೇಸರ ತಂದಿದೆ. ನಾನು ಶೂಟಿಂಗ್ ನಲ್ಲಿದ್ದೇನೆ. ಈ ಘಟನೆಗೂ ನನಗೂ ಸಂಬಂಧವಿಲ್ಲ. ಇದು ಅವರಿಬ್ಬರ ನಡುವಿನ ವಿಚಾರ. ಅನಗತ್ಯವಾಗಿ ನನ್ನನ್ನು ಈ ವಿಷಯದಲ್ಲಿ ಕರೆ ತರಬೇಡಿ. ನನ್ನ ಘನತೆ, ಗೌರವಕ್ಕೆ ಧಕ್ಕೆ ತಂದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು" ಎಂದು ರಾಗಿಣಿ ದ್ವಿವೇದಿ ಹೇಳಿದ್ದಾರೆ.