ನಿರೀಕ್ಷೆಗೂ ಮೀರಿಸ ಪ್ರತಿಕ್ರಿಯೆ ಪಡೆಯುತ್ತಿದೆ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ. ರಮ್ಯಾಗೆ ನಿರ್ಮಾಣದಕ್ಕೆ ಜಯ ಸಿಲಿದೆಯೇ?

ರಾಜ್‌ ಬಿ ಶೆಟ್ಟಿ ಹಾಗೂ ಸಿರಿ ರವಿಕುಮಾರ್ ನಟನೆಯ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಟ್ರೇಲರ್‌ ಬಿಡುಗಡೆ ಇತ್ತೀಚೆಗೆ ನಡೆಯಿತು. ಆ್ಯಪಲ್‌ ಬಾಕ್ಸ್‌ ಸ್ಟುಡಿಯೋ ಮೂಲಕ ನಟಿ ರಮ್ಯಾ ನಿರ್ಮಾಣದ ಮೊದಲ ಚಿತ್ರವಿದು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಟನೆ ಜತೆಗೆ ನಿರ್ದೇಶನ ಮಾಡಿರುವ ರಾಜ್‌ ಬಿ ಶೆಟ್ಟಿ, ‘ಬದುಕುವ ಅವಕಾಶಗಳನ್ನು ಕಳೆದುಕೊಂಡು ಸಾವಿಗೆ ಎದುರು ನೋಡುತ್ತಿದ್ದವರ ಸುತ್ತಾ ಸಾಗುವ ಕತೆ ಇದು. ಕೊನೆಯ ದಿನಗಳನ್ನು ತುಂಬಾ ನೆಮ್ಮದಿಯಾಗಿ ಕಳೆಯಬೇಕು ಎನ್ನುವ ಆಶಯ ಹೊತ್ತ ಈ ಕತೆ ತೆರೆ ಮೇಲೆ ಹೇಳಬೇಕು ಅನಿಸಿತು. ಇಡೀ ತಂಡದ ಪರಿಶ್ರಮದಿಂದ ಈ ಸಿನಿಮಾ ನಾವು ಅಂದುಕೊಂಡಂತೆ ಮೂಡಿ ಬಂದಿದೆ’ ಎಂದು ಹೇಳಿದರು.

ಈ ಕಾರಣಕ್ಕೆ ನಾನು ರಾಜ್ ಬಿ ಶೆಟ್ಟಿ ಜೊತೆ 'ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರದಲ್ಲಿ ನಟಿಸಲಿಲ್ಲ: ರಮ್ಯಾ ಹೇಳಿದ್ದೇನು?

ಕೌನ್ಸಿಲರ್ ಪಾತ್ರದಲ್ಲಿ ಸಿರಿ ರವಿಕುಮಾರ್‌ ನಟಿಸಿದರೆ, ರಾಜ್‌ ಬಿ ಶೆಟ್ಟಿ ಆ ಕೌನ್ಸಿಲಿಂಗ್‌ ಕೇಂದ್ರಕ್ಕೆ ಸೇರುವ ಪೇಷೆಂಟ್‌ ಪಾತ್ರಧಾರಿ. ‘ಈ ಚಿತ್ರದಲ್ಲಿನ ಪಾತ್ರ ಮತ್ತು ಕತೆ ತುಂಬಾ ಚೆನ್ನಾಗಿದೆ. ತುಂಬಾ ಆಪ್ತವಾದ ಮತ್ತು ಎಲ್ಲರು ನೋಡಲೇಬೇಕಾದ ಕತೆಯನ್ನು ಈ ಚಿತ್ರದ ಮೂಲಕ ಹೇಳಿದ್ದಾರೆ’ ಎಂಬುದು ಸಿರಿ ರವಿಕುಮಾರ್‌ ಮಾತು. ಬಾಲಾಜಿ ಮನೋಹರ್‌, ಸಂಗೀತ ನಿರ್ದೇಶಕ ಮಿಧುನ್ ಮುಕುಂದನ್‌ ಇದ್ದರು. ಕಾರ್ಯಕ್ರಮಕ್ಕೆ ನಿರ್ಮಾಪಕಿ ರಮ್ಯಾ ಅವರೇ ಬಂದಿರಲಿಲ್ಲ.

YouTube video player