ದರ್ಶನ್ ನೇತೃತ್ವದಲ್ಲಿ ಉದ್ಘರ್ಷ ಟ್ರೇಲರ್ ಲಾಂಚ್ | ಈ ಸಮಾರಂಭಕ್ಕೆ ಸುದೀಪ್ ಗೈರು | ದರ್ಶನ್ ಇದ್ದಾರೆ ಅನ್ನೋ ಕಾರಣಕ್ಕೆ ಅವಾಯ್ಡ್ ಮಾಡಿದ್ರಾ ಸುದೀಪ್? 

ಬೆಂಗಳೂರು (ಮಾ. 07): ಸುನೀಲ್ ಕುಮಾರ್ ದೇಸಾಯಿಯವರ ಉದ್ಘರ್ಷ ಟ್ರೇಲರನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಲಾಂಚ್ ಮಾಡಿದ್ದಾರೆ. ಈ ಸಮಾರಂಭಕ್ಕೆ ಕಿಚ್ಚ ಸುದೀಪ್ ಕೂಡಾ ಬರಬಹುದೆಂಬ ನಿರೀಕ್ಷೆಯಿತು. ಆದರೆ ಅವರು ಬಂದಿಲ್ಲ. ಡಿ ಬಾಸ್ ಒಬ್ಬರೇ ಕಾಣಿಸಿಕೊಂಡಿದ್ದಾರೆ. 

Add Asianetnews Kannada as a Preferred SourcegooglePreferred

ಸರಿಗಮಪ ಆಡಿಷನ್‌ನಲ್ಲಿ‘ಈಜಿಪ್ಟ್’ ಕಿನ್ನರಿ!

ಕಿಚ್ಚ ಸುದೀಪ್ ಗೆ ಬ್ರೇಕ್ ಕೊಟ್ಟ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ. ಜೊತೆಗೆ ಉದ್ಘರ್ಷ ಚಿತ್ರಕ್ಕೆ ಸುದೀಪ್ ಅವರು ಧ್ವನಿಯನ್ನೂ ನೀಡಿದ್ದಾರೆ. ಆದರೂ ಕಾರ್ಯಕ್ರಮಕ್ಕೆ ಹಾಜರಾಗದೇ ಇದ್ದಿದ್ದು ದರ್ಶನ್- ಸುದೀಪ್ ನಡುವಿನ ಸಂಬಂಧ ಅಷ್ಟಕ್ಕಷ್ಟೇ ಎನ್ನುವುದಕ್ಕೆ ಇನ್ನಷ್ಟು ಪುಷ್ಠಿ ನೀಡಿದಂತಾಗುತ್ತದೆ. 

ಕೊನೆಯುಸಿರಿರುವರೆಗೂ ಬಣ್ಣ ಹಚ್ಚೋದು ನಿಲ್ಲಿಸೋಲ್ಲ: ಬುಲೆಟ್

ಸುದೀಪ್ ಗೈರು ಹಾಜರಿಗೆ ಸುನೀಲ್ ಕುಮಾರ್ ದೇಸಾಯಿ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಟ್ರೇಲರ್ ಲಾಂಚ್ ಕಾರ್ಯಕ್ರಮಕ್ಕೆ ಸುದೀಪ್ ಗೆ ಆಹ್ವಾನ ಕೊಟ್ಟಿರಲಿಲ್ಲ. ಅವರು ಸತತ ಶೂಟಿಂಗ್ ನಲ್ಲಿ ಬ್ಯುಸಿ ಇದ್ದಾರೆ. ಟ್ರೇಲರ್ ಲಾಂಚ್ ಗೆ ಬನ್ನಿ ಎನ್ನುವುದು ಅವರಿಗೆ ಕಷ್ಟ ಕೊಟ್ಟಂತಾಗುವುದು. ಅವರ ಸಹಕಾರ ನಮಗೆ ಇದ್ದೇ ಇದೆ ಎಂದು ದೇಸಾಯಿ ಹೇಳಿದ್ದಾರೆ.