Asianet Suvarna News Asianet Suvarna News

ರಿಷಬ್‌ ಶೆಟ್ಟಿ 'ಹರಿಕತೆ ಅಲ್ಲ ಗಿರಿಕತೆ' ಚಿತ್ರಕ್ಕೆ ಕರಣ್‌ ಅನಂತ್‌, ಅನಿರುದ್ಧ ಮಹೇಶ್‌ ನಿರ್ದೇಶಕರು!

ಚಿತ್ರೀಕರಣದ ಹಂತದಲ್ಲಿರುವಾಗಲೇ ರಿಷಬ್‌ ಶೆಟ್ಟಿನಟನೆಯ ‘ಹರಿಕಥೆ ಅಲ್ಲಾ ಗಿರಿಕಥೆ’ ಚಿತ್ರದ ನಿರ್ದೇಶಕರೇ ಬದಲಾಗಿದ್ದಾರೆ.

Rishab shetty Harikathe alla girikathe director Kiran ananth aniruddh mahesh vcs
Author
Bangalore, First Published Dec 2, 2020, 9:07 AM IST

ಈ ಚಿತ್ರದ ನಿರ್ದೇಶಕರು ಗಿರಿಕೃಷ್ಣ. ಮೈಸೂರಿನಲ್ಲಿ ಶೂಟಿಂಗ್‌ ಮಾಡುತ್ತಿದ್ದರು. ಈಗ ಇದ್ದಕ್ಕಿದ್ದಂತೆ ನಿರ್ದೇಶಕರು ಬದಲಾಗಿ ಆ ಜಾಗಕ್ಕೆ ಕರಣ್‌ ಅನಂತ್‌ ಹಾಗೂ ಅನಿರುದ್ಧ ಮಹೇಶ್‌ ಬಂದಿದ್ದಾರೆ.

ಆರೇಳು ವರ್ಷಗಳ ಹಿಂದೆ ನಟ ರಿಷಬ್ ಶೆಟ್ಟಿ ಮಾಡುತ್ತಿದ್ದ ಬಿಸಿನೆಸ್ ಇದಂತೆ! 

ಗಿರಿಕೃಷ್ಣ ಚಿತ್ರದಿಂದ ಹೊರಗೆ ಬಂದಿದ್ದು ಯಾಕೆ ಎಂಬ ಪ್ರಶ್ನೆಗೆ ಖುದ್ದು ಗಿರಿಕೃಷ್ಣ ಉತ್ತರಿಸಿದ್ದಾರೆ. ಮೈಸೂರಿನಲ್ಲಿ ಚಿತ್ರೀಕರಣ ಆರಂಭವಾದ ಕೆಲವು ದಿನಗಳ ನಂತರ ಗಿರಿಕೃಷ್ಣ ಅವರಿಗೆ ಆರೋಗ್ಯ ಸಮಸ್ಯೆ ಎದುರಾಗಿದೆ. ಚಿತ್ರೀಕರಣ ನಿಲ್ಲಿಸುವಂತಿರಲಿಲ್ಲ. ಕಲಾವಿದರ ಡೇಟ್ಸ್‌, ಶೂಟಿಂಗ್‌ ಪ್ಲಾನ್‌ ಎಲ್ಲವೂ ಫೈನಲ್‌ ಆಗಿದೆ. ಹೀಗಾಗಿ ನಿರ್ದೇಶಕನ ಸ್ಥಾನವನ್ನು ಬೇರೆಯವರಿಗೆ ಬಿಟ್ಟುಕೊಟ್ಟಿದ್ದಾರೆ ಗಿರಿಕೃಷ್ಣ.

Rishab shetty Harikathe alla girikathe director Kiran ananth aniruddh mahesh vcs

‘ಹರಿಕಥೆ ಅಲ್ಲಾ ಗಿರಿಕಥೆ ಚಿತ್ರದಿಂದ ನಾನು ಹೊರ ಬರಲು ಕಾರಣ ನನ್ನ ಆರೋಗ್ಯ ಸಮಸ್ಯೆ. ಚಿತ್ರಕ್ಕೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಬೇರೆಯವರು ನಿರ್ದೇಶಕರನ್ನಾಗಿ ಮಾಡಿ ಶೂಟಿಂಗ್‌ ಮುಂದುವರಿಸಿದ್ದಾರೆ. ಈಗ ನನ್ನ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. ಈಗಾಗಲೇ ಎರಡು ಚಿತ್ರಕಥೆಗಳನ್ನು ಮಾಡಿಕೊಂಡಿದ್ದು, ಸದ್ಯದಲ್ಲೇ ಘೋಷಣೆ ಮಾಡಲಿದ್ದೇವೆ’ ಎನ್ನುತ್ತಾರೆ ಗಿರಿಕೃಷ್ಣ.

ರಿಷಬ್ ಶೆಟ್ಟಿ ಫ್ರೆಂಚ್ ಬಿಯರ್ಡ್ ಲುಕ್ ವೈರಲ್; ಕಾಮೆಂಟ್‌ನಲ್ಲಿ ಶುರುವಾಯ್ತು ಫ್ಯಾನ್ಸ್‌ ಚರ್ಚೆ! 

Follow Us:
Download App:
  • android
  • ios