Asianet Suvarna News Asianet Suvarna News

Kantara; OTTಗೆ ಬರಲು ಸಜ್ಜಾದ ರಿಷಬ್ ಶೆಟ್ಟಿ ಸಿನಿಮಾ, ಯಾವ ಪ್ಲಾಟ್‌ಫಾರ್ಮ್, ಯಾವಾಗ?

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ಒಟಿಟಿಯಲ್ಲಿ ಬರಲು ಸಜ್ಜಾಗಿದೆ. ಅಮೆಜಾನ್ ಪ್ರೈಮ್ ನಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ ಎನ್ನಲಾಗಿದೆ.  

Rishab Shetty starrer Kantara to Soon Release on OTT sgk
Author
First Published Nov 4, 2022, 1:27 PM IST

ಸ್ಯಾಂಡಲ್ ವುಡ್ ಸ್ಟಾರ್ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾಗೆ ದೊಡ್ಡ ಮಟ್ಟದ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಿಷಬ್ ಶೆಟ್ಟಿ ಸಿನಿಮಾ ಕನ್ನಡ ಮಾತ್ರಲ್ಲದೇ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಎಲ್ಲಾ ಭಾಷೆಯ ಪ್ರೇಕ್ಷಕರು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಪ್ರೇಕ್ಷಕರು ಮಾತ್ರವಲ್ಲದೇ ಸಿನಿ ಗಣ್ಯರು ಸಹ ಕಾಂತಾರಗೆ ಫಿದಾ ಆಗಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್, ಧನುಷ್, ಅನುಷ್ಕಾ ಶೆಟ್ಟಿ, ಪ್ರಭಾಸ್, ಶಿಲ್ಪಾ ಶೆಟ್ಟಿ, ಕಂಗನಾ ರಣಾವತ್ ಸೇರಿದಂತೆ ಅನೇಕ ಗಣ್ಯರು ಕಾಂತಾರ ನೋಡಿ ಹಾಡಿಹೊಗಳಿದ್ದಾರೆ. ಸಿನಿಮಾ ಗಣ್ಯರು ಮಾತ್ರವಲ್ಲದೇ ರಾಜಕೀಯ ಗಣ್ಯರು ಸಿನಿಮಾಗೆ ಫಿದಾ ಆಗಿದ್ದಾರೆ. ಇತ್ತೀಚಿಗಷ್ಟ
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮ್ ಸಿನಿಮಾ ವೀಕ್ಷಿಸಿ ಸಂತಸ ಪಟ್ಟಿದ್ದಾರೆ. ಅಲ್ಲದೇ ರಿಷಬ್ ಶೆಟ್ಟಿ ಅಭಿನಯಕ್ಕೆ ಫುಲ್ ಮಾರ್ಕ್ಸ್ ನೀಡಿದ್ದಾರೆ. 

ಬಾಕ್ಸ್ ಆಫೀಸ್ ನಲ್ಲಿಯೂ ಕಾಂತಾರ ಕೋಟಿ ಕೋಟಿ ಲೂಟಿ ಮಾಡಿದೆ. ಈಗಾಗಲೇ 300 ಕೋಟಿ ಕಲೆಕ್ಷನ್ ಮಾಡಿ ಮುನ್ನುತ್ತಿದೆ. ದೇಶದಾದ್ಯಂತ ಸಿನಿಮಾದೆ ದೊಡ್ಡ ಮಟ್ಟದ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕಾಂತಾರ ಒಟಿಟಿ ರಿಲೀಸ್ ಬಗ್ಗೆ ಚರ್ಚೆ ಪ್ರಾರಂಭವಾಗಿದೆ. ಒಟಿಟಿಗಳ ದೈತ್ಯ ಅಮೆಜಾನ್ ಪ್ರೈಮ್ ನಲ್ಲಿ ಕಾಂತಾರ ಸ್ಟ್ರೀಮಿಂಗ್ ಆಗುವುದು ಬಹುತೇಕ ಖಚಿತ ಎನ್ನುತ್ತಿವೆ ಮೂಲಗಳು. ಈಗಾಗಲೇ ಕಾಂತಾರ ಹಕ್ಕನ್ನು ಅಮೆಜಾನ್ ಪ್ರೈಮ್ ಖರೀದಿ ಮಾಡಿದ್ದು ಸದ್ಯದಲ್ಲೇ ಸ್ಟ್ರೀಮಿಂಗ್ ಪ್ರಾರಂಭಿಸಲಿದೆ. ಈಗಾಗಲೇ ಕಾಂತಾರ ಒಟಿಟಿ ಎಂಟ್ರಿಯ ದಿನಾಂಕ ವೈರಲ್ ಆಗುತ್ತಿದೆ. ನವೆಂಬರ್ 16 ಅಥವಾ 18 ರಂದು ಸಿನಿಮಾ ಒಟಿಟಿಯಲ್ಲಿ ಸ್ಟೀಮೀಂಗ್ ಆರಂಭಿಸಲಿದೆ ಎನ್ನುವ ಸುದ್ದಿ ಹಬ್ಬದಿ. ಆದರೆ ಇದು ಫೇಕ್, ನಿಖರವಾದ ದಿನಾಂಕವನ್ನು ಸಿನಿಮಾತಂಡ ಸದ್ಯದಲ್ಲೇ ಬಹಿರಂಗ ಪಡಿಸಲಿದೆ ಎಂದು ಮೂಲಗಳು ತಿಳಿಸಿವೆ. 

ಸದ್ಯದಲ್ಲೇ ಸಿನಿಮಾತಂಡ ಒಟಿಟಿ ಬಿಡುಗಡೆ ಬಗ್ಗೆ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿರುವ ಕಾಂತಾರ ಒಟಿಟಿಯಲ್ಲೂ ಗೆಲುವು ದಾಖಲೆ ಬರೆಯುತ್ತಾ ಎಂದು ಕಾದುನೋಡಬೇಕು. 

ಹಿಂದಿ ಸಿನಿಮಾಗಳಲ್ಲಿ ನಟಿಸಲು ಸೌತ್ ಸ್ಟಾರ್ಸ್ ಯಾಕೆ ಇಷ್ಟಪಡಲ್ಲ? ಅಭಿಮಾನಿಗಳ ಹೃದಯ ಗೆದ್ದ ರಿಷಬ್ ಉತ್ತರ

ಕಾಂತಾರ ವಿವಾದಗಳು

ಕಾಂತಾರ ಸಿನಿಮಾ ರಿಲೀಸ್ ಆಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ವಿವಾದ ಕಿಡಿ ಹೊತ್ತಿಸಿದ್ದರು ನಟ ಚೇತನ್. ಭೂತಕೋಲ ಹಿಂದೂ ಸಂಸ್ಕೃತಿಯ ಎಂದು ರಿಷಬ್ ಹೇಳಿಕೆ ತಪ್ಪು, ಭೂತಕೋಲ ಹಿಂದೂ ಸಂಸ್ಕೃತಿಯ ಭಾಗವಲ್ಲ ಎಂದು ಹೇಳುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದರು. ಬಳಿಕ ಇದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು. ಚೇತನ್ ಹೇಳಿಕೆ ವಿರೋಧಿಸಿ ಹಿಂದೂ ಪರ ಸಂಘಟನೆಗಳು ರೊಚ್ಚಿಗೆದ್ದಿದ್ದರು. ಚೇತನ್ ವಿರುದ್ಧ ದೂರ ಸಹ ದಾಖಲಾಗಿತ್ತು. ಈ ವಿವಾದ ಬೆನ್ನಲ್ಲೇ ಕಾಂತಾರ ತಂಡ ಹಾಡು ಕದ್ದ ಆರೋಪ ಎದುರಿಸಿತ್ತು. 

ಕಾಂತಾರ ಸಿನಿಮಾದ ವರಾಹ ರೂಪಮ್ ಹಾಡನ್ನು ಮಲಯಾಳಂ ಆಲ್ಬಂ ಹಾಡನ್ನು ಕದ್ದು ಮಾಡಲಾಗಿದೆ ಎಂದು ಮೂಲ ಆಲ್ಬಂ ತಂಡ ಆರೋಪ ಮಾಡಿತ್ತು. ಅಲ್ಲದೇ ಕೋರ್ಟ್ ಮೆಟ್ಟಿಲೇರಿದ್ದರು. ಸದ್ಯ ಈ ವಿವಾದ ಕೋರ್ಟ್ ನಲ್ಲಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ್ದ ರಿಷಬ್ ಈ ಹಾಡು ಸಂಗೀತ ನಿರ್ದೇಶಕ ಅಜನೀಶ್ ಅವರು ಸ್ವಂತ ಮಾಡಿದ್ದು. ಈ ಬಗ್ಗೆ ಸರಿಯಾದ ಉತ್ತರವನ್ನು ಅವರೇ ನೀಡುತ್ತಾರೆ ಎಂದು ಹೇಳಿದರು. 

'ಕಾಂತಾರ' ಹಾಡಿನ ವಿವಾದ; ಧರ್ಮಸ್ಥಳದಲ್ಲಿ ರಿಷಬ್ ಶೆಟ್ಟಿ ಹೇಳಿದ್ದೇನು?

ಸಿನಿಮಾದ ಬಗ್ಗೆ 

ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಜೊತೆ ಖ್ಯಾತ ನಟ ಕಿಶೋರ್ ಕುಮಾರ್ ಸಹ ನಟಿಸಿದ್ದಾರೆ. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಿಶೋರ್ ಕಾಣಿಸಿಕೊಂಡಿದ್ದಾರೆ. ಇನ್ನು ನಾಯಕಿಯಾಗಿ ಸಪ್ತಮಿ ಗೌಡ ಮಿಂಚಿದ್ದಾರೆ. ಅಚ್ಯುತ್ ಕುಮಾರ್ ಪಾತ್ರ ಎಲ್ಲರ ಹೃದಯ ಗೆದ್ದಿದೆ. ಅನೇಕರಂಗಭೂಮಿ ಕಲಾವಿದರೂ ಕಾಂತಾರ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್ ಬಂಡಾವಳ ಹೂಡಿದೆ.  


 

Follow Us:
Download App:
  • android
  • ios