ಬ್ಯಾನರ್ ಕಲಾವಿದನ ಸಂಕಷ್ಟಕ್ಕೆ ಸ್ಪಂದಿಸಿದ ಪುನೀತ್/ ಸುದ್ದಿ ಗೊತ್ತಾಗುತ್ತಲೇ ನೆರವು ನೀಡಿದ ಪವರ್ ಸ್ಟಾರ್/ ಪುನೀತ್ ಅಂದರೆ ಹಾಗೆ/ ಕೊರೋನಾ ವಿರುದ್ಧದ ಹೋರಾಟಕ್ಕೂ ದೇಣಿಗೆ ನೀಡಿದ್ದರು.

ಬೆಂಗಳೂರು(ಏ. 02) ಹಿರಿಯ ಬ್ಯಾನರ್ ಕಲಾವಿದ ಚಿನ್ನಪ್ಪ ಅವರ ಆರ್ಥಿಕ ಸಮಸ್ಯೆಯ ಬಗ್ಗೆ ವಿವರ ತಿಳಿದ ತಕ್ಷಣವೇ ಕನ್ನಡದ 'ಪವರ್'ಸ್ಟಾರ್' ಪುನೀತ್ ರಾಜಕುಮಾರ್ ಸ್ಪಂದಿಸಿದ್ದಾರೆ. 

Add Asianetnews Kannada as a Preferred SourcegooglePreferred

ಮೊನ್ನೆ ತಾನೇ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಬರೋಬ್ಬರಿ ಐವತ್ತು ಲಕ್ಷ ರೂಪಾಯಿಗಳ ದೇಣಿಗೆ ನೀಡಿದ ಪುನೀತ್ ರಾಜಕುಮಾರ್ ಈಗ ಚಿನ್ನಪ್ಪ ಕುಟುಂಬಕ್ಕೆ ಐವತ್ತು ಸಾವಿರ ರೂಪಾಯಿಗಳ ಸಹಾಯ ನೀಡಿ ಔದಾರ್ಯ ಮೆರೆದಿದ್ದಾರೆ. 

ಕೊರೋನಾ ಸಂಕಷ್ಟಕ್ಕೆ ಪುನೀತ್ ದೊಡ್ಡ ದೇಣಿಗೆ

ಡಾ. ರಾಜ್ ಕುಮಾರ್ ಕುಟುಂಬ ಹಿಂದಿನಿಂದಲೂ ನೊಂದವರ ಸಂಕಷ್ಟಕ್ಕೆ ಸ್ಪಂದಿಸುತ್ತಲೇ ಬಂದಿದೆ. ಶಿವಣ್ಣ 28 ಲಕ್ಷ ರೂ. ನೀಡಿ ಕೈದಿಗಳ ಬಿಡಗುಡೆ ಮಾಡಿಸಿದ್ದನ್ನು ಯಾರೂ ಮರೆತಿಲ್ಲ. ಇದೀಗ ಪುನೀತ್ ರಾಜ್ ಕುಮಾರ್ ಮನ ಮಿಡಿದಿದ್ದಾರೆ. ನೊಂದವರ ನೆರವಿಗೆ ಧಾವಿಸಿದ್ದಾರೆ.