3 ವರ್ಷಗಳ ನಂತರ ಶ್ವೇತಾ ಶ್ರೀವಾಸ್ತವ್ ಸ್ಯಾಂಡಲ್ ವುಡ್ ಗೆ | ‘ರಹದಾರಿ’ ಸಿನಿಮಾ ಮೂಲಕ ವಾಪಸ್ಸಾಗುತ್ತಿದ್ದಾರೆ | ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದ್ದು ಸೂಪರ್ ಕಾಪ್ ಪಾತ್ರವನ್ನು ಶ್ವೇತಾ ನಿರ್ವಹಿಸುತ್ತಿದ್ದಾರೆ  

’ಸಿಂಪಲ್ಲಾಗ್ ಒಂದು ಲವ್’ ಸ್ಟೋರಿ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟು ಭರವಸೆಯನ್ನು ಮೂಡಿಸಿದವರು ಶ್ವೇತಾ ಶ್ರೀವಾಸ್ತವ್. ಅ ನಂತರ ’ಕಿರಗೂರಿನ ಗಯ್ಯಾಳಿಗಳು’ ಸಾಕಷ್ಟು ಹೆಸರನ್ನು ತಂದು ಕೊಟ್ಟಿತು. ಆ ನಂತರ 3 ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದರು. ಮಗಳ ಲಾಲನೆ, ಪಾಲನೆಯಲ್ಲಿ ಬ್ಯುಸಿಯಾಗಿದ್ದರು. ನವರಾತ್ರಿ ಹಬ್ಬದಂದು ಅಭಿಮಾನಿಗಳ ಸಂತಸದ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ. 

Add Asianetnews Kannada as a Preferred SourcegooglePreferred

View post on Instagram

ಈಗ ‘ರಹದಾರಿ’ ಎನ್ನುವ ಚಿತ್ರದ ಮೂಲಕ ಮತ್ತೆ ಚಿತ್ರರಂಗಕ್ಕೆ ವಾಪಸ್ಸಗುತ್ತಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದ್ದು ಶ್ವೇತಾ ಸೂಪರ್ ಕಾಪ್ ಪಾತ್ರವನ್ನು ಮಾಡುತ್ತಿದ್ದಾರೆ. ಗಿರೀಶ್ ವೈರಮುಡಿ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಮಂಜುನಾಥ್ ಶಾಮನೂರು, ಮುಕ್ತಾಂಬಾ ಬಸವರಾಜು ನಿರ್ಮಾಣ ಮಾಡುತ್ತಿದ್ದಾರೆ. ರೋಣದ ಬಕ್ಕೇಶ್ ಮತ್ತು ಕೆ ಸಿ ರಾವ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಡಿಸಂಬರ್ ನಿಂದ ಶೂಟಿಂಗ್ ಶುರುವಾಗಲಿದೆ.