ಜೂನ್ 5ರಿಂದ ಸ್ಯಾಂಡಲ್‌ವುಡ್ ಶಟ್‌ಡೌನ್‌ ಆಗುತ್ತಿದೆ. ಹೊರಾಂಗಣ ಚಿತ್ರೀಕರಣಕ್ಕೆ ಬ್ರೇಕ್ ಬೀಳುತ್ತಿದೆ.  

ಜೂನ್ 5ರಿಂದ ಇಡೀ ಕನ್ನಡ ಸಿನಿಮಾರಂಗ ಶಟ್‌ಡೌನ್‌ ಆಗುತ್ತಿಗೆ. ಸಿನಿಮಾಗಳ ಹೊರಾಂಗಣ ಚಿತ್ರೀಕರಣಕ್ಕೆ ಬ್ರೇಕ್​ ಬೀಳುತ್ತಿದೆ. ಈ ಬಗ್ಗೆ ಹೊರಾಂಗಣ ಚಿತ್ರೀಕರಣ ಸಂಘದಿಂದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಂಬಳ ಹೆಚ್ಚಳ ಸೇರಿದಂತೆ ವಿವಿಧ ಬೇಡಿಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೊರಾಂಗಣ ಚಿತ್ರೀಕರಣ ಕಾರ್ಮಿಕರ ಸಂಘ ಬಂದ್‌ಗೆ ಕರೆನೀಡಿದೆ. ಈ ಬಗ್ಗೆ ಹೊರಾಂಗಣ ಚಿತ್ರೀಕರಣ ಘಟಕದ ಅಧ್ಯಕ್ಷ ಎಹೆಚ್ ಭಟ್ ಬಹಿರಂಗ ಪಡಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೊರಾಂಗಣ ಚಿತ್ರೀಕರಣ ಕಾರ್ಮಿಕರು ಕಳೆದ ಮೂರು ವರ್ಷಗಳಿಂದ ಬೇಡಿಕೆ ಇಡುತ್ತಾ ಬರುತ್ತಿದ್ದಾರೆ. ಈ ಸಂಬಂಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಮಾಪಕರ ಸಂಘಕ್ಕೆ ಮನವಿ ಕೂಡ ಕೊಟ್ಟಿದ್ದಾರೆ. ಆದ್ರೆ ಸಮಸ್ಯೆ ಬಗೆ ಹರಿಸದೇ ಫಿಲ್ಮ್ ಚೇಂಬರ್ ಮತ್ತು ನಿರ್ಮಾಪಕರ ಸಂಘ ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿ ಬಂದ್‌ಗೆ ಕರೆ ನೀಡಲಾಗಿದೆ. ಈ ಬಗ್ಗೆ ಯಾವುದೇ ಗಮನ ಹರಿಸದ ಕಾರಣ ಹೊರಾಂಗಣ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿದೆ.

ಗೌರವ ಇಲ್ಲ ಕಡೆ ಇರಲ್ಲ;ಕನ್ನಡ ಚಿತ್ರರಂಗ ತೊರೆಯಲು ನಟ ಜೆಕೆ ನಿರ್ಧಾರ!

ಒಂದುವೇಳೆ ಸಮಸ್ಯೆ ಬಗೆ ಹರಿಸದಿದ್ದರೆ ಜೂನ್ 5 ನೇ ತಾರೀಖುನಿಂದ ಹೊರಾಂಗಣ ಚಿತ್ರೀಕರಣ ಬಂದ್ ಮಾಡಲು ಕಾರ್ಮಿಕರ ಸಂಘ ನಿರ್ಧರಿಸಿದೆ. ಅಷ್ಟೆ ಅಲ್ಲ ಪ್ರತಿ ವರ್ಷ ಸುಮಾರು 200 ರಿಂದ 300 ಚಿತ್ರಗಳು ಬಿಡುಗಡೆಯಾಗುತ್ತಿದೆ. ಸರ್ಕಾರ 125 ಚಿತ್ರಗಳಿಗೆ ಸಬ್ಸಿಡಿ ಕೊಡುತ್ತಿದೆ. ಇದನ್ನ ಪಡೆಯಬೇಕಾದ್ರೆ ಹೊರಾಂಗಣ ಚಿತ್ರೀಕರಣ ಸರಬರಾಜು ಮಾಡುವ ಮಾಲೀಕರ ಸಹಿ ಇರಬೇಕು. ಆದರೆ ಹಾಗೆ ನಡೆಯುತ್ತಿಲ್ಲ ಎಂದು ಎಹೆಚ್ ಭಟ್ ಆರೋಪಿಸಿದ್ದಾರೆ.