ಸೋನು ನಿಗಮ್ ಅವರ ಕನ್ನಡ ಹಾಡಿನ ಹೇಳಿಕೆ ವಿವಾದದ ಬಗ್ಗೆ ಇಂದು ಚಿತ್ರರಂಗದ ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ಸಂಗೀತ ಸಂಯೋಜಕರು, ನಿರ್ದೇಶಕರು, ನಿರ್ಮಾಪಕರ ಸಂಘಗಳು ಭಾಗಿ. ಸೋನು ನಿಗಮ್ ಬ್ಯಾನ್ ಕುರಿತು ಚರ್ಚೆ ನಡೆದು, ಮಧ್ಯಾಹ್ನ ೧ ಗಂಟೆಗೆ ಮಾಧ್ಯಮಗೋಷ್ಠಿಯಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ. ಕನ್ನಡಪರ ಸಂಘಟನೆಗಳು ಬ್ಯಾನ್‌ಗೆ ಒತ್ತಾಯಿಸಿವೆ.

ಸ್ಯಾಂಡಲ್​ವುಡ್​ನಿಂದ ಗಾಯಕ ಸೋನು ನಿಗಮ್ (Sonu Nigam) ಬ್ಯಾನ್ ಆಗ್ತಾರಾ? ಈ ಪ್ರಶ್ನೆಗೆ ಉತ್ತರ ಇವತ್ತೇ ಸಿಗಲಿದೆ. ಇಂದಿನ ಮೀಟಿಂಗ್​ನಲ್ಲಿ ನಿರ್ಧಾರವಾಗಲಿದೆ ಸೋನು ನಿಗಮ್ ಬ್ಯಾನ್ ಭವಿಷ್ಯ ಎನ್ನಲಾಗ್ತಿದೆ. ಇಂದು 11.30ಕ್ಕೆ ಫಿಲ್ಮ್ ಚೇಂಬರ್​​ನಲ್ಲಿ ಸೋನು ನಿಗಮ್ ವಿವಾದದ ಕುರಿತು ಸಭೆ ನಡೆಯಲಿದೆ. ಸಭೆಯಲ್ಲಿ ಸಂಗೀತ ಸಂಯೋಜಕರ ಸಂಘ, ನಿರ್ದೇಶಕರ ಸಂಘ, ನಿರ್ಮಾಪಕರ ಸಂಘಗಳು ಭಾಗಿ ಅಗಲಿವೆ. 

ಕನ್ನಡ ಹಾಡು ಕೇಳಿದಕ್ಕೆ ಪೆಹಲ್ಗಾಮ್​ ದಾಳಿ ಜೊತೆಗೆ ಹೋಲಿಕೆ ಮಾಡಿದ್ದ ಸೋನು ನಿಗಮ್ ಮೇಲೆ ಕನ್ನಡಪರ ಸಂಘಟನೆಗಳು ಕೆರಳಿ ಕೆಂಡವಾಗಿವೆ. ಕ್ಷಮೆ ಕೇಳುವ ಬದಲು ಸಮರ್ಥನೆ ಮಾಡಿಕೊಂಡು ಈ ಗಾಯಕ ಉದ್ದಟತನ ಮೆರೆದಿದ್ದಾರೆ ಎಂದು ಇನ್ನೂ ಹೆಚ್ಚಿನ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಇದೀಗ ಫಿಲಂ ಚೇಂಬರ್ ಈ ನಿರ್ಧಾರ ಕೈಗೊಂಡಿದೆ. ಈ ಮೂಲಕ, ಕನ್ನಡ ಚಿತ್ರರಂಗದಲ್ಲಿ ಇನ್ನುಮುಂದೆ ಗಾಯಕ ಸೋನು ನಿಗಮ್ ಭವಿಷ್ಯ ಏನಾಗುತ್ತೋ ಎಂಬ ಸಂದೇಹ ಶುರುವಾಗಿದೆ. 

ಕನ್ನಡ ಚಿತ್ರರಂಗದಿಂದ ಸೋನು ನಿಗಮ್​ ರನ್ನ ಬ್ಯಾನ್ ಮಾಡಲು ಕನ್ನಡ ಸಂಘಟನೆಗಳ ಒತ್ತಾಯ ಶುರುವಾಗಿದೆ. ಇಂದಿನ ವಾಣಿಜ್ಯ ಮಂಡಳಿ ಸಭೆಯಲ್ಲಿ ಸೋನು ಬ್ಯಾನ್ ಮಾಡುವ ಕುರಿತು ಚರ್ಚೆ ನಡೆಯಲಿದೆ. ಮೀಟಿಂಗ್ ಬಳಿಕ ಮದ್ಯಾಹ್ನ 1 ಗಂಟೆಗೆ ಮಾಧ್ಯಮಗೋಷ್ಠಿಯಲ್ಲಿ ಈ ಕುರಿತ ನಿರ್ಧಾರ ಪ್ರಕಟವಾಗಲಿದೆ ಎನ್ನಲಾಗಿದೆ. 

ವಿವಾವಾದ ಹಿನ್ನೆಲೆ:

ಬಾಲಿವುಡ್ ಹಿನ್ನೆಲೆ ಗಾಯಕ ಸೋನು ನಿಗಮ್ ಅವರು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎನ್ನಲಾದ ಹೇಳಿಕೆಗಾಗಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕುರಿತು, ಅವರ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ ಎಫ್‌ಐಆರ್ (FIR) ದಾಖಲಾಗಿದೆ. ಆದರೆ, ಈ ವಿವಾದದ ನಡುವೆಯೂ ಸೋನು ನಿಗಮ್ ಅವರು ತಮ್ಮ ವೃತ್ತಿಪರ ಕೆಲಸಗಳನ್ನು ಮತ್ತು ಹಾಡಿನ ಪ್ರಚಾರ ಕಾರ್ಯಗಳನ್ನು ನಿಲ್ಲಿಸದೇ ಮುಂದುವರೆಸಿದ್ದಾರೆ.

ಏನಿದು ಘಟನೆ?
ಇತ್ತೀಚೆಗೆ ಸೋನು ನಿಗಮ್ ಅವರು ತಮ್ಮ ಹೊಸ ಹಿಂದಿ ಹಾಡು 'ಸುನ್ ಜರಾ'ದ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡುತ್ತಾ, ಹಿಂದಿ ಭಾಷೆಯ ಪ್ರಾಮುಖ್ಯತೆಯ ಬಗ್ಗೆ ಪ್ರಸ್ತಾಪಿಸುವ ಭರದಲ್ಲಿ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಹ ಕೆಲವು ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿ, ಕನ್ನಡಿಗರಿಂದ ಆಕ್ರೋಶ ವ್ಯಕ್ತವಾಗಿತ್ತು.

ಕನ್ನಡ ರಕ್ಷಣಾ ವೇದಿಕೆಯಿಂದ ದೂರು:
ಗಾಯಕ ಸೋನು ನಿಗಮ್ ಅವರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿದ ಕನ್ನಡ ರಕ್ಷಣಾ ವೇದಿಕೆ (ಕರವೇ), ಗಾಯಕರ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಕರವೇ ರಾಜ್ಯ ಕಾರ್ಯದರ್ಶಿ ಮಂಜುನಾಥ್ ಗೌಡ ಅವರು ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಸೋನು ನಿಗಮ್ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನಲ್ಲಿ, ಸೋನು ನಿಗಮ್ ಅವರ ಮಾತುಗಳು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದಿವೆ ಮತ್ತು ಅವರು ತಕ್ಷಣವೇ ಕನ್ನಡಿಗರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಲಾಗಿದೆ.

ದಾಖಲಾದ ಸೆಕ್ಷನ್‌ಗಳು:
ಪೊಲೀಸರು ಕರವೇ ನೀಡಿದ ದೂರಿನ ಆಧಾರದ ಮೇಲೆ ಸೋನು ನಿಗಮ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 295A (ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಅವರ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಮತ್ತು 153A (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆಗೆ ಧಕ್ಕೆ ತರುವ ಕೃತ್ಯಗಳನ್ನು ಮಾಡುವುದು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಕೆಲಸದಲ್ಲಿ ಮಗ್ನರಾದ ಸೋನು ನಿಗಮ್:
ಈ ಎಫ್‌ಐಆರ್ ಮತ್ತು ವಿವಾದದ ಕುರಿತು ಸೋನು ನಿಗಮ್ ಅವರು ಇಲ್ಲಿಯವರೆಗೆ ಸಾರ್ವಜನಿಕವಾಗಿ ಯಾವುದೇ ಪ್ರತಿಕ್ರಿಯೆ ಅಥವಾ ಸ್ಪಷ್ಟನೆ ನೀಡಿಲ್ಲ. ಆದರೆ, ಅವರು ತಮ್ಮ ವೃತ್ತಿಪರ ಬದ್ಧತೆಗಳಿಂದ ಹಿಂದೆ ಸರಿದಿಲ್ಲ. ಅವರು ತಮ್ಮ 'ಸುನ್ ಜರಾ' ಹಾಡಿನ ಪ್ರಚಾರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯವಾಗಿ ಮುಂದುವರಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಾಡಿನ ಪೋಸ್ಟರ್‌ಗಳು ಮತ್ತು ಸಂಬಂಧಿತ ಪ್ರಚಾರ ಸಾಮಗ್ರಿಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಕಾನೂನು ಬೆಳವಣಿಗೆಯು ಅವರ ದೈನಂದಿನ ಕೆಲಸಗಳ ಮೇಲೆ ಯಾವುದೇ ಪರಿಣಾಮ ಬೀರಿದಂತೆ ತೋರುತ್ತಿಲ್ಲ.

ಮುಂದೇನು?
ಎಫ್‌ಐಆರ್ ದಾಖಲಾಗಿರುವುದರಿಂದ ಪೊಲೀಸರು ತನಿಖೆ ಕೈಗೊಳ್ಳುವ ಸಾಧ್ಯತೆಯಿದೆ. ಸೋನು ನಿಗಮ್ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆಗಳೂ ಇವೆ. ಕನ್ನಡಪರ ಸಂಘಟನೆಗಳು ಕ್ಷಮೆಯಾಚನೆಗೆ ಪಟ್ಟು ಹಿಡಿದಿದ್ದು, ಗಾಯಕನ ಮುಂದಿನ ನಡೆ ಏನಿರಲಿದೆ ಎಂಬುದನ್ನು ಕಾದು ನೋಡಬೇಕಿದೆ. ಸದ್ಯಕ್ಕೆ, ಸೋನು ನಿಗಮ್ ವಿವಾದದ ನಡುವೆಯೂ ತಮ್ಮ ಸಂಗೀತ ಕಾರ್ಯಕ್ರಮಗಳು ಮತ್ತು ಪ್ರಚಾರಗಳಲ್ಲಿ ತೊಡಗಿಸಿಕೊಂಡಿರುವುದು ಸ್ಪಷ್ಟವಾಗಿದೆ.

ಈ ಪ್ರಕರಣವು ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ. ಆದರೆ, ಸಾಕಷ್ಟು ಜನರು ಗಾಯಕ ಸೋನು ನಿಗಮ್ ಈವೆಂಟ್ ದಿನ ಮಾಡಿದ ಆ ಪ್ರತಿಕ್ರಿಯೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ಆದರೆ, ಇದೀಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಗಾಯಕ ಸೋನು ನಿಗಮ್‌ ಮೇಲೆ ಕ್ರಮಕ್ಕೆ ಮುಂದಾಗಿದೆ. ಆದರೆ, ಯಾವ ರೀತಿಯ ಕ್ರಮ ಎಂಬುದನ್ನು ಕಾದು ನೋಡಬೇಕಿದೆ.