Asianet Suvarna News Asianet Suvarna News

ಎರಡನೇ ಮದ್ವೆ ಬಗ್ಗೆ ಯಾರೂ ಬಂದು ಕೇಳಿಲ್ಲ; ತುಂಬಾ ಕ್ಲಿಯರ್ ಉತ್ತರ ಕೊಟ್ಟ ಮೇಘನಾ ರಾಜ್!

ಎರಡನೇ ಮದುವೆ ಆಗ್ತಾರೆ ಅದು ಇದು ಎಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಗಾಳಿ ಮಾತುಗಳ ಬಗ್ಗೆ ಕ್ಲಾರಿಟಿ ಕೊಟ್ಟ ಮೇಘನಾ ರಾಜ್... 

Tatsama Tadbhava Meghana Raj talks about second marriage and son raayan raj sarja vcs
Author
First Published Jul 20, 2023, 10:34 AM IST | Last Updated Jul 20, 2023, 10:34 AM IST

ಕನ್ನಡ ಚಿತ್ರರಂಗ ಮೇರು ನಟ ಸುಂದರ್ ರಾಜ್ ಮತ್ತು ಪ್ರಮೀಳಾ ಜೋಷಾಯ್ ಮುದ್ದಾದ ಮಗಳ ಮೇಘನಾ ರಾಜ್ ಮಲಯಾಳ ಚಿತ್ರದ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟು ಪುಂಡ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಮಿಂಚುತ್ತಿದ್ದಾರೆ. ಸದ್ಯ ತತ್ಸಮ ತದ್ಭವ ಸಿನಿಮಾ ಮೂಲಕ ಕಮ್ ಬ್ಯಾಕ್ ಮಾಡುತ್ತಿರುವ ಮೇಘನಾ ಒಂದು ಮುಖ್ಯವಾದ ವಿಚಾರದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಹೌದು! ಚಿರಂಜೀವಿ ಸರ್ಜಾ ಅಗಲಿದ ಮೇಲೆ ಮೇಘನಾ ಎರಡನೇ ಮದುವೆ ಆಗ್ತಾರೆ, ಸೈಲೆಂಟ್ ಆಗಿ ಯಾರನ್ನೋ ಇಷ್ಟ ಪಡುತ್ತಿದ್ದಾರೆ, ಫ್ಯಾಮಿಲಿ ಒತ್ತಾಯಕ್ಕೆ ಮದುವೆ ಆಗ್ತಾರೆ ಹಾಗೆ ಹೀಗೆ ಎಂದು ಸಾಕಷ್ಟು ವಿಚಾರಗಳು ವೈರಲ್ ಆಗಿತ್ತು. ಯಾರೆ ಈ ಯಾವ ಪ್ರಶ್ನೆಗೂ ಮೇಘನಾ ಉತ್ತರ ಕೊಟ್ಟಿರಲಿಲ್ಲ.ಈಗ ಸ್ವತಃ ಮೇಘನಾ ಕೊಟ್ಟಿರುವ ಕ್ಲಾರಿಟಿ ವೈರಲ್ ಆಗುತ್ತಿದೆ. 

ಮೇಘನಾ ರಾಜ್‌ ಮೇಕಪ್ ಬ್ರಶ್‌ನ ಎಸ್ಕೇಪ್ ಮಾಡಿದ ಪುತ್ರ; ಕಾರಲ್ಲಿ ಮೇಕಪ್ ಮಾಡಿಕೊಂಡ ನಟಿ ವಿಡಿಯೋ ವೈರಲ್!

'ನಿಜ ಹೇಳಬೇಕು ಅಂದ್ರೆ ಎರಡನೇ ಮದುವೆ ಬಗ್ಗೆ ನಾನು ಯೊಚನೆ ಕೂಡ ಮಾಡಿಲ್ಲ. ನಿಜ ಹೇಳಬೇಕು ಅಂದ್ರೆ ಈ ತರ ಒಂದು ಅಯ್ಕೆ ಇದೆ ಅನ್ನೋ ಯೋಚನೆ ಕೂಡ ನನಗೆ ಬಂದಿಲ್ಲ ಈ ವಿಚಾರದ ಬಗ್ಗೆ ಯಾರೂ ನನ್ನ ಜೊತೆ ಚರ್ಚೆ ಮಾಡಿಲ್ಲ. ಎರಡನೇ ಮದುವೆ ಬಗ್ಗೆ ಯೋಚನೆ ಮಾಡಿಲ್ಲ ಮಾಡೋದು ಇಲ್ಲ. ಒಂದು ವಿಚಾರದ ಬಗ್ಗೆ ತುಂಬಾ ಕ್ಲಿಯರ್ ಆಗಿರುವ ನನ್ನ ಜೀವನದಲ್ಲಿ ನನಗೆ ನನ್ನ ಮಗ ಮುಖ್ಯವಾಗುತ್ತಾನೆ ನನ್ನ ಗಮನ ಇರುವುದು ಅವನ ಮೇಲೆ ಮಾತ್ರ ಇದಕ್ಕಿಂತ ಸಿಂಪಲ್ ಆಗು ಏನೂ ಹೇಳಲು ಆಗಲ್ಲ. ನನ್ನ ಜೀವನ ಇರುವುದೇ ರಾಯನ್ ರಾಜ್ ಸರ್ಜಾನಿಗೆ ಅದಾದ ಮೇಲೆ ನನಗೆ ಯಾವುದು ಮುಖ್ಯವಲ್ಲ ನನ್ನ ಜೀವನದಲ್ಲಿ. ನನ್ನ ಮಗನೇ ನನ್ನ ಓನ್ ಆಂಡ್ ಆಲ್' ಎಂದು ಕನ್ನಡ ಖಾಸಗಿ ಮಾಧ್ಯಮ ಸಂದರ್ಶನದಲ್ಲಿ ಮೇಘನಾ ಮಾತನಾಡಿದ್ದಾರೆ. 

10 ವರ್ಷಗಳ ಕಾಲ ನಟ ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ ನಟಿಸಿ ಅಕ್ಟೋವರ್ 22, 2017ರಲ್ಲಿ ನಿಶ್ಚಿತಾರ್ಥವಾಗಿ, ಮೇ 2, 2018ರಲ್ಲಿ ಅದ್ದೂರಿಯಾಗಿ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದಲ್ಲಿ ಮದುವೆ ಮಾಡಿಕೊಂಡರು. ಆದರೆ ಜೂನ್ 7,2020 ಹೃದಯಾಘಾತದಿಂದ ಚಿರಂಜೀವಿ ಇಹಲೋಕ ತ್ಯಜಿಸಿದರು ಆ ಸಮಯದಲ್ಲಿ ಮೇಘನಾ ರಾಜ್ ಗರ್ಭಿಣಿ ಆಗಿದ್ದರು. ಅಕ್ಟೋಬರ್ 22, 2020ರಂದು ಪುತ್ರ ರಾಯನ್ ರಾಜ್ ಸರ್ಜಾ ಜನಿಸಿದನು. ಕಲರ್‌ಫುಲ್‌ ಜೀವನಕ್ಕೆ ಈ ರೀತಿ ಆಗಬಾರದಿತ್ತು ಎಂದು ನೆಟ್ಟಿಗರು ಬೇಸರ ವ್ಯಕ್ತ ಪಡಿಸಿದ್ದರು. ಆದರೂ ರಾಯನ್‌ಗೆ ದೊಡ್ಡ ಮಟ್ಟದಲ್ಲಿ ಪ್ರೀತಿ ಕೊಡುತ್ತಿದ್ದಾರೆ ಕರ್ನಾಟಕದ ಜನತೆ.  

ನಮಸ್ತೆ ಅಪ್ಪ ನಮಸ್ತೆ ಅಪ್ಪ ಎಂದು ಚಿರು ಸಮಾಧಿ ಮುಂದೆ ಕಣ್ಣೀರಿಟ್ಟ ರಾಯನ್!

ಚಿರು ಆಪ್ತ ಸ್ನೇಹಿತ ಪನ್ನಗಾಭರಣ ನಿರ್ದೇಶನ ಮಾಡುತ್ತಿರುವ ತತ್ಸಮ ತದ್ಭವ ಚಿತ್ರದಲ್ಲಿ ಮೇಘನಾ ರಾಜ್‌ ಮತ್ತು ಪ್ರಜ್ವಲ್ ದೇವರಾಜ್ ನಟಿಸುತ್ತಿದ್ದಾರೆ. ಸಿನಿಮಾ ಚಿತ್ರೀಕರಣ ಅಂತಿಮದಲ್ಲಿದ್ದು ಸಣ್ಣ ಪುಟ್ಟ ಪ್ರಚಾರ ಶುರು ಮಾಡಿಕೊಂಡಿದ್ದಾರೆ.

Latest Videos
Follow Us:
Download App:
  • android
  • ios