ಸೋಷಿಯಲ್ ಮೀಡಿಯಾದಲ್ಲಿ  #poetryreadingchallenge ಟ್ರೆಂಡ್ ಆಗ್ತಾ ಇದೆ. ಕ್ರಿಕೆಟಿಗ ಅನಿಲ್ ಕುಂಬ್ಳೆ ಈ ಚಾಲೆಂಜನ್ನು ಸ್ನೇಹಿತರಾದ ಅನಿಲ್ ಕುಂಬ್ಳೆ, ಪುನೀತ್‌ ರಾಜ್‌ಕುಮಾರ್ ಹಾಗೂ ಕಿಚ್ಚ ಸುದೀಪ್‌ಗೆ ನೀಡಿದ್ದಾರೆ. 

ಸೋಷಿಯಲ್ ಮೀಡಿಯಾದಲ್ಲಿ ಆಗಾಗ ಒಂದೊಂದು ಅಭಿಯಾನ ಟ್ರೆಂಡ್ ಆಗ್ತಾ ಇರುತ್ತದೆ. ನವೆಂಬರ್ ತಿಂಗಳು ಕನ್ನಡ ರಾಜ್ಯೋತ್ಸವದ ಹಿನ್ನಲೆಯಲ್ಲಿ ಈಗ #poetryreadingchallenge ಎಲ್ಲಾ ಕಡೆ ಟ್ರೆಂಡ್ ಆಗ್ತಾಯಿದೆ. ಒಬ್ಬರು ಅವರಿಷ್ಟದ ಕವಿಯ ಕವನಗಳನ್ನು ವಾಚಿಸಿ ಅದನ್ನು ಇನ್ನೊಬ್ಬರಿಗೆ ಕೋ ಕೊಡ್ತಾ ಹೋಗುವುದೇ ಇದರ ವಿಶೇಷ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೋ ಕೊಟ್ಟವರು ಯಾವುದಾದರೊಂದು ಕನ್ನಡ ಪದ್ಯವನ್ನು ಹೇಳಬೇಕು. ಗೋಲ್ಡನ್ ಸ್ಟಾರ್ ಗಣೇಶ್ ಕ್ರಿಕೆಟಿಗ ಅನಿಲ್ ಕುಂಬ್ಳೆಗೆ ಈ ಚಾಲೆಂಜನ್ನು ಕೊಟ್ಟಿದ್ದಾರೆ. ಚಾಲೆಂಜ್ ಸ್ವೀಕರಿಸಿದ ಕುಂಬ್ಳೆ ರಾಷ್ಟ್ರಕವಿ ಕುವೆಂಪು ಅವರ 'ಎಲ್ಲಾದರೂ ಇರು. ಎಂತಾದರೂ ಇರು' ಕವನವನ್ನು ವಾಚಿಸಿದ್ದಾರೆ.

Scroll to load tweet…

ಇದನ್ನು ಮುಂದುವರೆಸಲು ಕಿಚ್ಚ ಸುದೀಪ್, ಪುನೀತ್ ರಾಜ್‌ಕುಮಾರ್ ಹಾಗೂ ವಿಜಯ್ ಪ್ರಕಾಶ್‌ಗೆ ಕೋ ಕೊಟ್ಟಿದ್ದಾರೆ. ವಿಜಯ್ ಪ್ರಕಾಶ್ ಡಿವಿಜಿಯವರ ಮಂಕುತಿಮ್ಮನ ಕಗ್ಗವನ್ನು ಹಾಡಿನ ಮೂಲಕ ಹೇಳಿದ್ದಾರೆ. 

Scroll to load tweet…
Scroll to load tweet…

ಗೋಲ್ಡರ್ ಸ್ಟಾರ್ ಗಣೇಶ್ ಬೇಂದ್ರೆಯವರ 'ನೀ ಹಿಂಗ ನೋಡಬ್ಯಾಡ ನಿನ್ನ' ಕವನವನ್ನು ವಾಚಿಸಿದ್ದಾರೆ.

Scroll to load tweet…