Asianet Suvarna News Asianet Suvarna News

ವೀರೇಂದ್ರ ಹೆಗ್ಗಡೆ ಭೇಟಿಯಾಗಿ ಶುಭಾಶಯ ತಿಳಿಸಿದ ಸುದೀಪ್ ದಂಪತಿ

ಕಿಚ್ಚ ಸುದೀಪ್ ಸೇರಿದಂತೆ ವಿಕ್ರಾಂತ್ ರೋಣ ತಂಡ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ನೂತನವಾಗಿ ರಾಜ್ಯ ಸಭೆಗೆ ಆಯ್ಕೆ ಆಗಿರುವ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರಿಗೆ ಕಿಚ್ಚ ಸುದೀಪ್ ದಂಪತಿ ಶುಭಾಶಯ ತಿಳಿಸಿದರು.
 

vikrant Rona star Sudeep and his wife priya meet Veerendra heggade in dehali sgk
Author
Bengaluru, First Published Jul 29, 2022, 11:17 AM IST

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಅದ್ದೂರಿಯಾಗಿ ರಿಲೀಸ್ ಆಗಿದೆ. ವಿಶ್ವದಾದ್ಯಂತ ತೆರೆಗೆ ಬಂದಿರುವ ವಿಕ್ರಾಂತ್ ರೋಣ ಹೌಸ ಫುಲ್ ಪ್ರದರ್ಶನ ಕಾಣುತ್ತಿದೆ. ಜುಲೈ 28ರಂದು ರಿಲೀಸ್ ಆದ ವಿಕ್ರಾಂತ್ ರೋಣ ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ. ಬಾಕ್ಸ್ ಆಫೀಸ್ ನಲ್ಲೂ ಭರ್ಜರಿ ಕಲೆಕ್ಷನ್ ಮಾಡಿದೆ. ಕರ್ನಾಟಕ ಮಾತ್ರವಲ್ಲದೇ ಬೇರೆ ಬೇರೆ ರಾಜ್ಯಗಳಲ್ಲೂ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಮಯದಲ್ಲಿ ಕಿಚ್ಚ ಸುದೀಪ್ ಸೇರಿದಂತೆ ವಿಕ್ರಾಂತ್ ರೋಣ ತಂಡ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಇದೇ ಸಂದರ್ಭದಲ್ಲಿ ನೂತನವಾಗಿ ರಾಜ್ಯ ಸಭೆಗೆ ಆಯ್ಕೆ ಆಗಿರುವ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರಿಗೆ ಕಿಚ್ಚ ಸುದೀಪ್ ದಂಪತಿ ಶುಭಾಶಯ ತಿಳಿಸಿದರು.

ವಿಕ್ರಾಂತ್ ರೋಣ ಸಿನಿಮಾದ ಪ್ರಿಮಿಯರ್ ಶೋ ಅನ್ನು ದೆಹಲಿಯಲ್ಲಿ ಏರ್ಪಡಿಸಲಾಗಿತ್ತು. ವಿಶೇಷವಾಗಿ ಎಮ್ ಪಿಗಳಿಗೆ ಮಾತ್ರ ಶೋ ಆಯೋಜಿಸಲಾಗಿತ್ತು. ಈ ವೇಳೆ ವಿಕ್ರಾಂತ್ ರೋಣ ಇಡೀ ತಂಡ ಮತ್ತು ಸುದೀಪ ದಂಪತಿ ದೆಹಲಿಗೆ ತೇರಳಿದ್ದರು. ಆ  ವೇಳೆ ಸುದೀಪ್ ದಂಪತಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಸುದೀಪ್ ದಂಪತಿ ವಿರೇಂದ್ರ ಹೆಗಡೆ ಜೊತೆ ಕ್ಲಿಕ್ಕಿಸಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುದೀಪ್, ಪ್ರಿಯಾ ಸುದೀಪ್ ಮತ್ತು ನಿರ್ಮಾಪಕ ಜಾಕ್ ಮಂಜು ವಿರೇಂದ್ರ ಹೆಗಡೆ ಜೊತೆ ಕುಳಿತು ಫೋಟೋಗೆ ಪೋಸ್ ನೀಡಿದ್ದಾರೆ. 

ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಹೇಳುವುದಾದರೆ, ಕರ್ನಾಟಕದಲ್ಲಿ ವಿಕ್ರಾಂತ್ ರೋಣ ಸಿನಿಮಾ 325 ಸಿಂಗಲ್ ಸ್ಕ್ರೀನ್ ಹಾಗೂ 65 ಮಲ್ಟಿಫ್ಲೆಕ್ಸ್ ಸೇರಿದಂತೆ ಒಟ್ಟು 2500 ಪ್ರದರ್ಶನಗಳನ್ನು ಕಂಡಿದೆ. ಬೆಂಗಳೂರಿನಲ್ಲೆ ಸುಮಾರು 1200 ಶೋ ಆಗಿದೆ. ಬಹುತೇಕ ಚಿತ್ರಮಂದಿರಗಳು ಹೌಸ್ ಫುಲ್ ಆಗಿತ್ತು. ಈ ಲೆಕ್ಕಚಾರದ ಆಧಾರದ ಮೇಲೆ ಕರ್ನಾಟಕದಲ್ಲಿ ವಿಕ್ರಾಂತ್ ರೋಣ ಬರೋಬ್ಬರಿ 18 ರಿಂದ 21 ಕೋಟಿ ಕಲೆಕ್ಷನ್ ಮಾಡಿದೆ ಎಂದು ಸಿನಿ ಪಂಡಿತರ ಲೆಕ್ಕಾಚಾರವಾಗಿದೆ. 

ವಿಕ್ರಾಂತ್ ರೋಣ; ಕಿಚ್ಚನ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು? ಸಂಪೂರ್ಣ ಕಲೆಕ್ಷನ್ ಮಾಹಿತಿ

ಬೇರೆ ಬೇರೆ ರಾಜ್ಯಗಳಲ್ಲೂ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಬಾಲಿವುಡ್, ಓವರ್ ಸೀಸ್ ಗಳಲ್ಲೂ ವಿಕ್ರಾಂತ್ ರೋಣ ಉತ್ತಮ ಕಮಾಯಿ ಮಾಡಿದೆ ಎನ್ನುವ ವರದಿಯಾಗಿದೆ. ಆದರೆ ಕಲೆಕ್ಷನ್ ಬಗ್ಗೆ ಸಿನಿಮಾ ತಂಡ ಇನ್ನು ಅಧಿಕೃತ ಮಾಹಿತಿ ಬಹಿರಂಗ ಪಡಿಸಿಲ್ಲ. ಸಿನಿಮಾದ ಹಾಡುಗಳು ಮತ್ತು ಟ್ರೈಲರ್ ಮೂಲಕ ಭಾರಿ ಕತೂಹಲ ಮೂಡಿಸಿದ್ದ ವಿಕ್ರಾಂತ್ ರೋಣ ಸಿನಿಮಾವನ್ನು ಅಭಿಮಾನಿಗಳು ತೆರೆಮೇಲೆ ನೋಡಿ ಕಣ್ತುಂಬಿಕೊಂಡಿದ್ದಾರೆ. 2ನೇ ದಿವನೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಇನ್ನು ವೀಕೆಂಡ್ ನಲ್ಲಿ ಕಲೆಕ್ಷನ್ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. 

ವಿಕ್ರಾಂತ್ ರೋಣ ಚಿತ್ರದಲ್ಲಿ ಸುದೀಪ್ ಬಾಡಿಗಾರ್ಡ್‌ ನಟನೆ; ಏನಂದ್ರು ಬಾಸ್‌?

ವಿಕ್ರಾಂತ್ ರೋಣ ಸಿನಿಮಾದಲ್ಲಿ ಸುದೀಪ್ ಜೊತೆ ನಿರೂಪ್ ಭಂಡಾರಿ, ನೀತಾ ಅಶೋಕ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಇನ್ನು ಬಾಲಿವುಡ್ ಸ್ಟಾರ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಚಿತ್ರಕ್ಕೆ ಗ್ಲಾಮರ್ ಟಚ್ ನೀಡಿದ್ದಾರೆ. ಜಾಕ್ವೆಲಿನ್ ಕಿಚ್ಚನ ಜೊತೆ ಹೆಜ್ಜೆ ಹಾಕಿರುವ ರಾ..ರಾ..ರಕ್ಕಮ್ಮ ಹಾಡು ಸೂಪರ್ ಹಿಟ್ ಆಗಿದೆ. ಅಭಿಮಾನಿಗಳು ಈ ಹಾಡಿಗೆ ಚಿತ್ರಮಂದಿರದಲ್ಲಿ ಹುಚ್ಚೆದ್ದು ಕುಣಿಯುತ್ತಿದ್ದಾರೆ. ಅನೂಪ್ ಭಂಡಾರಿ ಸಾರಥ್ಯದಲ್ಲಿ ಮೂಡಿಬಂದಿರುವ ಸಿನಿಮಾಗೆ ಅಜನಿಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಜಾಕ್ ಮಂಜು ನಿರ್ಮಾಣ ಮಾಡಿದ್ದಾರೆ.     

Follow Us:
Download App:
  • android
  • ios