ರಾಜ್ಯದ ಏಕೈಕ ಗ್ರೀನ್ಝೋನ್ ಚಾಮರಾಜನಗರಕ್ಕೂ ಕೊರೊನಾ ವಕ್ಕರಿಸಿತಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಚಾಮರಾಜನಗರಕ್ಕೂ ಮಹಾರಾಷ್ಟ್ರ ಲಿಂಕ್ ಕಂಟಕವಾಗಿದೆ. ಕೊಳ್ಳೇಗಾಲ ಹಾಸ್ಟೆಲ್ನಲ್ಲಿ ಕ್ವಾರಂಟೈನ್ನಲ್ಲಿರುವ ವ್ಯಕ್ತಿಯನ್ನು ಕೊರೊನಾ ಶಂಕೆ ಹಿನ್ನೆಲೆ ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಕೊರೊನಾ ಹೌದೋ, ಇಲ್ಲವೋ ಎಂದು ತಿಳಿದುಕೊಳ್ಳಲು ಇಂದು ಸಂಜೆ ಹೆಲ್ತ್ ಬುಲೆಟಿನ್ವರೆಗೆ ಕಾಯಲೇಬೇಕು.
state Jun 9, 2020, 12:04 PM IST
ಬಂಧಿತ ಆರೋಪಿಗಳು ಚನ್ನಗಿರಿ ತಾಲೂಕಿನ ನಿವಾಸಿಗಳು. ರಮೇಶ್, ಮರಿಯಪ್ಪ ಅಲಿಯಾಸ್ ಮಾರಿ, ಎಚ್.ಗೋಪಿ, ತಮ್ಮಯ್ಯ, ಶಶಿಕುಮಾರ್ ಹಾಗೂ ಒಬ್ಬ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಸೇರಿ ಒಟ್ಟು ಆರು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಜೊತೆಗೆ 2 ಬೈಕ್ ಹಾಗೂ ಕೃತ್ಯಕ್ಕೆ ಬಳಸಿದ ಕಬ್ಬಿಣ ರಾಡ್, ಆ್ಯಕ್ಸೆಲ್ ಬ್ಲೇಡ್ ಹಾಗೂ 9 ಸಾವಿರ ರುಪಾಯಿ ನಗದು ವಶಕ್ಕೆ ಪಡೆಯಲಾಗಿದೆ.
CRIME Jun 9, 2020, 12:03 PM IST
ಲಾಕ್ಡೌನ್ ಹಿನ್ನಲೆಯಲ್ಲಿ ಕಳೆದ ಎರಡೂವರೆ ತಿಂಗಳಿಂದ ಬಾಗಿಲು ಹಾಕಿದ್ದ ಬಹತೇಕ ಧಾರ್ಮಿಕ ಕೇಂದ್ರಗಳು ಸೋಮವಾರದಿಂದ ತೆರೆದಿವೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಭಕ್ತರು ದರ್ಶನ ಪಡೆಯಲು ಆಗಮಿಸುತ್ತಿಲ್ಲ. ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು ಬೆರಳೆಣಿಕೆಯಷ್ಟು ಭಕ್ತರು ಕಂಡು ಬಂದ ದೃಶ್ಯ ಸಾಮಾನ್ಯವಾಗಿತ್ತು. ಬಾಗಲಕೋಟೆ ಜಿಲ್ಲೆ ಬಾದಾಮಿ ಬನಶಂಕರಿ ದೇವಾಲಯದಲ್ಲಿ ಹೇಗಿದೆ ವ್ಯವಸ್ಥೆ? ಭಕ್ತರು ಹೇಗೆ ಬರುತ್ತಿದ್ದಾರೆ? ನಮ್ಮ ಪ್ರತಿನಿಧಿ ಸ್ಥಳದಿಂದಲೇ ವರದಿ ಮಾಡಿದ್ದಾರೆ. ಇಲ್ಲಿದೆ ನೋಡಿ..!
state Jun 9, 2020, 11:10 AM IST
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅನ್ನದಾನಕ್ಕೆ ಅದರದ್ದೇ ಆದ ಪ್ರಾಮುಖ್ಯತೆಯಿದೆ. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಅನ್ನದಾನ ವಿತರಣೆಗೆ ಅವಕಾಶ ಕಲ್ಪಿಸಲಾಗಿದೆ. ಧರ್ಮಸ್ಥಳಕ್ಕೆ ಎಂಟರಿಂದ 10 ಸಾವಿರ ಮಂದಿ ಭಕ್ತರು ಭೇಟಿ ನೀಡುವ ನಿರೀಕ್ಷೆಯಿದೆ ಎನ್ನಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
Karnataka Districts Jun 9, 2020, 11:00 AM IST
ಧಾರ್ಮಿಕ ಕೇಂದ್ರಗಳನ್ನು ಸೋಮವಾರದಿಂದ ತೆರೆಯುವುದಕ್ಕೆ ಸರ್ಕಾರ ಅನುಮತಿ ನೀಡಿದ್ದರೂ, ಉಡುಪಿ ಜಿಲ್ಲೆಯಲ್ಲಿ ಚಚ್ರ್ಗಳು ಮತ್ತು ಮಸೀದಿಗಳು ಸಾರ್ವಜನಿಕರಿಗೆ ತೆರೆಯಲಿಲ್ಲ. ಕೊಲ್ಲೂರು ಮೂಕಾಂಬಿಕಾ ಸೇರಿದಂತೆ ಮುಜರಾಯಿ ಇಲಾಖೆಯ ದೇವಾಲಯಗಳು ಭಕ್ತರ ಭೇಟಿಗೆ ಅವಕಾಶ ನೀಡಿದ್ದವು. ಆದರೆ ಉಡುಪಿ ಕೃಷ್ಣಮಠ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಿಲ್ಲ.
Karnataka Districts Jun 9, 2020, 8:31 AM IST
ಜೂನ್ 08 ರಿಂದ ಧಾರ್ಮಿಕ ಕೇಂದ್ರಗಳು ಪುನಾರಂಭಗೊಂಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರುವ ಧರ್ಮಸ್ಥಳದ ಮಂಜುನಾಥ ದೇವಸ್ಥಾನವೂ ತೆರೆದಿದ್ದು, ಮೊದಲ ದಿನ ಹೀಗಿತ್ತು ದೇವಾಲಯ.. ಇಲ್ಲಿವೆ ಫೋಟೋಸ್
Karnataka Districts Jun 9, 2020, 8:15 AM IST
ಕಳೆದೊಂದು ವಾರ ಉಡುಪಿ ಜಿಲ್ಲೆಯನ್ನು ತೀವ್ರ ಆತಂಕಕ್ಕೆ ಈಡು ಮಾಡಿದ್ದ ಕೊರೋನಾ ಪೀಡಿತರ ಸಂಖ್ಯೆ ಈ ವಾರದಲ್ಲಿ ಗಣನೀಯವಾಗಿ ಕಡಿಮೆಯಾಗುತ್ತಿದೆ. ಸೋಮವಾರ 45 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 946ಕ್ಕೇರಿದೆ. ಇದೇ ವೇಳೆ 113 ಮಂದಿ ಸೋಂಕು ಮುಕ್ತರಾಗಿ ಬಿಡುಗಡೆಯಾಗಿದ್ದಾರೆ.
Karnataka Districts Jun 9, 2020, 7:33 AM IST
ಉಡುಪಿ ಜಿಲ್ಲೆಯಲ್ಲಿ ಸೋಮವಾರ ಹೊಟೇಲ್, ರೆಸ್ಟೋರೆಂಟ್ಗಳು ಕಾರ್ಯಾರಂಭಿಸಿವೆ. ಆದರೆ ಕೊರೋನಾ ಭೀತಿಯಿಂದಾಗಿ ಗ್ರಾಹಕರಿಗೆ ಮಾತ್ರ ಹೊಟೇಲ್ಗಳಲ್ಲಿ ಕುಳಿತು ಉಣ್ಣುವ ಧೈರ್ಯ ಇನ್ನೂ ಬಂದಿಲ್ಲ. ಶೇ.25ರಷ್ಟುಗ್ರಾಹಕರು ಮಾತ್ರ ಹೊಟೇಲ್ನಲ್ಲಿ ಊಟ ಮಾಡಿದ್ದಾರೆ.
Karnataka Districts Jun 9, 2020, 7:18 AM IST
ಕೊರೋನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಬಂದ್ ಮಾಡಿರುವ ದ.ಕ. ಗಡಿ ಪ್ರದೇಶದಲ್ಲಿ ಮುಕ್ತ ವಾಹನ ಸಂಚಾರಕ್ಕೆ ಅವಕಾಶ ನೀಡುವಂತೆ ಆಗ್ರಹಿಸಿ ಕಾಸರಗೋಡು ಬಿಜೆಪಿ ಮುಖಂಡರು ಸೋಮವಾರ ದ.ಕ. ಜಿಲ್ಲೆಯ ಬಿಜೆಪಿ ಆಡಳಿತ ವಿರುದ್ಧವೇ ಪ್ರತಿಭಟನೆ ನಡೆಸಿದ ವಿದ್ಯಮಾನ ನಡೆದಿದೆ.
Karnataka Districts Jun 9, 2020, 7:06 AM IST
ಕೊರೋನಾ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಲಾಕ್ಡೌನ್ ಆಗಿ ಮುಚ್ಚಲ್ಪಟ್ಟಿದ್ದ ದೇವಸ್ಥಾನಗಳು ಸಾರ್ವಜನಿಕ ದರ್ಶನಕ್ಕೆ ಮುಕ್ತವಾದ ಹಿನ್ನೆಲೆಯಲ್ಲಿ ಇಂದು (ಸೋಮವಾರ) ರಾಜ್ಯದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಿದ್ದು , ಭಕ್ತರು ದೇವರ ದರ್ಶನ ಪಡೆದರು. ಇನ್ನು ಸೊರಬ ಕ್ಷೇತ್ರದ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಅವರು ಧರ್ಮಸ್ಥಳ ಮಂಜುನಾಥನ ಮೊರೆ ಹೋಗಿದ್ದಾರೆ. ಅಲ್ಲದೇ ತಮ್ಮ ಕಾರಿಗೂ ಮಂಜುನಾಥಸ್ವಾಮಿ ದರ್ಶನ ಮಾಡಿಸಿದ್ದಾರೆ.
Politics Jun 8, 2020, 10:48 PM IST
ಕೊರೋನಾ ವೈರಸ್ ಕಾರಣ ಸ್ಥಗಿತಗೊಂಡಿದ್ದ ಆಟೋಮೊಬೈಲ್ ಕಂಪನಿಗಳು ಪುನರ್ ಆರಂಭಗೊಂಡಿದೆ. ಇದರ ಬೆನ್ನಲ್ಲೇ ಹಲವು ವಾಹನಗಳ ಬೆಲೆ ಕೂಡ ಏರಿಕೆಯಾಗಿದೆ. ಇದೀಗ ಬಜಾಜ್ ಸ್ಟ್ರೀಟ್ ಬೈಕ್ ಬೆಲೆ ಏರಿಕೆಯಾಗಿದೆ. ಬೆಲೆ ಹೆಚ್ಚಳದ ವಿವರ ಇಲ್ಲಿದೆ.
Automobile Jun 8, 2020, 9:16 PM IST
ಕೊರೋನಾ ವೈರಸ್ ಹಾಗೂ ಲಾಕ್ಡೌನ್ ವೇಳೆ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಉಗ್ರರ ಉಪಟಳ ಹೆಚ್ಚಾಗಿದೆ. ಕಳೆದೆರಡು ತಿಂಗಳಿನಿಂದ ಭಾರತೀಯ ಸೇನೆ ನಿರಂತರವಾಗಿ ಉಗ್ರರ ಜೊತೆ ಹೋರಾಟ ಮಾಡುತ್ತಲೇ ಇದೆ. ಇದೀಗ ಸತತ 2 ದಿನದ ಗುಂಡಿನ ಚಕಮಕಿಯಲ್ಲಿ 9 ಉಗ್ರರನ್ನು ಹೊಡೆದುರುಳಿಸಿದೆ.
India Jun 8, 2020, 7:38 PM IST
ಕೊರೋನಾ ಹಾಗೂ ಲಾಕ್ಡೌನ್ನಿಂದ ಸ್ಥಗಿತಗೊಂಡಿದ್ದ ಶಾಪಿಂಗ್ ಮಾಲ್, ರೆಸ್ಟೋರೆಂಟ್ಗಳು ಮತ್ತೆ ಆರಂಭಗೊಂಡಿದೆ. ದೆಹಲಿಯಲ್ಲೀಗ ಮಾಲ್ಗಳು ಆರಂಭಗೊಂಡಿದೆ. ಮಾಲ್ ಪ್ರವೇಶಿಸಲು ಹಲವು ಮಾರ್ಗಸೂಚಿಗಳನ್ನು ಪಾಲಿಸಬೇಕು. ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಲಾಗಿದ್ದು, ವ್ಯಾಪಾರ-ವಹಿವಾಟು ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಅನ್ಲಾಕ್1ನಲ್ಲಿ ದೆಹಲಿ ಹೇಗಿದೆ? ಇಂಡಿಯಾ ರೌಂಡ್ಸ್ ವಿಥ್ ಡೆಲ್ಲಿ ಮಂಜು ಕಾರ್ಯಕ್ರಮದಲ್ಲಿ ಸಂಪೂರ್ಣ ವಿವರ
India Jun 8, 2020, 7:03 PM IST
ಭಾರತದಲ್ಲಿ ಕೊರೋನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ಲಾಕ್ಡೌನ್ ಹೇರಲಾಗಿದೆ. ಹೀಗಿರುವಾಗ ತಮಿಳುನಾಡಿನಲ್ಲಿ ಶಾಕಿಂಗ್ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ ಶನಿವಾರದಂದು ಪೊಲೀಸರು ವ್ಯಕ್ತಿಯೊಬಬ್ಬನನ್ನು ಬಂಧಿಸಿದ್ದಾರೆ.. ಈತನ ವಿರುದ್ಧ ಲಾಕ್ಡೌನ್ ವೇಳೆ ಮೂರು ತಿಂಗಳವರೆಗೆ ನಿರಂತರವಾಗಿ ಮಗಳನ್ನು ರೇಪ್ ಮಾಡಿರುವ ಆರೋಪ ಕೇಳಿ ಬಂದಿದೆ. ಇಷ್ಟೇ ಅಲ್ಲದೇ ಮಗಳು ಗರ್ಭಿಣಿ ಕೂಡಾ ಆಗಿದ್ದಾಳೆ.
CRIME Jun 8, 2020, 5:34 PM IST
ಕೊರೋನಾ ವೈರಸ್ ಲಾಕ್ಡೌನ್ 4ನೇ ಹಂತ ಮುಗಿದೆ. ಇದೀಗ ಅನ್ಲಾಕ್ 1 ಜಾರಿಯಾಗಿದೆ. ಆರಂಭಿಕ 2 ಹಂತದ ಲಾಕ್ಡೌನ್ನಲ್ಲಿ ಮೆತ್ತಗಿದ್ದ ಕೊರೋನಾ ವೈರಸ್ ಇದೀಗ ಭಾರತದಲ್ಲಿ ಅಟ್ಟಹಾಸ ಮೆರೆಯುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಕರ್ನಾಟಕ ಸರ್ಕಾರ ಇದೀಗ ಹೊಸ ಸೂತ್ರಕ್ಕೆ ಮುಂದಾಗಿದೆ. ರಾಜ್ಯದಲ್ಲಿ ರಿವರ್ಸ್ ಕ್ವಾರಂಟೈನ್ಗೆ ಪ್ಲಾನ್ ಮಾಡಿದೆ.
state Jun 8, 2020, 3:09 PM IST