ಲೋಕಸಭೆ ಚುನಾವಣೆಯ 2ನೇ ಹಂತದ ಮತದಾನ, ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಶಾಂತಿಯುತವಾಗಿ ನಡೆದಿದೆ. ಇದುವರಿಗಿನ ಮಾಹಿತಿಯಂತೆ ಶೇ.70 ಮತದಾನವಾಗಿದ್ದು, ಸ್ಪಷ್ಟ ಚಿತ್ರಣವಿನ್ನೂ ಸಿಕ್ಕಿಲ್ಲ. ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಮಂಡ್ಯ, ಮೈಸೂರು, ಹಾಸನ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರಕ್ಕೆ ಚುನಾವಣೆ ನಡೆದಿದೆ. 2.88 ಕೋಟಿ ಮತದಾರರಿಗೆ, 30602 ಮತಗಟ್ಟೆ ತೆರೆಯಲಾಗಿತ್ತು. ಚುನಾವಣಾ ಕಾರ್ಯಕ್ಕೆ 1.4 ಲಕ್ಷ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಶುಕ್ರವಾರ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಕಚೇರಿ, ಶಾಲೆ, ಕಾಲೇಜು ಮತ್ತು ಸಾರ್ವಜನಿಕ ವಲಯದ ಉದ್ಯಮಗಳಿಗೆ ವೇತನ ಸಹಿತ ರಜೆ ಘೋಷಿಸಲಾಗಿತ್ತು ಉತ್ತರ ಕರ್ನಾಟಕದ ಉಳಿದ 14 ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ.
Politics Apr 26, 2024, 7:02 AM IST
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ಕಡೆಗಳಲ್ಲಿಯೂ ವಾತಾವರಣ ಅನುಕೂಲಕರವಾಗಿದೆ. ನಾವು ಯಾವುದೇ ರೀತಿಯಲ್ಲಿಯೂ ಜಾತಿ ರಾಜಕಾರಣ ಮಾಡದೇ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಂಬ ಬೇಧ ಭಾವ ಇಲ್ಲದೇ ಎಲ್ಲರ ಬೆಂಬಲದೊಂದಿಗೆ ಗೆಲ್ಲುತ್ತೇವೆ. ರಾಜ್ಯದ 28ಕ್ಕೆ 28 ಕ್ಷೇತ್ರಗಳಲ್ಲೂ ಗೆಲ್ಲುವ ದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇವೆ. ನಾವು ಅದರಲ್ಲಿ ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸ ಇದೆ: ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
Politics Apr 26, 2024, 6:35 AM IST
ಬಿಜೆಪಿ ಮುಖಂಡ ಮಾದಾವರ ಗೋವಿಂದಪ್ಪ ಅವರ ನಿವಾಸದ ಮೇಲೆ ಐಟಿ ದಾಳಿಯಾಗಿದ್ದು, ಕೋಟ್ಯಂತರ ರು. ನಗದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
state Apr 26, 2024, 6:23 AM IST
ಮುಸ್ಲಿಮರಿಗೆ ನೀಡಲಾಗುತ್ತಿರುವ ಶೇ.4ರಷ್ಟು ಮೀಸಲಾತಿಯನ್ನು ಮುಂದುವರಿಸುತ್ತೇವೆ ಎಂದು ಸುಪ್ರೀಂಕೋರ್ಟ್ನಲ್ಲಿ ಈ ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವೇ ಅಫಿಡವಿಟ್ ಸಲ್ಲಿಸಿದೆ.
Politics Apr 26, 2024, 4:23 AM IST
ಐದನೇ ದಿನವೂ ಪ್ರಾಪರ್ಟಿ ಫೈಟ್ ಮುಂದುವರಿದಿದೆ. ಇಂದಿರಾ ಆಸ್ತಿಗಾಗಿ ಉತ್ತರಾಧಿಕಾರ ತೆರಿಗೆ ರದ್ದು ಎಂದು ಮೋದಿ ಹೇಳಿದ್ದಾರೆ. ಇದರ ನಡುವೆ ಮಲ್ಲಿಕಾರ್ಜುನ್ ಖರ್ಗೆ, ಪ್ರಧಾನಿಗೆ ಸೋಲಿನ ಸುಳಿವು ಸಿಕ್ಕಿದೆ ಎಂದು ಕೌಂಟರ್ ಕೊಟ್ಟಿದ್ದಾರೆ.
Politics Apr 25, 2024, 10:57 PM IST
ಫಿಲ್ಬಿಟ್ ಕ್ಷೇತ್ರದ ಹಾಲಿ ಸಂಸದ ವರುಣ್ ಗಾಂಧಿಗೆ ಈ ಬಾರಿ ಟಿಕೆಟ್ ನಿರಾಕರಿಸಲಾಗಿತ್ತು. ಇದೀಗ ರಾಯಬರೇಲಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಆಫರ್ ನೀಡಲಾಗಿದೆ. ಆದರೆ ವರುಣ್ ಗಾಂಧಿ ಈ ಆಫರ್ ನಿರಾಕರಿಸಿದ್ದಾರೆ. ಗಾಂಧಿ ಕುಟುಂಬದ ವಿರುದ್ದ ಸ್ಪರ್ಧೆಗೆ ನಿರಾಕರಿಸಿದ್ರಾ ವರುಣ್ ಗಾಂಧಿ?
India Apr 25, 2024, 7:47 PM IST
ರಾಹುಲ್ ಗಾಂಧಿ ಬಳಸಿದ ಭಾಷೆ, ಅವಹೇಳನ ಕುರಿತು ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ. ಮಧ್ಯಪ್ರದೇಶದ ಸಮಾವೇಶದಲ್ಲಿ ಜನತೆಗೆ ವಿಶೇಷ ಮನವಿ ಮಾಡುವ ಮೂಲಕ ಮೋದಿ, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
India Apr 25, 2024, 6:01 PM IST
ಸಿನಿಮಾ ಆಗೇ ಇಲ್ಲಾ, ಟ್ರೆಲರ್ನಲ್ಲೇ ಮುಗಿದು ಹೋಗಿದೆ. ಕ್ಯಾಮೆರಾಮನ್ ಓಡಿ ಹೋಗಿದ್ದಾನೆ, ಡೈರೆಕ್ಟರ್ ಸಹ ಓಡಿ ಹೋಗಿದ್ದಾನೆ, ಹೀರೋ ಅಂತೂ ಇಲ್ಲವೇ ಇಲ್ಲ. ವಿಲನ್ ಒಬ್ಬನೇ ಉಳಿದಿದ್ದಾನೆ ಎಂದು ಪ್ರಧಾನಿ ಮೋದಿ ವಿರುದ್ಧ ರಣದೀಪ್ ಸಿಂಗ್ ಸುರ್ಜೇವಾಲಾ ಆಕ್ರೋಶ ಹೊರಹಾಕಿದ್ದಾರೆ.
Politics Apr 25, 2024, 5:57 PM IST
ಬಿಜೆಪಿಯು ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯನ್ನು ರದ್ದುಗೊಳಿಸಲು ಬಯಸಿದೆ ಮತ್ತು ಈ ಗುರಿಯನ್ನು ಸಾಧಿಸಲು ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳ ಗಡಿ ದಾಟಲು ಪ್ರಯತ್ನಿಸುತ್ತಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆರೋಪಿಸಿದ್ದಾರೆ.
India Apr 25, 2024, 4:12 PM IST
ರಾಜ್ಯದಲ್ಲಿ 150 ವರ್ಷಗಳ ಹಿಂದೆಯೇ ಮುಸ್ಲಿಮರಿಗೆ ಮೈಸೂರು ಒಡೆಯರು ಮೀಸಲಾತಿ ಕೊಟ್ಟಿದ್ದರು. ದೇವರಾಜು ಅರಸು ಸರ್ಕಾರದಲ್ಲಿ ಮುಸ್ಲಿಮರನ್ನು ಒಬಿಸಿ ವರ್ಗಕ್ಕೆ ಸೇರಿಸಿದರೆ, ರಾಮಕೃಷ್ಣ ಹೆಗಡೆ ಸರ್ಕಾರ ಶೇ.4 ಮೀಸಲಾತಿ ಕೊಟ್ಟಿದೆ.
state Apr 25, 2024, 3:11 PM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏ.29ಕ್ಕೆ ನಗರಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ನಗರದ ಡಾ.ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿ ಬಹಿರಂಗ ಪ್ರಚಾರ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ.
Election Apr 25, 2024, 1:05 PM IST
ಪ್ರಸ್ತುತ ಬೆಳಗಾವಿ ಬಿಜೆಪಿಯ ಭದ್ರಕೋಟೆ. ಈ ಬಾರಿಯಾದರೂ ಬೆಳಗಾವಿ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸಿದೆ. ಇಲ್ಲಿನ ಗೆಲುವು ಕಾಂಗ್ರೆಸ್ಗೆ ಅಸ್ತಿತ್ವದ ಪ್ರಶ್ನೆಯಾದರೆ, ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಈ ನಡುವೆ ಎಂಇಎಸ್ ತನ್ನ ಬೆಂಬಲಿತ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ರಾಷ್ಟ್ರೀಯ ಪಕ್ಷಗಳ ನಿದ್ದೆಗೆಡಿಸಿದೆ. ಆದರೆ, ಎಂಐಎಸ್ ಅಭ್ಯರ್ಥಿ ಪಡೆಯುವ ಮತ ಯಾರಿಗೆ ವರವಾಗುತ್ತದೆ ಎಂದು ಹೇಳುವುದು ಕಷ್ಟ.
Politics Apr 25, 2024, 10:55 AM IST
ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿಕೆಗೆ ಕಿಡಿ ಕಾರಿದ ಜಗದೀಶ್ ಶೆಟ್ಟರ್, ನನ್ನ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ನಾನು ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಂದಾಗಲೇ ಲಕ್ಷ್ಮೀ ಹೆಬ್ಬಾಳ್ವರ್ ಈ ರೀತಿ ಮಾತನಾಡ ಬಹುದಿತ್ತು. ಆದರೆ, ಈಗ ಯಾಕೆ ಆ ರೀತಿ ಹೇಳುತ್ತಿದ್ದಾರೆ ಎಂದು ಪ್ರಶ್ನಿಸಿದರು.
Politics Apr 25, 2024, 10:17 AM IST
ಎನ್ಡಿಎ ವಿರುದ್ಧ ಪ್ರಚಾರ ನಡೆಸಲು ಬಂದಿದ್ದ ರೈತ ಸಂಘದ ಕಾರ್ಯಕರ್ತರನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು ಘಟನೆ ಮೊನ್ನೆ ಚಾಮರಾಜನಗರ ತಾಲೂಕಿನ ನಂಜೇದೇವನಪುರದಲ್ಲಿ ನಡೆದಿತ್ತು. ಇದೀಗ ಅಂತಹದ್ದೇ ಘಟನೆ ಮತ್ತೆ ನಡೆದಿದೆ. ಎನ್ಡಿಎ ವಿರುದ್ಧ ಪ್ರಚಾರಕ್ಕೆ ಬಂದಿದ್ದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರರನ್ನು ಬಿಜೆಪಿ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ.
Election Apr 25, 2024, 9:26 AM IST
ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ರಾಜ್ಯ ಬಿಜೆಪಿ ನಾಯಕರು ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
Election Apr 25, 2024, 8:48 AM IST