ಡಿ.ದೇವರಾಜ್ ಅರಸು ಟ್ರಕ್ ಟರ್ಮಿನಲ್ ನಿಗಮದ (ಡಿಡಿಯು ಟಿಟಿಎಲ್) ಅವ್ಯವಹಾರ ಪ್ರಕರಣ ಸಂಬಂಧ ನಿಗಮದ ಮಾಜಿ ಅಧ್ಯ ಕ್ಷರೂ ಆಗಿರುವ ಬಿಜೆಪಿಯ ಮಾಜಿ ಶಾಸಕ ಡಿ.ಎಸ್.ವೀರಯ್ಯ ಸೇರಿದಂತೆ ಇಬ್ಬರ ವಿರುದ್ಧ ನ್ಯಾಯಾಲಯಕ್ಕೆ ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಆರೋಪ ಪಟ್ಟಿ ಸಲ್ಲಿಸಿದೆ.
Politics Aug 31, 2024, 7:49 AM IST
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ಪ್ರಾಸಿಕ್ಯೂಷನ್ ಅರ್ಜಿಗಳಿಗೆ ಅನುಮತಿ ನೀಡುವಂತೆ ಆಗ್ರಹಿಸಿ ಶನಿವಾರ ರಾಜ್ಯ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜಭವನ ಚಲೋ ನಡೆಸಲಿದ್ದಾರೆ.
Politics Aug 31, 2024, 6:48 AM IST
ರಾಮನಾಥ ಕೋವಿಂದ್ ಅವರನ್ನು ತಪ್ಪಾಗಿ ‘ರಾಮ್ ಕೋವಿಡ್’ ಎಂದು ಕರೆಯುವ ಮೂಲಕ ನಟಿ, ಬಿಜೆಪಿ ಸಂಸದೆ ಕಂಗನಾ ರಾಣಾವತ್ ನಗೆಪಾಟಲಿಗೆ ಈಡಾಗಿದ್ದಾರೆ. ಅಲ್ಲದೆ, ಅವರನ್ನು ತಪ್ಪಾಗಿ ‘ದೇಶದ ಮೊದಲ ದಲಿತ ರಾಷ್ಟ್ರಪತಿ’ ಎಂದೂ ಸಂಬೋಧಿಸಿದ್ದಾರೆ.
India Aug 31, 2024, 5:33 AM IST
ವಿರೋಧ ಪಕ್ಷ ಬಿಜೆಪಿಗೆ ಕೆಲಸ ಇಲ್ಲವಾ?. ರಾಜ್ಯದಲ್ಲಿ ಬೇರೆ ಬೇರೆ ಸಮಸ್ಯೆಗಳಿವೆ. ಅದರ ಬಗ್ಗೆ ಬಿಜೆಪಿ ಪ್ರಸ್ತಾಪವನ್ನೇ ಮಾಡ್ತಾ ಇಲ್ಲ. ಮುಡಾ ಸೈಟ್ ಹೆಚ್ಚೆಚ್ಚು ಪಡೆದುಕೊಂಡವರೇ ಈಗ ಹೆಚ್ಚೆಚ್ಚು ಮಾತಾಡ್ತಾ ಇರೋದು. ಮುಡಾದಲ್ಲಿ ಸಿಎಂ ಹಾಗೂ ಅವರ ಕುಟುಂಬ ಇಲ್ಲ. ನಕಲಿ ದಾಖಲೆ ಸೃಷ್ಟಿಸುವ ಮಟ್ಟಕ್ಕೆ ಅವರ ಕುಟುಂಬ ಹೋಗಿಲ್ಲ. ಹೆಣ್ಣು ಮಗಳು ಪಾಪದವರು, ಅವರನ್ನು ಬೀದಿಗೆ ತಂದು ಕಪ್ಪು ಚುಕ್ಕೆ ಅಂಟಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಕೆಂಡಕಾರಿದ ಸಚಿವ ಎಚ್.ಸಿ ಮಹದೇವಪ್ಪ
Politics Aug 30, 2024, 11:45 PM IST
ನ್ಯಾಯಾಂಗದ ಮೊರೆ ಹೋಗಲು ಮುಂದಾಗಿದ್ದೇವೆ. ಅದಕ್ಕಾಗಿ ಸಮಾಜದ ವಕೀಲರ ಸಭೆ ನಡೆಸಿ ಚಿಂತನೆ ನಡೆಸುತ್ತಿದ್ದೇವೆ. ಸೆಪ್ಟೆಂಬರ್ 22 ಕ್ಕೆ ಬೆಳಗಾವಿಯಲ್ಲಿ ವಕೀಲರ ಮಹಾಪರಿಷತ್ ಸಭೆ ನಡೆಸುತ್ತಿದ್ದೇವೆ. ಪ್ರತಿ ಸಲ ನಮ್ಮ ಸಮಾಜದ ಸಚಿವರನ್ನು ಕೇಳಿದಾಗ ಮೀಟಿಂಗ್ ಮಾಡ್ತೇವೆ ಅಂತ ಹೇಳ್ತಾರೆ. ಆದ್ರೆ ಯಾವ ಪ್ರಯತ್ನವನ್ನು ಮಾಡುತ್ತಿಲ್ಲಾ. ಪಂಚಮಸಾಲಿ ಹೋರಾಟದಿಂದ ಅನೇಕರು ಗೆದ್ದಿದ್ದಾರೆ. ಅದರ ಋಣ ತೀರಿಸೋ ಕೆಲಸವನ್ನು ಶಾಸಕರು, ಸಚಿವರು ಮಾಡಬೇಕು: ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃುಂತ್ಯುಂಜಯ್ಯ ಸ್ವಾಮೀಜಿ
Karnataka Districts Aug 30, 2024, 6:18 PM IST
ಸುಳ್ಳು ಆರೋಪ ಮಾಡಿರುವ ಕಾಂಗ್ರೆಸ್ ಶಾಸಕ ರವಿಗಣಿಗ ವಿರುದ್ಧ ಈಗಾಗಲೇ ಮಂಡ್ಯದಲ್ಲಿ ದೂರು ದಾಖಲಿಸಲಾಗಿದೆ. ರವಿಗಣಗ ಅವರನ್ನು ಅನರ್ಹ ಮಾಡಬೇಕೆಂದು ಸ್ಪೀಕರ್ ಗೆ ದೂರು ನೀಡ್ತೇವೆ. ತಾನಾಗಿಯೇ ಬಿದ್ದು ಹೋಗುವ ಸರ್ಕಾರವನ್ನು ನಾವ್ಯಾಕೆ ಬೀಳಿಸಬೇಕು. ಇದೆಲ್ಲ ಸಿದ್ದರಾಮಯ್ಯ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮಾಡುತ್ತಿರುವ ಹುನ್ನಾರವಾಗಿದೆ ಎಂದ ಅಶ್ವಥ್ ನಾರಾಯಣಗೌಡ
Politics Aug 30, 2024, 5:35 PM IST
2 ಸಾವಿರ ಕೊಡ್ತಾರೆ, ಕಮಿಷನ್ ತಿನ್ನೋಕ್ಕಾಗಲ್ಲ. ಇವರು ಬಂದ್ರೆ ಗ್ಯಾರಂಟಿ ಕ್ಲೋಸ್ ಮಾಡೋದು ಕಮಿಷನ್ ಬಗ್ಗೆ ಚಿಂತೆ ಮಾಡೋದೆ ಬಿಜೆಪಿಯವರ ಕೆಲಸ. ಆ ಯೋಚನೆಯಲ್ಲೇ ಬಿಜೆಪಿ ಇರುತ್ತೆ. ನಮ್ಮ ಕಾಂಗ್ರೆಸ್ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತೆ. ಬಿಜೆಪಿ ರಾಜಭವನನ್ನ ದುರುಪಯೋಗ ಪಡಿಸಿಕೊಂಡಿರುವುದು ಎದ್ದು ಕಾಣುತ್ತಿದೆ ಎಂದು ಕಿಡಿ ಕಾರಿದ ಸಚಿವ ಮಧು ಬಂಗಾರಪ್ಪ
Politics Aug 30, 2024, 4:51 PM IST
ಕಾಂಗ್ರೆಸ್ನಲ್ಲಿಯೇ ಇರುತ್ತಿದ್ದರೆ ನನಗೆ ಶೆಡ್ಡೇ ಗತಿಯಾಗುತ್ತಿತ್ತು. ಬಿಜೆಪಿಗೆ ಬಂದು ಶೆಡ್ನಿಂದ ಒಳ್ಳೆಯ ವ್ಯಕ್ತಿಯಾಗಿದ್ದೇನೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರಿಗೆ ತಿರುಗೇಟು ನೀಡಿದ್ದಾರೆ.
Politics Aug 30, 2024, 7:36 AM IST
ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ಹಿಂದೆ ಪ್ರಕಟಿಸಿದ್ದಂತೆ ಅಸ್ಸಾಂನ ಬಿಜೆಪಿ ಸರ್ಕಾರ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ಕಾಯ್ದೆಯನ್ನು ರದ್ದುಗೊಳಿಸಿ, ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿಯನ್ನು ಕಡ್ಡಾಯಗೊಳಿಸುವ ಕಾಯ್ದೆಯನ್ನು ಅಂಗೀಕರಿಸಿದೆ.
India Aug 30, 2024, 5:36 AM IST
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಅಥವಾ ಬೇರೆ ಪಕ್ಷ ಸೇರಿ ಸ್ಪರ್ಧೆ ಮಾಡುವುದಾಗಿ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಗ್ಗೆ ಬಿಜೆಪಿ ನಾಯಕರ ಎದುರೇ ಜೆಡಿಎಸ್ ನಾಯಕ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
Politics Aug 30, 2024, 4:49 AM IST
ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರ ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ನೀಡಿರುವ 5 ಎಕರೆ ಕೆಐಎಡಿಬಿ ಸಿಎ ನಿವೇಶನದ ಬಗ್ಗೆ ಮಾತನಾಡುತ್ತಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸತ್ಯಹರಿಶ್ಚಂದ್ರ ಅಲ್ಲ.
Politics Aug 30, 2024, 4:28 AM IST
ಮಂಗಳೂರು ವಿವಿಯಲ್ಲಿ ಮಿತಿಮೀರಿದ ಭ್ರಷ್ಟಾಚಾರದಿಂದಾಗಿಯೇ ಇಂತಹ ಸ್ಥಿತಿ ಬಂದೊದಗಿದೆ ಎಂದು ಅಲ್ಲಿನ ನಿವೃತ್ತ ಪ್ರಾಧ್ಯಾಪಕರೇ ಹೇಳುತ್ತಿದ್ದಾರೆ. ವಿವಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಅತಿಥಿ ಉಪನ್ಯಾಸಕರಿಗೆ ಕಳೆದ ನಾಲ್ಕು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಒಂದು ಕಾಲದಲ್ಲಿ ಪ್ರತಿಷ್ಠಿತ ವಿಶ್ವವಿದ್ಯಾನಿಲಯ ಎಂಬ ಹೆಸರು ಪಡೆದುಕೊಂಡಿದ್ದ ಮಂಗಳೂರು ವಿವಿ ಭ್ರಷ್ಟಾಚಾರದಿಂದಾಗಿ ಅಕ್ಷರಶಃ ತನ್ನ ಘನತೆಯನ್ನು ಹಾಳು ಮಾಡಿಕೊಂಡಿದೆ ಎಂದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್
Politics Aug 29, 2024, 11:55 PM IST
ಕಾಂಗ್ರೆಸ್ ಎಂದೆಂದಿಗೂ ಬಡವರ ಪರ, ಬಡವರಿಗಾಗಿಯೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೇಂದ್ರ ಸರ್ಕಾರವೇ ಶ್ರೀಮಂತರ ₹ 16 ಲಕ್ಷ ಕೋಟಿ ಮನ್ನಾ ಮಾಡಿದೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ
Politics Aug 29, 2024, 10:18 PM IST
ಬೇಳೂರು ಗೋಪಾಲಕೃಷ್ಣ ಮಾಡಿದ ಆಪರೇಷನ್ ಸಕ್ಸಸ್ ಆಗಿದೆ. ಬಿಜೆಪಿ, ಜೆಡಿಎಸ್ ಮೈತ್ರಿಕೂಟಕ್ಕೆ ಬಹುಮತವಿದ್ದರೂ ಅಧಿಕಾರ ಮಾತ್ರ ಕಾಂಗ್ರೆಸ್ ತೆಕ್ಕೆಗೆ ಜಾರಿಗದೆ. ಹೊಸನಗರ ಪಟ್ಟಣ ಪಂಚಾಯಿತಿಯ 11 ಸ್ಥಾನಗಳಲ್ಲಿ ನಾಲ್ಕು ಕಾಂಗ್ರೆಸ್ ನಾಲ್ಕು ಬಿಜೆಪಿ ಮೂರು ಜೆಡಿಎಸ್ ಸದಸ್ಯರಿದ್ದರು. ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ನಾಗರಾಜ್ ಗೆ ಬಿಜೆಪಿಯ ಇಬ್ಬರು ಜೆಡಿಎಸ್ ನ ಓರ್ವ ಸದಸ್ಯರು ಬೆಂಬಲಿಸುವ ಮೂಲಕ ಆಯ್ಕೆಯಾಗಿದ್ದಾರೆ.
Politics Aug 29, 2024, 4:26 PM IST
ಅರ್ಜಿಗಳ ಕುರಿತು ವಿಚಾರಣೆ ಪೂರ್ಣಗೊಳಿಸಿ ಕಾಯ್ದಿಸಿರುವ ತೀರ್ಪನ್ನು ಹಿರಿಯ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರನ್ನು ಒಳಗೊಂಡಿರುವ ವಿಭಾಗೀಯ ಪೀಠ ಗುರುವಾರ ಸಂಜೆ 4.30ಕ್ಕೆ ಪ್ರಕಟಿಸಲಿದೆ.
state Aug 29, 2024, 8:34 AM IST