ಇಂಗಳಗಿ ಗ್ರಾಮದ ಫಕ್ಕೀರಪ್ಪ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿದೆ. ಕೂಡಲೇ ಆತ ಆ ಹಾವನ್ನು ಅಲ್ಲೇ ಕಲ್ಲಿನಿಂದ ಜಜ್ಜಿ ಕೊಂದಿದ್ದಾನೆ. ಬಳಿಕ ಅದೇ ಹಾವನ್ನು ಹಿಡಿದುಕೊಂಡು ತಂದೆಯೊಂದಿಗೆ ಆಸ್ಪತ್ರೆಗೆ ಬಂದು ಚಿಕಿತ್ಸೆಗೆ ದಾಖಲಾಗಿದ್ದಾನೆ. ವೈದ್ಯರಿಗೆ ತನಗೆ ಇದೇ ಹಾವು ಕಚ್ಚಿದ್ದು, ಚಿಕಿತ್ಸೆ ನೀಡಿ ಎಂದು ತಿಳಿಸಿದ್ದಾನೆ. ಇದೀಗ ಯುವಕ ಚೇತರಿಸಿಕೊಳ್ಳುತ್ತಿದ್ದಾನೆ.
Karnataka Districts Sep 20, 2024, 12:12 PM IST
ಬಸ್ ರನ್ನಿಂಗ್ ಇರುವಾಗಲೇ BMTC ಬಸ್ ಚಾಲಕನಿಗೆ ಎದೆನೋವು ಕಾಣಿಸಿಕೊಂಡ ಘಟನೆ ನಡೆದಿದ್ದು, ಹಲಸೂರು ಟ್ರಾಫಿಕ್ ಪೊಲೀಸರ ಸಮಯಪ್ರಜ್ಞೆಯಿಂದ ಚಾಲಕ ಸೇರಿ ಬಸ್ನಲ್ಲಿ 45 ಪ್ರಯಾಣಿಕರು ಅನಾಹುತದಿಂದ ಬಚಾವ್ ಆಗಿದ್ದಾರೆ.
state Sep 20, 2024, 10:49 AM IST
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳು ನಡೆಯುತ್ತಿವೆ. ಕರ್ನಾಟಕ ಸುವರ್ಣ ಸoಭ್ರಮ -50 ಸಮಾರೋಪ ಸಮಾರಂಭ ವಿಧಾನಸೌಧದ ಮುಂಭಾಗದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ
state Sep 20, 2024, 10:09 AM IST
ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ನಡೆಯಲಿರುವ ಹಿನ್ನೆಲೆಯಲ್ಲಿ ಸೆ.21ರಂದು ಬೆಳಗ್ಗೆ 10ರಿಂದ ಸಂಜೆ 5ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದ ಬೆಸ್ಕಾಂ
Karnataka Districts Sep 20, 2024, 9:46 AM IST
ಮುಂಗಡವಾಗಿ ಫ್ಲ್ಯಾಟ್ ಬುಕ್ ಮಾಡಿ ಮುಂಗಡ ಠೇವಣೆ ಇಟ್ಟಿರುವ 12,500 ಅರ್ಜಿದಾರರಿಗೆ ಮಾತ್ರ ಅನ್ವಯವಾಗುವಂತೆ ರಾಜ್ಯ ಸರ್ಕಾರ ಮತ್ತೆ ₹1 ಲಕ್ಷ ಕಡಿತಗೊಳಿಸಿದೆ. ಹೀಗಾಗಿ, ಫ್ಲ್ಯಾಟ್ ದರ ಅಂತಿಮವಾಗಿ ಕ್ರಮವಾಗಿ ₹6.7 ಲಕ್ಷ ಹಾಗೂ ₹7.50 ಲಕ್ಷ ನಿಗದಿಯಾಗಿದೆ.
Karnataka Districts Sep 20, 2024, 9:15 AM IST
ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿನ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಖಾತಾ ಅಪ್ಡೇಟ್ ಕಾರ್ಯ ಮುಂದಿನ ಒಂದು ತಿಂಗಳೊಳಗೆ ಮುಗಿಸುವಂತೆ ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅಧಿಕಾರಿಗಳಿಗೆ ಗಡುವು ನೀಡಿದರು.
state Sep 20, 2024, 8:46 AM IST
ಕುಮಾರಸ್ವಾಮಿ ಅವರು 100 ಕೋಟಿ ರು. ಬೆಲೆಯ ಸರ್ಕಾರಿ ಜಾಗವನ್ನು ಕಬಳಿಸಿ ಸಂಬಂಧಿಕರಿಗೆ ನೀಡಿದ್ದಾರೆ. ಇದಕ್ಕೆ ಮಾಜಿ ಮುಖ್ಯಮಂತ್ರಿ ಜಿ.ಎಸ್. ಯಡಿಯೂರಪ್ಪ ಅವರೂ ಸಹಕರಿಸಿದ್ದಾರೆ' ಎಂದು ಆರೋಪಿಸಿದ ಸಚಿವರಾದ ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್ ಹಾಗೂ ಸಂತೋಷ್ ಲಾಡ್
state Sep 20, 2024, 8:18 AM IST
ಯಾರೂ ಹೆದರಬೇಡಿ, ನಿಮ್ಮ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನಾನು ಭರವಸೆ ಕೊಡುತ್ತೇನೆ. ಇನ್ನೊಂದು ವಾರದಲ್ಲಿ ನಿಮ್ಮ ಮಕ್ಕಳನ್ನು ಜೈಲಿನಿಂದ ಬಿಡಿಸುತ್ತೇನೆ. ವಕೀಲರನ್ನು ನಾನೇ ನೇಮಿಸಿಕೊಡುತ್ತೇನೆ ಎಂದು ನಾಗಮಂಗಲದ ಬದರಿಕೊಪ್ಪಲು ಮಹಿಳೆಯರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಭಯ ನೀಡಿದ್ದಾರೆ.
state Sep 20, 2024, 8:15 AM IST
ನ್ಯಾಯಮೂರ್ತಿ ಅವರು ಆದೇಶದ ಮೇರೆಗೆ ಗಂಡ-ಹೆಂಡತಿ ಇಬ್ಬರೂ ಸೆ.22ರಂದು ಕೊಪ್ಪಳ ಗವಿಸಿದ್ಧೇಶ್ವರ ಮಠಕ್ಕೆ ಹೋಗಲಿದ್ದಾರೆ. ಗವಿಮಠ ಪರಂಪರೆಯಲ್ಲಿಯೇ ಇದು ಮೊದಲ ವಿಶೇಷ ಪ್ರಕರಣವಾಗಿದೆ.
Karnataka Districts Sep 20, 2024, 7:02 AM IST
ನಾಗಮಂಗಲದ ಕೋಮುಗಲಭೆ ವಿಚಾರದಲ್ಲಿ ಸರಿಯಾಗಿ ತನಿಖೆ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದೆ. ಜನರು ಹೇಳಿದ್ದನ್ನು ಕೇಳಿಯೇ ಹಾಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದೆ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದನ್ನು ಸುಳ್ಳು ಎಂದು ಸಚಿವರೇ ಹೇಳಿದ್ದರು. ಬಳಿಕ ಅದು ನಿಜ ಎಂದು ಸಾಬೀತಾಯಿತು. ಹಾಗಾದರೆ ಸಚಿವರ ವಿರುದ್ಧ ಎಫ್ಐಆರ್ ದಾಖಲಿಸಬೇಡವೇ ಎಂದು ಪ್ರಶ್ನಿಸಿದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್
Politics Sep 20, 2024, 6:30 AM IST
ಪಶ್ಚಿಮಘಟ್ಟಕ್ಕೆ ಸಂಬಂಧಿಸಿದಂತೆ ಶಾಸಕರು ಅಭಿಪ್ರಾಯ ನೀಡಿದ್ದಾರೆ. ಪರಿಸರ, ಅರಣ್ಯ ಸಂರಕ್ಷಣೆಯ ಜತೆಗೆ ಅಲ್ಲಿನ ಜನರನ್ನೂ ರಕ್ಷಿಸಬೇಕಿದೆ. ಯಾರನ್ನೂ ಒಕ್ಕಲೆಬ್ಬಿಸದೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ: ಅರಣ್ಯ ಸಚಿವ ಈಶ್ವರ ಖಂಡ್ರೆ
state Sep 20, 2024, 6:00 AM IST
ಮುಡಾದಿಂದ ಕೈಗೊಳ್ಳಲಾದ 387 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಮೈಸೂರು ಮೂಲದ ಪಿ.ಎಸ್. ನಟರಾಜ್ ಎಂಬುವವರು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ದೂರು ನೀಡಿದ್ದಾರೆ. ಮುಡಾ ನಿವೇಶನ ಹಂಚಿಕೆ ವಿಚಾರವಾಗಿ ಸಿಎಂ ಮತ್ತು ರಾಜ್ಯಪಾಲರ ನಡುವಿನ ತಿಕ್ಕಾಟ ನಡೆಯುತ್ತಿರುವ ನಡುವೆಯೇ, ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ತಲೆನೋವು ಎದುರಾಗುವಂತಾಗಿದೆ.
state Sep 20, 2024, 5:30 AM IST
ಬಿಹಾರದ ಗೋವಿಂದ್ಪುರದಲ್ಲಿ ಹಿಂದೂ ಬಹುಸಂಖ್ಯಾತ ಗ್ರಾಮವನ್ನು ತಮ್ಮದೆಂದು ವಕ್ಫ್ ಬೋರ್ಡ್ ಹೇಳಿಕೊಂಡಿದ್ದು, ದೇಶಾದ್ಯಂತ ವಕ್ಫ್ ಆಸ್ತಿಗಳನ್ನು ಸುತ್ತುವರೆದಿರುವ ವಿವಾದಗಳನ್ನು ಮತ್ತೆ ತೀವ್ರಗೊಳಿಸಿದೆ. ಈ ಲೇಖನವು ವಕ್ಫ್ ಕಾನೂನಿನಲ್ಲಿನ ವಿವಾದಾತ್ಮಕ ಅಂಶಗಳು, ಕರ್ನಾಟಕದಲ್ಲಿ ವರದಿಯಾಗಿರುವ ಹಗರಣಗಳು ಮತ್ತು ದೇಶಾದ್ಯಂತ ವಕ್ಫ್ ಬೋರ್ಡ್ಗಳ ಭೂ ಕಬಳಿಕೆ ಪ್ರಕರಣಗಳನ್ನು ಪರಿಶೀಲಿಸುತ್ತದೆ.
India Sep 19, 2024, 7:44 PM IST
ವಸತಿ ನಿಲಯದಲ್ಲಿ ಸ್ವಚ್ಛತೆ ಸಿಬ್ಬಂದಿಗೆ ವಾರ್ಡನ್ನಿಂದ ನಿರಂತರ ಲೈಂಗಿಕ ಕಿರುಕುಳ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿ ಗ್ರಾಮದಲ್ಲಿ ನಡೆದಿದೆ.
CRIME Sep 19, 2024, 4:14 PM IST
ರೇಷನ್ ಕಾರ್ಡ್ ಇಂದು ಅಗತ್ಯವಾಗಿ ಎಲ್ಲರಿಗೂ ಬೇಕಾದ ದಾಖಲೆಯಾಗಿದೆ. ಇನ್ನು ಮನೆಯಲ್ಲಿಯೇ ಕುಳಿತು ಆನ್ಲೈನ್ ಮೂಲಕ ರೇಷನ್ ಕಾರ್ಡ್ ಪಡೆಯಬಹುದಾಗಿದೆ. ಅವುಗಳ ಸಂಪೂರ್ಣ ಡಿಟೇಲ್ಸ್ ಇಲ್ಲಿದೆ.
BUSINESS Sep 19, 2024, 3:51 PM IST