ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಂತರ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಫಲಿತಾಂಶ ಏನಾಗುತ್ತದೊ ಎಂಬ ಆತಂಕದಲ್ಲಿಯೇ ವಿಶ್ರಾಂತಿಗೆ ಶರಣಾಗಿದ್ದರೆ, ಕೆಲವರು ವಿಶ್ರಾಂತಿಯನ್ನು ಬಯಸದೆ ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.
Politics May 12, 2023, 3:30 AM IST
ಸಾರ್ವತ್ರಿಕ ಚುನಾವಣೆ ಅದರಲ್ಲೂ ಮೊದಲಿಗಿಂತಲೂ ಈಗಿನ ಚುನಾವಣೆ ಮಾಡುವುದು ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಸಾಮಾನ್ಯದ ಮಾತಲ್ಲ. ಗೆಲುವಿಗಾಗಿ ಹಗಲು-ರಾತ್ರಿ ನಿದ್ದೆಗೆಟ್ಟು ಚುನಾವಣೆ ಕೆಲಸಗಳನ್ನು ನಿಭಾಯಿಸಬೇಕಾಗುತ್ತದೆ. ವಿಧಾನಸಭಾ ಚುನಾವಣಾ ಘೋಷಣೆಗೂ ಮುಂಚಿನಿಂದ ಶ್ರಮಿಸುತ್ತಿರುವ ಅಭ್ಯರ್ಥಿಗಳು ಇದೀಗ ಮತದಾನದ ಆನಂತರ ನಿಟ್ಟಿಸಿರು ಬಿಡುವಂತಾಗಿದೆ.
Politics May 11, 2023, 10:52 PM IST
ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ತೀವ್ರ ಜಿದ್ದಾಜಿದ್ದಿಯ ಕಣವಾಗಿದ್ದ ಕೊಡಗು ಜಿಲ್ಲೆಯ ಎರಡು ಕ್ಷೇತ್ರಗಳು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿವೆ. ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕೆಂಬ ಹಠದಲ್ಲಿ ಮೂರು ಪಕ್ಷಗಳ ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದವು.
Politics May 11, 2023, 4:53 PM IST
ಚುನಾವಣೆ ಮುಗಿದು ಹಲವಾರು ಸಚಿವರು ಶಾಸಕರು ರಾಜಕೀಯ ನಾಯಕರು ರಿಲಾಕ್ಸ್ ಮೂಡ್ಗೆ ಹೋಗಿದ್ದಾರೆ. ಇಂಧನ ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಕಚೇರಿಯಲ್ಲಿ ಕೂಡಿಸು ಕಳೆಯುವ ಲೆಕ್ಕಾಚಾರ ಮಾಡುತ್ತಿದ್ದಾರೆ.
Politics May 11, 2023, 4:46 PM IST
ಕರ್ನಾಟಕ ವಿಧಾನಸಭೆ 224 ಕ್ಷೇತ್ರಗಳಿಗೆ ನಡೆದ ಚುನಾವಣೆ ಮುಗಿದಿದೆ. ಹಗಲು-ರಾತ್ರಿಯೆನ್ನದೇ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಅಭ್ಯರ್ಥಿಗಳು, ಕಾರ್ಯಕರ್ತರು ನಿರಾಳರಾಗಿದ್ದಾರೆ.
Politics May 11, 2023, 11:57 AM IST
ಗೌಪ್ಯ ಮತದಾನ ಮಾಡಬೇಕೆಂಬ ನಿಯಮವಿದ್ದರೂ ಹಲವು ಯುವಕರು ತಾವು ಮತದಾನ ಮಾಡಿದ ವೀಡಿಯೋ, ಪೊಟೋ ತೆಗದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
Politics May 10, 2023, 5:57 PM IST
ವಿಧಾನಸಭಾ ಚುನಾವಣೆಯಿಂದ ಹೊರಗುಳಿದಿದ್ದ ಸಂಸದ ಅನಂತ ಕುಮಾರ್ ಹೆಗಡೆ ಬುಧವಾರ ಕುಟುಂಬ ಸಮೇತ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ.
Politics May 10, 2023, 4:20 PM IST
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಧಿಕಾರಿಗಳು ಮತಗಟ್ಟೆಯ ಬಳಿ ಪಕ್ಷೇತರ ಅಭ್ಯರ್ಥಿ ಕೆಜಿಎಫ್ ಬಾಬು ಕ್ರಮ ಸಂಖ್ಯೆಯನ್ನು ಅದಲು ಬದಲು ಮಾಡಿ, ಎಡವಟ್ಟು ಮಾಡಿಕೊಂಡಿದ್ದಾರೆ.
Politics May 10, 2023, 3:07 PM IST
ಮತದಾನ ಮಾಡುವುಕ್ಕಾಗಿ ತರಲಾಗಿದ್ದ ಮತಯಂತ್ರಗಳನ್ನ ಒಡೆದು ಪುಡಿಪುಡಿ ಮಾಡಿದ ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ.
CRIME May 10, 2023, 1:30 PM IST
ಮತದಾನ ಮಾಡಿ ಬಂದ ವ್ಯಕ್ತಿಯೊಬ್ಬ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿಯಲ್ಲಿ ಮತದಾನಕ್ಕೆ ಬಂದ ಮಹಿಳೆ ಸಾವನ್ನಪ್ಪಿದ್ದಾರೆ.
CRIME May 10, 2023, 1:02 PM IST
Karnataka Elections 2023ರ ಮತದಾನ ಪ್ರಕ್ರಿಯೆ ಮುಗಿದಿದ್ದು, 224 ಕ್ಷೇತ್ರಗಳಲ್ಲಿ 2615 ಅಭ್ಯರ್ಥಿಗಳ ಅದೃಷ್ಟ ಮತಪೆಟ್ಟಿಗೆಯಲ್ಲಿ ಭದ್ರವಾಗಿ ಲಾಕ್ ಆಗಲಿದೆ. ಮತಗಟ್ಟೆಗಳಿಂದ ಜಿಲ್ಲಾ ಕೇಂದ್ರಗಳಲ್ಲಿ ನಿರ್ಧರಿತ ಸ್ಟ್ರಾಂಗ್ ರೂಮ್ಗಳಲ್ಲಿ ಭದ್ರವಾಗಿ ಲಾಕ್ ಆಗಲಿದೆ. ಸುಮಾರು 5.3 ಕೋಟಿ ಮತದಾರರು ಮತದಾನದ ಹಕ್ಕು ಹೊಂದಿದ್ದು, ಶೇ.72 ರಿಂದ ಶೇ.75ರಷ್ಟು ಮತ ಚಲಾಯಿಸಿರುವ ಸಾಧ್ಯತೆ ಇದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳಲ್ಲದೇ ಕೆಲವೆಡೆ ಸ್ವತಂತ್ರ ಅಭ್ಯರ್ಥಿಗಳು, ಸ್ಯಾಂಡಲ್ವುಡ್ ನಟ ಉಪೇಂದ್ರ ಸ್ಥಾಪಿಸಿದ ಪ್ರಜಾಕಿಯ ಹಾಗೂ ಜನಾರ್ದನ ರೆಡ್ಡಿ ಅವರ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಅಭ್ಯರ್ಥಿಗಳೂ ಸ್ಪರ್ಧಿಸಿದ್ದರು. ಯಾರು ಬಹುಮತ ಪಡೆಯಬಹುದೆಂಬ ಕುತೂಹಲ ಎಲ್ಲರಿಗೂ ಇದೆ. ಸಿಲಿಕಾನ್ ವ್ಯಾಲಿ ಎಂದು ಹೆಸರು ಪಡೆದಿರುವ ಬೆಂಗಳೂರಿನಲ್ಲಿ ದೇಶ, ವಿದೇಶಗಳ ಕಂಪನಿಗಳು ಹಾಗೂ ಉದ್ಯೋಗಿಗಳು ನೆಲೆ ಕಂಡು ಕೊಂಡಿದ್ದು, ಇದು ಕೇವಲ ಕರ್ನಾಟಕದ ಚುನಾವಣೆಯಾದರೂ, ಇಲ್ಲಿ ಹೂಡಿಕೆ ಮಾಡಿರುವ ಪ್ರತಿಯೊಬ್ಬರಿಗೂ ಯಾವ ಪಕ್ಷ ಆಡಳಿತದ ಚುಕ್ಕಾಣಿ ಹಿಡಿಯಬಹುದೆಂಬ ಕುತೂಹಲ ಸಹಜವಾಗಿದಯೇ ಹೆಚ್ಚಾಗಿದೆ.ಮೇ 13ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಲ್ಲೀವರೆಗೂ ಯಾವ ಪಕ್ಷದ ಸರಕಾರ ರಚನೆಯಾಗುತ್ತದೆ ಎಂಬುದನ್ನು ಕಾಯಲೇ ಬೇಕು.
Politics May 10, 2023, 6:55 AM IST
ಬೆಂಗಳೂರಿನಲ್ಲಿ ನೆಲೆಸಿರುವ ತಮ್ಮ ಕ್ಷೇತ್ರದ ಮತದಾರರನ್ನು ಕರೆದುಕೊಂಡು ಹೋಗಲು ಚುನಾವಣಾ ಅಭ್ಯರ್ಥಿಗಳು ಮಂಗಳವಾರ ಬಸ್ ವ್ಯವಸ್ಥೆ ಮಾಡಿದ್ದು, ಸುಮಾರು 3 ಸಾವಿರಕ್ಕೂ ಹೆಚ್ಚಿನ ಬಸ್ಗಳಲ್ಲಿ ಟಿಕೆಟ್ ಕಾಯ್ದಿರಿಸಿಕೊಂಡು ಮತದಾರರನ್ನು ಕರೆದುಕೊಂಡು ಹೋಗಿದ್ದಾರೆ.
state May 10, 2023, 1:05 AM IST
ಬಹಿರಂಗ ಪ್ರಚಾರ ಅಂತ್ಯವಾದರೂ ಬಬಲೇಶ್ವ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ಕಾನೂನು ಉಲ್ಲಂಘಿಸಿ ಭರ್ಜರಿ ಪ್ರಚಾರ ನಡೆದಿದೆ. ಕೇಳಲು ಹೋದ ಪಿಎಸ್ಐ ಮೇಲೆಯೇ ಬೆಂಬಲಿಗರಿಂದ ಹಲ್ಲೆ ನಡೆದಿದೆ.
CRIME May 9, 2023, 7:44 PM IST
Karnataka Assembly Election 2023 Live Updates:ಕರ್ನಾಟಕ ವಿಧಾನಸಭಾ ಕಣದಲ್ಲಿ ಒಟ್ಟು 2625 ಅಭ್ಯರ್ಥಿಗಳಿದ್ದು, 224 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಒಟ್ಟು 5.3 ಕೋಟಿ ಮಂದಿ ಮತದಾನಕ್ಕೆ ಅರ್ಹರಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ 58545 ಮತಗಟ್ಟೆಗಳನ್ನು ಸ್ಥಾಪಿಸಿದ್ದು, 76,202 ವಿವಿಪ್ಯಾಟ್ಗಳನ್ನು ಬಳಸಲಾಗುತ್ತದೆ. 84,119 ಸಿಬ್ಬಂದಿ ನಿಯೋಜಿಸಿದ್ದು, ಮತಗಟ್ಟೆಗಳತ್ತ ಅಧಿಕಾರಿಗಳು ಈಗಾಗಲೇ ತೆರಳಿದ್ದಾರೆ.
ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ನಿನ್ನೆ ಸಂಜೆಯೇ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ, ಚುನಾವಣಾ ಆಯೋಗ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಎಲ್ಲೆಡೆ ಭದ್ರತೆ ಹೆಚ್ಚಿಸಲಾಗಿದೆ. ವಿಶೇಷ ಮತಗಟ್ಟೆಗಳನ್ನು ಆರಂಭಿಸಿದ್ದು, ಕೆಲವು ಮತಗಟ್ಟೆಗಳು ವಿಶೇಷ ಥೀಮ್ನೊಂದಿಗೆ ಅಲಂಕೃತಗೊಂಡಿದೆ. ಮತದಾರ ಪ್ರಭು ತನ್ನ ಅಧಿಕಾರ ಚಲಾಯಿಸುವುದೊಂದೇ ಬಾಕಿ ಇದೆ. ಎಲ್ಲಾ ಜೈಲುಗಳನ್ನು ಎರಡೆರಡು ಬಾರಿ ಚೆಕ್ ಮಾಡಲಾಗಿದ್ದು, ಗಡಿ ಭಾಗದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಬೆಂಗಳೂರಲ್ಲೂ ಮತಗಟ್ಟೆಗಳು ಮತದಾನಕ್ಕೆ ಸಜ್ಜಾಗಿ ನಿಂತಿವೆ.
Politics May 9, 2023, 10:41 AM IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮನದಾಳದ ಸಂಭಾಷಣೆ ಭಾಗ 2ನ್ನು ಕಾಂಗ್ರೆಸ್ ಇಂದು ಬಿಡುಗಡೆ ಮಾಡಿದೆ.
Politics May 8, 2023, 1:12 PM IST