ಭಾನುವಾರ ಬೆಂಗಳೂರಿನಲ್ಲಿ ಸುರಿದ ಮಳೆಗೆ ಹಲವು ಅವಾಂತರ ಸೃಷ್ಟಿಯಾಗಿದೆ. ಆದರೆ ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ 3 ಗಂಟೆ ಭಾರಿ ಮಳೆ ಸುರಿಯಲಿದೆ ಎಂದು ಎಚ್ಚರಿಸಿದೆ. ಇಷ್ಟೇ ಅಲ್ಲ ಗಾಳಿಯ ವೇಗ ಹೆಚ್ಚಿರುವ ಕಾರಣ ಸುರಕ್ಷಿತ ಪ್ರದೇಶದಲ್ಲಿರಲು ಸೂಚಿಸಿಲಾಗಿದೆ.
Bengaluru-Urban Jun 2, 2024, 10:23 PM IST
ಕಳೆದ ಎರಡು ವಾರಗಳಿಂದ ನಗರದಲ್ಲಿ ಮಳೆ ವಿರಾಮ ನೀಡಿತ್ತು. ಶನಿವಾರ ಬೆಳಗ್ಗೆ ಮಳೆಯ ಮುನ್ಸೂಚನೆ ಇರಲಿಲ್ಲ, ಆದರೆ, ವಿಪರೀತ ಸೆಕೆ ಮತ್ತು ಬಿಸಿಲ ತಾಪದ ಅನುಭವ ಉಂಟಾಯಿತು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಮೋಡ ಕವಿದ ವಾತಾರಣ ಸೃಷ್ಟಿಯಾಗಿ ಎರಡು ಗಂಟೆ ಸುಮಾರಿಗೆ ನಗರದ ಅಲ್ಲಲ್ಲಿ ಗುಡುಗು ಸಹಿತ ಮಳೆ ಸುರಿಯಲಾರಂಭಿಸಿತು. ಬಳಿಕ ಇಡೀ ನಗರವನ್ನು ವ್ಯಾಪಿಸಿತು.
Karnataka Districts Jun 2, 2024, 8:32 AM IST
ಕೇರಳ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿಯೂ ಮಳೆ ಆರಂಭಗೊಂಡಿದೆ. ಆದರೆ, ರಾಜ್ಯಕ್ಕೆ ಮುಂಗಾರು ಪ್ರವೇಶದ ಬಗ್ಗೆ ಭಾನುವಾರ ಅಥವಾ ಸೋಮವಾರ ಅಧಿಕೃತ ಘೋಷಣೆಯಾಗು ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ ಹವಾಮಾನ ಇಲಾಖೆಯ ಅಧಿಕಾರಿಗಳು
state Jun 2, 2024, 7:51 AM IST
ಈಗಾಗಲೇ 15 ದಿನ ಮೊದಲೇ ರಾಜ್ಯಕ್ಕೆ ಪ್ರವೇಶ ಪಡೆದ ಮುಂಗಾರು ಮಳೆಯು ನಾಳೆ ಬೆಂಗಳೂರಿಗೆ ಪ್ರವೇಶಿಸಲಿದೆ. ನಾಳೆಯಿಂದ 5 ದಿನ ಯಲ್ಲೋ ಅಲರ್ಟ್ ಮಳೆ ಮುನ್ಸೂಚನೆ ನೀಡಲಾಗಿದೆ.
state Jun 1, 2024, 3:55 PM IST
ಮುಂಗಾರು ಮಾರುತಗಳು ಅಷ್ಟೊಂದು ಪ್ರಬಲವಾಗಿಲ್ಲ. ಕೇರಳದಲ್ಲಿಯೂ ಮಳೆ ಪ್ರಮಾಣ ನಿರೀಕ್ಷಿತ ಮಟ್ಟದಲ್ಲಿ ಇಲ್ಲ. ಎರಡೂರು ದಿನದಲ್ಲಿ ಮಾರುತಗಳು ಪ್ರಬಲವಾಗಲಿವೆ. ಆಗ ಉತ್ತಮ ಮಳೆ ಆಗುವ ಸಾಧ್ಯತೆ ಇದೆ.
state Jun 1, 2024, 6:38 AM IST
ರೈತರಿಗೆ ಬೇಕಾಗಿದ್ದನ್ನು ಬಿಟ್ಟು ಉಳಿದಿದ್ದೆಲ್ಲ ಇದೆ. ಈ ವರ್ಷ ಮಾರ್ಕೆಟಿಂಗ್ ಫೆಡರೇಷನ್ಗೆ ಒಂದು ನಯಾ ಪೈಸೆ ಕೊಟ್ಟಿಲ್ಲ. ಮುಖ್ಯಮಂತ್ರಿಗಳು ಕೂಡಲೇ ಮಧ್ಯಪ್ರವೇಶ ಮಾಡಬೇಕು, ಫೆಡರೇಶನ್ಗೆ ಅನುದಾನ ಕೊಡಬೇಕು ಎಂದು ಒತ್ತಾಯಿಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
state Jun 1, 2024, 6:00 AM IST
ಮುಂಗಾರು ಕೇರಳ ಭಾಗದಲ್ಲಿ ಸಾಮಾನ್ಯವಾಗಿ ಜೂ.1ರಂದು ಪ್ರವೇಶ ಮಾಡುತ್ತಿದ್ದುದು ಈ ಬಾರಿ ಒಂದು ದಿನ ಮೊದಲೇ ಪ್ರವೇಶಿಸುವುದಾಗಿ ಭಾರತೀಯ ಹವಾಮಾನ ಇಲಾಖೆ ಸುಳಿವು ನೀಡಿತ್ತು. ಆದರೆ ಅದಕ್ಕೂ ಒಂದು ದಿನ ಮುಂಚಿತವಾಗಿ ಮುಂಗಾರು ಭಾರತವನ್ನು ಪ್ರವೇಶಿಸಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.
India May 31, 2024, 5:30 AM IST
ನೈಋತ್ಯ ಮಾನ್ಸೂನ್ ಭಾರತಕ್ಕೆ ಪ್ರಮುಖ ಮಳೆಯನ್ನು ತರುವ ಕಾಲ. ಇದು ದೇಶದ ವಾರ್ಷಿಕ ಮಳೆಯ ಬಹುಪಾಲನ್ನು ಒದಗಿಸುತ್ತದೆ. ಈ ಅವಧಿಯಲ್ಲಿ ಖಾರೀಫ್ ಬೆಳೆಗಳನ್ನು ಹೆಚ್ಚಾಗಿ ಬೆಳೆಯುವುದರಿಂದ ಜೂನ್ ಮತ್ತು ಜುಲೈ ತಿಂಗಳ ಅವಧಿಯ ನೈಋತ್ಯ ಮಾನ್ಸೂನ್ ಅತಿ ಮಹತ್ವದ್ದು ಅಂತಲೇ ಪರಿಗಣಿಸಲಾಗುತ್ತದೆ. ನೈಋತ್ಯದಿಂದ ಬೀಸುವ ಮಾನ್ಸೂನ್ ಸಾಮಾನ್ಯವಾಗಿ ಜೂನ್ನಲ್ಲಿ ಆರಂಭವಾಗಿ ಸೆಪ್ಟೆಂಬರ್ ತಿಂಗಳಿನಲ್ಲಿ ಕೊನೆಗೊಳ್ಳುತ್ತದೆ.
India May 30, 2024, 5:30 AM IST
2023-24ನೇ ಸಾಲಿನಲ್ಲಿ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿತ್ತು. ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರ ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟದ ದರ ಏರಿಕೆಯಾಗಿದೆ. ಈ ಮೊತ್ತವು ಬೀಜೋತ್ಪಾದನೆಯಲ್ಲಿ ತೊಡಗಿರುವ ರೈತರಿಗೆ ವರ್ಗಾವಣೆಯಾಗಿರುತ್ತದೆ ಎಂದು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ
state May 29, 2024, 10:33 AM IST
ಬಿತ್ತನೆ ಬೀಜಕ್ಕಾಗಿ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿದವರಿಗೆ ದೊಡ್ಡ ಆಘಾತ ಕಾದಿದೆ. ಬಿತ್ತನೆ ಬೀಜದ ದರ ಗಗನಕ್ಕೇರಿದ್ದು, ಬರದಿಂದ ಕಂಗೆಟ್ಟ ರೈತರಿಗೆ ಬೆಲೆ ಏರಿಕೆಯ ಬರೆ ಬಿದ್ದಿದೆ.
state May 29, 2024, 9:39 AM IST
ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾದ ‘ರೆಮಲ್’ ಚಂಡಮಾರುತದಿಂದ ಮುಂಗಾರು ಆರಂಭದಲ್ಲಿ ಯಾವುದೇ ಬದಲಾವಣೆಯ ಲಕ್ಷಣಗಳಿಲ್ಲ. ಮೇ 31 ಅಥವಾ ಜೂನ್ 1ಕ್ಕೆ ಕೇರಳ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಆಗಮನ ಸಾಧ್ಯತೆ ಇದೆ.
state May 29, 2024, 6:26 AM IST
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ನಾರಾಯಣಪುರ ಪಟ್ಟಣದಲ್ಲಿ ಬಿರುಗಾಳಿ ಮಳೆಗೆ ಮರ ಬಿದ್ದು ಗರ್ಭಿಣಿ ಶ್ವೇತಾ ರಾಠೋಡ ಎಂಬುವರು ಮೃತಪಟ್ಟಿದ್ದಾರೆ. ಕುಡಿಯಲು ನೀರು ತರಲು ಹೋದ ಸಂದರ್ಭದಲ್ಲಿ ಬಿರುಗಾಳಿಗೆ ಅವರ ಮೈಮೇಲೆ ಮರ ಬಿತ್ತು. ಇದೇ ವೇಳೆ, ಸುರಪುರ ತಾಲೂಕಿನ ಹಲವೆಡೆ ಸುರಿದ ಬಿರುಗಾಳಿ ಸಹಿತ ಮಳೆಗೆ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ.
state May 28, 2024, 11:56 AM IST
ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲೂ ವಾಡಿಕೆಗಿಂತ ಹೆಚ್ಚು ಮಳೆ ಆಗಲಿದೆ. ಮುಂಗಾರು ಇನ್ನು 5 ದಿನದಲ್ಲಿ ಕೇರಳಕ್ಕೆ ಕಾಲಿಡಲು ಪೂರಕ ವಾತಾವರಣವಿದೆ: ಹವಾಮಾನ ಇಲಾಖೆ
India May 28, 2024, 11:39 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿ 12,878 ಕಿಮೀ ಉದ್ದದ ರಸ್ತೆ ಜಾಲವಿದ್ದು, ಅದರಲ್ಲಿ 1,344.84 ಕಿ.ಮೀ. ಮುಖ್ಯ ಮತ್ತು ಉಪಮುಖ್ಯ ರಸ್ತೆಗಳಿವೆ. ಈ ರಸ್ತೆಗಳನ್ನು ರಸ್ತೆ ಮೂಲಸೌಕರ್ಯ ವಿಭಾಗ ನಿರ್ವಹಣೆ ಮಾಡುತ್ತಿದ್ದರೆ, 11,533.16 ಕಿ.ಮೀ. ರಸ್ತೆಗಳನ್ನು ವಲಯ ಮಟ್ಟದಲ್ಲಿ ನಿರ್ವಹಣೆ ಮಾಡಲಾಗುತ್ತಿದೆ. ವಲಯ ಮಟ್ಟದ ನಿರ್ವಹಣೆಯಲ್ಲಿರುವ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಲು ವಲಯವಾರು ಟಾಸ್ಕ್ಫೋರ್ಸ್ ರಚನೆ ಮಾಡಲಾಗಿದೆ.
Karnataka Districts May 28, 2024, 9:30 AM IST
ಕಲಬುರಗಿ ನಗರದ ಹೊರ ವಲಯ ಉದನೂರ್ ಬಳಿ ಕಳೆದ 1 ವರ್ಷದ ಹಿಂದಷ್ಟೆ ನಿರ್ಮಿಸಲಾಗಿದ್ದ ಬಹುಕೋಟಿ ರುಪಾಯಿ ವೆಚ್ಚದ ತ್ಯಾಜ್ಯ ಸಂಸ್ಕರಣಾ ಘಟಕ ಇತ್ತೀಚೆಗೆ ಸುರಿದ ಮಳೆಗೆ ಕುಸಿದು ಬಿದ್ದಿದೆ. ಇದರಿಂದಾಗಿ ಕೋಟಿಗಟ್ಟಲೇ ಹಣ ವೆಚ್ಚವಾಗಿರುವ ಈ ಕಾಮಗಾರಿಯಲ್ಲಿ ಕಳಪೆತನವಾಗಿರುವ ಬಗ್ಗೆ ಬಲವಾದಂತಹ ಶಂಕೆಗಳು ಹುಟ್ಟಿಕೊಂಡಿವೆ.
state May 27, 2024, 7:51 AM IST