ನವೆಂಬರ್ ತಿಂಗಳಿನಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ (Rain) ಜನರನ್ನು ಪ್ರವಾಹದಲ್ಲಿ(Flood) ಮುಳುಗಿಸಿದೆ. ರಾಜಧಾನಿ (Bengaluru) ಬೆಂಗಳೂರಿನ ಪರಿಸ್ಥಿತಿ ಮಾತ್ರ ಯಾರಿಗೂ ಬೇಡ. ಇನ್ನು ರೈತರ ಪರಿಸ್ಥಿತಿ ಯಾರಿಗೂ ಬೇಡ. ಬೆಳೆದು ನಿಂತ ಬೆಳೆ ಕೈಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ.
India Nov 21, 2021, 12:10 AM IST
ಇಮ್ರಾನ್ ಖಾನ್ ಹೊಗಳಿದ ನವಜೋತ್ ಸಿಂಗ್ ಮತ್ತೊಂದು ವಿವಾದಲ್ಲಿ ಸಿಲುಕಿದ್ದಾರೆ. ಇದು ಕಾಂಗ್ರೆಸ್ಗೆ ತೀವ್ರ ಮುಜುಗರ ತಂದಿದೆ. ಪೊಲೀಸ್ ಅಧಿಕಾರಿಗಳ ಸಮ್ಮೇಳನದಲ್ಲಿ ಮೋದಿ, ದೋವಲ್, ಶಾ ಭಾಗಿ. ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಫೈನಲ್ ತಲುಪಿದ ಕರ್ನಾಟಕ, ಮಳೆ ಹಾಗೂ ಪ್ರವಾಹದಿಂದ ಕೊಚ್ಚಿ ಹೋಯ್ತು50 ಮಂದಿ ಪ್ರಯಾಣಿಕರಿದ್ದ ಬಸ್ ಸೇರಿದಂತೆ ನವೆಂಬರ್ 20ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
India Nov 20, 2021, 6:30 PM IST
ಆಂಧ್ರಪ್ರದೇಶದಲ್ಲಿ (Andhra Pradesh Rains) ಮಳೆ ಅವಾಂತರ ಸೃಷ್ಟಿಸಿದೆ. ನವೆಂಬರ್ 19 ರಂದು ರಾಯಲಸೀಮಾದ ಮೂರು ಜಿಲ್ಲೆಗಳು ಮತ್ತು ದಕ್ಷಿಣ ಕರಾವಳಿ (South Coastal) ಜಿಲ್ಲೆಯ ಒಂದು ಜಿಲ್ಲೆಗಳಲ್ಲಿ 20 ಸೆಂ.ಮೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಕಡಪ ಜಿಲ್ಲೆಯಲ್ಲಿ ಗರಿಷ್ಠ ಪ್ರಮಾಣದ ಮಳೆಯಾಗಿದೆ. ಇಲ್ಲಿನ ಅಣೆಕಟ್ಟು ಒಡೆದು 50 ಮಂದಿ ಪ್ರಯಾಣಿಕರಿದ್ದ ಬಸ್ ನೀರಿನಲ್ಲಿ ಕೊಚ್ಚಿ ಹೋಗಿದೆ. ಆದರೂ, ಹೆಚ್ಚಿನದನ್ನು ಉಳಿಸಲಾಗಿದೆ. ಮತ್ತೊಂದು ಘಟನೆಯಲ್ಲಿ ಗ್ರಾಮದ 20 ಜನರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ 8 ಮಂದಿ ಸಾವನ್ನಪ್ಪಿದ್ದಾರೆ. ಪ್ರತ್ಯೇಕ ಘಟನೆಗಳಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಏತನ್ಮಧ್ಯೆ, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರಚನೆಯಾಗಿರುವುದರಿಂದ ತೆಲಂಗಾಣ (Telangana) ಮತ್ತು ಆಂಧ್ರಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
India Nov 20, 2021, 11:07 AM IST
ಭೀಕರ ಪ್ರವಾಹಕ್ಕೆ(Flood) ಜನ ಬೆಚ್ಚಿಬಿದ್ದಿದ್ದಾರೆ. ದೇಗುಲ ಸಂಪೂರ್ಣ ಜಲಾವೃತವಾಗಿದ್ದು ಕಣ್ಣೇದುರಿಗೇ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿದ್ದಾರೆ. ಭಯಂಕರ ದೃಶ್ಯ, ವಿಡಿಯೋ, ಫೋಟೋಗಳು ತಿರುಮಲದಿಂದ(Tirumala) ವೈರಲ್(Viral) ಆಗುತ್ತಿದೆ. ಬಿಡದೇ ಸುರಿಯುತ್ತಿರುವ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ತಿರುಮಲ ಬೆಟ್ಟದಿಂದ ನೀರು ಭೋರ್ಗರೆಯುತ್ತಿದ್ದು ಹಳ್ಳಿಗಳು ಜಲಾವೃತವಾಗಿದೆ.
India Nov 20, 2021, 10:23 AM IST
ಬೆಂಗಳೂರು ನವೆಂಬರ್ ತಿಂಗಳಿನಲ್ಲಿ ಕರ್ನಾಟಕ(Karnataka) ಅಕಾಲಿಕ ಮಳೆಗೆ (Rain)ತುತ್ತಾಗುತ್ತಿದೆ. ರಾಜಧಾನಿ ಬೆಂಗಳೂರಿನ (Bengaluru) ಜನರ ಪರಿಸ್ಥಿತಿ ಹೈರಾಣವಾಗಿದೆ. ಸಿಕ್ಕ ಸಿಕ್ಕ ವಾಹನಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿವೆ. ಇದು ತಿರುಪತಿ ತಿರುಮಲದ (Tirupati) ದೃಶ್ಯ. ಕಂಡಕಂಡಲ್ಲಿ ಜಲಪಾತಗಳು ನಿರ್ಮಾಣ ಆಗಿವೆ.
India Nov 19, 2021, 11:34 PM IST
India Nov 19, 2021, 6:58 AM IST
state Nov 19, 2021, 4:06 AM IST
India Nov 19, 2021, 2:33 AM IST
* ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಎಫೆಕ್ಟ್
* ಒಂದು ವಾರದಿಂದ ರಾಜ್ಯಾದ್ಯಂತ ಸತತ ಮಳೆ
* ನೆಲಕಚ್ಚಿದ ಭತ್ತ, ಜೋಳ, ರಾಗಿ, ಹುರುಳಿ, ಕಾಫಿ
* 75ಕ್ಕೂ ಕುರಿ, 10ಕ್ಕೂ ಹೆಚ್ಚು ಹಸು-ಎಮ್ಮೆ ಬಲಿ
state Nov 18, 2021, 12:49 PM IST
ತಮಿಳುನಾಡಿನ ಹನ್ನೊಂದು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ 2015ರ ಬಳಿಕ ಸುರಿದ ವರ್ಷಧಾರೆಯಿಂದ ಜನರು ತತ್ತರಿಸಿದ್ದಾರೆ. ಈವರೆಗೆ ಐವರು ಮೃತಪಟ್ಟಿದ್ದು, ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
India Nov 9, 2021, 11:17 AM IST
* ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಎಫೆಕ್ಟ್
* 5 ವರ್ಷದ ದಾಖಲೆ ಮಳೆಗೆ ಮುಳುಗಿದ ಚೆನ್ನೈ
* ಒಂದೇ ದಿನ 20 ಸೆಂ.ಮೀ. ಎಡೆಬಿಡದ ವರ್ಷಧಾರೆ
* ಕಾಂಚೀಪುರಂ, ತಿರುವಳ್ಳೂರು ಜಿಲ್ಲೆಗಳಲ್ಲೂ ಭಾರೀ ಮಳೆ
* ಚೆನ್ನೈನ ಅನೇಕ ಪ್ರದೇಶಗಳಲ್ಲಿ ಪ್ರವಾಹ ಸೃಷ್ಟಿ
India Nov 8, 2021, 9:15 AM IST
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಕಾರಣ ಚೆನ್ನೈ ನಗರದಲ್ಲಿ ಭಾರಿ ಮಳೆಯಾಗಿದೆ. ಕುಂಭದ್ರೋಣ ಮಳೆಯಿಂದಾಗಿ ಚೆನ್ನೈ ನಗರ ಸ್ಥಬ್ದಗೊಂಡಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. 2015ರ ಬಳಿಕ ಚೆನ್ನೈ ನಗರ ಅತೀ ಹೆಚ್ಚು ಮಳೆ ಕಂಡಿದೆ. ಭಾರಿ ಮಳೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.
India Nov 7, 2021, 5:53 PM IST
*ಹವಾಮಾನ ವೈಪರೀತ್ಯಕ್ಕೆ ತುತ್ತಾಗುವ ರಾಜ್ಯಗಳಲ್ಲಿ ಕರ್ನಾಟಕ
*ದೇಶದ 27 ರಾಜ್ಯಗಳಲ್ಲಿ ಹವಾಮಾನ ವೈಪರೀತ್ಯ
*20 ಜನರಲ್ಲಿ 17 ಜನರಿಗೆ ಹವಾಮಾನ ಬಿಕ್ಕಟ್ಟಿನಿಂದ ತೊಂದರೆ!
India Oct 28, 2021, 9:44 AM IST
ಕೃಷ್ಣರಾಜ ಸಾಗರ ಭರ್ತಿಯಾಗಿರುವ ಹಿನ್ನಲೆಯಲ್ಲಿ ಕಾವೇರಿ ನೀರಾವರಿ ನಿಗಮ ಪ್ರವಾಹದ ಎಚ್ಚರಿಕೆ ನೀಡಿದೆ. ನದಿ ಪಾತ್ರದ ಬಳಿ ಜನ, ಜಾನುವಾರುಗಳು ತೆರಳದಂತೆ ಜನರಿಗೆ ಸೂಚನೆ ನೀಡಲಾಗಿದೆ.
state Oct 27, 2021, 9:36 AM IST
ಬೆಂಗಳೂರು ನಗರ ಸೇರಿದಂತೆ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಅ.29ಕ್ಕೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ದಾವಣಗೆರೆ, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯಲ್ಲಿ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.
Karnataka Districts Oct 27, 2021, 2:23 AM IST