ರಾಜ್ಯದಲ್ಲಿ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ಕರಾವಳಿ, ಉತ್ತರ ಒಳನಾಡಿನ ನದಿಗಳ ನೀರಿನ ಮಟ್ಟಹೆಚ್ಚುತ್ತಿದೆ. ಸಂಭಾವ್ಯ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಈಗಿನಿಂದಲೇ ಆಯಾ ಜಿಲ್ಲಾಡಳಿತಗಳು ಸಜ್ಜಾಗಬೇಕು. ಜಿಲ್ಲಾಧಿಕಾರಿಗಳ ಬಳಿ ಲಭ್ಯವಿರುವ 1000 ಕೋಟಿ ರು. ಅನುದಾನವನ್ನು ವಿಪತ್ತು ನಿರ್ವಹಣೆಗೆ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
state Jun 20, 2021, 8:15 AM IST
ಉತ್ತರಖಂಡದ ಶ್ರೀನಗರ, ಪಿಥೋಘಡ, ಚಮೋಲಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಪರಿಣಾಮ ಮತ್ತೆ ದೇವ ಭೂಮಿ ಉತ್ತರಖಂಡದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಮಳೆಯಿಂದ ರಿಷಿಕೇಶ್ ಮಂದಿರ ಮುಳುಗಡೆಯಾಗಿದೆ. ಶ್ರೀಗನರದ ತಗ್ಗು ಪ್ರದೇಶಗಳಾದ ಪೌರಿ ಗರ್ವಾಲ್ ಹಾಗೂ ಅಲ್ಲಿನ ಮಂದಿರಗಳು ನೀರಿನಲ್ಲಿ ಮುಳುಗಿದೆ. ಇನ್ನು ಅಲಂಕನಂದ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
India Jun 19, 2021, 8:26 PM IST
ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಪ್ರವಾಹದಲ್ಲಿ ಜಾನುವಾರುಗಳು ಕೊಚ್ಚಿ ಹೋಗಿವೆ.
Karnataka Districts Jun 19, 2021, 2:06 PM IST
ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ ತಾಲೂಕಿನ ಹಬ್ಬಾನಟ್ಟಿ ಅಂಜನೇಯ ದೇವಸ್ಥಾನ ಮುಳುಗಡೆಯಾಗಿದೆ.
Karnataka Districts Jun 19, 2021, 1:18 PM IST
ಮುಂಗಾರು ಮಳೆಯಿಂದ ಕೃಷ್ಣ ಕಣಿವೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಪ್ರವಾಹ ತಡೆಯಲು ಶಾಸ್ವತ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
state Jun 19, 2021, 1:01 PM IST
ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿ, ಹಳ್ಳ, ಕೊಳ್ಳಗಲು ತುಂಬಿ ಹರಿಯುತ್ತಿವೆ. ಮಾರ್ಕಂಡೇಯ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ವೃದ್ಧನೋರ್ವ ನದಿಯಲ್ಲಿ ಕೊಚ್ಚಿ ಹೋಗಿದ್ದಾನೆ ಎಂದು ತಿಳಿದು ಬಂದಿದೆ.
Karnataka Districts Jun 19, 2021, 10:44 AM IST
ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ದೂದ್ ಗಂಗಾ, ಕೃಷ್ಣಾ, ಮಲಪ್ರಭಾ ನದಿಗಳು ತುಂಬಿ ಹರಿಯುತ್ತಿದೆ. ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.
state Jun 19, 2021, 10:31 AM IST
ಶಿರಸಿ ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ. ಶಿರಸಿಯ ಜಾಜಿಗುಡ್ಡೆಯಲ್ಲಿ ಗುಡ್ಡ ಕುಸಿತವಾಗಿದ್ದು ತಾಲೂಕು ಆಡಳಿತ ಪರಿಹಾರ ಕಾರ್ಯ ಕೈಗೊಂಡಿದೆ. ಗುಡ್ಡ ಕುಸಿತದ ಭೀತಿ ಇದ್ದು ಸ್ಥಳಾಂತರ ಅನಿವಾರ್ಯ ಎಂದು ಹೇಳಲಾಗಿದೆ. ಕಳದೆ ಐದು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ.
Karnataka Districts Jun 18, 2021, 9:26 PM IST
state Jun 8, 2021, 7:42 AM IST
ಕಳೆದ ವರ್ಷದ ಪ್ರವಾಹ ಸ್ಥಿತಿಯಲ್ಲಿ ಮನೆ ಕಳೆದುಕೊಂಡ ಮಹಿಳೆ ಪರಿಹಾರ ಸಿಗಲಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮನೆ ಎದುರು ಮಹಿಳೆ ಆತ್ಮಹತ್ಯೆ ಯತ್ನ ಮಾಡಿದ್ದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.
CRIME Apr 9, 2021, 4:44 PM IST
ಪ್ರವಾಹದ ನಡುವೆಯೇ ಫೋಟೋ ಶೂಟ್ | ತುಂಬು ಗರ್ಭಿಣಿಯನ್ನು ಬಳಸಿಹಿಡಿದು ಚುಂಬಿಸಿದ ಪತಿ | ಸುತ್ತ ಮುತ್ತ ಪ್ರವಾಹದ ನೀರು
International Mar 23, 2021, 9:58 AM IST
ಉತ್ತರಖಂಡ ಹಿಮಸ್ಫೋಟದ ಭೀಕರತೆ ಇನ್ನು ಕಣ್ಣಿಗೆ ಕಟ್ಟಿದಂತಿದೆ. ಪ್ರವಾದಲ್ಲಿ ನಾಪತ್ತೆಯಾದವರನ್ನು ಮೃತರು ಎಂದು ಘೋಷಿಸಿಲಾಗಿದೆ. ಇತ್ತ ಚಮೋಲಿ ಜಿಲ್ಲೆಯಲ್ಲಿ ಕಾಮಾಗಾರಿಗಳು ಚುರುಕುಗೊಂಡಿದೆ. ಇನ್ನು ರೇಣಿ ಗ್ರಾಮದಲ್ಲಿ ಕೊಚ್ಚಿ ಹೋದ ಸೇತುವೆಯನ್ನು ಸೇನೆ ಕೇವಲ 8 ದಿನದಲ್ಲಿ ನಿರ್ಮಿಸಿದೆ.
India Mar 5, 2021, 6:45 PM IST
ಪ್ರತಿವರ್ಷ ಉಕ್ಕಿ ಹರಿದು ನವಲಗುಂದ ತಾಲೂಕಿನ ಜನರ ನಿದ್ದೆಗೆಡಿಸುವ ತುಪರಿಹಳ್ಳ ಯೋಜನೆಗೆ ಕೊನೆಗೂ ಡಿಪಿಆರ್ (ಡಿಟೈಲ್ ಪ್ರೋಜೆಕ್ಟ್ ರಿಪೋರ್ಟ್) ಸಿದ್ಧಗೊಂಡಿದ್ದು, ಸರ್ಕಾರದಿಂದ ಅನುಮೋದನೆ ಪಡೆಯುವುದೊಂದೇ ಬಾಕಿಯುಳಿದಿದೆ. 3 ಹಂತಗಳಲ್ಲಿ ನಡೆಯಲಿರುವ ಯೋಜನೆಗೆ ಬರೋಬ್ಬರಿ 700 ಕೋಟಿ ವೆಚ್ಚವಾಗಲಿದೆ ಎಂದು ಡಿಪಿಆರ್ನಲ್ಲಿ ಸ್ಪಷ್ಟಪಡಿಸಲಾಗಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಇನ್ನೊಂದು ತಿಂಗಳಲ್ಲಿ ಸರ್ಕಾರದಿಂದ ಹಸಿರು ನಿಶಾನೆ ದೊರೆಯುವ ಸಾಧ್ಯತೆ ಇದೆ.
Karnataka Districts Mar 3, 2021, 9:37 AM IST
ಉತ್ತರಖಂಡ ಹಿಮಸ್ಫೋಟ ಹಾಗೂ ಪ್ರವಾಹ ದುರಂತ ಸಂಭವಿಸಿ ಇಂದಿಗೆ 15 ದಿನಗಳು ಉರುಳಿವೆ. ನಿರಂತರ ಶೋಧ ಹಾಗೂ ರಕ್ಷಣಾ ಕಾರ್ಯಗಳು ನಡೆಯುತ್ತಿದೆ. ಇಂದು ಮತ್ತೊಂದು ಮೃತ ದೇಹ ಹೊರಕ್ಕೆ ತೆಗೆಯಲಾಗಿದ್ದು, ಇದೀಗ ಸಾವಿನ ಸಂಖ್ಯೆ 69ಕ್ಕೆ ಏರಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.
India Feb 22, 2021, 6:26 PM IST
2019ರಲ್ಲಿ ಅತಿವೃಷ್ಟಿ ಮತ್ತು ಮಲಪ್ರಭಾ ನದಿ ಪ್ರವಾಹಕ್ಕೆ ತುತ್ತಾಗಿ ಮನೆ ಕಳೆದುಕೊಂಡಿದ್ದು, ಮನೆ ಹಾನಿ ಪರಿಹಾರಕ್ಕೆ ಕಳೆದ 2 ವರ್ಷದಿಂದ ತಹಸೀಲ್ದಾರ್ ಕಚೇರಿ, ಸ್ಥಳೀಯ ಗ್ರಾಪಂಗೆ ಅಲೆಯುತ್ತಾ ಬಂದಿದ್ದು, ನಾನು ವಿಧವೆ, ನನಗೆ ಯಾರು ದಿಕ್ಕಿಲ್ಲ, ಇರುವುದೊಂದು ಮನೆ ಬಿದ್ದಿದೆ. ಬಿದ್ದಿರುವ ಮನೆಯಲ್ಲಿಯೇ ನನ್ನ ಮಗಳೊಂದಿಗೆ ಜೀವನ ಸಾಗಿಸುತ್ತಿದ್ದೇನೆ. ಕೂಡಲೇ ಮನೆ ಹಾನಿ ಪರಿಹಾರ ಕೊಡಿ ಎಂದು ಎಷ್ಟೇ ಬೇಡಿಕೊಂಡರೂ, ಈ ವರೆಗೂ ಪರಿಹಾರ ನೀಡಿಲ್ಲ ಎಂದು ತಾಲೂಕಿನ ಹೊಳೆಆಲೂರ ಗ್ರಾಮದ 8ನೇ ವಾರ್ಡ್ ಸಂತ್ರಸ್ತೆ ಭೀಮವ್ವ ಓಲೇಕಾರ ಲೋಕಾಯುಕ್ತರಿಗೆ ಮನವಿ ಮಾಡಿದ್ದಾರೆ.
Karnataka Districts Feb 19, 2021, 1:54 PM IST