Rahul Gandhi: ವಯನಾಡು ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ 103 ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ವಯನಾಡು ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ಕೆ.ಸುರೇಂದ್ರನ್ (K K Surendran) ಸ್ಪರ್ಧೆ ಮಾಡಿದ್ದಾರೆ.
India Jun 4, 2024, 9:30 AM IST
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಬಿಜೆಪಿಯ ಉಚ್ಚಾಟಿತ ಮಾಜಿ ಶಾಸಕ, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ. ರಘುಪತಿ ಭಟ್ ಪರ ಪೋಸ್ಟ್ ಮಾಡಿ, ಪಕ್ಷದ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ.
Politics Jun 4, 2024, 7:31 AM IST
ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ಲೋಕಸಭೆ ಚುನಾವಣೆ ಮುಗಿದ ನಂತರ ಬಿಹಾರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬಹುದು ಹಾಗೂ ನರೇಂದ್ರ ಮೋದಿ ಅವರ ಸಚಿವ ಸಂಪುಟ ಸೇರಬಹುದು ಎಂಬ ಊಹಾಪೋಹಗಳು ಹರಡಿವೆ.ಇದೇ ವೇಳೆ, ಬಿಜೆಪಿ ನಾಯಕರಾದ ಹಾಲಿ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಸಿಎಂ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ
India Jun 4, 2024, 7:02 AM IST
ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ನಡೆಯುವ ದೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಒಟ್ಟು 12 ಅಭ್ಯರ್ಥಿಗಳಿಂದ 27 ನಾಮಪತ್ರಗಳು ಸಲ್ಲಿಕೆಯಾಗಿವೆ.
state Jun 4, 2024, 6:41 AM IST
ಕರ್ನಾಟಕದಲ್ಲಿ 2024ರ ಲೋಕಸಭಾ ಚುನಾವಣೆ ಎರಡು ಹಂತದಲ್ಲಿ ನಡೆದಿತ್ತು. ಏಪ್ರಿಲ್ 26ಕ್ಕೆ ದಕ್ಷಿಣ ಕರ್ನಾಟಕ ಹಾಗೂ ಮೇ 7ಕ್ಕೆ ಉತ್ತರ ಕರ್ನಾಟಕದಲ್ಲಿ ಎಲೆಕ್ಷನ್ ನಡೆದಿತ್ತು. ಒಟ್ಟು 28 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದ್ದರೆ, ಮೈತ್ರಿ ಪಕ್ಷ ಜೆಡಿಎಸ್ಗೆ ಕೋಲಾರ, ಹಾಸನ ಹಾಗೂ ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಟಿತ್ತು. ಗ್ಯಾರಂಟಿಯ ಬಲದಲ್ಲಿ 20 ಸ್ಥಾನಗಳ ಗುರಿ ಇರಿಸಿಕೊಂಡಿರುವ ಕಾಂಗ್ರೆಸ್ ಎಲ್ಲಾ 28 ಕ್ಷೇತ್ರದಲ್ಲೂ ಸ್ಪರ್ಧೆ ಮಾಡಿದೆ. ಎರಡೂ ಹಂತಗಳಲ್ಲಿ ಒಟ್ಟಾರೆ 70.64ರಷ್ಟು ಮತದಾನವಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸುರೇಶ್ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ. ಮಂಜುನಾಥ್ ಅವರ ಕದನ ಕುತೂಹಲ ಕೆರಳಿಸಿದೆ. ಅದರೊಂದಿಗೆ ಬೆಂಗಳೂರು ದಕ್ಷಿಣದಲ್ಲಿ ಸೌಮ್ಯ ರೆಡ್ಡಿ, ಹಾಸನದಲ್ಲಿ ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ, ಮಂಡ್ಯದಲ್ಲಿ ಎಚ್ಡಿ ಕುಮಾರಸ್ವಾಮಿ, ಶಿವಮೊಗ್ಗದಲ್ಲಿ ಬಿವೈ ರಾಘವೇಂದ್ರ, ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆ ರಿಸಲ್ಟ್ ಬಗ್ಗೆ ಎಲ್ಲರ ಗಮನ ಇರಲಿದೆ. ಎಕ್ಸಿಟ್ ಪೋಲ್ನಲ್ಲಿ ಬಿಜೆಪಿ ಪರವಾಗಿ ಒಲವು ವ್ಯಕ್ತವಾಗಿದ್ದರೂ, ಕಾಂಗ್ರೆಸ್ ಕನಿಷ್ಠ 14-15 ಸೀಟ್ ಗೆಲ್ಲುವ ನಿರೀಕ್ಷೆಯಲ್ಲಿದೆ.
state Jun 4, 2024, 6:07 AM IST
ಏಪ್ರಿಲ್ 19 ರಿಂದ ಆರಂಭವಾಗಿದ್ದ 18ನೇ ಲೋಕಸಭೆ ಚುನಾವಣೆ ಏಳು ಹಂತಗಳಲ್ಲಿ ನಡೆದು ಜೂನ್ 1 ರಂದು ಮುಕ್ತಾಯವಾಗಿತ್ತು. ಮಹಾತೀರ್ಪು ಬಹುತೇಕ ಹೊರ ಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್ಡಿಎಗೆ ಸರಳ ಬಹುಮತ ಸಿಕ್ಕಿದೆ. ಆದರೂ ಚಂದ್ರಬಾಬು ನಾಯ್ಡು ಕಿಂಗ್ ಮೇಕರ್ ಆಗಿದ್ದು, ಅವರ ತೀರ್ಮಾನದಂತೆ ಮುಂದಿನ ನಡೆ ನಿರ್ಧರಿತವಾಗಲಿದೆ. ಬಿಜೆಪಿಗೆ ಸ್ಪಷ್ಟ ಬಹುಮತ ಸಿಗದ ಕಾರಣ, ಇಂಡಿ ನಾಯಕರು ಈಗಾಗಲೇ ಆ್ಯಕ್ಟಿವ್ ಆಗಿದ್ದು, ಎನ್ಡಿಎ ಮೈತ್ರಿ ಪಕ್ಷಗಳನ್ನೂ ಸಂಪರ್ಕಿಸುತ್ತಿದ್ದಾರೆ. ಬಿಜೆಪಿಯ ಚಾರ್ ಸೌ ಪಾರ್ ಎನ್ನುವ ಟಾರ್ಗೆಟ್ ಇರಲಿ, ಇದೀಗ 300 ಕ್ಷೇತ್ರಗಳನ್ನು ಗೆಲ್ಲುವಲ್ಲಿಯೂ ಎನ್ಡಿಎ ಮೈತ್ರಿಕೂಟ ಹರಸಾಹಸ ಪಡುತ್ತಿದೆ. ಕಾಂಗ್ರೆಸ್ ನಿರಾಳವಾಗಿದ್ದು, ಮುಳುಗುವ ದೋಣಿ ದಡ ಸೇರಿದಂತಾಗಿದೆ.
ದೇಶದ 543 ಲೋಕಸಭಾ ಕ್ಷೇತ್ರಕ್ಕೆ ಶೇ. 66.33 ರಷ್ಟು ಮತದಾನವಾಗಿತ್ತು. ಬಿಜೆಪಿ ಒಟ್ಟು 441 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಕಾಂಗ್ರೆಸ್ 328 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಚುನಾವಣಾ ಆರಂಭಕ್ಕೂ ಮುನ್ನವೇ ಸೂರತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿತ್ತು. ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ವಯನಾಡ್, ರಾಯ್ಬರೇಲಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ, ಗುಜರಾತ್ನ ಗಾಂಧಿನಗರದಲ್ಲಿ ಅಮಿತ್ ಶಾ, ತಮಿಳುನಾಡಿನ ಕೊಯಮತ್ತೂರಿನಲ್ಲಿ ಅಣ್ಣಾಮಲೈ ಅವರ ರಿಸಲ್ಟ್ ಹೆಚ್ಚಿನ ಕುತೂಹಲ ಸೃಷ್ಟಿಸಿದ್ದವು. ಆಂಧ್ರ ಪ್ರದೇಶದಲ್ಲಿ ಮಾತ್ರ ಜಗನ್ ಪಡೆಗೆ ಹೀನಾಯ ಸೋಲಾಗಿದ್ದು, ಎನ್ಡಿಎ ಮಿತ್ರ ಪಕ್ಷಗಳಾದ ಟಿಡಿಪಿ ಹಾಗೂ ಬಿಜೆಪಿ ಸರಕಾರ ರಚಿಸಲಿದೆ.
India Jun 4, 2024, 5:59 AM IST
‘ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ. ಮೋದಿ ಮೂರನೇ ಬಾರಿ ಪ್ರಧಾನಿಯಾಗಲಿದ್ದಾರೆ’ ಎಂಬ ಚುನಾವಣೋತ್ತರ ಸಮೀಕ್ಷಾ ವರದಿಗಳು ಬಾಂಬೆ ಷೇರುಪೇಟೆಗೆ ಭರ್ಜರಿ ಕಿಕ್ ನೀಡಿವೆ.
India Jun 4, 2024, 5:22 AM IST
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಹಬ್ಬ ಅಂತಿಮ ಘಟ್ಟ ತಲುಪಿದ್ದು ಜೂ.4ರ ಮಂಗಳವಾರ ಲೋಕಸಭಾ ಚುನಾವಣೆ ಮತ ಎಣಿಕೆಯೊಂದಿಗೆ ತಾರ್ಕಿಕ ಅಂತ್ಯ ಕಾಣಲಿದೆ. ಬೆಳಗ್ಗೆ 8 ಗಂಟೆಗೆ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸುಳಿವು ಲಭಿಸಲಿದೆ
India Jun 4, 2024, 4:48 AM IST
2024ರ ಲೋಕಸಭಾ ಚುನಾವಣೆ ಬಗ್ಗೆ ವಿವಿಧ ಸಮೀಕ್ಷೆಗಳು ಬಹಿರಂಗಪಡಿಸಿರುವ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಮತ್ತೆ ಬಿಜೆಪಿಗೇ ಹೆಚ್ಚು ಸ್ಥಾನಗಳು ಬರುತ್ತವೆ ಎನ್ನಲಾಗಿದೆ. ಇದರಿಂದಾಗಿ ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ.
Politics Jun 3, 2024, 9:51 PM IST
ಎಲ್ಲ ಎಕ್ಸಿಟ್ ಪೋಲ್ನಲ್ಲಿ ಬಿಜೆಪಿ ನೇತೃತ್ವದ ಎನ್ಡಿಎಗೆ ಸ್ಪಷ್ಟ ಬಹುಮತ ಮುನ್ಸೂಚನೆ ಸಿಕ್ಕಿದೆ. ನರೇಂದ್ರ ಮೋದಿ ಮೂರನೆಯ ಬಾರಿ ಪ್ರಧಾನಿ ಆಗಬೇಕು ಎಂಬ ಆಶಯದಿಂದ ಜನರು ಮತ ಚಲಾಯಿಸಿದ್ದಾರೆ. ನಾನು ಕೂಡ ಅತಿ ಹೆಚ್ಚು ಅಂತರದಿಂದ ಬೆಳಗಾವಿ ಕ್ಷೇತ್ರದಿಂದ ಗೆಲುವು ಸಾಧಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.
Politics Jun 3, 2024, 6:42 PM IST
ಚುನಾವಣಾ ಸಮೀಕ್ಷೆಗಳನ್ನು ಮೀರಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಪ್ರಲ್ಹಾ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
Politics Jun 3, 2024, 6:20 PM IST
ಚುನಾವಣೋತ್ತರ ಸಮೀಕ್ಷೆಗಳ ವಿಚಿತ್ರ ಲೆಕ್ಕಾಚಾರವೇನು..?
ಅಚ್ಚರಿ ಅಂಕಿಅಂಶ ತೆರೆದಿಟ್ಟಿವೆ ಮತಗಟ್ಟೆ ಸಮೀಕ್ಷೆಗಳು..!
48 ಗಂಟೆಗಳಲ್ಲಿ ನಿರ್ಧಾರವಾಗಲಿದೆ ಮೋದಿ 3.0 ಭವಿಷ್ಯ..!
India Jun 3, 2024, 5:25 PM IST
ಸಿದ್ದರಾಮಯ್ಯ ಬಿಜೆಪಿ ಮೀಸಲಾತಿ ವಿರೋಧಿ ಎನ್ನುತ್ತಾರೆ, ಆದರೆ ಎಸ್ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದೆ ಬಿಜೆಪಿ, ಸಿಎಂ ಬೊಮ್ಮಾಯಿ ಒಳಮೀಸಲಾತಿಗೆ ಆಯೋಗ ರಚಿಸಿದರು, ಈಗಿನ ಸರಕಾರ ಎಲ್ಲಾವನ್ನು ಕಾರ್ಯರೂಪಕ್ಕೆ ತರಬೇಕು ಎಂದು ನಟ ಚೇತನ್ ಹೇಳಿದರು.
Politics Jun 3, 2024, 5:24 PM IST
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಇದರ ಬೆನ್ನ ಹಿಂದೆಯೇ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮತ ಎಣಿಕೆ ಕೇಂದ್ರದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.
Politics Jun 3, 2024, 5:04 PM IST
ಅಂದರ್-ಬಾಹರ್ ಆಟದಲ್ಲಿ ಮತ್ತೆ ಬಿಜೆಪಿ ನಾಗಾಲೋಟ..?
ಮೈನಸ್-ಪ್ಲಸ್ ಲೆಕ್ಕಾಚಾರದಲ್ಲಿ ಗೆಲ್ಲಲಿದ್ಯಂತೆ ಕೇಸರಿ ಪಡೆ..!
ಕೆಲ ರಾಜ್ಯಗಳಲ್ಲಿ ದಿಗ್ವಿಜಯ, ಕೆಲ ರಾಜ್ಯಗಳಲ್ಲಿ ಪರಾಜಯ..!
India Jun 3, 2024, 5:00 PM IST