ಬೆಳಗಾವಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ 13 ಜಿಲ್ಲೆಗಳಲ್ಲಿ ಪ್ರವಾಹ, ಮಳೆಯಿಂದ ಜನರು ಮನೆ, ಜಮೀನು, ಕುಟುಂಬಸ್ಥರನ್ನು ಕಳೆದುಕೊಂಡು ಕಷ್ಟದಲ್ಲಿದ್ದಾರೆ. ಈ ವರ್ಷ ದೀಪಾವಳಿ ಆಚರಿಸುವ ಸ್ಥಿತಿ ಜನರಲ್ಲಿ ಇಲ್ಲ. ಬದುಕು ಏನಾಗಿದೆ. ಸರ್ಕಾರ ಯಾವ ರೀತಿ ಪರಿಹಾರ ಕೊಟ್ಟಿದೆ ಎಂದು ನೋಡಿ ಸಂತ್ರಸ್ತರ ಜತೆ ಹಬ್ಬ ಆಚರಿಸಲು ಬಂದಿದ್ದೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿದರು.
Belagavi Oct 27, 2019, 1:06 PM IST
ಕರುನಾಡಿನ ಪಾಲಿಗೆ ಕೇಂದ್ರ ಸರಕಾರವೇ ಇಲ್ಲದಂತಿದೆ ಎಂದು ಅವಕಾಶ ಸಿಕ್ಕಾಗೆಲ್ಲಾ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ಸದಾಕಾಲ ಗುಡುಗುವ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಕೇಂದ್ರದ ಪಾಲಿಗೆ ಕರ್ನಾಟಕ ಕೇವಲ ತೆರಿಗೆ ವಸೂಲಾತಿಗಷ್ಟೇ ಸೀಮಿತವಾಗಿದೆ ಎಂದು ತಿವಿದಿದ್ದಾರೆ.
Kalaburagi Oct 27, 2019, 11:53 AM IST
ನೆರೆ ಪರಿಹಾರ ವಿಚಾರವಾಗಿ ಸ್ವಪಕ್ಷೀಯ ಸಂಸದರ ವಿರುದ್ಧವೇ ಕಿಡಿಕಾರಿ ಶೋಕಾಸ್ ನೋಟಿಸ್ ಪಡೆದಿದ್ದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ನಿರೀಕ್ಷಿತ ಗುರಿ ತಲುಪುವಲ್ಲಿ ವಿಫಲವಾಗಲೂ ಸೂಕ್ತ ಪರಿಹಾರ ನೀಡದೆ ಇರುವುದೇ ಕಾರಣವಾಗಿದೆ ಎಂದು ಟೀಕಿಸಿದ್ದಾರೆ.
Bagalkot Oct 27, 2019, 11:10 AM IST
ಕೊಡಗಿನಲ್ಲಿ ಪ್ರವಾಹ ಸಂತ್ರಸ್ತರಿಗೆ ಮನೆ ಹಸ್ತಾಂತರ ಸಂದರ್ಭ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಇರಲಿಲ್ಲ. ಕಾರ್ಯಕ್ರಮಕ್ಕೆ ಕುಮಾರಸ್ವಾಮಿ ಅವರಿಗೆ ಆಹ್ವಾನವೇ ಕೊಟ್ಟಿರಲಿಲ್ಲ ಎನ್ನುವುದು ತಿಳಿದುಬಂದಿದೆ. ಈ ಬಗ್ಗೆ ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Kodagu Oct 27, 2019, 8:51 AM IST
ಹಿಂಗಾರು ಬೆಳೆ ರೈತರ ಕೈಗೆ ಬಂದು ದೀಪಗಳ ಹಬ್ಬ ಬಂತೆಂದರೆ ಎಲ್ಲಡೆ ಸಂಭ್ರಮ ಕಳೆಗಟ್ಟುತ್ತದೆ. ಆದರೆ, ಈ ಸಲ ಜಿಲ್ಲಾದ್ಯಂತ ಅತಿವೃಷ್ಟಿ, ಪ್ರವಾಹ ಆವರಿಸಿಕೊಂಡು ಜನರನ್ನು ಸಂಕಷ್ಟಕ್ಕೆ ತಳ್ಳಿದೆ. ಇದರಿಂದಾಗಿ ಹಳ್ಳಿಗಳಲ್ಲಿ, ನಗರದ ಮಾರುಕಟ್ಟೆಯಲ್ಲಾಗಲಿ ಹಬ್ಬದ ಸಂಭ್ರಮವೇ ಕಾಣುತ್ತಿಲ್ಲ.
Haveri Oct 27, 2019, 8:36 AM IST
ಮಲಪ್ರಭಾ ಜಲಾಶಯದ ಮೇಲ್ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದಿಂದ ಮತ್ತೆ 15 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ.
Gadag Oct 26, 2019, 3:21 PM IST
ಸಮೀಪದ ಬಗಲೂರ ಮತ್ತು ಅಫಜಲಪೂರ ತಾಲೂಕಿನ ಘತ್ತರಗಿ ಗ್ರಾಮದ ನಡುವೆ ನಿರ್ಮಿಸಲಾದ ಬ್ಯಾರೇಜ್ ಕಮ್ ಬ್ರಿಡ್ಜ್ ಶುಕ್ರವಾರ ಜಲಾವೃತ್ತವಾಗಿದ್ದು ರಸ್ತೆ ಸಂಚಾರ ಮತ್ತೆ ಸಂಪೂರ್ಣ ಸ್ಥಗಿತವಾಗಿ ಜನ ಜನುವಾರುಗಳು ತೊಂದರೆ ಅನುಭವಿಸುವಂತಾಗಿದೆ.
Vijayapura Oct 26, 2019, 3:05 PM IST
ನೆರೆ ಹಾವಳಿಯ ಪರಿಣಾಮ ಬೆಳಕಿನ ದೀಪಾವಳಿ ಹಬ್ಬ ವ್ಯಾಪಾರಿಗಳ ಪಾಲಿಗೆ ಬೆಳಕಾಗುವ ಬದಲು ಕಗ್ಗತ್ತಲಾಗಿ ಪರಿಣಮಿಸಿದೆ. ಹಬ್ಬದ ಸಂತೆ ಎನಿಸಿದ ಶುಕ್ರವಾರ ಎಡೆಬಿಡದೆ ಸುರಿಯುತ್ತಿರುವ ಮಳೆಯ ಮಧ್ಯದಲ್ಲಿ ವ್ಯಾಪಾರಿಗಳು ಸೇರಿದಂತೆ, ಕಾಯಿಪಲ್ಯೆ, ಹಣ್ಣು ಹಂಪಲು ವ್ಯಾಪಾರಸ್ಥರು ಗಿರಾಕಿಗಳಿಲ್ಲದೆ ಪರದಾಡುವಂತಾಯಿತು.
Haveri Oct 26, 2019, 8:14 AM IST
ಆಗಸ್ಟ್ನಲ್ಲಿ ಸುರಿದ ಭಾರಿ ಮಳೆಗೆ ಮುಂಗಾರು ಬೆಳೆ ಹೋಯ್ತು... ಅಕ್ಟೋಬರ್ನಲ್ಲಿ ಸುರಿದ ಮಹಾ ಮಳೆಗೆ ಹಿಂಗಾರು ಬೆಳೆಯೂ ಹೋಯ್ತು. ವರ್ಷದ ಗಂಜಿಗೆ ಆಧಾರವಾಗಿದ್ದ ಬೆಳೆಗಳು ಬರದೇ ಧಾರವಾಡ ಜಿಲ್ಲೆಯ ರೈತರ ಬದುಕು ಮಸುಕಾಗಿದೆ...
Dharwad Oct 26, 2019, 7:47 AM IST
ತಾಲೂಕಿನ ಕೊಣ್ಣೂರ ಗ್ರಾಮಕ್ಕೆ ಹೊಂದಿಕೊಂಡಿರುವ ಹುಬ್ಬಳ್ಳಿ-ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿಯ ಮಲಪ್ರಭಾ ನದಿಗೆ ನಿರ್ಮಿಸಿದ ಸೇತುವೆ ಬಳಿ ತಾತ್ಕಾಲಿಕ ರಸ್ತೆ ನದಿಗೆ ಪ್ರವಾಹ ಬಂದು ಕಿತ್ತು ಹೋಗಿ ಕಳೆದ 5 ದಿನಗಳಿಂದ ಹೆದ್ದಾರಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿತ್ತು. ಶುಕ್ರವಾರ ನದಿಗೆ ಪ್ರವಾಹ ಬರುವುದು ಕಡಿಮೆಯಾಗಿದ್ದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪ್ರವಾಹಕ್ಕೆ ಕಿತ್ತು ಹೋದ ತಾತ್ಕಾಲಿಕ ರಸ್ತೆಯನ್ನು ಕಡಿ ಮತ್ತು ಗರಸ ಹಾಕಿ ರಿಪೇರಿ ಮಾಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಿಗೆ ಹೋಗುವ ಖಾಸಗಿ ವಾಹನ ಮತ್ತು ಬಸ್ಗಳ ಸಂಚಾರ ಪ್ರಾರಂಭಗೊಂಡಿವೆ.
Gadag Oct 26, 2019, 7:31 AM IST
ಶಿವಮೊಗ್ಗ ಜಿಲ್ಲೆ ಸರ್ಕಾರಿ ನೌಕರರಿಗೆ ದೀಪಾವಳಿ ರಜೆ ಇಲ್ಲ. ಮಳೆ ಅನಾಹುತದ ಅನಿವಾರ್ಯ ಪರಿಸ್ಥಿತಿ ಎದುರಿಸಲು ಸಜ್ಜಾಗುವಂತೆ ಸೂಚನೆ ನೀಡಲಾಗಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಈ ಕ್ರಮ ತೆಗೆದುಕೊಂಡಿದ್ದು ಇನ್ನಷ್ಟು ಕೆಲಸ ಮಾಡಬೇಕಾದ ಅನಿವಾರ್ಯದಲ್ಲಿದೆ.
Shivamogga Oct 25, 2019, 11:45 PM IST
ಕಳೆದೆರಡು ದಿನಗಳಿಂದ ಮೂಡಿದ್ದ ನೆರೆ ಹಾವಳಿಯ ಆತಂಕ ಗುರುವಾರ ಕೊಂಚ ತಗ್ಗಿದೆಯಾದರೂ, ತೀವ್ರತೆಯಿಂದ ಜಿಲ್ಲೆಯಲ್ಲಿ ಮತ್ತೊಮ್ಮೆ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದ್ದು, ರೈತರ ದುಗುಡ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ರಾಜ್ಯದ ಉತ್ತರ ಭಾಗದಲ್ಲಿ 704 ಸುರಿದ ಭಾರಿ ಮಳೆಯಿಂದಾಗಿ ಜಲಾಶಯಗಳ ಮೂಲಕ ನದಿಗೆ ಹರಿದು ಬಂದ ನೀರು ಪ್ರವಾಹದಮುನ್ಸೂಚನೆ ನೀಡಿ, ಜಿಲ್ಲೆಯ ಜನರ ಆತಂಕ ಮತ್ತೇ ಹೆಚ್ಚಿಸಿತ್ತು.
Yadgir Oct 25, 2019, 12:53 PM IST
ಪ್ರತಿ ವರ್ಷವೂ ಚಾರ್ಮಾಡಿಯಲ್ಲಿ ಸಮಸ್ಯೆಳು ತಪ್ಪುವುದಿಲ್ಲ. ಭೀಕರ ಪ್ರವಾಹಕ್ಕೆ ಕೊಚ್ಚಿ ಹೋದ ಚಾರ್ಮಾಡಿ ನದಿ ಪಾತ್ರಗಳಲ್ಲಿ ತಡೆಗೋಡೆ ಹಾಗೂ ಅಂತರ ಎಂಬಲ್ಲಿಗೆ ಶಾಶ್ವತ ಸೇತುವೆ ನಿರ್ಮಿಸಿಕೊಡಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
Dakshina Kannada Oct 25, 2019, 12:08 PM IST
ಕಳೆದ ಎರಡು ದಿನಗಳಿಂದ ಉಂಟಾಗಿದ್ದ ಮಲಪ್ರಭಾ ನದಿ ಪ್ರವಾಹದಲ್ಲಿ ಗುರುವಾರ ಇಳಿಮುಖವಾಗಿದ್ದರೂ, ತೀವ್ರ ಪರಿಸ್ಥಿತಿ ಎದುರಿಸುತ್ತಿರುವ 6 ಗ್ರಾಮಗಳ 528 ಕುಟುಂಬಗಳ 2112 ಜನರು ಇದುವರೆಗೂ ಸರ್ಕಾರ ನಿರ್ಮಿಸಿದ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ.
Bagalkot Oct 25, 2019, 11:04 AM IST
ಸತತವಾಗಿ ಸುರಿಯುತ್ತಿರುವ ಮಳೆಯಿಂದ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮ ಗುಡ್ಡದ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನ ಪ್ರವಾಹದಲ್ಲಿ ಮುಳುಗಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದು ಸುಳ್ಳು ಸುದ್ದಿ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
Belagavi Oct 25, 2019, 10:27 AM IST