ತುಂಗಭದ್ರಾ ಜಲಾಶಯದಿಂದ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿ ಬಿಟ್ಟಿದ್ದರಿಂದ ಐತಿಹಾಸಿಕ ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಕಳೆದ ಎರಡು ದಿನಗಳಿಂದ ಅಣೆಕಟ್ಟೆಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಹೆಚ್ಚುವರಿ ನೀರನ್ನೆಲ್ಲ ನದಿಗೆ ಬಿಡಲಾಗುತ್ತಿದೆ. ಮಂಗಳವಾರ ಬೆಳಗ್ಗೆ ನದಿಗೆ 1.50 ಲಕ್ಷ ಕ್ಯುಸೆಕ್ ನೀರು ಬಿಡಲಾಗಿದೆ. ಇದರಿಂದ ತಾಲೂಕಿನ ಆನೆಗೊಂದಿ, ಹನುಮನಹಳ್ಳಿ, ಸಣ್ಣಾಪುರ, ವಿರೂಪಾಪುರ ಗಡ್ಡೆ, ಋುಷಿಮುಖಪರ್ವತ, ಸೇರಿದಂತೆ ಐತಿಹಾಸಿಕ ಪ್ರದೇಶಗಳು ಜಲಾವೃತಗೊಂಡಿವೆ.
Koppal Oct 23, 2019, 8:03 AM IST
ರಾಜ್ಯದಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಿದೆ. ಆದರೆ ನೆರೆಯ ಪ್ರಮಾಣ ಮಾತ್ರ ಇನ್ನೂ ಇಳಿದಿಲ್ಲ. ಮಹಾರಾಷ್ಟ್ರದ ಮಳೆಯು ಹೆಚ್ಚು ರಾಜ್ಯಕ್ಕೆ ಸಮಸ್ಯೆಯುಂಟು ಮಾಡಿದೆ.
state Oct 23, 2019, 7:11 AM IST
ಕಳೆದೆರಡು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಬಾಗಲಕೋಟೆ ಜಿಲ್ಲೆ ಸಮುದ್ರವಾಗಿ ಪರಿವರ್ತನೆಯಾಗಿದೆ. ಸಂತ್ರಸ್ತರನ್ನು ಸಂತೈಸಲು ತೆರಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಖುದ್ದು ಹೋಗುವ ದಾರಿಗೆ ಸಂಕವಿಲ್ಲದೆ ಪರದಾಡಿದ ಘಟನೆ ನಡೆದಿದೆ.
Bagalkot Oct 22, 2019, 6:20 PM IST
ಬಾಗಲಕೋಟೆ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಮತ್ತೆ ನೆರೆಭೀತಿ ಎದುರಾಗಿದೆ. ಬಹುತೇಕ ಕಡೆ ಮನೆ-ಮಠ, ರಸ್ತೆ-ಮೈದಾನಗಳೆಲ್ಲವೂ ಜಲಾವೃತವಾಗಿವೆ. ಗದ್ದೆಗಳಲ್ಲಿ ನೀರು ತುಂಬಿ ಬೆಳೆ ನಾಶವಾಗಿದೆ. ವಿಶೇಷವಾಗಿ, ಈರುಳ್ಳಿ ಬೆಳೆದಿರುವವರ ಪಾಡು ಹೇಳತೀರದು.
Bagalkot Oct 22, 2019, 4:05 PM IST
ಬಾಗಲಕೋಟೆ ಜಿಲ್ಲೆಯಲ್ಲಿ ಧಾರಾಕಾರ ಸುರಿಯುತ್ತಿರುವ ಮಳೆ ಒಂದೆಡೆಯಾದರೆ, ಅಧಿಕಾರಿಗಳ ನಿರ್ಲ್ಯಕ್ಷ ಇನ್ನೊಂದೆಡೆ. ಮಹಾಮಳೆಗೆ ಮನೆ, ರಸ್ತೆ, ಮತ್ತು ಗದ್ದೆಗಳು ಜಲಾವೃತವಾಗಿವೆ. ಈ ನಡುವೆ ಪುಟ್ಟ ಬಾಲಕಿಯೊಬ್ಬಳು ಜಲಾವೃತವಾಗಿರುವ ರಸ್ತೆಯಲ್ಲಿ ನಿಂತು ಶಾಸಕ ಮತ್ತು ಅಧಿಕಾರಿಗಳಿಗೆ ಬರೆದ ಪತ್ರ ಓದುತ್ತಿರುವ ವಿಡಿಯೋ ವೈರಲ್ ಆಗಿದೆ. ಪತ್ರದಲ್ಲಿ ಶಾಸಕ ಮತ್ತು ಅಧಿಕಾರಿಗಳಿಗೆ ಮಾರ್ಮಿಕವಾಗಿ ತಿವಿದಿದ್ದಾಳೆ. ಹಾಲಿ ಡಿಸಿಎಂ ಗೋವಿಂದ ಕಾರಜೋಳ, ಮುಧೋಳ ಕ್ಷೇತ್ರ ಶಾಸಕರಾಗಿದ್ದಾರೆ.
Bagalkot Oct 22, 2019, 3:28 PM IST
ಕೋಡಿ ಮಠದ ಸ್ವಾಮೀಜಿ ಹೇಳಿದ ಭವಿಷ್ಯಗಳು ಒಂದೊಂದೇ ನಿಜವಾಗುತ್ತಿದ್ದು, ಇದೀಗ ಮತ್ತೊಂದು ಭಾರೀ ಅನಾಹುತವೊಂದು ಕಾದಿದೆ ಎಂದು ಸ್ವಾಮೀಜಿ ಹೇಳಿದ್ದಾರೆ.
Gadag Oct 22, 2019, 3:16 PM IST
ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಂಡ್ಯದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಸೋಮವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಏರಿ ಹೊಡೆದ ಗಾಮಗಳಿಗೆ ನೀರು ನುಗ್ಗಿದೆ. ಅಷ್ಟೇ ಅಲ್ಲದೇ ಕೆ.ಆರ್.ಪೇಟೆ ಮತ್ತು ಶೀಳನೆರೆ ಸಂಪರ್ಕ ಕಡಿತವಾಗಿದ್ದು, ಜನರು ತೊಂದರೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆ ಅವಾಂತರವನ್ನು ವಿಡಿಯೋನಲ್ಲಿ ನೋಡಿ.
Mandya Oct 22, 2019, 2:14 PM IST
ಉಡುಪಿ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಮಳೆ ಸುರಿಯುತ್ತಿದೆ. ನಿನ್ನೆ (ಸೋಮವಾರ) ರಾತ್ರಿಯಿಂದ ಮಳೆರಾಯ ಸ್ವಲ್ಪ ವಿರಾಮ ತೆಗೆದುಕೊಂಡಿದ್ದಾನೆಯಾದರೂ, ಹವಾಮಾನ ಇಲಾಖೆಯು ನಾಳೆಯಿಂದ 3 ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿದೆ. ಒಂದು ಕಡೆ ಅರಬ್ಬೀ ಸಮುದ್ರ ಮತ್ತೊಂದು ಕಡೆ ಪಶ್ಚಿಮ ಘಟ್ಟಗಳನ್ನು ಹೊಂದಿರುವ ಉಡುಪಿಯಲ್ಲಿ, ಈಗ ಭತ್ತದ ಕಟಾವು ಮತ್ತು ಆಳ ಸಮುದ್ರ ಮೀನುಗಾರಿಕೆಯ ಸೀಸನ್. ಆದರೆ ಮಹಾಮಳೆಯು ಎಲ್ಲರನ್ನೂ ಇಕ್ಕಟ್ಟಿನಲ್ಲಿ ಸಿಲುಕಿಸಿದೆ. ನಮ್ಮ ಪ್ರತಿನಿಧಿ ಶಶಿಧರ್ ಮಾಸ್ತಿಬೈಲು ಉಡುಪಿಯ ಚಿತ್ರಣ ಹೇಗಿದೆ ಎಂಬುವುದನ್ನು ವಿವರಿಸಿದ್ದಾರೆ....
Udupi Oct 22, 2019, 1:37 PM IST
ಮತ್ತೆ ರಾಜ್ಯದಲ್ಲಿ ಮಳೆ ಅಬ್ಬರಿಸುತ್ತಿದೆ. ಪ್ರವಾಹದಿಂದ ಚೇತರಿಸಿಕೊಳ್ಳುವ ಮುನ್ನವೇ ಮತ್ತೊಂದು ಜಲಾಘಾತ ರಾಜ್ಯಕ್ಕೆ ಆಗಿದೆ.
ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
Karnataka Districts Oct 21, 2019, 8:55 PM IST
ಮಹಾರಾಷ್ಟ್ರ ಹಾಗೂ ಗಡಿ ಭಾಗದ ಬೆಳಗಾವಿ ಜಿಲ್ಲೆಯಲ್ಲಿ ಧಾರಾರಕಾರ ಮಳೆ ಸುರಿದ ಪರಿಣಾಮ ಕೃಷ್ಣ ನದಿಯಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.
Belagavi Oct 21, 2019, 11:28 AM IST
ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
state Oct 21, 2019, 9:55 AM IST
ಜಿಲ್ಲೆಯಲ್ಲಿ ಭಾರೀ ಸುರಿಯುತ್ತಿರುವ ಪರಿಣಾಮ ಮಲಪ್ರಭಾ ಜಲಾಶಯದಲ್ಲಿ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೀಗಾಗಿ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಬಳಿ ಇರುವ ಜಲಾಶಯದಿಂದ 30 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.
Belagavi Oct 21, 2019, 9:25 AM IST
ಶೋಕಾಸ್ ನೋಟಿಸ್ ಗೆ ಯಾವ ಕಾರಣಕ್ಕೆ ಉತ್ತರ ನೀಡಿದ್ದೇನೆ ಎಂಬುದನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ. ಅಕ್ಟೋಬರ್ 15 ರಂದು ಶೋಕಾಸ್ ನೋಟಿಸ್ ಗೆ ಉತ್ತರಿಸಿದ್ದೇನೆ. ಸವಿಸ್ತಾರವಾಗಿ ನೊಟೀಸ್ ಗೆ ಉತ್ತರಿಸಿದ್ದೇನೆ ಎಂದಿದ್ದಾರೆ.
Vijayapura Oct 20, 2019, 4:19 PM IST
ನೆರೆ ಸಂತ್ರಸ್ತರ ವಿಷಯದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದ್ದು, ಇದರಿಂದ ಲಕ್ಷಾಂತರ ಸಂತ್ರಸ್ತರಿಗೆ ಬಹುದೊಡ್ಡ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಶನಿವಾರ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
Bagalkot Oct 20, 2019, 12:17 PM IST
ಪ್ರವಾಹದ ಹೊಡೆತಕ್ಕೆ ಸೂರು ಹಾಗೂ ಬೆಳೆ ಕಳೆದುಕೊಂಡು ಈಗಾಗಲೇ ಬೀದಿಗೆ ಬಿದ್ದಿರುವ ಸಂತ್ರಸ್ತರು ಪರಿಹಾರಕ್ಕಾಗಿ ಜಾತಕಪಕ್ಷಿಯಂತೆ ಎದುರು ನೋಡುತ್ತಿದ್ದಾರೆ. ಸದ್ಯ ಅವರ ಜೀವನ ಅಕ್ಷರಶಃ ಅತಂತ್ರವಾಗಿದೆ.
Bagalkot Oct 20, 2019, 12:04 PM IST