ಬೆಂಗಳೂರು ಲಾಕ್ಡೌನ್ ಘೋಷಣೆ ಆಗಿದ್ದೆ ತಡ ಜನರು ಜನರ ಬಿಟ್ಟು ತಮ್ಮ-ತಮ್ಮ ಸ್ವಂತ ಊರುಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಇನ್ನು ಸಿಎಂ ಬಿಎಸ್ವೈ ಟಾಸ್ಕ್ ಫೋರ್ಸ್ ತಂಡದೊಂದಿಗೆ ಚರ್ಚೆ ನಡೆಸಿ ಲಾಕ್ಡೌನ್ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.
state Jul 13, 2020, 6:40 PM IST
ಲಾಕ್ಡೌನ್ನಿಂದಾಗಿ ಜನರು ಬೆಂಗಳೂರು ಬಿಟ್ಟು ಊರು ಸೇರುತ್ತಿದ್ದಾರೆ. ಲಾಕ್ಡೌನ್ನಿಂದ ಕೆಲಸ ಇಲ್ಲ, ದುಡಿಮೆ ಇಲ್ಲ, ಬಾಡಿಗೆ ಕಟ್ಟಲು ಹಣವಿಲ್ಲ ಇದ್ದು ಏನು ಮಾಡೋಣ ಅಂತ ಜನರು ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಇಲ್ಲಿಂದ ಊರುಗಳಿಗೆ ಹೋಗುವುದರಿಂದ ಅಲ್ಲಿ ಸೋಂಕು ಹರಡುವ ಭಯ ಗ್ರಾಮಸ್ಥರಿಗೆ ಎದುರಾಗಿದೆ.
state Jul 13, 2020, 6:31 PM IST
ನಾಳೆ ರಾತ್ರಿ 8 ಗಂಟೆಯಿಂದ ಒಂದು ವಾರಗಳ ಕಾಲ ಬೆಂಗಳೂರು ಲಾಕ್ಡೌನ್ ಆಗಲಿದೆ. ಬ್ಯಾಂಕ್ ಓಪನ್ ಇರತ್ತೋ, ಇಲ್ವೋ, ಎಟಿಎಂಗಳು ಕಾರ್ಯ ನಿರ್ವಹಿಸುತ್ತದೋ ಇಲ್ಲವೋ ಅನ್ನುವ ಆತಂಕದಲ್ಲಿ ಜನ ಎಟಿಎಂ ಮುಂದೆ ಸಾಲುಗಟ್ಟಿ ನಿಂತಿದ್ದಾರೆ. ಜೊತೆಗೆ ತಮಗೆ ಬೇಕಾದ ಅಗತ್ಯ ವಸ್ತುಗಳನ್ನು ಕೊಳ್ಳುತ್ತಿದ್ದಾರೆ.
state Jul 13, 2020, 6:14 PM IST
ಕೊರೊನಾ ಸೋಂಕು ಹರಡುವಿಕೆ ತಡೆಯಲು ಈಗಾಗಲೇ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರದ ಲಾಕ್ಡೌನ್ ಘೋಷಿಸಿದ ಮಾದರಿಯಲ್ಲಿ ಹೆಚ್ಚು ಸೋಂಕು ಕಾಣಿಸಿಕೊಂಡಿರುವ ಜಿಲ್ಲೆಗಳಲ್ಲಿಯೂ ಸಹ ಲಾಕ್ಡೌನ್ ಜಾರಿ ತರುವ ಬಗ್ಗೆ ಇಂದು ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಜಿಲ್ಲಾಧಿಕಾರಿಗಳು ಯಾವ ರೀತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ? ಯಾವ್ಯಾವ ಜಿಲ್ಲೆಗಳು ಲಾಕ್ಡೌನ್ ಆಗಲಿದೆ? ಇಲ್ಲಿದೆ ಮಾಹಿತಿ..!
state Jul 13, 2020, 5:56 PM IST
ಕೊರೋನಾ ಸೋಂಕು ತಡೆಯಲು ಈಗಾಗಲೇ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರ ಲಾಕ್ಡೌನ್ ಘೋಷಿಸಲಾಗಿದೆ. ಈ ಬಾರಿಯ ಲಾಕ್ಡೌನ್ ಸಿಕ್ಕಾಪಟ್ಟೆ ಸ್ಟ್ರಿಕ್ಟ್ ಆಗಿರುತ್ತದೆ.
Karnataka Districts Jul 13, 2020, 5:49 PM IST
ಕೊರೋನಾ ಕಾಟದಿಂದ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವಾರದ ಲಾಕ್ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಸ್ವಂತ ಸ್ಥಳಗಳಿಗೆ ಸುರಕ್ಷಿತವಾಗಿ ತೆರಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಹೆಚ್ಚುವರಿ ಬಸ್ಗಳ ವ್ಯವಸ್ಥೆಯನ್ನು ಮಾಡಿದೆ.
Karnataka Districts Jul 13, 2020, 5:33 PM IST
ಕೊರೊನಾ ತಡೆಗೆ ಲಾಕ್ಡೌನ್ ಪರಿಹಾರ ಅಲ್ಲ. ಕೊರೊನಾವನ್ನು ಪೋಸ್ಟ್ಪೋನ್ ಮಾಡಬಹುದೇ ವಿನಃ ಕಂಟ್ರೋಲ್ ಮಾಡಲು ಸಾಧ್ಯವಿಲ್ಲ. ಸುಮ್ಮನೆ ಲಾಕ್ಡೌನ್ ಮಾಡಿ ಆರ್ಥಿಕ ನಷ್ಟ ಮಾಡಿಕೊಳ್ಳುವುದು ತರವಲ್ಲ ಎಂದು ಸಿಎಂ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
state Jul 13, 2020, 5:21 PM IST
ಗಂಡ ಯಾವತ್ತೂ ಲ್ಯಾಪ್ಟಾಪ್ ಅಥವಾ ಫೋನ್ನಲ್ಲಿ ಇರುತ್ತಾರೆ. ರಾತ್ರಿ ಅದರಿಂದ ಸುಸ್ತಾಯಿತೆನ್ನುತ್ತಾರೆ. ಅವರ ಫೋನ್ ನಾನು ಮುಟ್ಟಲು ಬಿಡುವುದಿಲ್ಲ. ಫೋನ್ ಬಂದರೆ ದೂರ ಅಥವಾ ಟೆರ್ರೇಸ್ಗೆ ಹೋಗಿ ಮಾತಾಡುತ್ತಾರೆ. ಅವರಿಗೆ ಇನ್ನೊಂದು ಸಂಬಂಧ ಇರಬಹುದಾ? ಇದನ್ನು ಸರಿ ಮಾಡುವುದು ಹೇಗೆ?
relationship Jul 13, 2020, 5:17 PM IST
ಬೆಂಗಳೂರು ಲಾಕ್ಡೌನ್ ಬೆನ್ನಲ್ಲೇ ಇತರ ರಾಜ್ಯಗಳ ಪರಿಸ್ಥಿತಿ ಕುರಿತು ಸಿಎಂ ಬಿಸ್ ಯಡಿಯೂರಪ್ಪ ಆಯಾ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ರಾಜ್ಯಾದ್ಯಂತ ಲಾಕ್ಡೌನ್ ಸೂಕ್ತ ಎಂದು ಮಾಜಿ ಪ್ರಧಾನಿ ದೇವೇಗೌಡ ಆಗ್ರಹಿಸಿದ್ದಾರೆ. ಪ್ರಧಾನಿ ಮೋದಿ ಹಾಗೂ ಗೂಗಲ್ ಸಿಇಓ ಸುಂದರ್ ಪಿಚೈ ಮಹತ್ವ ಮಾತುಕತೆ ನಡೆಸಿದ್ದಾರೆ. ದಕ್ಷಿಣ ಭಾರತದ ನಟಿ ಅನುಷ್ಕಾ ಶೆಟ್ಟಿ ಸಿನಿಮಾಗೆ ವಿದಾಯ ಹೇಳುತ್ತಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದೆ. ಕತ್ರಿನಾ ಕೈಫ್ ಮದುವೆ ಸೀಕ್ರೆಟ್, ತಿರುವಾಂಕೂರು ರಾಮಜನೆತನದ ಹಕ್ಕು ಎತ್ತಿ ಹಿಡಿದ ಸುಪ್ರೀಂ ಸೇರಿದಂತೆ ಜುಲೈ 13ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
News Jul 13, 2020, 5:04 PM IST
ಕೊರೊನಾ ಸೋಂಕು ತಡೆಯಲು ಈಗಾಗಲೇ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರ ಲಾಕ್ಡೌನ್ ಘೋಷಿಸಲಾಗಿದೆ. ಈ ಬಾರಿಯ ಲಾಕ್ಡೌನ್ ಸಿಕ್ಕಾಪಟ್ಟೆ ಸ್ಟ್ರಿಕ್ಟ್ ಆಗಿರುತ್ತದೆ. ಮನೆ ಬಿಟ್ಟು ಹೊರಗೆ ಸುಖಾಸುಮ್ಮನೆ ತಿರುಗಾಡುತ್ತಿದ್ದರೆ ಲಾಠಿ ಏಟು ತಿನ್ನಬೇಕಾಗುತ್ತದೆ. ಶಿಸ್ತುಕ್ರಮ ಕೈಗೊಳ್ಳುತ್ತೇವೆ' ಎಂದು ಗೃಹ ಸಚಿವ ಬೊಮ್ಮಾಯಿ ಸುವರ್ಣ ನ್ಯೂಸ್ಗೆ ಹೇಳಿದ್ದಾರೆ.
state Jul 13, 2020, 4:10 PM IST
ರಾಜ್ಯಾದ್ಯಂತ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ್ದಾರೆ. ಉಡುಪಿಯಲ್ಲಿ ಲಾಕ್ಡೌನ್ ಬೇಡವೇ ಬೇಡ. ಅಂತರ್ಜಿಲ್ಲಾ ಓಡಾಟಕ್ಕೆ ನಿರ್ಬಂಧ ಹಾಕುವ ಬಗ್ಗೆ ಡಿಸಿ ಒಲವು ತೋರಿದ್ದಾರೆ.
state Jul 13, 2020, 3:50 PM IST
ಸರ್ಕಾರ ಹಾಗೂ ಜನಪ್ರತಿನಿಧಿಗಳು ಸಾರ್ವಜನಿಕರ ಪರವಾಗಿ ಕೆಲಸ ಮಾಡುತ್ತಿದೆ ಎಂಬ ಬಗ್ಗೆ ಮೊದಲು ಸಂದೇಶವನ್ನು ಕೊಡಬೇಕು. ಅವರ ಆರೋಗ್ಯದ ಸಮಸ್ಯೆಗಳಿದ್ದಲ್ಲಿ ತುರ್ತು ಸಂಪರ್ಕಕ್ಕೆ ಅಗತ್ಯ ಕ್ರಮ ವಹಿಸಬೇಕು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜರಾಜಶ್ವರಿ ನಗರ ವಲಯ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
Karnataka Districts Jul 13, 2020, 3:16 PM IST
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚಾಗುತ್ತಿದೆ. ಹಾಗಾಗಿ ಇಂದಿನಿಂದ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಆರಂಭವಾಗುತ್ತದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಟೆಸ್ಟ್ ಮಾಡಲಾಗುತ್ತದೆ. 15- 30 ನಿಮಿಷಗಳಲ್ಲಿ ರಿಪೋರ್ಟ್ ಕೈ ಸೇರಲಿದೆ. ಬೆಂಗಳೂರಿನಲ್ಲಿಯೇ 50 ಸಾವಿರ ಟೆಸ್ಟ್ ಮಾಡಲು ತೀರ್ಮಾನಿಸಲಾಗಿದೆ. ಕೊರೊನಾ ಹೆಚ್ಚಾಗಿರುವ ಪ್ರದೇಶಗಳಲ್ಲಿ ಈ ಟೆಸ್ಟ್ ಮಾಡಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!
state Jul 13, 2020, 2:24 PM IST
ಹಿರಿಯ ನಾಗರಿಕದ 60 ವರ್ಷ ಮೇಲ್ಪಟ್ಟವರು ಹಾಗೂ ಇತರ ತೀವ್ರ ಸ್ವರೂಪದ ಕಾಯಿಲೆಯಿಂದ ಬಳಲುತ್ತಿರುವವರನ್ನು ಪ್ರತ್ಯೇಕವಾಗಿರಿಸಬೇಕು ಮತ್ತು ಐಎಲ್ಐ ಮತ್ತು ಉಸಿರಾಟದ ತೊಂದರೆ ಇರುವವರನ್ನು ಗುರುತಿಸಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಪಡಿಸಬೇಕು.
state Jul 13, 2020, 2:04 PM IST
ನಾಳೆ ಲಾಕ್ಡೌನ್ ಹಿನ್ನಲೆಯಲ್ಲಿ ಸಾಕಷ್ಟು ಮಂದಿ ಊರಿನ ಕಡೆ ಪ್ರಯಾಣ ಬೆಳೆಸುತ್ತಿದ್ದು ಕೆಎಸ್ಆರ್ಟಿಸಿ ಬಸ್ಗಳು ಸಿಗುತ್ತಿಲ್ಲ. ಕಾದು ಕಾದು ಸಾಕಾಗಿ ಹೋಗಿದೆ. ಖಾಸಗಿ ಬಸ್ಗಳಿಗೆ ಹೆಚ್ಚಿನ ಹಣ ಕೊಡಲು ಆಗುತ್ತಿಲ್ಲ ಅನ್ನೋದು ಬೆಂಗಳೂರು- ಮೈಸೂರು ರಸ್ತೆಯ ಪ್ರಯಾಣಿಕರ ಅಳಲು.
state Jul 13, 2020, 12:57 PM IST