ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಎಲ್ಲೆಡೆ ಭಾನುವಾರದ ಲಾಕ್ಡೌನ್ಗೆ ಉತ್ತಮ ಸ್ಪಂದನೆ ದೊರೆಯಿತು. ಔಷಧ, ಹಾಲು, ದಿನಪತ್ರಿಕೆ, ಪೆಟ್ರೋಲ್ ಬಂಕ್ ಹೊರತುಪಡಿಸಿ ಉಳಿದೆಲ್ಲ ವ್ಯಾಪಾರ ಸಂಪೂರ್ಣ ಬಂದ್ ಆಗಿತ್ತು.
Karnataka Districts Jul 13, 2020, 12:42 PM IST
ಬೆಂಗಳೂರು(ಜು.13): ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೆ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ಜೊತೆಗೆ ಪ್ರಮಾಣವೂ ಕೂಡ ಅಷ್ಟೇ ತೀವ್ರಗತಿಯಲ್ಲಿ ಹೆಚ್ಚಾಗುತ್ತಿವೆ. ಹೀಗಾಗಿ ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೋನಾ ಕಟ್ಟಿಹಾಕಲು ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ನಾಳೆಯಿಂದ(ಮಂಗಳವಾರ) ಜು. 14 ರ ರಾತ್ರಿ 8 ರಿಂದ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಲು ತೀರ್ಮಾನಿಸಿದ್ದಾರೆ.
state Jul 13, 2020, 12:22 PM IST
ನಾಳೆಯಿಂದ ಬೆಂಗಳೂರು ಲಾಕ್ಡೌನ್ ಹಿನ್ನಲೆಯಲ್ಲಿ ಇಲ್ಲಿಂದ ಆಂಧ್ರದತ್ತ ಮಹಾ ಪ್ರಯಾಣ ಬೆಳೆಸಿದ್ದಾರೆ. ಲಗೇಜ್ ಸಮೇತ ಆಂಧ್ರ, ತೆಲಂಗಾಣ ಭಾಗದ ಜನರು ಮನೆಗಳನ್ನು ಖಾಲಿ ಮಾಡಿ ಊರುಗಳತ್ತ ಮುಖ ಮಾಡುತ್ತಿದ್ದಾರೆ. ದೇವನಹಳ್ಳಿ ಟೋಲ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ಟೋಲ್ ಬಳಿ ಕಿಮೀಗಟ್ಟಲೇ ವಾಹನಗಳು ನಿಂತಿವೆ.
state Jul 13, 2020, 12:19 PM IST
ನಾಳೆಯಿಂದ ಬೆಂಗಳೂರು ಲಾಕ್ಡೌನ್ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿಯಿಂದ ಜನರು ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಲಗೇಜ್ ಸಮೇತ ತಮ್ಮ ತಮ್ಮ ಊರುಗಳನ್ನು ಸೇರುತ್ತಿದ್ದಾರೆ. ನಿನ್ನೆ ರಾತ್ರಿಯಿಂದಲೇ ತಮ್ಮ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ನೆಲಮಂಗಲ ಟೋಲ್ ಬಳಿ ಕಿಮೀಗಟ್ಟಲೇ ಟ್ರಾಫಿಕ್ ಜಾಮ್ ಕಂಡು ಬಂದಿದೆ. ನೆಲಮಂಗಲ ಟೋಲ್ನಿಂದ ನಮ್ಮ ಪ್ರತಿನಿಧಿ ನೀಡಿದ ವರದಿ ಇದು..!
state Jul 13, 2020, 12:01 PM IST
ರಾಜ್ಯದಲ್ಲಿ ಶರವೇಗದಲ್ಲಿ ಹರಡುತ್ತಿರುವ ಮಹಾಮಾರಿ ಕರೋನ ವೈರಸ್ ತಡೆಯಲು ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೆ ತಿಂಗಳು 14ರ ರಾತ್ರಿ 8 ಗಂಟೆ ಯಿಂದ ಲಾಕ್ ಡೌನ್ ಜಾರಿ ಮಾಡಿದೆ ಇದು ಸ್ವಾಗತಾರ್ಹ ಇದರ ಜೊತೆಗೆ ಇಡಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಲು ಮಾಧ್ಯಮಗಳ ಮುಖೇನ ರಾಜ್ಯ ಸರ್ಕಾರವನ್ನು ನಾನು ಆಗ್ರಹಿಸುತ್ತೀನಿ ಎಂದಿದ್ದಾರೆ.
state Jul 13, 2020, 11:08 AM IST
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡುವಿಕೆ ನಿಯಂತ್ರಿಸಲು ಏಳು ದಿನಗಳ ಕಾಲ ಲಾಕ್ಡೌನ್ ಜಾರಿ ಮಾಡಲಿರುವ ಹಿನ್ನೆಲೆಯಲ್ಲಿ ವಿವಿಧ ತುರ್ತು ಕಾರ್ಯ ನಿಮಿತ್ತ ಬಂದವರು ಸೋಮವಾರ ಮತ್ತು ಮಂಗಳವಾರ ಸಂಜೆಯೊಳಗಾಗಿ ತಮ್ಮ ಊರುಗಳಿಗೆ ವಾಪಸ್ ಹೋಗಬಹುದಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
state Jul 13, 2020, 9:20 AM IST
ಕೊರೋನಾ ಸೋಂಕು ಹರಡುವಿಕೆ ತಡೆಯಲು ಈಗಾಗಲೇ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರಗಳ ಲಾಕ್ಡೌನ್ ಘೋಷಿಸಿದ ಮಾದರಿಯಲ್ಲೇ ಹೆಚ್ಚು ಸೋಂಕು ಕಾಣಿಸಿಕೊಂಡಿರುವ ಜಿಲ್ಲೆಗಳಲ್ಲಿಯೂ ಸಹ ಲಾಕ್ಡೌನ್ ಜಾರಿ ತರುವ ಸಾಧ್ಯತೆ ದಟ್ಟವಾಗಿದೆ.
Karnataka Districts Jul 13, 2020, 8:54 AM IST
ರಾಜಧಾನಿ ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಧಿಸಲು ನಿರ್ಧರಿಸಿರುವ ಒಂದು ವಾರದ ಲಾಕ್ಡೌನ್ ನಂತರ ಎರಡು ಅಥವಾ ಮೂರು ವಾರಕ್ಕೆ ವಿಸ್ತರಣೆಯಾಗುವ ಸಾಧ್ಯತೆಯಿದೆ.
state Jul 13, 2020, 8:03 AM IST
ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವೇ ಉಂಟಾಗಿದ್ದು, ಕಳೆದ 4 ಗಂಟೆಗಳಲ್ಲಿ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಹಾಗಾದ್ರೆ, ಭಾನುವಾರ ಪತ್ತೆಯಾದ ಕೇಸ್ಗಳೆಷ್ಟು...? ಎನ್ನುವ ಸಂಡೇ ಅಂಕಿ-ಅಂಶ ಈ ಕೆಳಗಿನಂತಿದೆ.
state Jul 12, 2020, 8:27 PM IST
BS4 ವಾಹನಗಳನ್ನು BS6 ವಾಹನಗಳಾಗಿ ಅಪ್ಗ್ರೇಡ್ ಮಾಡಿ ಬಿಡುಗಡೆ ಮಾಡಿದಾಗ ಉತ್ಪಾದನಾ ವೆಚ್ಚ ಅಧಿಕವಾದ ಕಾರಣ ಬೆಲೆ ಏರಿಕೆ ಮಾಡಲಾಗಿದೆ. ಇದೀಗ ಬಜಾಜ್ ಪಲ್ಸರ್ 150 2ನೇ ಬಾರಿಗೆ ಬೆಲೆ ಏರಿಕೆಯಾಗಿದೆ.
Automobile Jul 12, 2020, 6:44 PM IST
ಬೆಂಗಳೂರಿನಲ್ಲಿ ಮಂಗಳವಾರ (ಜುಲೈ.14) ರಾತ್ರಿ 8 ರಿಂದ ಒಂದು ವಾರಗಳ ಕಾಲ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ಡೌನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದೀಗ ಮಂಗಳೂರಲ್ಲೂ ಲಾಕ್ಡೌನ್ ಮಾಡುವಂತೆ ಕಾಂಗ್ರೆಸ್ ಶಾಸಕ, ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
Karnataka Districts Jul 12, 2020, 6:41 PM IST
' ಕಳೆದ ಬಾರಿಗಿಂತ ಈ ಬಾರಿ ಲಾಕ್ಡೌನ್ ಸಂಪೂರ್ಣ ವಿಭಿನ್ನವಾಗಿರುತ್ತದೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಯಾವುದೇ ವಾಹನ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ. ಎಲ್ಲವನ್ನೂ ಬಂದ್ ಮಾಡುತ್ತೇವೆ' ಎಂದು ಗೃಹ ಸಚಿವ ಬೊಮ್ಮಾಯಿಯವರು ಹೇಳಿದ್ದಾರೆ.
state Jul 12, 2020, 5:43 PM IST
ಪರೀಕ್ಷೆ ಮಾಡಿಸದೆ ಗ್ರಾಮಕ್ಕೆ ಬಂದ್ರೆ 25000 ದಂಡ!| ಮಧ್ಯಾಹ್ನದ ನಂತರ ಗ್ರಾಮ ಲಾಕ್ಡೌನ್! ಮೈಸೂರು ಜಿಲ್ಲೆಯ ಗ್ರಾಮದಲ್ಲಿನ ನಿಯಮ.
state Jul 12, 2020, 5:42 PM IST
ಯಲಹಂಕ ಜನರಲ್ ಆಸ್ಪತ್ರೆಯಲ್ಲಿ ಆ್ಯಂಟಿಜೆನ್ ಟೆಸ್ಟ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಚಾಲನೆ ನೀಡಿದ್ದಾರೆ. ಕೇವಲ 10 ನಿಮಿಷದಲ್ಲಿ ಕೋವಿಡ್ ರಿಪೋರ್ಟ್ ಪಡೆಯಬಹುದು. ಇದಕ್ಕೆ ಯಾವುದೇ ಆಧುನಿಕ ಪ್ರಯೋಗಾಲಯದ ಅವಶ್ಯಕತೆ ಇಲ್ಲ. ಇದು ನಿಜಕ್ಕೂ ಉಪಯೋಗಕಾರಿಯಾಗಿದೆ. ರಾಜ್ಯದಲ್ಲಿ ಒಟ್ಟು 3 ಲಕ್ಷ ಆ್ಯಂಟಿಜೆನ್ ಟೆಸ್ಟ್ಗೆ ಚಾಲನೆ ನೀಡಲು ಚಿಂತನೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಪ್ರಾಥಮಿಕವಾಗಿ 1 ಲಕ್ಷ ಕಿಟ್ ಖರೀದಿಸಲಾಗಿದೆ ಈಗಾಗಲೇ 5 ಸಾವಿರ ಕಿಟ್ನ್ನು ಫಿವರ್ ಕ್ಲಿನಿಕ್ಗೆ ರವಾನಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
state Jul 12, 2020, 5:16 PM IST
ಸಚಿವ ಸಚಿನ್ ಪೈಲೆಟ್ ಬಿಜೆಪಿಯತ್ತ ಮುಖಮಾಡಿದ್ದು, ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಪತನದ ಹಾದಿ ತುಳಿಯುತ್ತಿದೆ. ಬೆಂಗಳೂರಿನಲ್ಲಿ ಜಾರಿ ಮಾಡಿರುವ ಲಾಕ್ಡೌನ್ ಇದೀಗ ಇತರ ಜಿಲ್ಲೆಗಳಿಗೂ ವಿಸ್ತರಿಸಲು ಸರ್ಕಾರ ಚಿಂತಿಸುತ್ತಿದೆ. ಅಮಿತಾಬ್ ಬಚ್ಚನ್, ಅಭೀಷೇಕ್ ಬಚ್ಚನ್ ಬೆನ್ನಲ್ಲೇ, ಐಶ್ವರ್ಯ ರೈ ಹಾಗೂ ಪುತ್ರಿ ಆರಾಧ್ಯಗೂ ಕೊರೋನಾ ತಟ್ಟಿದೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ಗೆ ಹುಟ್ಟು ಹಬ್ಬದ ಸಂಭ್ರಮ, ಚೀನಾ ಅಸಲಿ ಮುಖ ಬಯಲು ಮಾಡಿದ ವಿಜ್ಞಾನಿ ಸೇರಿದಂತೆ ಜುಲೈ 12ರ ಟಾಪ್ 10 ಸುದ್ದಿ ಇಲ್ಲಿವೆ.
News Jul 12, 2020, 4:44 PM IST