ಪ್ರವಾಹ ಬಂದು ಅರ್ಧ ಕರ್ನಾಟಕವೇ ಮುಳುಗಿ ಹೋಗಿದ್ದು, ಪರಿಹಾರಕ್ಕಾಗಿ ಸಂತ್ರಸ್ತರು ಅಂಗಲಾಚುತ್ತಿದ್ದಾರೆ. ಆದ್ರೆ, ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಅದ್ಯಾಕೋ ಬರೀ ಉಡಾಫೆ ಮಾತುಗಳನ್ನೇ ಆಡುತ್ತಿದ್ದಾರೆ. ಮೊನ್ನೇ ಏನು ಹೇಳಿ ಜನರ ಟೀಕೆಗೆ ಗುರಿಯಾದ್ರು ಇದೀಗ ನೆರೆ ಪರಿಹಾರ ಪಡೆಯಲು ಪಡೆಯಲು ಸಂತ್ರಸ್ತರೆ ಮುಂದೆ ಬರುತ್ತಿಲ್ಲ ಎನ್ನುವ ಉಡಾಫೆ ಮಾತುಗಳನ್ನಾಡಿದ್ದಾರೆ. ಅವರು ಇನ್ನೂ ಏನೆಲ್ಲ ಮಾತನಾಡಿದ್ದಾರೆ ಅಂತ ಅವರ ಬಾಯಿಂದಲೇ ಕೇಳಿ.
News Oct 5, 2019, 5:29 PM IST
ಬರ್ಮಾ ಮೂಲದ ಗಂಗಮ್ಮಜ್ಜಿ ಶಿವಮೊಗ್ಗದಲ್ಲಿ ಗೃಹ ಪ್ರವೇಶ ಮಾಡಿದ್ದಾರೆ. ಅವರ ಇಂಟರೆಸ್ಟಿಂಗ್ ಕಹಾನಿ ಇಲ್ಲಿದೆ.
Karnataka Districts Oct 5, 2019, 2:46 PM IST
ಪ್ರವಾಹ ಪೀಡಿತ ಉತ್ತರ ಕರ್ನಾಟಕ ಜಿಲ್ಲೆಗಳ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಳಗಾವಿ ಮತ್ತು ಬಾಗಲಕೋಟೆಯಲ್ಲಿ ಶುಕ್ರವಾರ ಇಡೀ ದಿನ ನೆರೆ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನೆ, ಸಂತ್ರಸ್ತರ ಸಮಸ್ಯೆ ಆಲಿಸಿದ್ದಾರೆ.
Karnataka Districts Oct 5, 2019, 12:01 PM IST
ಜಿಲ್ಲೆಯ ನೆರೆ ಸಂತ್ರಸ್ತರ ಪರಿಹಾರ ಕಾರ್ಯಕ್ಕೆ ಈಗಾಗಲೇ 230 ಕೋಟಿ ಬಿಡುಗಡೆ ಮಾಡಲಾಗಿದ್ದು, ಮತ್ತೆ ತಕ್ಷಣವೇ 100 ಕೋಟಿ ಬಿಡುಗಡೆ ಮಾಡುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
Karnataka Districts Oct 5, 2019, 10:42 AM IST
ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆಗೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶುಕ್ರವಾರ ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ರೈತರ ಪ್ರತಿಭಟನೆಯ ಬಿಸಿತಟ್ಟಿತು. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ಸಿಎಂ ಯಡಿಯೂರಪ್ಪಗೆ ಘೇರಾವ್ ಹಾಕಿದರೆ, ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಮನವಿ ಸಲ್ಲಿಸಬೇಕೆಂದು ಕಾರು ತಡೆಯಲು ರೈತರು ಯತ್ನಿಸಿದ ಘಟನೆಗಳು ಜರುಗಿವೆ.
Karnataka Districts Oct 5, 2019, 9:06 AM IST
ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆ ಪರಿಹಾರ ಹಣವನ್ನು ಇಂದು [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
News Oct 4, 2019, 8:32 PM IST
ನಾನು ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ. ಯಾವ ಶಕ್ತಿಯೂ ನಮ್ಮನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಕೇಂದ್ರದಿಂದ ನೀಡಿರುವ ನೋಟಿಸ್ ಇನ್ನೂ ಸಿಕ್ಕಿಲ್ಲ. ನೋಟಿಸ್ ಸಿಕ್ಕ ಮೇಲೆ ಚರ್ಚಿಸಿ ಸೂಕ್ತ ಉತ್ತರ ಕೊಡುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
News Oct 4, 2019, 8:09 PM IST
ನೆರೆ ಪ್ರವಾಹದಿಂದ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಪರಿಹಾರಕ್ಕಾಗಿ ಜನರು ಪ್ರತಿ ದಿನ ಕಾಯುತ್ತಲೇ ಇದ್ದಾರೆ. ಈ ಎಲ್ಲ ಸುದ್ದಿಗಳ ನಡುವೆ ಹವಾಮಾನ ಇಲಾಖೆ ಕೊಟ್ಟಿರುವ ಈ ಸುದ್ದಿ ಅರಗಿಸಿಕೊಳ್ಳಲೇಬೇಕು.
Karnataka Districts Oct 4, 2019, 6:22 PM IST
ಬೆಂಗಳೂರು, (ಅ.4): ನೆರೆ ಬಂದು ಎರಡು ತಿಂಗಳುಗಳೇ ಕಳೆಯಿತು ವಿನಃ ಕೇಂದ್ರದಿಂದ ಒಂದು ಪೈಸೆಯು ಪರಿಹಾರ ಹಣ ರಾಜ್ಯಕ್ಕೆ ಬಂದಿಲ್ಲ. ಇದರ ಮಧ್ಯೆ ನೆರೆ ಪರಿಹಾರದ ಕುರಿತು ಪ್ರಶ್ನಿಸಿದವರಿಗೆ ರಾಜ್ಯ ಬಿಜೆಪಿ ಸಂಸದರು ಉದ್ದಟತನದ ಮಾತುಗಳನ್ನಾಡುತ್ತಿದ್ದಾರೆ. ಇದು ಸಾರ್ವಜನಿಕರ ಆಕ್ರೋಶವನ್ನು ಮತ್ತಷ್ಟು ಕೆರಳಿಸಿದೆ. ಇದರ ಮಧ್ಯೆ ನಟ ಪ್ರಕಾಶ್ ರಾಜ್ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಸದರನ್ನು ಲೇವಡಿ ಮಾಡಿದ್ದಾರೆ. ಹಾಗಾದ್ರೆ ಏನಂತ ಟ್ವೀಟ್ ಮಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.
News Oct 4, 2019, 6:16 PM IST
ಬೆಳಗಾವಿ (ಅ.04) : ಎಕರೆಗೆ ಒಂದು ಲಕ್ಷ ರೂಪಾಯಿ ಪರಿಹಾರ ಕೇಳಿದ ಸಂತ್ರಸ್ತ ರೈತರಿಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಉಡಾಫೆ ಉತ್ತರ ಕೊಟ್ಟಿದ್ದಾರೆ. ನಂದು 100 ಎಕರೆ ಜಮೀನಿದೆ. 80 ಎಕ್ಕರೆ ಕಬ್ಬು ಮುಳುಗಡೆಯಾಗಿದೆ ಪರಿಹಾರ ಕೊಟ್ಟರೆ 1 ಕೋಟಿ ಆಗುತ್ತದೆ. ಕೊಡಲು ಸಾಧ್ಯವೆ ಎಂದು ದುರಂಕಾರದ ಮಾತುಗಳನ್ನಾಡಿದ್ದಾರೆ. ಇನ್ನು ದೊಡ್ಡದೊಡ್ಡದಾಗಿ ಮಾತನಾಡಿದ್ದಾರೆ ಅದನ್ನು ವಿಡಿಯೋದಲ್ಲಿ ಅವರ ಬಾಯಿಂದಲೇ ಕೇಳಿ.
News Oct 4, 2019, 5:42 PM IST
ರಾಜ್ಯದ ಖಜಾನೆ ಖಾಲಿಯಾಗಿದೆ ಎಂಬ ಸಿಎಂ ಯಡಿಯೂರಪ್ಪ ಹೇಳಿಕೆಗೆ ಕಾಂಗ್ರೆಸ್ ನಾಯಕ ಆರ್.ಬಿ ತಿಮ್ಮಾಪುರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯದ ನೆರೆ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಬಳಿ ಕೇಳಲು ಶಕ್ತಿ ಇಲ್ಲ. ಪರಿಹಾರ ಕೊಡಿಸಲು ಸಾಧ್ಯವಾಗುವುದಿಲ್ಲ ಎನ್ನುವುದಾದರೆ, ಸಿಎಂ ಕುರ್ಚಿ ಬಿಟ್ಟು ಮನೆಗೆ ತೆರಳಿ ಎಂದು ಆಗ್ರಹಿಸಿದ್ದಾರೆ.
Karnataka Districts Oct 4, 2019, 4:59 PM IST
ನೆರೆ ಪರಿಹಾರದಲ್ಲಿ ಕೇಂದ್ರ ಸರ್ಕಾರದ ವಿಳಂಬಕ್ಕೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಪಕ್ಷದಿಂದ ನೋಟಿಸ್ ಜಾರಿ ಮಾಡಲಾಗಿದೆ.
News Oct 4, 2019, 4:49 PM IST
ರಾಜ್ಯ ಬೊಕ್ಕಸ ಖಾಲಿಯಾಗಿದೆ, ನೆರೆ ಪರಿಹಾರಕ್ಕೆ ದುಡ್ಡಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿರುವ ಬೆನ್ನಲ್ಲಿ ಪ್ರತಿಪಕ್ಷಗಳು ವಾಗ್ದಾಳಿ ಆರಂಭಿಸಿವೆ. ನಿಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಒಪ್ಪಿಕೊಂಡ ನಂತರ ಒಂದು ಕ್ಷಣ ಕೂಡಾ ಅಧಿಕಾರದಲ್ಲಿ ಮುಂದುವರಿಯುವ ಅರ್ಹತೆ ನಿಮಗಿಲ್ಲ. ದಯವಿಟ್ಟು ರಾಜೀನಾಮೆ ಕೊಟ್ಟು ಹೊರಟುಬಿಡಿ. ನಿಮ್ಮ ಅಸಾಮರ್ಥ್ಯಕ್ಕಾಗಿ ರಾಜ್ಯದ ಜನರನ್ನು ಶಿಕ್ಷಿಸಬೇಡಿ, ಎಂದು ಸಿದ್ದರಾಮಯ್ಯ ಹೇಳಿದರು.
News Oct 4, 2019, 4:27 PM IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅ.5ರಂದು ಮ.2.30ಕ್ಕೆ ಯಾದಗಿರಿ ಜಿಲ್ಲೆಗೆ ಆಗಮಿಸಿ, ಪ್ರವಾಹದಿಂದ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರು ತಿಳಿಸಿದ್ದಾರೆ.
Karnataka Districts Oct 4, 2019, 2:27 PM IST
ನೆರೆ ಪರಿಹಾರ ಪರಿಶೀಲನೆಗೆ ಬೆಳಗಾವಿಗೆ ತೆರಳಿರುವ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಪ್ರತಿಭಟನೆಯ ಬಿಸಿ ತಾಗಿದೆ. ಸಿಎಂ ಕಾಟಾಚಾರಕ್ಕಾಗಿ ಅಹವಾಲು ಸ್ವೀಕರಿಸುತ್ತಿದ್ದಾರೆ ಎಂದು ಆರೋಪಿಸಿದ ರೈತರು, ರಾಜ್ಯದ 25 ಸಂಸದರು ಸತ್ತಿದ್ದಾರೆ, ಎಂದು ಆಕ್ರೋಶ ವ್ಯಕ್ತಪಡಿಸಿದರು. ನೆರೆ ಪರಿಹಾರ ಕೊಡಲು ಸರ್ಕಾರ ವಿಫಲವಾಗಿದೆ ಎಂದು ರೈತರು ಸಿಎಂಗೆ ಘೇರಾವ್ ಹಾಕಲು ಮುಂದಾಗಿದ್ದಾರೆ. ಆ ವೇಳೆ, ಪ್ರತಿಭಟನಾನಿರತ ರೈತರನ್ನು ಬಂಧಿಸಿರುವ ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ.
News Oct 4, 2019, 2:24 PM IST