ಪಡಿತರ ರಾಗಿಯನ್ನು ಅಕ್ರಮವಾಗಿ ಮಾರಾಟ ಮಾಡಲು ತೆಗೆದುಕೊಂಡು ಹೊಗುತ್ತಿದ್ದ ವೇಳೆ ಸಾರ್ವಜನಿಕರೇ ಹಿಡಿದು ಅಧಿಕಾರಿಗಳಿಗೆ ಒಪ್ಪಿಸಿದ್ದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಚಾಂಪಲ್ಲಿ ಗ್ರಾಮದಲ್ಲಿ ಫೆಬ್ರವರಿ ತಿಂಗಳಲ್ಲಿ ಘಟನೆ ನಡೆದಿತ್ತು.
Karnataka Districts Apr 1, 2024, 10:30 PM IST
ರಾಜ್ಯ ಸರ್ಕಾರಕ್ಕೆ ಹೊಸ ಪಡಿತರ ಚೀಟಿ ವಿತರಣೆ ದೊಡ್ಡ ತಲೆನೋವಾಗಿದೆ. ಈಗಾಗಲೇ ರಾಜ್ಯದಲ್ಲಿ ಅಂದಾಜನ್ನು ಮೀರಿ ಬಿಪಿಎಲ್ ಕಾರ್ಡ್ಗಳು ವಿತರಣೆಯಾಗಿವೆ. ಒಂದು ಕಡೆ ಹೊಸ ರೇಷನ್ ಕಾರ್ಡ್ಗೆ ಬೇಡಿಕೆ ಹೆಚ್ಚುತ್ತಿದ್ದರೆ, ಇನ್ನೊಂದು ಕಡೆ ಅನರ್ಹರು ಕೂಡ ಬಿಪಿಎಲ್ ಪಡಿತರ ಚೀಟಿ ಪಡೆದು ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಅವರನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ತಲೆ ನೋವಾಗಿದೆ. ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ಲಕ್ಷಾಂತರ ಪಡಿತರ ಚೀಟಿ ರದ್ದು ಪಡಿಸಲಾಗಿದೆ.
Karnataka Districts Mar 8, 2024, 1:29 PM IST
ಕಳೆದ ಸರ್ಕಾರದ ಅವಧಿಯಲ್ಲೇ ಹೊಸ ಪಡಿತರ ಚೀಟಿಗಾಗಿ 2.95 ಲಕ್ಷ ಅರ್ಜಿಗಳು ಬಂದಿವೆ. ಇದರಲ್ಲಿ ಈಗಾಗಲೇ 57 ಸಾವಿರ ಕಾರ್ಡು ಗಳನ್ನು ವಿತರಿಸಲಾಗಿದೆ. ಉಳಿದ ಅರ್ಜಿಗಳನ್ನು ಪರಿಶೀಲಿಸಿ ಮಾ.31ರೊಳಗೆ ಅರ್ಹರಿಗೆ ಪಡಿತರ ಚೀಟಿ ವಿತರಿಸಲಾಗುವುದು. ಈ ಕೆಲಸ ಮುಗಿದ ನಂತರ ಏಪ್ರಿಲ್ನಲ್ಲಿ ಮತ್ತೆ ಹೊಸ ಪಡಿತರ ಕಾರ್ಡುಗಳಿಗೆ ಅರ್ಜಿ ಆಹ್ವಾನಿಸಲಾಗುವುದು ಎಂದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ
state Feb 16, 2024, 12:39 PM IST
ರಾಜ್ಯ ಸರ್ಕಾರದಿಂದ ತೃತೀಯ ಲಿಂಗಿಗಳಿಗೂ ರೇಷನ್ ಕಾರ್ಡ್ ವಿತರಣೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಆವಕಾಶ ಮಾಡಿಕೊಡಿ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
state Dec 11, 2023, 6:37 PM IST
ಕಾಂಗ್ರೆಸ್ ಸರ್ಕಾರ ಚುನಾವಣೆ ವೇಳೆ ರಾಜ್ಯದ ಪಡಿತರ ಚೀಟಿದಾರರಿಗೆ ತಲಾ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿ ಇದೀಗ ಅಕ್ಕಿ ಪೂರೈಸಲಾಗದೆ ಪೇಚಿಗೆ ಸಿಲುಕಿದೆ. ಗ್ಯಾರೆಂಟಿ ನೀಡೋ ಭರದಲ್ಲಿ ರಾಜ್ಯ ಸರ್ಕಾರ ಘೋಷಿಸಿದ್ದ ಐದು ಕೆಜಿ ಅಕ್ಕಿ ಇಲ್ಲಿವರೆಗೆ ಬಂದಿಲ್ಲ. ಇತ್ತ ಕೇಂದ್ರದಿಂದ ಬರೋ ಐದು ಕೆಜಿ ಅಕ್ಕಿ ವಿತರಣೆಯಿಂದ ಮತ್ತು ಅದರಿಂದ ಬರೋ ಕಮಿಷನ್ ನಿಂದ ಪಡಿತರ ಅಂಗಡಿ ನಡೆಸೋದು ಕಷ್ಟಕರವಾಗಿದೆ ಅಂತಿರೋ ವಿತರಕರು\
state Nov 3, 2023, 2:26 PM IST
ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ನ್ಯಾಯಬೆಲೆ ಅಂಗಡಿ ಮಾಲೀಕರು ರಾಜ್ಯಾದ್ಯಂತ ಪಡಿತರ ಎತ್ತುವಳಿ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಪ್ರಸಕ್ತ ತಿಂಗಳು ಪಡಿತರ ಆಹಾರ ಹಂಚಿಕೆಯಲ್ಲಿ ವಿಳಂಬವಾಗುವ ಸಾಧ್ಯತೆ ಇದೆ.
state Nov 3, 2023, 7:23 AM IST
ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಪಡಿತರ ಆಹಾರ ಧಾನ್ಯವನ್ನು 90 ವರ್ಷ ಮೇಲ್ಪಟ್ಟಿರುವ ಹಿರಿಯ ನಾಗರಿಕರ ಮನೆ ಬಾಗಿಲಿಗೆ ತಲುಪಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದ್ದು, ನವೆಂಬರ್ನಲ್ಲಿ ಅಧಿಕೃತವಾಗಿ ಈ ಯೋಜನೆ ಜಾರಿಗೊಳ್ಳುವ ಸಾಧ್ಯತೆ ಇದೆ.
state Oct 27, 2023, 4:00 AM IST
ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸದೆ ಇರುವುದು ಸೇರಿದಂತೆ ತಾಂತ್ರಿಕ ಕಾರಣಗಳಿಂದ ಅನ್ನಭಾಗ್ಯದ ಹಣ ತಲುಪಿಲ್ಲ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳು ಜಿಲ್ಲೆಯಲ್ಲಿ ಈ ಬಗ್ಗೆ ಪಡಿತರ ಚೀಟಿದಾರರಿಗೆ ತಿಳಿ ಹೇಳುತ್ತಿದ್ದಾರೆ. ಕೆಲವರು ಬ್ಯಾಂಕ್ ಖಾತೆ ತೆರೆಯಲು, ಇ-ಕೆವೈಸಿ ಲಿಂಕ್ ಮಾಡಿಸಲು ನಿತ್ಯ ಬ್ಯಾಂಕ್ ಮತ್ತು ಇಂಟರ್ ನೆಟ್ ಸೆಂಟರ್ಗಳಿಗೆ ಅಲೆದಾಡುತ್ತಿದ್ದಾರೆ.
Karnataka Districts Oct 19, 2023, 8:45 PM IST
ರಾಜ್ಯದಲ್ಲಿ ರೇಷನ್ ಕಾರ್ಡ್ ಹೊಂದಿದ್ದರೂ 6 ತಿಂಗಳಿಂದ ರೇಷನ್ ಪಡೆಯದ 3.26 ಲಕ್ಷ ಪಡಿತರ ಚೀಟಿಯನ್ನು ರದ್ದುಗೊಳಿಸಲು ಸರ್ಕಾರ ಆದೇಶ ಹೊರಡಿಸಿದೆ.
state Oct 17, 2023, 9:12 PM IST
ಆಂಧ್ರಪ್ರದೇಶ ರಾಜ್ಯದಲ್ಲಿ ಮನೆ ಬಾಗಿಲಿಗೆ ಪಡಿತರ ನೀಡುವಂತೆ, ಕರ್ನಾಟಕದಲ್ಲಿ ಪಡಿತರ ಚೀಟಿ ಹೊಂದಿರುವ ಹಿರಿಯ ನಾಗರಿಕರಿಗೆ ಮನೆ ಬಾಗಲಿಗೆ ಪಡಿತರ ವಿತರಿಸಲು ಸರ್ಕಾರ ಮುಂದಾಗಿದೆ.
state Oct 13, 2023, 1:48 PM IST
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಸ್ಥಗಿತಗೊಳಿಸುವುದಿಲ್ಲ, ನೋಂದಣಿ ಪ್ರಕ್ರಿಯೆ ನಿರಂತರವಾಗಿರಲಿದೆ ಎಂದು ಸ್ವಷ್ಟಪಡಿಸುತ್ತಾರೆ, ಆದರೆ ತಿಂಗಳುಗಟ್ಟಲೇ ಅಲೆದಾಡಿದರು ನೋಂದಣಿ ಆಗುತ್ತಿಲ್ಲ. ಇದರಿಂದಾಗಿ ಅರ್ಹ ಫಲಾನುಭವಿಗಳು ಯೋಜನೆಯಿಂದ ವಂಚಿತರಾಗುತ್ತಿದ್ದಾರೆ.
Karnataka Districts Oct 8, 2023, 2:15 AM IST
ಕರ್ನಾಟಕದ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆಯ ಹಣವನ್ನು ಕಡಿತಗೊಳಿಸಿದ ಕಾಂಗ್ರೆಸ್ ಸರ್ಕಾರ, ಅಕ್ಟೋಬರ್ನಿಂದ 10 ಕೆ.ಜಿ. ಅಕ್ಕಿ ಕೊಡಲಿದೆ.
state Sep 28, 2023, 1:33 PM IST
ಕೆಲವು ಅಧಿಕಾರಿಗಳು ಮತ್ತು ಲೋಕಲ್ ಲೀಡರ್ ಗಳೆಂದು ಹೇಳಿಕೊಳ್ಳುವ ಪುಡಾರಿಗಳು ಹಕ್ಕುಪತ್ರ, ಮಾಸಾಶನ, ಪಡಿತರ ಚೀಟಿಗಳಿಗಾಗಿ ಲಂಚ ಕೇಳುತ್ತಿರುವುದು ತಿಳಿದು ಬಂದಿದೆ. ಯಾರು ಯಾರಿಗೂ ಲಂಚ ಕೊಡಬೇಡಿ, ಅಂತವರಿದ್ದರೆ ನನ್ನ ಗಮನಕ್ಕೆ ತನ್ನಿ ಅವರ ವಿರುದ್ದ ನಾನು ಕ್ರಮ ಕೈಗೊಳ್ಳುತ್ತೇನೆ ಎಂದು ಶಾಸಕ ಪ್ರದೀಪ್ ಈಶ್ವರ್ ಜನತೆಗೆ ಮನವಿ ಮಾಡಿದರು.
Politics Sep 21, 2023, 1:59 PM IST
ರಾಜ್ಯ ಸರ್ಕಾರ ಘೋಷಿಸಲಿರುವ ಬರಪೀಡಿತ ತಾಲೂಕುಗಳ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪೂರ್ಣ 10 ಕೆ.ಜಿ. ಅಕ್ಕಿ ನೀಡಲು ತೀರ್ಮಾನಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
state Sep 5, 2023, 5:03 AM IST
23ರಿಂದ ಎಲ್ಲ ಸಮಸ್ಯೆಗಳು ಸರಿಹೋಗಲಿದೆ ಸರ್ವರ್ ಸಮಸ್ಯೆ ಇರುವುದಿಲ್ಲ ನಿರಂತರವಾಗಿ ಗ್ರಾಹಕರು ಪಡಿತರ ಕಾರ್ಡುಗಳಲ್ಲಿನ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬಹುದೆಂದು ಜಿಲ್ಲಾ ಆಹಾರ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದರು. ಇನ್ನೇನು ಸರ್ವರ್ ಸಮಸ್ಯೆ ಇರುವುದಿಲ್ಲ ನೆಮ್ಮದಿಯಾಗಿ ಪಡಿತರ ಕಾರ್ಡುಗಳಲ್ಲಿ ಹಲವು ಬಗೆಯ ಬದಲಾವಣೆಗಳನ್ನು ಮಾಡಿಸಿಕೊಳ್ಳಬಹುದು ಎಂದು ಬಾವಿಸಿದ್ದವರಿಗೆ ಮತ್ತೆ ನಿರಾಶೆ ಮೂಡಿದೆ.
Karnataka Districts Aug 26, 2023, 11:15 PM IST