ನಗರದ ಲಾಡ್ಜ್ ಒಂದರಲ್ಲಿ ರೂಂ ಬುಕ್ ಮಾಡಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಗ್ಯಾಂಗ್ ಮೇಲೆ ಬಳ್ಳಾರಿ ಗಾಂಧಿನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಶೋಕ್ ಮತ್ತು ಹರೀಶ್ ಕುಮಾರ್ ಬಂಧಿತ ಆರೋಪಿಗಳು
CRIME Apr 14, 2024, 10:42 AM IST
ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ದೊರೆಯುವ ₹2 ಸಾವಿರ ಕೂಡಿಟ್ಟುಕೊಂಡು ಸಂಗನಕಲ್ಲು ಗ್ರಾಮದ ಜೆ.ಅರುಣಾ ಹಾಗೂ ಬಸವರಾಜ್ ಬಡ ದಂಪತಿ ಯುಗಾದಿ ಹಬ್ಬಕ್ಕೆ ಹೊಸ ಟಿವಿ ಖರೀದಿಸಿದ್ದಾರೆ.
state Apr 11, 2024, 2:36 PM IST
ನಾವು ಯಾವತ್ತೂ ನ್ಯಾಯದ ಪರ ನಿಲ್ಲುತ್ತೇವೆ. ಸಂಡೂರು ಶಾಸಕರಾಗಿರುವ ತುಕಾರಾಂ ಕೂಡ ನ್ಯಾಯದ ಪರ ಇದ್ದಾರೆ. ಈಗಾಗಲೇ ಕಾಂಗ್ರೆಸ್ ಪಕ್ಷ ಬಡವರ ಪರವಾಗಿ ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಂತೆ ಪಂಚ ಗ್ಯಾರಂಟಿಗಳನ್ನು ಜಾರಿ ಮಾಡಿದ್ದಾರೆ. ಆದರೆ, ಬಿಜೆಪಿ ಸುಳ್ಳಿನ ಸರಮಾಲೆಯ ಪಕ್ಷವಾಗಿದೆ ಎಂದ ಸಚಿವ ಬಿ.ನಾಗೇಂದ್ರ
Politics Apr 10, 2024, 7:05 AM IST
ಗ್ರಾಮ ಇವತ್ತು ಅಕ್ಷರಶಃ ಬೆಂಕಿ ಉಂಡೆಯಾಗಿದೆ. ಸಹೋದರರಂತಿದ್ದ ಜನರ ಮಧ್ಯೆ ಜಾತಿ ಬೀಜ ಮೊಳಕೆ ಹೊಡೆದಿದೆ. ಒಂದೇ ಒಂದು ಪ್ರತಿಮೆಗಾಗಿ ಕೈಯಲ್ಲಿ ಕಲ್ಲು ಹಿಡಿದುಕೊಂಡು ಒಬ್ಬರ ಮೇಲೆ ಒಬ್ಬರು ಎಸೆಯುತ್ತಿದ್ದಾರೆ.
CRIME Apr 9, 2024, 11:56 AM IST
ಗ್ರಾಮದಲ್ಲಿ ಎರ್ರಿತಾತಾ ದೇವಸ್ಥಾನದ ಆವರಣದಲ್ಲಿ ಹೊಸದಾಗಿ ದೇವಸ್ಥಾನ ನಿರ್ಮಾಣ ಹಾಗೂ ಎರ್ರಿತಾತಾ ಮೂರ್ತಿ ಪ್ರತಿಷ್ಠಾಪನೆ ಮಾಡದಂತೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅಲ್ಲದೆ ಏ.5ರಂದು ಕೋರ್ಟ್ ಆದೇಶದ ಮೇರೆಗೆ ಮೂರ್ತಿ ಪ್ರತಿಷ್ಠಾಪನೆ ಮಾಡಿದವರಿಂದಲೇ ಅದನ್ನು ತೆರವುಗೊಳಿಸಲಾಗಿತ್ತು. ಆ ಬಳಿಕ ಗ್ರಾಮದಲ್ಲಿ ದ್ವೇಷಮಯ ವಾತಾವರಣ ನಿರ್ಮಾಣವಾಗಿತ್ತು.
Karnataka Districts Apr 9, 2024, 7:29 AM IST
ಬಳ್ಳಾರಿ (ಏ.07): ರಾಜ್ಯದ ಗಣಿನಾಡು ಬಳ್ಳಾರಿ ಬ್ರೂಸ್ಪೇಟೆ ಮನೆಯೊಂದರಲ್ಲಿ ದಾಖಲೆಗಳಿಲ್ಲದೇ 5 ಕೋಟಿ ರೂ. ಮೊತ್ತದ ನಗದು ಹಾಗೂ 2 ಕೋಟಿ ರೂ. ಮೌಲ್ಯದ 3 ಕೆ.ಜಿ ಬಂಗಾರ, 103 ಕೆ.ಜಿ. ಬೆಳ್ಳಿ ಹಾಗೂ 21 ಕೆ.ಜಿ. ಕಚ್ಚಾ ಬೆಳ್ಳಿ ಗಟ್ಟಿಯನ್ನು ಮನೆಯಲ್ಲಿ ಇಟ್ಟುಕೊಂಡಿದ್ದಾನೆ. ಸೂಕ್ತ ಮಾಹಿತಿ ಆಧರಿಸಿ ಬಳ್ಳಾರಿ ಪೊಲೀಸರು ನರೇಶ್ ಎಂಬುವವರ ಮನೆ ಮೇಲೆ ದಾಳಿ ಮಾಡಿದಾಗ ಪತ್ತೆಯಾದ ಎಲ್ಲ ಹಣ, ಚಿನ್ನ, ಬೆಳ್ಳಿಯನ್ನು ವಶಕ್ಕೆ ಪಡೆಯಲಾಗಿದೆ.
BUSINESS Apr 7, 2024, 5:48 PM IST
ನಾನು ಕಾಂಗ್ರೆಸ್ ಪಕ್ಷದಲ್ಲಿ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇನೆ. ನನ್ನ ಸಹಕಾರದಿಂದಲೇ ಅವರು(ಶ್ರೀರಾಮುಲು) ಹಿಂದೆ ಮಂತ್ರಿಯಾಗಿದ್ದರು. ಯಾರನ್ನೂ ಯಾರೂ ಬೆಳೆಸೋಕೆ ಆಗೊಲ್ಲ. ಗುಂಪು ಇದ್ದಾಗ ಎಲ್ಲರೂ ಒಟ್ಟಾಗಿದ್ದೆವು, ಈಗ ಮಾತಾಡ್ತೀರಾ? ಎಂದು ಬಳ್ಳಾರಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲುಗೆ ಸಚಿವ ನಾಗೇಂದ್ರ ತಿರುಗೇಟು ನೀಡಿದರು.
Politics Apr 7, 2024, 4:56 PM IST
ರಾಜ್ಯದಲ್ಲಿರುವ ಶಾಸಕರಿಗೆ ₹2 ಕೋಟಿ ಅನುದಾನ ನೀಡಬೇಕಿತ್ತು. ಆದರೆ ಕೇವಲ ₹50 ಲಕ್ಷ ಅನುದಾನ ನೀಡಿದ್ದಾರೆ. ಇದರಿಂದ ಯಾವ ಅಭಿವೃದ್ಧಿ ಮಾಡಲು ಸಾಧ್ಯವಿದೆ? ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಮತ್ತು ಡಿಎಂಎಫ್ ಯೋಜನೆಯ ಸುಮಾರು ₹90 ಕೋಟಿ ಅನುದಾನ ತಂದು ಹೂವಿನಹಡಗಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ: ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು
Politics Apr 7, 2024, 3:29 PM IST
ಬಳ್ಳಾರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಒಟ್ಟು 8 ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದೆರೆಡು ವಿಧಾನಸಭಾ ಕ್ಷೇತ್ರಗಳು ಹೊರತುಪಡಿಸಿದರೆ, ಉಳಿದೆಡೆ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
Politics Apr 6, 2024, 12:33 PM IST
ಬಿಜೆಪಿ ಮರಳಿದಾಗ ಮನೆ ಮಗಳಂತೆ ಸ್ವಾಗತ ಮಾಡಿರೋದು ಖುಷಿಯಾಗಿದೆ. ಕೆಆರ್ಪಿಪಿ ಪಕ್ಷ ಬಿಜೆಪಿ ಯಲ್ಲಿ ವಿಲೀನ ಮಾಡಿದ್ದೇವೆ ನಾವೆಲ್ಲ ಈಗ ಒಂದೇ ಎಂದು ಶಾಸಕ ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ ಸಂತಸ ವ್ಯಕ್ತಪಡಿಸಿದರು.
state Apr 5, 2024, 12:10 AM IST
ದಕ್ಷಿಣ ಭಾರತದ ಕರ್ನಾಟಕದಲ್ಲಿ ಮೊದಲ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲು ಜನಾರ್ದನ ರೆಡ್ಡಿ ಕಾರಣ. ಯಡಿಯೂರಪ್ಪ ಜೊತೆಗೆ ಸೇರಿ ಮೊದಲ ಸರ್ಕಾರ ರಚನೆ ಮಾಡಿದರು ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಶಾಸಕ ಜನಾರ್ದನ ರೆಡ್ಡಿಯವರನ್ನ ಹಾಡಿ ಹೊಗಳಿದರು.
Politics Apr 4, 2024, 11:42 PM IST
ಬಳ್ಳಾರಿ ನಗರ ಹೊರವಲಯದಲ್ಲಿ 60 ಜೀನ್ಸ್ ವಾಷಿಂಗ್ ಯೂನಿಟ್ಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ಪೈಕಿ ಕಳೆದ ನಾಲ್ಕೈದು ದಿನಗಳಲ್ಲಿ 20 ಯೂನಿಟ್ಗಳನ್ನು ನೀರಿಲ್ಲದೆ ಬಂದ್ ಮಾಡಲಾಗಿದೆ. ಉಳಿದವು ಟ್ಯಾಂಕರ್ ನೀರಿನ ಮೇಲೆ ಉಸಿರಾಡುತ್ತಿವೆ. ಯೂನಿಟ್ಗಳಿಗೆ ನೀರು ಪೂರೈಕೆಯಾಗುವ ಮುಂಡ್ರಗಿ ಪ್ರದೇಶದ ಬಳಿಯ ಬೋರ್ವೆಲ್ಗಳು ಬತ್ತಿ ಹೋಗುತ್ತಿರುವುದರಿಂದ ಇನ್ನು ಕೆಲವೇ ದಿನಗಳಲ್ಲಿ ಉಳಿದ ಘಟಕಗಳೂ ಬಂದ್ ಆಗುವ ಸಾಧ್ಯತೆಯಿದೆ.
BUSINESS Apr 4, 2024, 7:28 AM IST
ಇಂದು ಬಳ್ಳಾರಿ ತಾಲೂಕಿನ ಮೋಕ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಕಾಂಗ್ರೆಸ್ ಸಚಿವ ನಾಗೇಂದ್ರ ಆರುಮುಗ(ಕೆಂಪೇಗೌಡ) ಸಿನಿಮಾ ಶೈಲಿಯಲ್ಲಿ, "ಈ ಮೋಕ ನಂದು, ಈ ಮೋಕ ನಂದು ಗೆಲ್ಲು ನೋಡೋಣ ಎಂದು ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಿರುದ್ಧ ತೊಡೆ ತಟ್ಟಿ ಅಬ್ಬರಿಸಿದ್ದಾರೆ!
Politics Apr 1, 2024, 6:29 PM IST
ಈ ಚುನಾವಣೆಯಲ್ಲಿ ನಾನು ಸೋತರೆ ಮನೆಗೆ ಹೋಗುತ್ತೇನೆ. ಆದರೆ, ನನ್ನ ಎದುರಾಳಿ ಸೋತರೆ ಅವರು ಶಾಸಕರಾಗಿಯೇ ಇರುತ್ತಾರೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಹೇಳಿದರು.
Politics Apr 1, 2024, 9:48 AM IST
ನರೇಂದ್ರ ಮೋದಿ ಆಡಳಿತ ಇರೋವರೆಗೂ ನಮ್ಮ ದೇಶದಲ್ಲಿ ಯಾವ ದುಷ್ಟ ಶಕ್ತಿಯೂ ಹುಟ್ಟುವುದಿಲ್ಲ. ಉಗ್ರ ಶಕ್ತಿಗಳು, ಬಂದೂಕು ಬಟ್ಟೆಯನ್ನು ಸೂಟ್ ಕೇಸ್ ನೊಳಗೆ ಹಾಕಿಕೊಂಡಿವೆ. ನರೇಂದ್ರ ಮೋದಿ ಅವರನ್ನು ಸೋಲಿಸಲು ಚೀನಾ, ಪಾಕಿಸ್ತಾನ, ಬಾಂಗ್ಲಾದೇಶ ಸೇರಿದಂತೆ ಸುತ್ತಮುತ್ತಲಿನ ವಿರೋಧಿ ದೇಶಗಳು ಕಾಂಗ್ರೆಸ್ ಗೆ ಕೈ ಜೋಡಿಸಿವೆ. ಶತ್ರು ದೇಶಗಳು ತಮ್ಮ ಕೃತ್ಯವನ್ನು ಗಡಿ ಭಾಗದಿಂದ ಒಳಗೆ ಬರುವ ಸಂಚು ಹಾಕಿಕೊಂಡಿವೆ. ಕೇಂದ್ರದಲ್ಲಿ ಮೋದಿಯನ್ನು ಸೋಲಿಸಲು ಯಾವ ಗಂಡಿನಿಂದಲೂ ಸಾಧ್ಯವಿಲ್ಲ ಎಂದ ಆನಂದ್ ಸಿಂಗ್
Politics Mar 31, 2024, 10:41 AM IST