ರಾಜ್ಯದ ಮುಖ್ಯಮಂತ್ರಿಗಳು ಜ್ಯೋತಿಷ್ಯ ಹೇಳೋಕೆ ಶುರು ಮಾಡಿದ್ದಾರೆ. ಈಗಾಗಲೇ ಮಂಡ್ಯದಲ್ಲಿ ನನ್ನನ್ನು ಸೋಲುತ್ತಾರೆ ಎಂದು ಜ್ಯೋತಿಷ್ಯ ಹೇಳಿದ್ದಾರೆ. ಉಳಿದವರ ಸೋಲು ಗೆಲುವಿನ ಬಗ್ಗೆಯೂ ಅವರನ್ನೇ ಕೇಳಿ ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.
Politics Mar 29, 2024, 12:01 PM IST
ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಸಮನ್ವಯತೆಯಿಂದ ಕೆಲಸ ಮಾಡಿ, ರಾಜ್ಯದ ಎಲ್ಲಾ 28 ಸ್ಥಾನಗಳ ಗೆಲುವಿಗೆ ಶ್ರಮಿಸುವ ಒಕ್ಕೊರಲಿನ ತೀರ್ಮಾನವನ್ನು ಸಭೆ ಕೈಗೊಂಡಿತು. ಮಂಡ್ಯದಲ್ಲಿ ಜೆಡಿಎಸ್ ಸ್ಪರ್ಧೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ನಾರಾಯಣಗೌಡ ಕೂಡಸಭೆಯಲ್ಲಿ ಪಾಲ್ಗೊಂಡಿದ್ದರು.
Politics Mar 29, 2024, 10:30 AM IST
ಕಾಂಗ್ರೆಸ್ ಜಾತಿ-ಜಾತಿಗಳ ನಡುವೆ ಸಂಘರ್ಷ ಸೃಷ್ಟಿ ಸುತ್ತಿದೆ. ಬಿಜೆಪಿ-ಜೆಡಿಎಸ್ ರಾಜ್ಯದಲ್ಲಿ ಒಂದಾಗುತ್ತಿದ್ದಂತೆ ಕಾಂಗ್ರೆಸ್ಗೆ ನಿದ್ರೆ ಬರುತ್ತಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ತತ್ತರಿಸಿ ಹೋಗಿದ್ದಾರೆ. ಭಯದಿಂದ ಮಂತ್ರಿಯಾಗಿರುವ ವರು ಚುನಾವಣೆ ಅಭ್ಯರ್ಥಿ ಆಗಲಿಲ್ಲ. ಜನರಿಂದ ಜನರಿ ಗಾಗಿ ಇರುವ ಕುಮಾರಸ್ವಾಮಿ ಮಂಡ್ಯದಿಂದ ಸಂಸದರಾಗಬೇಕು ಎಂದು ಆಶಯ ವ್ಯಕ್ತಪಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
Politics Mar 29, 2024, 9:48 AM IST
ಸುಮಲತಾ ಮೌನ ನಡೆಗೆ ಮೈತ್ರಿ ನಾಯಕರು ಮುನಿಸು ಪ್ರದರ್ಶಿಸುತ್ತಿರುವಂತೆ ಕಂಡು ಬರುತ್ತಿದೆ. ಹೀಗಾಗಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕೆ.ಸಿ.ನಾರಾಯಣಗೌಡ ಅವರೂ ಸಹ ಸುಮಲತಾ ಹೆಸರನ್ನು ಸ್ಮರಿಸುವ ಗೋಜಿಗೂ ಹೋಗಲಿಲ್ಲ.
Politics Mar 29, 2024, 8:00 AM IST
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದು ಖಚಿತವಾಗಿದೆ. 1996ರಲ್ಲಿ ಮೊದಲ ಬಾರಿಗೆ ಆಗಿನ ಕನಕಪುರ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಮೂಲಕ ಚುನಾವಣಾ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ ಕುಮಾರಸ್ವಾಮಿ.
Politics Mar 29, 2024, 6:03 AM IST
ನಾನು ಪಲಾಯನವಾದಿಯಲ್ಲ. ಪಕ್ಷದ ಮುಖಂಡರು, ಕಾರ್ಯಕರ್ತರ ಒತ್ತಡಕ್ಕೆ ಮಣಿದು, ಜನರ ಅಪೇಕ್ಷೆಗೆ ತಲೆಬಾಗಿ ಮಂಡ್ಯ ಕ್ಷೇತ್ರವನ್ನು ಪ್ರತಿನಿಧಿಸಲು ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
Politics Mar 29, 2024, 4:23 AM IST
ಕಾಂಗ್ರೆಸ್ ನಾಯಕರು ಒಳಗೋ, ಹೊರಗೋ ಏನು ಬೇಕಾದರೂ ಯೋಜನೆ ರೂಪಿಸಿಕೊಳ್ಳಲಿ. ಆದರೆ ಮಂಡ್ಯದ ಜನ ನನಗೆ ಒತ್ತಡ ಹಾಕಿದ್ದಾರೆ. ನಾನೊಬ್ಬ ಕನ್ನಡಿಗ, ನನಗೆ ಮಂಡ್ಯ ಕ್ಷೇತ್ರ ರಾಜಕೀಯವಾಗಿ ಶಕ್ತಿ ತುಂಬಲಿದೆ ಎಂದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ
Politics Mar 28, 2024, 11:16 AM IST
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಮಗನೇ ಸೋತಿಲ್ಲವೇ? ಮುಖ್ಯಮಂತ್ರಿ ಆಗಿದ್ದಾಗಲೇ ಮಗನನ್ನ ಗೆಲ್ಲಿಸಿಕೊಳ್ಳಲು ಆಗಲಿಲ್ಲ. ಈಗ ಹೇಗೆ ಗೆಲ್ಲೋಕೆ ಆಗುತ್ತದೆ? ಕುಮಾರಸ್ವಾಮಿ ಸೋಲುವುದಂತು ಗ್ಯಾರಂಟಿ. ಚುನಾವಣೆ ಸಂಬಂಧ ಸುಮಲತಾ ಜೊತೆ ಮಾತನಾಡಿಲ್ಲ. ನಮ್ಮ ಅಭ್ಯರ್ಥಿ ಸ್ಟ್ರಾಂಗ್ ಇದ್ದಾರೆ. ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿಯನ್ನು ನಾವು ಸೋಲಿಸುತ್ತೇವೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
Politics Mar 28, 2024, 7:30 AM IST
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಹಾಗೂ ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗರ ಟ್ರಂಪ್ ಕಾರ್ಡ್ ಪ್ಲೇ ಆಗುತ್ತಿದೆ. ಮತದಾರರು ಮರುಳಾಗದೇ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡರಿಗೆ ಮತ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು.
Politics Mar 28, 2024, 7:03 AM IST
ಎಚ್ಡಿಕೆ ಅವರ ಮನೆಯಲ್ಲಿ ಏನು ನಡೆಯುತ್ತೆ ಅನ್ನೋದು ಗೊತ್ತಾಗುತ್ತೆ. ಚನ್ನಪಟ್ಟಣದಲ್ಲಿ ಎಚ್ಡಿಕೆ ಹಾಗೂ ಸಿಪಿವೈ ಇವರನ್ನ ಒದ್ದು ಓಡಿಸೋಣ ಅಂತ ಅವರು, ಅವರನ್ನ ಒದ್ದು ಓಡಿಸೋಣ ಅಂತ ಇವರು ನಿಂತಿದ್ದಾರೆ. ಇವರೇನೋ ಎಲ್ಲೋ ಹೋಗಿ ಅಡ್ಜಸ್ಟ್ ಆಗ್ತಾರೆ. ಆದ್ರೆ ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರ ಕಥೆ ಏನು? ಕಾರ್ಯಕರ್ತರು ನಿಜವಾಗಿಯೂ ಬಲಿಪಶು ಆಗುತ್ತಾರೆ: ಶಾಸಕ ಎಚ್.ಸಿ.ಬಾಲಕೃಷ್ಣ
Politics Mar 27, 2024, 2:38 PM IST
ಮಂಡ್ಯ ಕಾಂಗ್ರೆಸ್ ಶಾಸಕ ರವಿ ಗಣಿಗ ಅವರನ್ನು ಕೋರ್ಟ್ ವಶಕ್ಕೆ ಪಡೆದು ಜಾಮೀನು ನೀಡಿ ಬಿಡುಗಡೆ ಮಾಡಿದ ಘಟನೆ ನಡೆದಿದೆ. ಅಶೋಕ್ ಖೇಣಿಗೆ ನಿಂದಿಸಿದ್ದ ಪ್ರಕರಣದಲ್ಲಿ ನ್ಯಾಯಾಲಯದ ಆದೇಶದ ಬಳಿಕ ಶಾಸಕ ರವಿ ಗಣಿಗ ಅವರನ್ನು ಕೋರ್ಟ್ ವಶಕ್ಕೆ ಪಡೆದು ಬಿಡುಗಡೆ ಮಾಡಿದೆ.
state Mar 27, 2024, 11:40 AM IST
ಮಂಡ್ಯದಿಂದ ಕುಮಾರಸ್ವಾಮಿ ಹಾಗೂ ಕೋಲಾರದಿಂದ ಮಲ್ಲೇಶ್ ಬಾಬು ಹೆಸರನ್ನು ಫೈನಲ್ ಮಾಡಲಾಗಿದೆ. ಮಂಡ್ಯದ ಜನರು ಕುಮಾರಸ್ವಾಮಿ ಅವರನ್ನು ಬಿಡುತ್ತಿಲ್ಲ. ನೀವೇ ಬನ್ನಿ ನೀವೇ ನಿಲ್ಲಬೇಕು ಎಂದು ಅಲ್ಲಿನ ಜನ ಹಠ ಮಾಡುತ್ತಿದ್ದಾರೆ. ಕುಮಾರಸ್ವಾಮಿಯವರು ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಬಂದ ಕೂಡಲೇ ಮಂಡ್ಯಕ್ಕೆ ಬನ್ನಿ ಎಂದಿದ್ದಾರೆ. ಇವತ್ತು ಕೋರ್ ಕಮಿಟಿ ಸಭೆಯಲ್ಲೂ ನೀವೇ ನಿಲ್ಲಬೇಕು ಎಂದಿದ್ದಾರೆ ಎಂದು ಹೇಳಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Politics Mar 27, 2024, 8:46 AM IST
ಮಂಡ್ಯ ಜಿಲ್ಲೆಯ ಬಿಜೆಪಿ ನಾಯಕರ ಜತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಭೆ ನಡೆಸಿ ಮುಖಂಡರಲ್ಲಿನ ಭಿನ್ನಮತ ಶಮನಗೊಳಿಸಿದರು. ಜೆಡಿಎಸ್ ಜತೆಗಿನ ಮೈತ್ರಿಯಿಂದ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಮನವೊಲಿಸಿ ಪಕ್ಷಕ್ಕಾಗಿ ದುಡಿಯುವಂತೆ ಸೂಚಿಸಿದರು.
Politics Mar 27, 2024, 8:29 AM IST
ಟಿಕೆಟ್ ಕೈತಪ್ಪಿರುವ ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಶೀಘ್ರ ಅವರನ್ನು ಭೇಟಿ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
Politics Mar 27, 2024, 6:06 AM IST
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಸ್ಪರ್ಧಿಸಲಿರುವ ಮೂರು ಕ್ಷೇತ್ರಗಳ ಪೈಕಿ ಹಾಸನ ಮತ್ತು ಮಂಡ್ಯಕ್ಕೆ ಅಭ್ಯರ್ಥಿಗಳು ಅಖೈರಾಗಿದ್ದು, ಕೋಲಾರ ಕ್ಷೇತ್ರವೊಂದು ಕೊನೆಯ ಕ್ಷಣದಲ್ಲಿ ಕಗ್ಗಂಟಾಗಿ ಪರಿಣಮಿಸಿದೆ.
Politics Mar 27, 2024, 5:38 AM IST