ರಾಜ್ಯದಲ್ಲಿ ಭೀಕರ ಬರಗಾಲದಿಂದ ರೈತರು ಕುಡಿವ ನೀರು, ಗೋವುಗಳಿಗೆ ಮೇವು ಹೊಂದಿಸಲು ಪರದಾಡುತ್ತಿದ್ದರೆ, ಸಿಎಂ ಸಿದ್ದರಾಮಯ್ಯ ಮಾತ್ರ ಊಟಿ ರೆಸಾರ್ಟ್ನಲ್ಲಿ ಮೋಜಿನಾಟ ಆಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
Politics May 9, 2024, 1:13 PM IST
ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಿಲುಕಿರುವ ಸಂತ್ರಸ್ತೆಯರ ಭವಿಷ್ಯ ಹಾಗೂ ಸಮಾಜದಲ್ಲಿ ಗೌರವವಾಗಿ ಬದುಕು ನಡೆಸುವಂತೆ ಕ್ರಮ ಕೈಗೊಳ್ಳಲು ಶಾಸಕಿ ನಯನಾ ಮೋಟಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
Karnataka Districts May 8, 2024, 2:56 PM IST
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಲು ಕಾಂಗ್ರೆಸ್ ಕಾರಣ. ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲೆಂದೇ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೀಗೆ ಪ್ಲಾನ್ ಮಾಡಿದ್ದಾರೆ. ಚಿತ್ರಕಥೆಯನ್ನು ಸುರ್ಜೇವಾಲಾ ಬರೆದಿದ್ದು, ಸಿದ್ದರಾಮಯ್ಯ ನಿರ್ದೇಶನ ಹಾಗೂ ಡಿ.ಕೆ.ಶಿವಕುಮಾರ್ ನಿರ್ಮಾಣ ಮಾಡಿದ್ದಾರೆ ಎಂದು ಲೇವಡಿ ಮಾಡಿದ ಆರ್.ಅಶೋಕ್
state May 8, 2024, 4:18 AM IST
ರಾಜ್ಯದಲ್ಲಿ ಇನ್ನೂ ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ರಾಜಕೀಯ ತಣ್ಣಗಾಗಿಲ್ಲ. ಮಂಗಳವಾರ ಕೂಡ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವೆ ಮಾತಿನ ಸಮರ ನಡೆದಿವೆ.
state May 8, 2024, 12:01 AM IST
ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣದ ಬಗ್ಗೆ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Karnataka Districts May 7, 2024, 3:30 PM IST
ಅಶ್ಲೀಲ ಪ್ರಕರಣ ತನಿಖೆಗೆ ರಚನೆಗೊಂಡಿರುವುದು SIT ಅಲ್ಲ SSS. ಸುರ್ಜೆವಾಲ, ಸಿದ್ದರಾಮಯ್ಯ, ಶಿವಕುಮಾರ್. ಇವರೆ ಸ್ಕ್ರಿಪ್ಟ್ ರೈಟರ್, ಡೈರೆಕ್ಟರ್ ಹಾೂ ಪ್ರೊಡ್ಯೂಸರ್ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
state May 7, 2024, 1:58 PM IST
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪೋಸ್ಟರ್ಗಳನ್ನು ಹಾಕಲಾಗುತ್ತಿದೆ.
Politics May 7, 2024, 12:11 PM IST
ಎರಡನೇ ಹಂತದ ಮತದಾನ ಶುರುವಾಗಿದೆ. ಈ ಬಾರಿ 17 ಅಭ್ಯರ್ಥಿಗಳು ಮೊದಲ ಬಾರಿ ಲೋಕ ಅಖಾಡದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದು, ಕದನಕಣದಲ್ಲಿ ಕಾವು ಜೋರಾಗಿದೆ. 227 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾದ್ರೆ..ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ನೇರಾ ನೇರಾ ಪೈಪೋಟಿ ಏರ್ಪಟ್ಟಿದೆ. 2.59 ಕೋಟಿ ಮಂದಿ ಮತದಾನ ಮಾಡಲಿದ್ದಾರೆ.
Politics May 7, 2024, 9:13 AM IST
ರಾಜ್ಯದಲ್ಲಿ ಎರಡನೇ ಹಾಗೂ ಅಂತಿಮ ಸುತ್ತಿನ ಲೋಕಸಭಾ ಚುನಾವಣೆ ಬಹುತೇಕ ಶಾಂತಿಯುತವಾಗಿ ಮುಗಿದಿದ್ದು, ಚುನಾವಣಾ ಅಧಿಕಾರಿಗಲು ರಾಜಕೀಯ ನಾಯಕರ ಭವಿಷ್ಯವನ್ನು ಭದ್ರವಾಗಿ ಸೀಲ್ ಮಾಡಿ, ಮಸ್ಟರಿಂಗ್ ಕೇಂದ್ರಕ್ಕೆ ಮರಳುತ್ತಿದ್ದಾರೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳ 227 ಅಭ್ಯರ್ಥಿಗಳ ಭವಿಷ್ಯಕ್ಕೆ ಮತ ಮುದ್ರೆ ಬಿದ್ದಿದೆ. ರಾಜ್ಯದಲ್ಲಿ ಶೇ. 67.76 ಹಾಗೂ ದೇಶದಲ್ಲಿ 61.46ರಷ್ಟು ಮತದಾನ ನಡೆದಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ 28,269 ಮತಗಟ್ಟೆಗಳಲ್ಲಿ ಮತದಾನ ನಡೆದಿದೆ. ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಬರೆದಾಗಿದೆ. ಚುನಾವಣಾ ಅಖಾಡದಲ್ಲಿ 227 ಅಭ್ಯರ್ಥಿಗಳ ಪೈಕಿ 206 ಪುರುಷರು, 21 ಮಹಿಳೆಯರಿದ್ದರು. ದಾವಣಗೆರೆಯಲ್ಲಿ ಗರಿಷ್ಠ 30 ಅಭ್ಯರ್ಥಿಗಳು ಮತ್ತು ರಾಯಚೂರಿನಲ್ಲಿ ಕನಿಷ್ಠ 8 ಅಭ್ಯರ್ಥಿಗಳಿದ್ದರು. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ಮತದನಾ ನಡೆದಿದೆ. ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಭಾ ಮಲ್ಲಿಕಾರ್ಜುನ್, ಗಾಯತ್ರಿ ಸಿದ್ದೇಶ್ವರ್, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸೇರಿ 227 ಅಭ್ಯರ್ಥಿಗಳು ಕಣದಲ್ಲಿದ್ದರು. 14 ಕ್ಷೇತ್ರಗಳಲ್ಲಿ 2.59 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಿದ್ದರು. ಇದರಲ್ಲಿ 1.29 ಕೋಟಿ ಪುರುಷರು, 1.29 ಕೋಟಿ ಮಹಿಳೆಯರು ಮತ್ತು 1,945 ಇತರೆ ಮತದಾರರಿದ್ದರು. 85 ವರ್ಷಕ್ಕಿಂತ ಮೇಲ್ಪಟ್ಟವರು 2.29 ಲಕ್ಷ ಮತದಾರರು, 6.90 ಲಕ್ಷ ಯುವ ಮತದಾರರಿದ್ದರು. ಒಟ್ಟು 28,269 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಈ ಪೈಕಿ 28,257 ಪ್ರಮುಖ ಮತಗಟ್ಟೆಗಳಾಗಿದ್ದು, 12 ಉಪ ಮತಗಟ್ಟೆಗಳಾಗಿದ್ದವು. 28,269 ಮತಗಟ್ಟೆಗಳ ಪೈಕಿ 936 ವಿಶೇಷ ಮತಗಟ್ಟೆಗಳಾಗಿದ್ದವು. ಮಹಿಳೆಯರು ಮತದಾನದಲ್ಲಿ ಭಾಗವಹಿಸುವಂತೆ ಉತ್ತೇಜಿಸಲು ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಐದು ಸಖಿ ಮತಗಟ್ಟೆಗಳಂತೆ ಒಟ್ಟು 560 ಮತಗಟ್ಟೆಗಳನ್ನು ಸ್ಥಾಪಿಸಿದ್ದು ವಿಶೇಷವಾಗಿತ್ತು. ಕರ್ನಾಟಕವಲ್ಲದೇ ಅಸ್ಸಾಂ, ಬಿಹಾರ, ಛತ್ತೀಸ್ಗಢ, ದಾದ್ರಾ, ಗೋವಾ, ಗುಜರಾತ್, ಮಧ್ಯ ಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲೂ ಮತದಾನವಾಗಿದ್ದು, ಎಲ್ಲಿಯೂ ಸಣ್ಣ ಪುಟ್ಟ ಅಹಿತಕರ ಘಟನೆಗಳು ಹೊರತುಪಡಿಸಿ, ಗಂಭೀರವಾದ ಘಟನೆಗಳು ನಡೆದ ವರದಿಯಾಗಿಲ್ಲ.
India May 7, 2024, 7:00 AM IST
ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದಲ್ಲಿ ರಚನೆಯಾಗಿರುವ ಎಸ್ಐಟಿ ಕುರಿತು ದೇವರಾಜೇಗೌಡರ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದರೆ, ನನಗೂ ಪೆನ್ ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ ಶಿವಕುಮಾರ್
state May 7, 2024, 5:00 AM IST
ಇದು ಮಹಿಳೆಯರು ಸ್ವಾತಂತ್ರ್ಯಕ್ಕೆ ಅರ್ಹರಲ್ಲ ಎಂಬ ಸಿದ್ಧಾಂತ ನಂಬಿರುವ ಬಿಜೆಪಿ ಹಾಗೂ ಮಹಿಳೆಯರಿಗೆ ಸಮಾನ ಅವಕಾಶ ನೀಡುವ ಸಂವಿಧಾನಕ್ಕೆ ಬದ್ಧವಿರುವ ಕಾಂಗ್ರೆಸ್ ನಡುವಿನ ಚುನಾವಣೆ. ಕಾಯಾ ವಾಚಾ ಮನಸಾ ಬಿಜೆಪಿ ಮಹಿಳಾ ವಿರೋಧಿ ಪಕ್ಷ. ಕರ್ನಾಟಕದಲ್ಲಿ ಸ್ತ್ರೀ ಪೀಡಕರ ಜೊತೆಗೆ ಬಿಜೆಪಿ ಕೈಜೋಡಿಸಿರುವುದು ಅದಕ್ಕೆ ಇತ್ತೀಚಿನ ಉದಾಹರಣೆ. ಹೀಗಾಗಿ ಅವರನ್ನು ಸೋಲಿಸಿ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Politics May 7, 2024, 4:26 AM IST
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಸಂತ್ರಸ್ಥೆಯನ್ನು ಕಿಡ್ನಾಪ್ ಮಾಡಿರುವ ಆರೋಪದಲ್ಲಿ ಜೈಲು ಲಾಪಾಗಿರುವ ಮಾಜಿ ಸಚಿವ ಎಚ್ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಿಚಾರಣ ನಡೆಸುತ್ತಿದ್ದಾರೆ.
state May 6, 2024, 11:22 PM IST
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದೆ. ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
state May 6, 2024, 10:53 PM IST
ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದ ಸೂತ್ರಧಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಪ್ರಮುಖ ಸೂತ್ರಧಾರಿಗಳು ಎಂದು ವಕೀಲ ದೇವರಾಜೇಗೌಡ ಆರೋಪಿಸಿದ್ದಾರೆ. ಸಂಬಂಧಪಟ್ಟ ಆಡಿಯೋ ರಿಲೀಸ್ ಮಾಡಿದ್ದಾರೆ.
state May 6, 2024, 5:57 PM IST
ಕರ್ನಾಟಕದಲ್ಲಿ ಸ್ತ್ರೀಪೀಡಕರ ಜೊತೆಗೆ ಬಿಜೆಪಿ ಕೈಜೋಡಿಸಿರುವುದು ಇತ್ತೀಚಿನ ಉದಾಹರಣೆ. ಕಾಯಾ ವಾಚಾ ಮನಸಾ ಬಿಜೆಪಿ ಮಹಿಳಾ ವಿರೋಧಿ ಪಕ್ಷ. ಅಕ್ಕ-ತಂಗಿ ಹಾಗೂ ತಾಯಂದಿರೇ ಎಚ್ಚರದಿಂದಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳಿದರು.
state May 6, 2024, 5:45 PM IST