ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಲಿ ಏ.15ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದು, ಬುಧವಾರ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.
Karnataka Districts Apr 25, 2024, 11:51 AM IST
ಚುನಾವಣಾ ಕರ್ತವ್ಯದಲ್ಲಿದ್ದ ಪ್ಯಾರಾ ಮಿಲಿಟರಿ ಪಡೆಯ ಸಿಬ್ಬಂದಿಯೊಬ್ಬರು ಚುನಾವಣಾ ಕೇಂದ್ರದ ಶೌಚಾಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪಶ್ಚಿಮ ಬಂಗಾಳದ ಕೂಚ್ಬೆಹರ್ನ ಮಥಭಂಗ ಚುನಾವಣಾ ಕೇಂದ್ರದಲ್ಲಿ ನಡೆದಿದೆ.
India Apr 19, 2024, 3:22 PM IST
ಕ್ಷೇತ್ರ ವ್ಯಾಪ್ತಿಯ ಶಾಂತಿಗ್ರಾಮದ ಹೆಗ್ಗಡಿಹಳ್ಳಿಯ ನಂದೀಶ ಎಂಬ ಯೋಧ ತನ್ನ ಪೋಸ್ಟಲ್ ಬ್ಯಾಲೆಟ್ನಲ್ಲಿ ಮತದಾನ ಮಾಡಿ, ಫೋಟೋ ತೆಗೆದು ಅದನ್ನು ವಾಟ್ಸಪ್ನಲ್ಲಿ ಪ್ರದರ್ಶನ ಮಾಡಿದ್ದಾರೆ. ಮತದಾನದ ಗೌಪ್ಯತೆ ಕಾಪಾಡಿಕೊಳ್ಳದೆ, ಸಂವಿಧಾನಕ್ಕೆ ಅಗೌರವ ತೋರಿದ ಪರಿಣಾಮವಾಗಿ ಆವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
state Apr 15, 2024, 11:29 AM IST
ಕಲಿಕೆಯಲ್ಲೂ ನಿಪುಣನಾಗಿದ್ದ ಅಬ್ದುಲ್ ಮತೀನ್ ತಾಹ ಪ್ರೌಢ ಶಿಕ್ಷಣದ ಬಳಿಕ ಬೆಂಗಳೂರಿಗೆ ತೆರಳಿ ಅಲ್ಲಿ ಎಂಜಿನಿಯರಿಂಗ್ ಶಿಕ್ಷಣ ಪೂರೈಸಿದ್ದ. ಸಂದರ್ಭದಲ್ಲಿಯೇ ಉಗ್ರರ ನೆರಳಿಗೆ ಸಿಲುಕಿದ್ದ ಎನ್ನಲಾಗಿದೆ. ಮೀನು ಮಾರ್ಕೆಟ್ ಬಳಿಯೇ ಈತನ ಮನೆ ಇದ್ದು, ಒಬ್ಬನೇ ಪುತ್ರ. ಸಮಾಜದಲ್ಲಿ ಇವರ ಕುಟುಂಬ ಒಳ್ಳೆಯ ಹೆಸರು ಇಟ್ಟುಕೊಂಡಿತ್ತು. ತಂದೆ ಒಂದು ವರ್ಷದ ಹಿಂದಷ್ಟೇ ತೀರಿಕೊಂಡಿದ್ದು, ತಾಯಿಯ ಬಗ್ಗೆ ಕೂಡ ಒಳ್ಳೆಯ ಅಭಿಪ್ರಾಯವಿದೆ.
CRIME Apr 13, 2024, 11:17 AM IST
ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಬಿಜೆಪಿಯ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿಗೆ ಧನ ಸಹಾಯ ಮಾಡಿದ್ದಾರೆ.
Politics Apr 10, 2024, 7:03 PM IST
ಅಗ್ನಿವೀರ್ ಯೋಜನೆ ರದ್ದುಗೊಳಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿರುವ ಕಾಂಗ್ರೆಸ್ ಇದೀಗ ಇದೇ ವಿಚಾರ ಮುಂದಿಟ್ಟು ಮೋದಿ ಹಾಗೂ ಕಾಂಗ್ರೆಸ್ ವಿರುದ್ದ ಹರಿಹಾಯ್ದಿದೆ. ಅಗ್ನಿವೀರರಿಗೆ ಚೀನಾ ಸೈನಿಕರನ್ನು ಎದುರಿಸಲು ಸಾಧ್ಯವಾಗುವುದಿಲ್ಲ, ಹುತಾತ್ಮರಾಗುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
India Apr 9, 2024, 12:43 PM IST
ಹಮಾಸ್ ಉಗ್ರರು ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ಗಾಜಾ ಮೇಲೆ ಸಮರ ಸಾರಿದೆ. ಇಸ್ರೇಲ್ ಸೈನಿಕರು ಗಾಜಾಗೆ ನುಗ್ಗಿ ಹಮಾಸ್ ಉಗ್ರರ ಹೆಡೆಮುರಿ ಕಟ್ಟುತ್ತಿದ್ದಾರೆ. ಆದರೆ ಗಾಜಾ ನಾಗರೀಕರ ಮನೆಯಲ್ಲಿ ಇಸ್ರೇಲ್ ಸೈನಿಕರು ಗಾಜಾ ಮಹಿಳೆಯರ ಒಳಉಪುಡು ಹಿಡಿದು ಆಟವಾಡುತ್ತಿರುವ ಪೋಸ್ಟ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಗಾಜಾ ಮಹಿಳೆಯರ ಮೇಲೆ ಇಸ್ರೇಲ್ ಸೈನಿಕರು ದೌರ್ಜನ್ಯ ನಡೆಸುತ್ತಿದ್ದಾರೆ ಅನ್ನೋ ಆರೋಪ ಇದೀಗ ಬಲವಾಗತೊಡಗಿದೆ.
International Mar 29, 2024, 5:45 PM IST
ಗಡಿಯಲ್ಲಿ ಪದೇ ಪದೇ ಕಾಲು ಕೆರೆದು ಜಗಳಕ್ಕೆ ನಿಲ್ಲುವ ಚೀನಾದ ಗಡಿಯಲ್ಲಿ ಭಾರತ ಇದೀಗ ಡಜನ್ಗಟ್ಟಲೆ ಬಂಕರ್ಗಳನ್ನು ನಿರ್ಮಾಣ ಮಾಡುತ್ತಿದೆ. ತನ್ಮೂಲಕ ತಾಪಮಾನ ಶೂನ್ಯಕ್ಕಿಂತ ಕೆಳಕ್ಕೆ ಕುಸಿದಾಗಲೂ ಯೋಧರು ಸನ್ನದ್ಧ ಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲು ಯೋಜಿಸಿದೆ.
India Mar 19, 2024, 7:47 AM IST
ಭಾರತದ ವಿರುದ್ಧ ತಮ್ಮ ಸಮರ ಮುಂದುವರಿಸಿರುವ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು, ಮೇ 10 ರ ನಂತರ ಯಾವುದೇ ಭಾರತೀಯ ಮಿಲಿಟರಿ ಸಿಬ್ಬಂದಿ ದೇಶದಲ್ಲಿ ಇರಕೂಡದು. ಮಾತ್ರವಲ್ಲ ನಾಗರಿಕ ಉಡುಪಿನಲ್ಲಿರುವ ಭಾರತೀಯ ಅಧಿಕಾರಿಗಳೂ ನಮ್ಮ ದೇಶದಲ್ಲಿ ಇರತಕ್ಕದ್ದಲ್ಲ ಎಂದು ಆದೇಶ ಹೊರಡಿಸಿದ್ದಾರೆ.
International Mar 6, 2024, 9:55 AM IST
ರಾಜ್ಯ ಸರ್ಕಾರದ ಸಂವಿಧಾನ ಸಮಾವೇಶಕ್ಕೆ ಪಾಕ್ ಪರ ನಿಲುವು ಇರುವ ಲೇಖಕಿಯನ್ನು ಕಾಂಗ್ರೆಸ್ ಸರ್ಕಾರ ಆಹ್ವಾನಿಸಿತ್ತು. ಆದರೆ, ಇಂಗ್ಲೆಂಡ್ ಮೂಲದ ಪ್ರೊಫೆಸರ್ ಕಾರ್ಯಕ್ರಮಕ್ಕಾಗಿ ಬೆಂಗಳೂರು ಏರ್ಪೋರ್ಟ್ಗೆ ಬಂದಿದ್ದವರನ್ನು ಅಲ್ಲಿಂದಲೇ ಗಡಿಪಾರು ಮಾಡಲಾಗಿದೆ.
India Feb 26, 2024, 6:50 PM IST
ಭಾವಿ ಪತಿ ಜೊತೆ ಬ್ಯಾಚುಲರ್ ಪಾರ್ಟಿ ಮಾಡಿಕೊಂಡ ಕಿರುತೆರೆ ನಟಿ. ಜೋಡಿ ಸೂಪರ್ ಎಂದ ನೆಟ್ಟಿಗರು.....
Small Screen Feb 19, 2024, 12:46 PM IST
ಇಶಾ ಫೌಂಡೇಶನ್ 'ಒತ್ತಡ ನಿರ್ವಹಣೆಗಾಗಿ ಯೋಗ ಮತ್ತು ಸಮಗ್ರ ಸ್ವಾಸ್ಥ್ಯಕ್ಕಾಗಿ ಯೋಗ' ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನುಪುಣೆಯಲ್ಲಿ ನಡೆಸಿತು.
Festivals Feb 17, 2024, 4:42 PM IST
ಪ್ರಧಾನಿ ನರೇಂದ್ರ ಮೋದಿ ಪುಲ್ವಾಮಾ ದಾಳಿಯ ಐದನೇ ವರ್ಷವನ್ನು ನೆನಪಿಸಿಕೊಂಡಿದ್ದು, 2019ರಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ 40 ಮಂದಿ ಸಿಆರ್ಪಿಎಫ್ ಯೋಧರನ್ನು ಉಲ್ಲೇಖಿಸಿ, ಅವರ ತ್ಯಾಗವನ್ನು ದೇಶ ಸದಾಕಾಲ ಸ್ಮರಿಸಿಕೊಳ್ಳುತ್ತದೆ ಎಂದಿದ್ದಾರೆ.
India Feb 14, 2024, 11:09 AM IST
ಇತ್ತೀಚೆಗೆ ಬಿಡುಗಡೆಯಾದ ಹೃತಿಕ್ ರೋಷನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಬಾಲಾಕೋಟ್ ದಾಳಿಯ ಕಥಾಹಂದರ ಹೊಂದಿರುವ ‘ಫೈಟರ್’ ಚಿತ್ರದಲ್ಲಿ ಹೃತಿಕ್, ದೀಪಿಕಾ ತುಟಿಗೆ ಮುತ್ತಿಕ್ಕಿರುವ ದೃಶ್ಯ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ವಾಯುಪಡೆ ವಿಂಗ್ ಕಮಾಂಡರ್ರೊಬ್ಬರು ನೋಟಿಸ್ ನೀಡಿದ್ದಾರೆ.
Cine World Feb 7, 2024, 10:21 AM IST
ಭಾರತದ ಲೈನ್ ಆಫ್ ಕಂಟ್ರೋಲ್(ಎಲ್ಒಸಿ) ಬಳಿ ಕುರಿ ಮೇಯಿಸುತ್ತಿದ್ದ ಭಾರತೀಯ ಕುರಿಗಾಹಿಗಳನ್ನು ಚೀನಾ ಸೈನಿಕರು ತಡೆಯಲು ಮುಂದಾದ ಘಟನೆ ನಡೆದಿದೆ. ತಮ್ಮನ್ನು ತಡೆದ ಚೀನಿ ಸೈನಿಕರನ್ನು ಭಾರತೀಯ ಕುರಿಗಾಹಿಗಳು ದಿಟ್ಟವಾಗಿ ಎದುರಿಸಿದ್ದಾರೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕುರಿಗಾಹಿಗಳ ಈ ದಿಟ್ಟತನಕ್ಕೆ ನೆಟ್ಟಿಗರು ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ.
India Jan 31, 2024, 2:00 PM IST