ಸ್ಯಾಮ್ ಕರ್ರನ್ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು, ಮೊದಲ ಪಂದ್ಯದಲ್ಲೇ 3 ವಿಕೆಟ್ ಪಡೆದು ಗಮನ ಸೆಳೆದಿದ್ದಾರೆ. ಸ್ಟಾರ್ ಆಟಗಾರರೇ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಪಡೆಯಲು ಪರದಾಡುತ್ತಿರಬೇಕಾದರೆ, ಕರ್ರನ್ ತಮ್ಮ ಮಿಂಚಿನ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ.
Cricket Nov 30, 2020, 5:12 PM IST
ಸಿಡ್ನಿ: 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಅಕ್ಷರಶಃ ಮಂಕಾಗಿದ್ದ ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್ವೆಲ್, ಭಾರತ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ.
ಕಿಂಗ್ಸ್ ಇಲೆವನ್ ಪಂಜಾಬ್ ನಾಯಕ ಕೆ.ಎಲ್ ರಾಹುಲ್ ಎದುರೇ ಗ್ಲೆನ್ ಮ್ಯಾಕ್ಸ್ವೆಲ್ ಆಕರ್ಷಕ ಸಿಕ್ಸರ್ ಸಿಡಿಸಿ ಮಿಂಚಿದರು. 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಒಂದೇ ಒಂದು ಸಿಕ್ಸರ್ ಬಾರಿಸಲು ವಿಫಲವಾಗಿದ್ದ ಮ್ಯಾಕ್ಸಿ, ಟೀಂ ಇಂಡಿಯಾ ವಿರುದ್ಧ ಮೈ ಚಳಿ ಬಿಟ್ಟು ಬ್ಯಾಟಿಂಗ್ ನಡೆಸಿದ್ದಾರೆ. ಪಂದ್ಯ ಮುಕ್ತಾಯದ ಬಳಿಕ ಮ್ಯಾಕ್ಸ್ವೆಲ್ ಪಂಜಾಬ್ ನಾಯಕ ರಾಹುಲ್ ಕ್ಷಮೆಯನ್ನು ಕೇಳಿದ್ದಾರೆ. ಇದೇ ವೇಳೆ ನ್ಯೂಜಿಲೆಂಡ್ ಆಲ್ರೌಂಡರ್ ಜೇಮ್ಸ್ ನೀಶಮ್ ಕೂಡಾ ಮ್ಯಾಕ್ಸಿಗೆ ಸಾಥ್ ನೀಡಿದ್ದಾರೆ.
Cricket Nov 28, 2020, 4:52 PM IST
ಐಪಿಎಲ್ ಆಯೋಜನೆ ವೇಳೆ ತಾವು ವಹಿಸಿದ ಎಚ್ಚರಿಕೆ ಕುರಿತು ತಿಳಿಸಿದರು. ಸೆಪ್ಟೆಂಬರ್ನಿಂದ ನವೆಂಬರ್ವರೆಗೂ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಆಯೋಜನೆಗಾಗಿ ಗಂಗೂಲಿ ಅರಬ್ಬರ ನಾಡಿನಲ್ಲಿ ನೆಲೆಸಿದ್ದರು.
Cricket Nov 25, 2020, 12:21 PM IST
ಬೆಂಗಳೂರು: ಬಹುನಿರೀಕ್ಷಿತ ಭಾರತದಲ್ಲೇ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಇನ್ನು ಕೆಲವೇ ಕೆಲವು ತಿಂಗಳುಗಳು ಬಾಕಿ ಉಳಿದಿವೆ. ಹೀಗಿರುವಾಗಲೇ ಟೀಂ ಇಂಡಿಯಾ ನಾಯಕತ್ವ ಬದಲಾವಣೆ ಬಗ್ಗೆ ಕ್ರಿಕೆಟ್ ವಲಯದಲ್ಲಿ ಬಹುದೊಡ್ಡ ಚರ್ಚೆ ಶುರುವಾಗಿದೆ.
ಟೀಂ ಇಂಡಿಯಾ ಟಿ20 ನಾಯಕತ್ವ ಪಟ್ಟವನ್ನು ವಿರಾಟ್ ಕೊಹ್ಲಿ ಬದಲು ರೋಹಿತ್ ಶರ್ಮಾಗೆ ನೀಡಬೇಕು ಎನ್ನುವ ಚರ್ಚೆ ಜೋರಾಗಿದೆ. ಇದರ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ತಂಡದ ಆಟಗಾರನೊಬ್ಬ ವಿರಾಟ್ ಕೊಹ್ಲಿಗಿಂತ ರೋಹಿತ್ ಶರ್ಮಾ ಬೆಸ್ಟ್ ನಾಯಕ ಎನ್ನುವ ಮೂಲಕ ಹೊಸ ಚರ್ಚೆಗೆ ಎಡೆಮಾಡಿಕೊಟ್ಟಿದ್ದಾರೆ.
Cricket Nov 24, 2020, 6:31 PM IST
ಐಪಿಎಲ್ ಸಕ್ಸಸ್ ಹಿಂದೆ ಅಮಿತ್ ಶಾ ಪುತ್ರನ ತಂತ್ರ!| ಕೊರೋನಾ ಕಾಲದಲ್ಲಿ ದೇಸೀ ಟಿ20 ಟೂರ್ನಿ ಯಶಸ್ಸಿನ ರಹಸ್ಯ ಬಿಚ್ಚಿಟ್ಟಬಿಸಿಸಿಐ ಖಜಾಂಚಿ ಅರುಣ್ ಧುಮಾಲ್| ಗೊಂದಲದಲ್ಲಿದ್ದ ಬಿಸಿಸಿಐಗೆ ಧೈರ್ಯ ತುಂಬಿದ್ದ ಜಯ್ ಶಾ| ಅಬುಧಾಬಿಯ ನಿಯಮ ಸಡಿಲಿಕೆಯಲ್ಲಿ ಪ್ರಮುಖ ಪಾತ್ರ
IPL Nov 24, 2020, 7:36 AM IST
ಐಪಿಎಲ್ 2020 ಟೂರ್ನಿ ಮುಗಿಸಿರುವ ಬಿಸಿಸಿಐ ಇದೀಗ ಟೀಂ ಇಂಡಿಯಾವನ್ನು ಆಸ್ಟ್ರೇಲಿಯಾ ಟೂರ್ನಿಗೆ ಕಳುಹಿಸಿದೆ. ಕೊರೋನಾ ವೈರಸ್ ನಡುವೆ ಐಪಿಎಲ್ ಟೂರ್ನಿ ಆಯೋಜನೆ ಬಹುದೊಡ್ಡ ಸವಾಲಾಗಿತ್ತು. ಎಲ್ಲಾ ಕ್ರಿಕೆಟ್ ಟೂರ್ನಿಗಳು ರದ್ದಾಗಿತ್ತು. ಟಿ20 ವಿಶ್ವಕಪ್ ಟೂರ್ನಿಯನ್ನೇ ರದ್ದು ಮಾಡಲಾಗಿತ್ತು. ಈ ಕಠಿಣ ಸಂದರ್ಭದಲ್ಲಿ ಬಿಸಿಸಿಐ ಟೂರ್ನಿ ಆಯೋಜಿಸಿ ಯಶಸ್ವಿಯಾಗಿದೆ. ಈ ಬಾರಿಯ ಟೂರ್ನಿಯಿಂದ ಬಿಸಿಸಿಐ ಗಳಿಸಿದ ಆದಾಯವೆಷ್ಟು ಇಲ್ಲಿದೆ. ವಿವರ.
IPL Nov 23, 2020, 8:34 PM IST
ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಮೂರು ಮಾದರಿಯ ಕ್ರಿಕೆಟ್ಗೆ ಟೀಂ ಇಂಡಿಯಾ ಆಯ್ಕೆಮಾಡುವಾಗ, 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಸೂರ್ಯಕುಮಾರ್ ಯಾದವ್ ಅದ್ಭುತ ಬ್ಯಾಟಿಂಗ್ ಪ್ರದರ್ಶನವನ್ನು ತೋರುತ್ತಿದ್ದರು. ಇದೆಲ್ಲದರ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಅವರಿಗೆ ಆಯ್ಕೆ ಸಮಿತಿ ತಂಡದಲ್ಲಿ ಸ್ಥಾನ ನೀಡದಿರುವುದು ಹಲವು ಅಚ್ಚರಿಗಳಿಗೆ ಕಾರಣವಾಯಿತು.
Cricket Nov 23, 2020, 2:03 PM IST
ಬಿ ಡಿವಿಲಿಯರ್ಸ್ ಪತ್ನಿ ಡೇನಿಯಲ್ಲೇ ಮೂರನೇ ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೊದಲು ಎಬಿಡಿಗೆ ಅಬ್ರಹಾಂ ಡಿವಿಲಿಯರ್ಸ್ ಹಾಗೂ ಜಾನ್ ಡಿವಿಲಿಯರ್ಸ್ ಎನ್ನುವ ಗಂಡು ಮಕ್ಕಳಿದ್ದರು. ಇದೀಗ ಎಬಿಡಿ ಕುಟುಂಬ ಹೆಣ್ಣು ಮಗುವನ್ನು ಸ್ವಾಗತಿಸಿದ್ದಾರೆ. ಹೆಣ್ಣು ಮಗುವಿಗೆ ಯೆಂಟೆ ಡಿವಿಲಿಯರ್ಸ್ ಎಂದು ಹೆಸರಿಟ್ಟಿದ್ದಾರೆ.
Cricket Nov 20, 2020, 3:13 PM IST
ಸಿಡ್ನಿ: ವಿರಾಟ್ ಕೊಹ್ಲಿ ನೇತೃತ್ವದ ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ವಿರುದ್ಧ ಸುದೀರ್ಘ ಸರಣಿಯಾಡಲು ಕಾಂಗರೂ ನಾಡಿಗೆ ಬಂದಿಳಿದಿದ್ದು, ಸದ್ಯ ಕ್ವಾರಂಟೈನ್ನಲ್ಲಿದೆ. ಪ್ರತಿಭಾನ್ವಿತ ಆಟಗಾರರಿಂದ ತುಂಬಿ ತುಳುಕುತ್ತಿರುವ ಟೀಂ ಇಂಡಿಯಾ ಮತ್ತೊಮ್ಮೆ ಆಸೀಸ್ ನೆಲದಲ್ಲಿ ಭರ್ಜರಿ ಗೆಲುವು ಸಾಧಿಸುವ ಕನಸು ಕಾಣುತ್ತಿದೆ.
ಹೀಗಿರುವಾಗಲೇ ಆಸ್ಟ್ರೇಲಿಯಾ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಅಲೆಕ್ಸ್ ಕ್ಯಾರಿ ಟೀಂ ಇಂಡಿಯಾ ಯುವ ಆಟಗಾರನೊಬ್ಬನ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದು, ಮುಂದೊಂದು ದಿನ ಈತ ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸುವ ಕ್ಷಮತೆ ಹೊಂದಿದ್ದಾರೆ ಎಂದು ಕ್ಯಾರಿ ಅಭಿಪ್ರಾಯಪಟ್ಟಿದ್ದಾರೆ. ಅಷ್ಟಕ್ಕೂ ಯಾರು ಆ ಆಟಗಾರ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ
Cricket Nov 17, 2020, 6:04 PM IST
ಬೆಂಗಳೂರು ಗಲಭೆ ಆರೋಪಿ ಸಂಪತ್ ರಾಜ್ಗೆ ಬೆಂಬಲ ನೀಡಿದವರ ಮಾಹಿತಿ ಬಹಿರಂಗವಾಗಿದೆ. ಏಕಾಏಕಿ ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಮಾಡಿದ ಸಿಎಂ ಯಡಿಯೂರಪ್ಪ ಮೇಲೆ ರಾಜೀನಾಮೆ ಒತ್ತಡ ಹೆಚ್ಚಾಗಿದೆ. ಪಿಎಂ ಮೋದಿಯ ಆತ್ಮನಿರ್ಭರ ಕನಸಿಗೆ ಸಾಧು ಸಂತರ ಸಾಥ್ ನೀಡಿದ್ದಾರೆ. ಯುಎಇ ಕ್ರಿಕೆಟ್ ಮಂಡಳಿಗೆ ಬಿಸಿಸಿಐನಿಂದ 100 ಕೋಟಿ, ರಚಿತಾ ರಾಮ್ ಹೊಸ ಅವತಾರ ಸೇರಿದಂತೆ ನವೆಂಬರ್ 17 ಟಾಪ್ 10 ಸುದ್ದಿ ವಿವರ ಇಲ್ಲಿವೆ.
News Nov 17, 2020, 4:58 PM IST
ದುಬೈ, ಶಾರ್ಜಾ ಹಾಗೂ ಅಬುಧಾಬಿ ಕ್ರೀಡಾಂಗಣಗಳನ್ನು ಐಪಿಎಲ್ಗೆ ಸಿದ್ಧಗೊಳಿಸಿದ್ದ ಎಮಿರೇಟ್ಸ್ ಕ್ರಿಕೆಟ್ ಮಂಡಳಿ (ಇಸಿಬಿ), ಅತ್ಯುತ್ತಮ ಪಿಚ್ ಹಾಗೂ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸಿತ್ತು. ಐಪಿಎಲ್ ಆಯೋಜನೆಯಿಂದ ಇಸಿಬಿ ಭರ್ಜರಿ ಲಾಭ ದೊರೆತಿದೆ.
IPL Nov 17, 2020, 2:41 PM IST
‘75ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕ್ರಿಕೆಟ್ ಆಡಲಾಗುತ್ತಿದೆ. ಟಿ20 ಕ್ರಿಕೆಟ್ ಎಲ್ಲೆಡೆ ಜನಪ್ರಿಯಗೊಂಡಿದೆ. ಒಲಿಂಪಿಕ್ ಕ್ರೀಡಾಕೂಟದಲ್ಲಿ ಟಿ20 ಮಾದರಿ ಸೇರ್ಪಡೆಗೊಂಡರೆ ಕ್ರಿಕೆಟ್ ಆಟಕ್ಕೆ ಮತ್ತಷ್ಟು ಜನಪ್ರಿಯತೆ ಸಿಗಲಿದೆ’ ಎಂದು ದ್ರಾವಿಡ್ ಪ್ರತಿಷ್ಠಿತ ವೆಬ್ಸೈಟ್ವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.
Cricket Nov 15, 2020, 9:44 AM IST
ಸಿಡ್ನಿ: ಸಾಕಷ್ಟು ಮನರಂಜನೆ ನೀಡಿದ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಆಗುವುದರೊಂದಿಗೆ ಟೂರ್ನಿಗೆ ಅಧಿಕೃತವಾಗಿ ತೆರೆ ಬಿದ್ದಿದೆ. ಇದೀಗ 14ನೇ ಆವೃತ್ತಿಯ ಐಪಿಎಲ್ಗೆ ಇನ್ನೈದೇ ತಿಂಗಳು ಬಾಕಿ ಇರುವುದರಿಂದ ಈಗಿನಿಂದಲೇ ಸಿದ್ದತೆಗಳು ಆರಂಭವಾಗಲಾರಂಭಿಸಿದೆ.
ಹೌದು, 14ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಒಂದು ಅಥವಾ 2 ತಂಡಗಳು ಸೇರ್ಪಡೆಯಾಗುವುದರ ಬಗ್ಗೆ ಗಾಳಿ ಸುದ್ದಿಗಳು ಹರಿದಾಡಲಾರಂಭಿಸಿವೆ. ಹೀಗಾದರೆ ಮೆಗಾ ಹರಾಜು ನಡೆಯಲಿದ್ದು, ಕೆಲ ಆಟಗಾರರು ಬೇರೆ ತಂಡದ ಪಾಲಾಗುವ ಸಾಧ್ಯತೆಯಿದೆ. ಇದರ ಬೆನ್ನಲ್ಲೇ ಸನ್ರೈಸರ್ಸ್ ಹೈದರಾಬಾದ್ ನಾಯಕ ಡೇವಿಡ್ ವಾರ್ನರ್ ತಮ್ಮ ತಂಡದ ಪ್ರಮುಖ ಆಟಗಾರನ ಬಗ್ಗೆ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.
IPL Nov 14, 2020, 7:10 PM IST
ಮುಂಬೈ: ಖ್ಯಾತ ಕ್ರಿಕೆಟ್ ವಿಶ್ಲೇಷಕ ಹಾಗೂ ವೀಕ್ಷಕ ವಿವರಣೆಗಾರ ಹರ್ಷಾ ಬೋಗ್ಲೆ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಅತ್ಯುತ್ತಮ ತಂಡವನ್ನು ಆಯ್ಕೆ ಮಾಡಿದ್ದಾರೆ.
ಸಾಕಷ್ಟು ಅಳೆದು ತೂಗಿ ತಮ್ಮ ನೆಚ್ಚಿನ ತಂಡವನ್ನು ಹರ್ಷಾ ಬೋಗ್ಲೆ ಆಯ್ಕೆ ಮಾಡಿದ್ದು, ಮುಂಬೈ ಇಂಡಿಯನ್ಸ್ನ ನಾಲ್ವರು ಆಟಗಾರರು ಬೋಗ್ಲೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಆರ್ಸಿಬಿಯ ಇಬ್ಬರು ಆಟಗಾರರು ಸ್ಥಾನ ಪಡೆದಿದ್ದು, ವಿರಾಟ್ ಕೊಹ್ಲಿಗೆ ಬೋಗ್ಲೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.
IPL Nov 14, 2020, 4:54 PM IST
ಮುಂಬೈ: ಮಳೆ ನಿಂತರೂ ತಕ್ಷಣಕ್ಕೆ ಮಳೆ ಹನಿ ನಿಲ್ಲಲ್ಲ ಎನ್ನುವ ಮಾತಿನಂತೆ, 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಮುಗಿದು ಮೂರ್ನಾಲ್ಕು ದಿನಗಳೇ ಕಳೆದರೂ, ಅಭಿಮಾನಿಗಳು, ಕ್ರಿಕೆಟ್ ವಿಶ್ಲೇಷಕರು, ಮಾಜಿ ಆಟಗಾರರು ಐಪಿಎಲ್ ಗುಂಗಿನಿಂದ ಹೊರಬಂದಂತೆ ಕಾಣುತ್ತಿಲ್ಲ.
ಹೌದು, ಟೀಂ ಇಂಡಿಯಾ ಮಾಜಿ ವೇಗದ ಬೌಲರ್ ಅಜಿತ್ ಅಗರ್ಕರ್, 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಆಡಿದ ಆಟಗಾರರ ಪೈಕಿ ತಮ್ಮ ನೆಚ್ಚಿನ ಬಲಿಷ್ಠ ತಂಡವನ್ನು ಪ್ರಕಟಿಸಿದ್ದಾರೆ. ಅಗರ್ಕರ್ ನೆಚ್ಚಿನ ತಂಡದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ 2 ಆಟಗಾರರು ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಮುಂಬೈ ಮಾಜಿ ವೇಗಿಯ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಇದಷ್ಟೇ ಅಲ್ಲ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿ ಆರೆಂಜ್ ಕ್ಯಾಪ್ ಪಡೆದ ಕೆ.ಎಲ್. ರಾಹುಲ್, ಟೂರ್ನಿಯ ಅತ್ಯಂತ ಮೌಲ್ಯಯುತ ಆಟಗಾರ ಎನಿಸಿಕೊಂಡ ಜೋಫ್ರಾ ಆರ್ಚರ್ಗೂ ಅಗರ್ಕರ್ ತಂಡದಲ್ಲಿ ಸ್ಥಾನ ನೀಡಿಲ್ಲ.
IPL Nov 14, 2020, 3:45 PM IST