ಕಲಬುರಗಿ, ಬೀದರ್, ಚಿಕ್ಕೋಡಿ, ಕೊಪ್ಪಳ, ಬಳ್ಳಾರಿ, ದಾವಣಗೆರೆ ಮತ್ತು ರಾಯಚೂರಿನಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಕನ್ನಡ, ಮೈಸೂರು, ಬೆಂ. ಉತ್ತರ, ಉಡುಪಿ-ಚಿಕ್ಕಮಗಳೂರು, ಬಾಗಲಕೋಟೆ, ಹಾವೇರಿ, ಉತ್ತರ ಕನ್ನಡ, ಧಾರವಾಡ, ಶಿವಮೊಗ್ಗ, ವಿಜಯಪುರ ಕ್ಷೇತ್ರಗಳಲ್ಲಿ ಹಿನ್ನಡೆಯಾಗುವ ಅನುಮಾನವೂ ಕಾಂಗ್ರೆಸ್ ಪಾಳೆಯದಲ್ಲಿದೆ.
Politics May 10, 2024, 6:30 AM IST
ರಾಜ್ಯದ ಮಹಿಳೆ ಮಾನ ತೆಗೆದವರು ಯಾರು? ಈ ಘಟನೆ ನಡೆದಿರುವುದಕ್ಕೆ ಯಾರ ಕುಟುಂಬ ಕಾರಣ? ಯಾವ ಸಾಧನೆಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಎಚ್ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.
Politics May 9, 2024, 5:13 PM IST
ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪದಿಂದ ಜೆಡಿಎಸ್ಗೆ ಮುಜುಗರ ಆಗಿದ್ದಂತೂ ಸತ್ಯ. ಇದೇ ವಿಚಾರ ಇಟ್ಟುಕೊಂಡು ರಾಜಕೀಯ ನಾಯಕರೂ ಕೆಸರೆರಚಾಟಕ್ಕೆ ಇಳಿದಿದ್ದಾರೆ.
CRIME May 9, 2024, 12:45 PM IST
ರೆಕಾರ್ಡ್ ಮಾಡಿದ್ದು ಅವರು, ಪೆನ್ಡ್ರೈವ್ ಮಾಡಿದ್ದು ಅವರ ಡ್ರೈವರ್, ಹಂಚಿದ್ದು ಬಿಜೆಪಿ ಪರಾಜಿತ ಅಭ್ಯರ್ಥಿ. ಸುಮ್ಮನೆ ಮಹಾನಾಯಕ ಅಂತ ಆರೋಪ ಮಾಡೋದು ಬಿಡಬೇಕು. ಎಚ್.ಡಿ.ಕೆ. ಯವರು ಎಸ್ಐಟಿಯನ್ನ ತ್ರಿಬಲ್ ಎಸ್ ಅಂತಾರೆ. ಮೊದಲು ನಿಮ್ಮ ಡಬಲ್ ಆರ್ ಬಗ್ಗೆ ಮಾತನಾಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡ್ತಿಲ್ಲ ಎಂದು ಪ್ರಶ್ನಿಸಿದ ಸಚಿವ ಪ್ರಿಯಾಂಕ್ ಖರ್ಗೆ
Karnataka Districts May 9, 2024, 6:58 AM IST
ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುವುದೇ ಕುಮಾರಸ್ವಾಮಿ ಅವರ ಕೆಲಸ. ಪ್ರಜ್ವಲ್ ರೇವಣ್ಣ ಸೆಕ್ಸ್ ಗೇಟ್ ಪ್ರಕರಣ ತನಿಖೆಯ ಹಂತದಲ್ಲಿದ್ದು, ಕುಮಾರಸ್ವಾಮಿ ಮಾಡಿರುವ ಆರೋಪಗಳ ಕುರಿತು ಚರ್ಚೆಗೆ ಇನ್ನೂ ಸಮಯವಿದೆ. ಎಲ್ಲಾ ದಾಖಲೆ ತೆಗೆದುಕೊಂಡು ಬಂದರೆ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆ ಮಾಡೋಣ ಎಂದು ಪಂಥಾಹ್ವಾನವನ್ನೂ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
Politics May 9, 2024, 4:16 AM IST
ಪೆನ್ಡ್ರೈವ್ ಕೇಸ್ನಲ್ಲಿ ಜೆಡಿಎಸ್ ನಾಯಕರು ಸಿಡಿದೆದ್ದಿದ್ದಾರೆ. ಈ ಕೇಸ್ನಲ್ಲಿ ಡಿಕೆ ಶಿವಕುಮಾರ್ ಪಾತ್ರ ಇದೆ ಎಂದು ಆರೋಪಿಸಿ ಪ್ರತಿಭಟನೆ ಮಾಡಲಾಗಿದ್ದು, ಡಿಕೆಶಿ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
state May 8, 2024, 11:28 PM IST
ಬಿಜೆಪಿ ಮಾಜಿ ಶಾಸಕ ಶಿವರಾಮೇಗೌಡರನ್ನು ಡಿ.ಕೆ.ಶಿವಕುಮಾರ್ ಬಳಿಗೆ ಕಳುಹಿಸಿ ಬಿಜೆಪಿ ಮಾಜಿ ಶಾಸಕನೇ ಏಕೆ ಷಡ್ಯಂತ್ರ ರೂಪಿಸಿರಬಾರದು. ದೇವರಾಜೇಗೌಡ ಬಿಜೆಪಿ ಪರಾಜಿತ ಅಭ್ಯರ್ಥಿ. ಆತ ಡಿ.ಕೆ.ಶಿವಕುಮಾರ್ ಭೇಟಿಯಾಗಬೇಕು ಎಂದಿದ್ದಾನೆ. ಅದರಂತೆ ಶಿವರಾಮೇಗೌಡರ ಮೂಲಕ ಡಿಕೆ ಫೋನ್ನಲ್ಲಿ ಮಾತನಾಡಿದ್ದಾರೆ. ಕುತೂಹಲಕ್ಕೆ ಪೆನ್ಡ್ರೈವ್ ಬಗ್ಗೆ ಡಿ.ಕೆ.ಶಿವಕುಮಾರ್ ಕೇಳಿರಬಹುದೇ ವಿನಃ ಅವರೇ ಏನೂ ಬಿಟ್ಟಿಲ್ವಲ್ಲ ಎಂದು ಸಮರ್ಥಿಸಿಕೊಂಡ ಶಾಸಕ ಪಿ. ರವಿಕುಮಾರ್
Politics May 8, 2024, 12:33 PM IST
ಇತ್ತೀಚೆಗೆ ಇಡೀ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಲೈಂಗಿಕ ಹಗರಣ ಮತ್ತು ಅದನ್ನು ಪೆನ್ಡ್ರೈವ್ ಹಾಗೂ ಅಶ್ಲೀಲ ವಿಡಿಯೋ ಮೂಲಕ ರಾಜ್ಯಾದ್ಯಂತ ಹಂಚುತ್ತಾ, ಸಂತ್ರಸ್ತ ಹೆಣ್ಣುಮಕ್ಕಳು ಹಾಗೂ ಅವರ ಕುಟುಂಬದವರ ಮಾನ ಕಳೆಯುತ್ತಿರುವ ಪ್ರಕರಣದ ಹಿಂದಿನ ವ್ಯಕ್ತಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ ಆರ್.ಸಿ.ಆಂಜನಪ್ಪ
Karnataka Districts May 8, 2024, 12:10 PM IST
ಡಿಕೆಶಿ ಮೇಲೆ ಸಿಡಿ ಮಾಡಿದ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಎಸ್ಐಟಿ ಇದೆ. ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಎಲ್ಲವೂ ಬರುತ್ತದೆ. ಸುಮ್ಮನೆ ಊಹೆ ಮಾಡಿ ಹೇಳೋದು ಅಲ್ಲ. ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದೆ. ತಪ್ಪು ಮಾಡಿದವನಿಗೆ ಶಿಕ್ಷ ಆಗಲಿ ಎನ್ನುವ ನೈತಿಕತೆ ಮಾತು ಪ್ರಧಾನಿಗಳಿಂದ ಬಂದಿಲ್ಲ ಎಂದು ವಾಗ್ದಾಳಿ ನಡೆಸಿದ ಸಚಿವ ಶಿವಾನಂದ ಪಾಟೀಲ್
Karnataka Districts May 8, 2024, 10:21 AM IST
ಬಿಜೆಪಿ ಜೊತೆಗೆ ನಾವು ಸುದೀರ್ಘ ಅವಧಿ ಇರಲು ಮೈತ್ರಿ ಮಾಡಿಕೊಂಡಿದ್ದೇವೆ. ಈ ಪ್ರಕರಣದಿಂದ ಬಿಜೆಪಿಯವರಿಗೆ ಮುಜುಗರವಾಗುವುದಾದರೆ ಅವರೇ ತೀರ್ಮಾನ ಮಾಡಲಿ. ನಮ್ಮದೇನೂ ವಿರೋಧವಿಲ್ಲ ಎಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ
Politics May 8, 2024, 8:18 AM IST
ರೇವಣ್ಣ ಅವರು ಕಳೆದ ನಾಲ್ಕು ದಿನಗಳಿಂದ ಸರಿಯಾಗಿ ಊಟ, ತಿಂಡಿ ಸೇವಿಸುತ್ತಿಲ್ಲ. ಹೀಗಾಗಿ ಗ್ಯಾಸ್ಟ್ರಿಕ್ ಹೆಚ್ಚಾಗಿ ಹೊಟ್ಟೆನೋವು ಮತ್ತು ಎದೆ ಉರಿ ಕಾಣಿಸಿಕೊಂಡಿರುವ ಸಾಧ್ಯತೆಯಿದೆ ಎನ್ನಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಬಳಿ ಬಳಿ ತಪಾಸಣೆ ಮಾಡಿಸಲಾಗಿದೆ.
state May 8, 2024, 5:00 AM IST
ಏ.26ರಂದು ರಾಜ್ಯದಲ್ಲಿ ಮತದಾನ ಮುಗಿಯುತ್ತಿದ್ದಂತೆ ರಾಜತಾಂತ್ರಿಕ ಪಾಸ್ಪೋರ್ಟ್ ಬಳಸಿಕೊಂಡು ಬೆಂಗಳೂರು ವಿಮಾನ ನಿಲ್ದಾಣದಿಂದ ಜರ್ಮನಿಯ ಫ್ರಾಂಕ್ಫರ್ಟ್ಗೆ ಪ್ರಜ್ವಲ್ ಹಾರಿದ್ದರು. ಇತ್ತ ಅತ್ಯಾಚಾರ ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು ಅವರ ಚಲನವಲನದ ಬಗ್ಗೆ ನಿರಂತರವಾಗಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆರಂಭದಲ್ಲಿ ಯುರೋಪಿನ ಬೇರೆ ಬೇರೆ ನಗರಗಳ ನಡುವೆ ಪ್ರಯಾಣಿಸುತ್ತಿರುವ ಮಾಹಿತಿಯನ್ನು ಎಸ್ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದರು.
state May 8, 2024, 4:33 AM IST
ರಾಜ್ಯದಲ್ಲಿ ಇನ್ನೂ ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ರಾಜಕೀಯ ತಣ್ಣಗಾಗಿಲ್ಲ. ಮಂಗಳವಾರ ಕೂಡ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವೆ ಮಾತಿನ ಸಮರ ನಡೆದಿವೆ.
state May 8, 2024, 12:01 AM IST
ಹಾಸನ ಪೆನ್ ಡ್ರೈವ್ ಬಿಡುಗಡೆ ಹಿಂದೆ ರಾಜ್ಯ ಬಿಜೆಪಿ ಪ್ರಭಾವಿ ನಾಯಕನ ಕೈವಾಡವಿದೆ. ಮಂಡ್ಯ ಕೈ ಶಾಸಕ ಗಣಿಗ ರವಿಕುಮಾರ್ ಸ್ಪೋಟ ಮಾಹಿತಿ ಬಿಚ್ಚಿಟ್ಟಿದ್ದಾರೆ.
state May 7, 2024, 4:00 PM IST
ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿರುವ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣ ಕುರಿತು ಹೆಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಪ್ರಜ್ವಲ್ ರೇವಣ್ಣ ಪರ ನಾನು ನಿಲ್ಲುತ್ತಿಲ್ಲ. ಆದರೆ ಈ ಪ್ರಕರಣದಲ್ಲಿ ಸರ್ಕಾರ ಸಂತ್ರಸ್ಥೆಯರಿಗೆ ರಕ್ಷಣೆ ನೀಡುವುದಕ್ಕಿಂತ ಪ್ರಚಾರ ಬಯಸಿದೆ ಎಂದು ಹೆಚ್ಡಿಕೆ ಹೇಳಿದ್ದಾರೆ. ಸರ್ಕಾರದ ವಿರುದ್ದ ಕುಮಾರಸ್ವಾಮಿ ವಾಗ್ದಾಳಿ ವಿವರ ಇಲ್ಲಿದೆ.
state May 7, 2024, 12:35 PM IST