ನಾಳೆ ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ದಕ್ಷಿಣ ಭಾರತದ ಸ್ಟಾರ್ ನಟರು ಅತಿಥಿಗಳಾಗಿ ಆಗಮಿಸಲಿದ್ದಾರೆ.
Sandalwood Oct 31, 2022, 11:11 AM IST
ತೆಲುಗು ಸ್ಟಾರ್ ಜೂ.ಎನ್ ಟಿ ಅರ್ ಅವರು ಕರನಾಡ ಗೆಳೆಯನಿಗೆ ಸಲ್ಲಿಸಿದ ವಿಶೇಷ ಗೌರವ ಅಪ್ಪು ಅಭಿಮಾನಿಗಳ ಹೃದಯ ಗೆದ್ದಿದೆ.
Sandalwood Oct 30, 2022, 6:18 PM IST
ನವೆಂಬರ್ 1 ರಂದು ರಾಜ್ಯದ ಜನತೆಯ ಪ್ರೀತಿಯ ಅಪ್ಪುವಿಗೆ ನವೆಂಬರ್ 1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದ ಖ್ಯಾತ ನಟರಾದ ಜೂನಿಯರ್ ಎನ್ಟಿಆರ್ ಹಾಗೂ ರಜನಿಕಾಂತ್ ಅವರಿಗೆ ಆಹ್ವಾನ ನೀಡಲಾಗಿದ್ದು, ಅವರು ಮುಖ್ಯ ಅತಿಥಿಗಳಾಗಿ ಬರುತ್ತಿರುವುದನ್ನು ಖಚಿತಪಡಿಸಿದ್ದಾರೆ.
Sandalwood Oct 29, 2022, 3:46 PM IST
ನವೆಂಬರ್ 1 ಕನ್ನಡ ರಾಜ್ಯೋತ್ಸವದ ದಿನ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Sandalwood Oct 20, 2022, 3:46 PM IST
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿ ಅನೇಕ ತಿಂಗಳುಗಳೇ ಆಗಿತ್ತು. ಇದೀಗ ಪ್ರಶಸ್ತಿ ಪ್ರದಾನ ಮಾಡುವ ದಿನಾಂಕ ಬಹಿರಂಗವಾಗಿದೆ. ನವೆಂಬರ್ 1 ಕನ್ನಡ ರಾಜ್ಯೋತ್ಸವದ ದಿನ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಲಾಲ್ ಬಾಗ್ ಫಲ ಪುಷ್ಪ ಪ್ರದರ್ಶನದ ಉದ್ಘಾಟನೆ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಈ ವಿಚಾರ ಬಹಿರಂಗ ಪಡಿಸಿದರು.
Sandalwood Aug 5, 2022, 12:17 PM IST
ರವೀಂದ್ರ ಕಲಾಕ್ಷೇತ್ರದಲ್ಲಿ (Ravindra Kalakshetra) ವಾರ್ತಾ ಇಲಾಖೆ ಏರ್ಪಡಿಸಿದ್ದ ಡಾ.ರಾಜ್ಕುಮಾರ್ (Dr Rajkumar) ಅವರ ಜನ್ಮದಿನಾಚರಣೆ ಮತ್ತು 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ (CM Bommai) ಪುನೀತ್ ರಾಜ್ಕುಮಾರ್ (Puneeth Rajkumar) ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ (Karnataka Rathna) ಪ್ರಶಸಿಯನ್ನು ಶೀಘ್ರ ನೀಡಲಾಗುವುದು ಎಂದರು.
state Apr 25, 2022, 10:14 AM IST
ಪುನೀತ್ ಅವರಿಗೆ ಕರ್ನಾಟಕ ರತ್ನ ಕೊಡುವುದಕ್ಕೆ ತೀರ್ಮಾನ ಮಾಡಿದ್ದೇವೆ. ಆದಷ್ಟು ಬೇಗ ಕುಟುಂಬ ಸದಸ್ಯರು ಜೊತೆ ಮಾತನಾಡಿ ಒಂದು ದಿನಾಂಕ ನಿಗದಿ ಮಾಡಿ ಕಾರ್ಯಕ್ರಮ ಯಾವ ರೀತಿ ಆಗಬೇಕು ಅಂತ ತೀರ್ಮಾನಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.
Cine World Mar 17, 2022, 1:12 PM IST
*‘ಕರ್ನಾಟಕ ರತ್ನ’ ಪ್ರದಾನಕ್ಕೆ ಶೀಘ್ರದಲ್ಲೇ ದಿನಾಂಕ ನಿಗದಿ
*ಮರಣೋತ್ತರ ಪದ್ಮಶ್ರೀ ಪ್ರದಾನಕ್ಕೆ ಕೇಂದ್ರಕ್ಕೆ ಶಿಫಾರಸು
*ಕರ್ನಾಟಕ ರತ್ನ ಪಡೆದ ಸಿನಿಮಾ ರಂಗದ 2ನೇ ವ್ಯಕ್ತಿ ಪುನೀತ್
Sandalwood Dec 14, 2021, 8:36 AM IST
ಪುನೀತ್ ರಾಜಕುಮಾರ ನಿಧನದ ನಂತರ ಅವರು ದಾನ ಮಾಡಿದ್ದ ಕಣ್ಣುಗಳನ್ನು ನಾಲ್ಕು ಜನರಿಗೆ ಬೆಳಕು ಕೊಟ್ಟಿವೆ. ಇದೇ ಒಂದು ಕಾರಣಕ್ಕೆ ಇಡಿ ರಾಜ್ಯದ ಜನರು ಅವರ ದಾರಿಯಲ್ಲಿ ಹೋಗುತಿದ್ದಾರೆ. ನೇತ್ರದಾನ ಮಾಡಲು ಜನ ಮುಂದೆ ಬರುತಿದ್ದಾರೆ. ಸದ್ಯ ಪುನೀತ್ ಕಣ್ಣು ದಾನ ಮಾಡಿದ್ದನ್ನ ನೋಡಿದ ಶಾಸಕರೊಬ್ಬರು ನೇತ್ರದಾನಕ್ಕೆ ನೋಂದಣಿ ಮಾಡಿಸಿದ್ದಾರೆ. ಶಾಸಕ ಅಮೃತ ದೇಸಾಯಿ ಕೂಡಾ ತನ್ನ ಕುಟುಂಬದ ಜೊತೆಯಲ್ಲಿ ಕಣ್ಣು ದಾನಮಾಡಲು ನಿರ್ಧರಿಸಿದ್ದಾರೆ. ಧಾರವಾಡ ಶಾಸಕ ಅಮೃತ ದೇಸಾಯಿ ತಮ್ಮ 44 ನೇ ಜನ್ಮದಿನ ಆಚರಣೆ ಮಾಡಿಕೊಂಡಿದ್ದು, ಶಾಸಕರ ಬೆಂಬಲಿಗರು ರಕ್ತ ದಾನ ಕಾರ್ಯಕ್ರಮ ಇಟ್ಟುಕೊಂಡಿದ್ದರು. ಆದರೆ ಶಾಸಕ ಅಮೃತ ದೇಸಾಯಿ ನಾನೂ ಹಾಗೂ ನನ್ನ ಪತ್ನಿ ಪ್ರಿಯಾ ಕಣ್ಣು ದಾನ ಮಾಡ್ತೆವೆ ಎಂದಿದ್ದಕ್ಕೆ, ಅದೇ ಕಾರ್ಯಕ್ರಮದಲ್ಲಿ ಕಣ್ಣು ದಾನ ಕಾರ್ಯಕ್ರಮ ಕೂಡಾ ನಡೆಸಲಾಯಿತು. ಪುನೀತ್ ರಾಜಕುಮಾರ ಅವರು ನಿಧನದ ನಂತರವೂ ಆ ಕಣ್ಣು ದಾನ ಪಡೆದವರ ಮನದಲ್ಲಿ ಇರಲಿದ್ದಾರೆ, ಅದೇ ರೀತಿ ನಾವು ಕೂಡಾ ಜನರ ಮನದಲ್ಲಿ ಇರಬೇಕಾದ್ರೆ, ನಮ್ಮ ಕಣ್ಣು ದಾನ ಮಾಡಬೇಕು ಎಂದು ಶಾಸಕರು ಹೇಳಿದರು.
Karnataka Districts Nov 17, 2021, 10:12 PM IST
ಸ್ಯಾಂಡಲ್ವುಡ್ನ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಇಡೀ ಜಗತ್ತು ನಮನ ಸಲ್ಲಿಸಿದ್ದು, ಮರಣೋತ್ತರ ಕರ್ನಾಟಕ ರತ್ನ ಪುರಸ್ಕಾರವನ್ನು ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿದೆ.
Sandalwood Nov 17, 2021, 1:19 PM IST
ಅರಮನೆ ಮೈದಾನದಲ್ಲಿ ನಡೆದ 'ಪುನೀತ ನಮನ' ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
state Nov 17, 2021, 12:49 PM IST
Sandalwood Nov 17, 2021, 6:29 AM IST
ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಇಡೀ ಜಗತ್ತು ನಮನ ಸಲ್ಲಿಸಿದೆ. ತಮ್ಮನ ಕುರಿತಾಗಿ ಮಾತನಾಡುತ್ತ ರಾಘವೇಂದ್ರ ರಾಜ್ ಕುಮಾರ್ (Raghavendra Rajkumar) ಕಣ್ಣೀರಾದರು. ಪುನೀತ್ ನಮ್ಮನ್ನು ಅಗಲಿ ಹದಿನೈದು ದಿನಗಳು ಉರುಳಿದೆ. ಇಷ್ಟು ದಿನ ತಡೆದುಕೊಂಡಿದ್ದೆ ಆದರೆ ಇವತ್ತು ಅತ್ತು ಸ್ವಲ್ಪ ಹಗುರಾಗುತ್ತೇನೆ ಎನ್ನುತ್ತಲೇ ರಾಘವೇಂದ್ರ ರಾಜ್ ಕುಮಾರ್ ಗದ್ಗದಿತರಾದರು. ಪುನೀತ್ ರಾಜ್ ಕುಮಾರ್ ಅವರ ಸಾಮಾಜಿಕ ಕೆಲಸಗಳ ಕಾರಣಕ್ಕೆ ನಮ್ಮ ಜತೆಯೇ ಇರುತ್ತಾರೆ ಎಂದು ರಾಘವೇಂದ್ರ ರಾಜ್ ಕುಮಾರ್ ಹೇಳಿದರು.
Sandalwood Nov 16, 2021, 10:39 PM IST
ಬೆಂಗಳೂರು (ನ.16) ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಇಡೀ ಕಜಗತ್ತು ನಮನ ಸಲ್ಲಿಸಿದೆ. ತಮ್ಮನ ಕುರಿತಾಗಿ ಮಾತನಾಡುತ್ತ ಶಿವರಾಜ್ ಕುಮಾರ್ (Shiva Rajkumar) ಕಣ್ಣೀರಾದರು. ಪುನೀತ್ ಬಗ್ಗೆ ಮಾತನಾಡಿ ಮಾತನಾಡಿ ಅಂದ್ರೆ ಏನು ಹೇಳಲಿ. ನನ್ನ ತಮ್ಮನಿಗೆ ನನ್ನ ದೃಷ್ಟಿಯೇ ಆಗಿಹೋಯ್ತಾ! ಯಾವುದರಲ್ಲಿ ಆತ ಇರಲಿಲ್ಲ ಹೇಳಿ. ಇದು ಬಹಳ ಕಷ್ಟಕರ ಪರಿಸ್ಥಿತಿ ಎಂದು ಶಿವಣ್ಣ ಹೇಳಿದರು.
Sandalwood Nov 16, 2021, 10:06 PM IST
ಬದುಕಿನ ಆದರ್ಶ ಯುವ ಜನಾಂಗಕ್ಕೆ ದಾರಿದೀಪ, ದೊಡ್ಡ ಹೆಜ್ಜೆ ಗುರುತನ್ನು ಬಿಟ್ಟು ಹೋಗಿದ್ದಾರೆ. ಪುನೀತ್ ಅವರಲ್ಲಿದ್ದ ನಯ, ವಿನಯ, ಸರಳತೆ, ಸಮಾಜ ಸೇವೆಯನ್ನು ನಮ್ಮಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ನಾವು ಸಲ್ಲಿಸುವ ಗೌರವವಾಗಿದೆ. ಇಂದಿನ ಯುವಜನತೆ ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಮುರುಗೇಶ್ ಆರ್ ನಿರಾಣಿ ಹೇಳಿದರು.
Karnataka Districts Nov 16, 2021, 9:24 PM IST