ರಾಜಕೀಯ ಅನುಭವಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೊಸಬ ಆನಂದಸ್ವಾಮಿ ಗಡ್ಡದೇವರ ಮಠ ಲೋಕಸಭಾ ಚುನಾವಣೆಯಲ್ಲಿ ಸವಾಲೊಡ್ಡಿದ್ದಾರೆ. ಲಿಂಗಾಯತರ ಪೈಕಿ ಗೆಲ್ಲೋರಾರು?
Politics May 7, 2024, 11:31 AM IST
ರಾಜ್ಯದಲ್ಲಿ ಎರಡನೇ ಹಾಗೂ ಅಂತಿಮ ಸುತ್ತಿನ ಲೋಕಸಭಾ ಚುನಾವಣೆ ಬಹುತೇಕ ಶಾಂತಿಯುತವಾಗಿ ಮುಗಿದಿದ್ದು, ಚುನಾವಣಾ ಅಧಿಕಾರಿಗಲು ರಾಜಕೀಯ ನಾಯಕರ ಭವಿಷ್ಯವನ್ನು ಭದ್ರವಾಗಿ ಸೀಲ್ ಮಾಡಿ, ಮಸ್ಟರಿಂಗ್ ಕೇಂದ್ರಕ್ಕೆ ಮರಳುತ್ತಿದ್ದಾರೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳ 227 ಅಭ್ಯರ್ಥಿಗಳ ಭವಿಷ್ಯಕ್ಕೆ ಮತ ಮುದ್ರೆ ಬಿದ್ದಿದೆ. ರಾಜ್ಯದಲ್ಲಿ ಶೇ. 67.76 ಹಾಗೂ ದೇಶದಲ್ಲಿ 61.46ರಷ್ಟು ಮತದಾನ ನಡೆದಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ 28,269 ಮತಗಟ್ಟೆಗಳಲ್ಲಿ ಮತದಾನ ನಡೆದಿದೆ. ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಬರೆದಾಗಿದೆ. ಚುನಾವಣಾ ಅಖಾಡದಲ್ಲಿ 227 ಅಭ್ಯರ್ಥಿಗಳ ಪೈಕಿ 206 ಪುರುಷರು, 21 ಮಹಿಳೆಯರಿದ್ದರು. ದಾವಣಗೆರೆಯಲ್ಲಿ ಗರಿಷ್ಠ 30 ಅಭ್ಯರ್ಥಿಗಳು ಮತ್ತು ರಾಯಚೂರಿನಲ್ಲಿ ಕನಿಷ್ಠ 8 ಅಭ್ಯರ್ಥಿಗಳಿದ್ದರು. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ಮತದನಾ ನಡೆದಿದೆ. ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಭಾ ಮಲ್ಲಿಕಾರ್ಜುನ್, ಗಾಯತ್ರಿ ಸಿದ್ದೇಶ್ವರ್, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸೇರಿ 227 ಅಭ್ಯರ್ಥಿಗಳು ಕಣದಲ್ಲಿದ್ದರು. 14 ಕ್ಷೇತ್ರಗಳಲ್ಲಿ 2.59 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಿದ್ದರು. ಇದರಲ್ಲಿ 1.29 ಕೋಟಿ ಪುರುಷರು, 1.29 ಕೋಟಿ ಮಹಿಳೆಯರು ಮತ್ತು 1,945 ಇತರೆ ಮತದಾರರಿದ್ದರು. 85 ವರ್ಷಕ್ಕಿಂತ ಮೇಲ್ಪಟ್ಟವರು 2.29 ಲಕ್ಷ ಮತದಾರರು, 6.90 ಲಕ್ಷ ಯುವ ಮತದಾರರಿದ್ದರು. ಒಟ್ಟು 28,269 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಈ ಪೈಕಿ 28,257 ಪ್ರಮುಖ ಮತಗಟ್ಟೆಗಳಾಗಿದ್ದು, 12 ಉಪ ಮತಗಟ್ಟೆಗಳಾಗಿದ್ದವು. 28,269 ಮತಗಟ್ಟೆಗಳ ಪೈಕಿ 936 ವಿಶೇಷ ಮತಗಟ್ಟೆಗಳಾಗಿದ್ದವು. ಮಹಿಳೆಯರು ಮತದಾನದಲ್ಲಿ ಭಾಗವಹಿಸುವಂತೆ ಉತ್ತೇಜಿಸಲು ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಐದು ಸಖಿ ಮತಗಟ್ಟೆಗಳಂತೆ ಒಟ್ಟು 560 ಮತಗಟ್ಟೆಗಳನ್ನು ಸ್ಥಾಪಿಸಿದ್ದು ವಿಶೇಷವಾಗಿತ್ತು. ಕರ್ನಾಟಕವಲ್ಲದೇ ಅಸ್ಸಾಂ, ಬಿಹಾರ, ಛತ್ತೀಸ್ಗಢ, ದಾದ್ರಾ, ಗೋವಾ, ಗುಜರಾತ್, ಮಧ್ಯ ಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲೂ ಮತದಾನವಾಗಿದ್ದು, ಎಲ್ಲಿಯೂ ಸಣ್ಣ ಪುಟ್ಟ ಅಹಿತಕರ ಘಟನೆಗಳು ಹೊರತುಪಡಿಸಿ, ಗಂಭೀರವಾದ ಘಟನೆಗಳು ನಡೆದ ವರದಿಯಾಗಿಲ್ಲ.
India May 7, 2024, 7:00 AM IST
ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ನಾವು ಸುಮ್ಮನಿರೋದು ಬೇಡ, ಎಲ್ಲರೂ ಒಂದಾಗೋಣ. ನಮ್ಮ ತಂಟೆಗೆ ಬಂದವರ ಮೂಗು ತುಂಡರಿಸೋಣ ಎಂದು ಆಂದೋಲಾ ಕರುಣೇಶ್ವರ ಮಠದ ಗುರುಗಳು, ರಾಮಸೇನೆಯ ಮುಖ್ಯಸ್ಥರಾಗಿರುವ ಸಿದ್ದಲಿಂಗ ಶ್ರೀಗಳು ಕರೆ ನೀಡಿದ್ದಾರೆ.
Karnataka Districts May 5, 2024, 12:05 PM IST
ಧಾರವಾಡ ಅಭಿವೃದ್ಧಿಯಲ್ಲಿ ಜೋಶಿ ಅವರ ಕೊಡುಗೆ ಶೂನ್ಯವಾಗಿದೆ. ಯಾವುದೇ ಅಭಿವೃದ್ಧಿ ಮಾಡದೇ ಹಿಂದಿನಿಂದಲೂ ಸೇಡಿನ ರಾಜಕಾರಣ ಮಾಡುತ್ತಾ ಬಂದಿದ್ದಾರೆ. ಇದರಿಂದ ಬೇಸತ್ತಿರುವ ಕ್ಷೇತ್ರದ ಜನರು ಈ ಬಾರಿ ಬದಲಾವಣೆಯನ್ನ ಬಯಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಶಾಸಕ ವಿನಯ ಕುಲಕರ್ಣಿ ವಾಗ್ದಾಳಿ ನಡೆಸಿದರು.
Politics May 2, 2024, 3:15 PM IST
ನನ್ನನ್ನ ಸುನೀಲ್ ಬೋಸ್ ಮಿಮಿಕ್ರಿ ಮಾಡ್ಕೊಂಡು ಹಾಡು ಹೇಳ್ಕೊಂಡು ತಿರುಗುವವರಿಗೆ ಮತ ಹಾಕ್ಬೇಡಿ ಅಂತ ಹೇಳ್ತಾರೆ. ನಾನು ಹೇಳಿದ ಹಾಡುಗಳೆಲ್ಲ ಬರಿ ಭಕ್ತಿ ಗೀತೆಗಳೆ ಮಾದಪ್ಪನ ಪದ ಹಾಡಿದ್ದೇನೆ. ಮಾದಪ್ಪನ ಪದ ಹಾಡಿದ್ದು ತಪ್ಪಾ?, ಗಾಯಕರಿಗೆ ಅಪಮಾನ ಮಾಡೋದು ಎಷ್ಟು ಸರಿ ಅಂತ ಪ್ರಶ್ನಿಸಿದ ಎಸ್.ಬಾಲರಾಜ್
Politics Apr 23, 2024, 11:00 PM IST
ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವುದರಲ್ಲಿ ಗಣನೀಯ ಪಾತ್ರ ನಿರ್ವಹಿಸಿದ ಪಂಚಮಸಾಲಿ ಲಿಂಗಾಯತರನ್ನು ಪಕ್ಷ ಕಡೆಗಣಿಸಿದೆ. ಬಿಜೆಪಿಯವರು ಪಂಚಮಸಾಲಿ ನಾಯಕರ ನಡುವೆ ಒಳಗೊಳಗೆ ಜಗಳ ಹಚ್ಚಿ ಅಧಿಕಾರ ಪಡೆದುಕೊಂಡಿದ್ದಾರೆ. ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿಗಳಿಗೆ 2ಡಿ ಮೀಸಲಾತಿ ನೀಡಿ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡಿದರು. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು ಆಗ್ರಹಿಸಿದರು ಎನ್ನಲಾಗಿದೆ.
state Apr 16, 2024, 6:40 AM IST
ಪಂಚಮಸಾಲಿಗಳ ಸಾಕಷ್ಟು ಪರಿಶ್ರಮದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ಪಂಚಮಸಾಲಿಗಳನ್ನು ಅಧಿಕಾರದಿಂದ ದೂರು ಇರಿಸುವ ಕೆಲಸವಾಗುತ್ತಿದೆ. ಈ ಮೂಲಕ ರಾಜ್ಯ ಬಿಜೆಪಿ ಪಂಚಮಸಾಲಿ ನಾಯಕರನ್ನು ತುಳಿಯುವ ಕೆಲಸ ಮಾಡುತ್ತಿದೆ ಎಂದು ಬೇಸರ ಹೊರಹಾಕಿದ ವಚನಾನಂದ ಸ್ವಾಮೀಜಿ
state Apr 12, 2024, 6:34 AM IST
ಲಿಂಗಾಯತ ನಾಯಕರನ್ನು ತುಳಿಯುವುದರಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಲಿಂಗಾಯತ ನಾಯಕರಷ್ಟೇ ಅಲ್ಲ, ಅ ಭಾಗದ ಎಲ್ಲಾ ಸಮಾಜದ ಜನರು ಕೂಡ ನನ್ನ ರಾಜಕೀಯ ಪ್ರವೇಶವನ್ನು ಸ್ಬಾಗತ ಮಾಡಿದ್ದಾರೆ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿರುವ ದಿಂಗಾಳೇಶ್ವರ ಸ್ವಾಮೀಜಿ ತಿಳಿಸಿದರು.
Politics Apr 9, 2024, 8:55 PM IST
ಪ್ರಹ್ಲಾದ್ ಜೋಶಿ ಅವರು ಸ್ವಾಮೀಜಿಗಳ ವಿರುದ್ಧ ದಬ್ಬಾಳಿಕೆ ಮಾಡುತ್ತಿದ್ದಾರೆ. ನನ್ನ ಮೇಲೆ ದಬ್ಬಾಳಿಕೆ ಮಾಡಿದ್ದಾರೆ ಅಂತ ಮುರುಘ ಮಠ ಸ್ವಾಮೀಜಿಗಳೇ ಹೇಳಿದ್ದಾರೆ.
ಕೆಲ ಲೀಡರ್ ಗಳನ್ನು ಜೋಶಿ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಹರಿಹಾಯ್ದರು.
Politics Apr 5, 2024, 4:44 PM IST
ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಮಟ್ಟ ಹಾಕಬೇಕು ಎಂದರೆ ಬಿಜೆಪಿ ಮತ್ತು ಜೆಡಿಎಸ್ ಜತೆ ಸಮನ್ವಯ ಅತ್ಯಗತ್ಯ. ಈ ನಿಟ್ಟಿನಲ್ಲಿ ಉಭಯ ಪಕ್ಷಗಳ ಮುಖಂಡರು ತಮ್ಮ ತಮ್ಮ ಪ್ರತಿಷ್ಠೆಯನ್ನು ಬದಿಗೊತ್ತಿ, ಭಿನ್ನಾಭಿಪ್ರಾಯಗಳನ್ನು ಮರೆತು ಒಟ್ಟಾಗಿ ಕೆಲಸಮಾಡಬೇಕು. ಉಭಯ ಪಕ್ಷಗಳ ನಡುವೆ ಸಹಕಾರ, ಹೊಂದಾಣಿಕೆ ಇರಬೇಕು ಎಂದು ಸೂಚನೆ ನೀಡಿದ ಬಿಜೆಪಿಯ ರಾಷ್ಟ್ರೀಯ ನಾಯಕ ಅಮಿತ್ ಶಾ
Politics Apr 3, 2024, 8:59 AM IST
ಲಿಂಗಾಯತ ವಿಷಯದಲ್ಲಿ ಏನಾದರೂ ತಪ್ಪಾಗಿದ್ದರೆ ನೇರವಾಗಿ ಹೇಳಲಿ. ತಪ್ಪು ಎಸಗಿದ್ದರೆ ಕ್ಷಮೆ ಕೇಳಲೂ ಹಿಂಜರಿಯುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವೀರಶೈವ ಲಿಂಗಾಯತ ಸ್ವಾಮೀಜಿಯವರಲ್ಲಿ ಕೇಳಿಕೊಂಡಿಕೊಂಡಿದ್ದಾರೆ.
Politics Mar 29, 2024, 5:23 AM IST
ರಾಜಕಾರಣಿಗಳು ತಿಳಿದು ರಾಜಕಾರಣ ಮಾಡಬೇಕು ಹೊರತು ಇತರರನ್ನು ತುಳಿದು ರಾಜಕಾರಣ ಮಾಡಬಾರದು. ಧಾರವಾಡ ಮತಕ್ಷೇತ್ರಕ್ಕೆ ಕೇಂದ್ರ ಸಚಿವರಿಗೆ ಟಿಕೆಟ್ ಘೋಷಣೆ ಆಗಿದೆ. ಅದನ್ನು ಬದಲಾವಣೆ ಮಾಡಬೇಕು, ಬೇರೆ ಕ್ಷೇತ್ರ ಇಲ್ಲವೇ ಅವರನ್ನು ಪಕ್ಷದ ಕೆಲಸಕ್ಕೆ ಬಳಸಬೇಕು ಎಂದು ಒತ್ತಾಯಿಸಿದ ಸ್ವಾಮೀಜಿಗಳು
Karnataka Districts Mar 28, 2024, 8:04 AM IST
ತಾನು ಮುಖ್ಯಮಂತ್ರಿ ಆಗಬೇಕೆಂದು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಿದ್ದೇ ಸಂಸದ ಪ್ರಹ್ಲಾದ್ ಜೋಶಿ ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
state Mar 27, 2024, 4:46 PM IST
ಹಿಂದೆಯೇ ಬಿಜೆಪಿ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿ, ಟಿಕೆಟ್ ಹಂಚಿಕೆಯಲ್ಲಿ ಸಮುದಾಯಕ್ಕೆ ಟಿಕೆಟ್ ಕೋರಲಾಗಿತ್ತು. ಆದರೂ ನಮ್ಮ ಕೋರಿಕೆಗೆ ಮನ್ನಣೆ ನೀಡಿಲ್ಲ. ಕಾಂಗ್ರೆಸ್ 2, ಬಿಜೆಪಿ 1 ಕ್ಷೇತ್ರದಲ್ಲಿ ಮಾತ್ರ ಸಮುದಾಯದವರಿಗೆ ಮನ್ನಣೆ ನೀಡಿದೆ. ಈ ಮೂಲಕ ರಾಜ್ಯದಲ್ಲಿ 80 ಲಕ್ಷ ಜನಸಂಖ್ಯೆ ಹಾಗೂ 15 ಕ್ಷೇತ್ರಗಳಲ್ಲಿ ನಿರ್ಣಾಯಕ ಮತದಾರರಿರುವ ಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ
Politics Mar 26, 2024, 8:30 AM IST
ದೇಶದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲಿಯೇ ಕಾಂಗ್ರೆಸ್ನಲ್ಲಿ ಲಿಂಗಾಯತರನ್ನು ಕಡೆಗಣನೆ ಮಾಡಲಾಗುತ್ತಿದೆ ಎಂದು ಮನನೊಂದು ಕೆಪಿಸಿಸಿ ವಕ್ತಾರ ಸಂಕೇತ್ ಏಣಗಿ ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
Politics Mar 17, 2024, 8:32 PM IST