ನಿನ್ನೆ ಖಾಲಿ ಖಾಲಿ ಹೊಡೆಯುತ್ತಿದ್ದ ಕೆ ಆರ್ ಮಾರ್ಕೆಟ್ನಲ್ಲಿ ಇಂದು ಜನವೋ ಜನ. ವ್ಯಾಪಾರಸ್ಥರು, ಗ್ರಾಹಕರ ನಡುವೆ ಅಂತರವೇ ಇಲ್ಲ. ಜನರು ಕೂಡಾ ಅಂತರದ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಅಗತ್ಯ ವಸ್ತುಗಳ ಖರೀದಿಯಲ್ಲಿ ಬ್ಯುಸಿಯಾಗಿದ್ದಾರೆ. ಮಾರ್ಕೆಟ್ನ ಚಿತ್ರಣ ಹೀಗಿದೆ ನೋಡಿ!
Coronavirus Karnataka Mar 26, 2020, 12:13 PM IST
ನಗರದ ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟ ಬಂದ್ ಮಾಡುವಂತೆ ನಗರಸಭೆ ಹಾಗೂ ಪೊಲೀಸ್ ಸಿಬ್ಬಂದಿ ವತ್ತಾಯಿಸಿ ಮಾರುಕಟ್ಟೆಯನ್ನು ಮುಚ್ಚಿಸಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿಗಳ ವಿರುದ್ಧ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀವು ಈ ಮುಂಚೆ ನಮಗೆ ಸರಿಯಾದ ಮಾಹಿತಿ ನೀಡಿದ್ದರೆ ನಾವು ಸಾವಿರಾರು ರೂಪಾಯಿ ಖರ್ಚು ಮಾಡಿ ತರಕಾರಿಗಳನ್ನು ಕೊಳ್ಳುತ್ತಿರಲಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
Coronavirus Karnataka Mar 25, 2020, 1:38 PM IST
ಮುಂದಿನ ದಿನಗಳಲ್ಲಿ ಅಗತ್ಯ ಸಾಮಗ್ರಿಗಳು ಸಿಗದಿದ್ದರೆ ಎನ್ನುವ ಆತಂಕದಿಂದ ಸೋಮವಾರ ಅಂಗಡಿಗಳು, ಮಾರುಕಟ್ಟೆಗೆ ಧಾವಿಸಿದ ಜನರಿಗೆ ಆಘಾತ ಕಾದಿತ್ತು. ಹಣ ಗಳಿಕೆಗೆ ಇದೇ ಸರಿಯಾದ ಸಮಯ ಎಂದು ಕೆಲ ವ್ಯಾಪಾರಸ್ಥರು ತರಕಾರಿಗೆ ದಿಢೀರನೆ ದರ ಏರಿಕೆ ಮಾಡಿದ್ದರು! ಇದರಿಂದಾಗಿ ಮೊದಲೇ ಆತಂಕಗೊಂಡಿದ್ದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
Coronavirus Karnataka Mar 24, 2020, 11:14 AM IST
ಬೆಂಗಳೂರಿನಲ್ಲಿ 1 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಅಕ್ರಮ ವ್ಯಾಪಾರಸ್ಥರು ಇರುವುದು ಪತ್ತೆಯಾಗಿದೆ. ಪರವಾನಿಗೆ ಪಡೆದವರ ಸಂಖ್ಯೆಗಿಂತ ಅನಧಿಕೃತ ವ್ಯಾಪಾರಿಗಳ ಸಂಖ್ಯೆಯೇ ಹೆಚ್ಚಿದೆ.
Karnataka Districts Mar 5, 2020, 9:25 AM IST
ತರಳಬಾಳು ಜಾತ್ರಾ ಮಹೋತ್ಸವದಲ್ಲಿ ಇದ್ದ ನೂರಾರು ಸ್ಟಾಲ್ ಗಳಲ್ಲಿ ಖೋಟಾನೋಟುಗಳದ್ದೇ ಹಾವಳಿಯಾಗಿತ್ತು. ಕತ್ತಲೆಯಲ್ಲಿ ವ್ಯವಹಾರ ಮಾಡಿದ ಜನರು ಖೋಟಾ ನೋಟುಗಳನ್ನು ನೀಡಿದ್ದು, ಈ ಬಗ್ಗೆ ಅಂಗಡಿ ಮಾಲಿಕರು ತಮ್ಮ ಅಳಲು ತೋಡಿಕೊಂಡಿದ್ದಾರೆ.
Karnataka Districts Feb 7, 2020, 10:04 AM IST
ಪೊಲೀಸರ ಟಾರ್ಚರ್ನಿಂದ ಗೂಡಂಗಡಿಯವರ ಬದಕು ಅಕ್ಷರಶಹಃ ಬೀದಿಗೆ ಬಿದ್ದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಪಾರ್ಕಿಂಗ್ ನೆಪ ಹೇಳಿ ಗಂಗಾವತಿ ಪೊಲೀಸರು ನಮ್ಮ ಅಂಗಡಿಗಳನ್ನು ತೆರವು ಮಾಡಿಸಿದ್ದಾರೆ ಎಂದು ವ್ಯಾಪಾರಸ್ಥರು ಆರೋಪಿಸಿದ್ದಾರೆ.
Karnataka Districts Dec 13, 2019, 11:00 AM IST
ಜನವರಿ ತಿಂಗಳಲ್ಲಿ ಬನಶಂಕರಿ ಜಾತ್ರೆ ಇರುವುದರಿಂದ ಯಾವುದೇ ಅಹಿತಕರ ಘಟನೆಗಳಾಗಲಿ, ಅಪರಾಧಗಳಾಗಲಿ ಜರುಗದಂತೆ ಎಲ್ಲಾ ವ್ಯಾಪಾರಸ್ಥರು ಸಿಸಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಇದರಿಂದ ಅಪರಾಧಗಳನ್ನು ತಡೆಯಲು ತಪ್ಪಿತಸ್ಥರನ್ನು ಬಂಧಿಸಲು ಸಹಕಾರಿಯಾಗುತ್ತದೆ ಎಂದು ತಹಸೀಲ್ದಾರ್ ಎಸ್.ಎಸ್.ಇಂಗಳೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
Karnataka Districts Dec 13, 2019, 8:27 AM IST
ಪಟ್ಟಣದ ಬಸ್ ನಿಲ್ದಾಣದ ಮುಖ್ಯ ರಸ್ತೆಯಿಂದ ತರಕಾರಿ ಮಾರುಕಟ್ಟೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಗಳ ಎರಡು ಬದಿಗಳಲ್ಲಿನ ಟಿನ್ ಶೆಡ್ಗಳನ್ನು ತೆರವುಗೊಳಿಸಿರುವುದು ಖಂಡನಾರ್ಹ ಜೊತೆಗೆ ಪೂರ್ವಾಪರ ಮುನ್ಸೂಚನೆ ನೀಡದೇ ವ್ಯಾಪಾರಸ್ಥರ ಮೇಲೆ ದೌರ್ಜನ್ಯ ಮಾಡುವುದುರ ಮೂಲಕ ಪುರಸಭೆ ಮುಖ್ಯಾಧಿಖಾರಿ ನರಸಿಂಹಮೂರ್ತಿ ಪುಟ್ ಪಾಥ್ ವ್ಯಾಪರಸ್ಥರಿಗೆ ತೊಂದರೆ ನೀಡಿದ್ದಾರೆ ಎಂದು ಮುಖಂಡರಾದ ಗುರುಬಸ್ಸಪ್ಪ ಸಜ್ಜನ್ ಅವರು ಆರೋಪಿಸಿದರು.
Raichur Nov 8, 2019, 11:25 AM IST
ಜಮಖಂಡಿ ರಾಜ ಮಹಾರಾಜರು ನಗರೀಕರಣಕ್ಕೆ ಹೆಚ್ಚಿನ ಅನುಕೂಲವಾಗಲೆಂದು ತರಕಾರಿ ಮಾರುಕಟ್ಟೆಗೆ ಪ್ರತ್ಯೇಕ ಕಟ್ಟಡ ನಿರ್ಮಿಸಿ ವ್ಯಾಪಾಸ್ಥರಿಗೆ ಸುವ್ಯವಸ್ಥೆ ಮಾಡಿಕೊಟ್ಟಿದ್ದರು. ಮುಂದೆ ಸಂಸ್ಥಾನಗಳು ಹೋಗಿ ರಾಜ್ಯ ಸರ್ಕಾರದ ಅಧೀನದಲ್ಲಿ ತರಕಾರಿ ಮಾರುಕಟ್ಟೆಗೆ ಯಾವುದೇ ಮೂಲಭೂತ ಸೌಲಭ್ಯ ನೀಡದ್ದಕ್ಕೆ ತರಕಾರಿ ವ್ಯಾಪಾರಸ್ಥರು ರಸ್ತೆ ಬದಿಗೆ ಬಂದು ತಮ್ಮ ವ್ಯಾಪಾರ ವಹಿವಾಟು ನಡೆಸಿದ್ದರಿಂದ ವಾಹನ, ಪಾದಚಾರಿಗಳ ಸಂಚಾರಕ್ಕೆ ತುಂಬಾ ತೊಂದರೆ ಉಂಟಾಗುತ್ತಿದೆ.
Bagalkot Nov 3, 2019, 12:32 PM IST
ಅಭಿವೃದ್ಧಿ ಕಾಣದೆ ಪಟ್ಟಣದಲ್ಲಿರುವ ದಿನದ ಸಂತೆ ಅಕ್ಷರಶಃ ಕೆಸರಿನ ಗದ್ದೆ ಆಗಿದೆ. ಮಾರುಕಟ್ಟೆ ಅಸ್ವಚ್ಛತೆಯಿಂದ ಕೂಡಿರುವುದರಿಂದ ವ್ಯಾಪಾರಸ್ಥರು ಹಾಗೂ ಗ್ರಾಹಕರು ನಿತ್ಯ ರೋಗದ ಭಯದಲ್ಲೇ ವ್ಯಾಪಾರ ಮಾಡುವಂತಾಗಿದೆ.
Belagavi Oct 30, 2019, 12:05 PM IST
ಪಟ್ಟಣದ ಜೋಡು ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಸ್ಥರನ್ನು ಪೊಲೀಸ್ ಅಧಿಕಾರಿಗಳು ರಸ್ತೆಯ ಇನ್ನೊಂದು ಬದಿ ಸ್ಥಳಾಂತರಿಸಿ ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರು. ಆದರೆ ಪಿಎಸ್ಐ ಗುರುಶಾಂತ ದಾಶ್ಯಾಳ ಹಾಗೂ ಸಿಬ್ಬಂದಿ ಮುಂದೆ ಹೋಗುತ್ತಿದ್ದಂತೆ ಮತ್ತೆ ಬೀದಿ ಬದಿ ವ್ಯಾಪಾರಸ್ಥರು ರಸ್ತೆಯಲ್ಲಿ ವ್ಯಾಪಾರ ಮುಂದುವರೆಸಿದ್ದು, ವಾಹನ ಸಂಚಾರ ಮತ್ತಷ್ಟು ದುಸ್ತರವಾಗಿದೆ.
Gadag Oct 27, 2019, 9:13 AM IST
ಬಾಗೇಪಲ್ಲಿ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಕೆಸರು ಗದ್ದೆಯಾಗಿ ಪರಿವರ್ತನೆಯಾದ ಪರಿಣಾಮ ವ್ಯಾಪಾರಸ್ಥರು, ರೈತರು ಸೇರಿದಂತೆ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಶುಕ್ರವಾರ ಸುರಿದ ಮಳೆಯಿಂದ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಕೆಸರು ಗದ್ದೆಯಾಗಿತ್ತು.
Karnataka Districts Sep 29, 2019, 2:59 PM IST
ತುಮಕೂರಿನ ಹುಳಿಯಾರು ಪ್ರದೇಶದ ಫುಟ್ಪಾತ್ ವ್ಯಾಪಾರಸ್ಥರು ಜಿಲ್ಲಾಧಿಕಾರಿ ಕಾಲಿಗೆ ಬಿದ್ದಿದ್ದಾರೆ. ಬಸ್ ನಿಲ್ದಾಣದಲ್ಲಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಸ್ಥರು ತೆರವು ಕಾರ್ಯಾಚರಣೆಯಿಂದಾಗಿ ಆದಾಯ ಕಳೆದುಕೊಂಡಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಾಗಿ ಡಿಸಿಗೆ ಕೇಳಿಕೊಂಡಿದ್ದಾರೆ.
Karnataka Districts Jul 26, 2019, 1:38 PM IST
ಪ್ರಧಾನಿ ಮೋದಿ 2.0 ಸರ್ಕಾರ ಅಧಿಕೃತವಾಗಿ ಕಾರ್ಯಾರಂಭ ಮಾಡಿದೆ. ಅಧಿಕಾರ ಸ್ವೀಕರಿಸಿದ ಮೊದಲ ದಿನದಿಂದಲೇ ಕಾರ್ಯೋನ್ಮುಖರಾಗಿರುವ ಪ್ರಧಾನಿ ಮೋದಿ, ತಮ್ಮ ಮೊದಲ ಸಂಪುಟ ಸಭೆಯಲ್ಲಿ ಭರ್ಜರಿ ಕೊಡುಗೆಗಳನ್ನು ಘೋಷಿಸಿದ್ದಾರೆ.
BUSINESS May 31, 2019, 9:48 PM IST