ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಆಗಿದ್ದನ್ನ ನಾನು ಸಮರ್ಥಿಸುವುದಿಲ್ಲ. ಬಾಂಬ್ ಸ್ಫೋಟಿಸಿದವರ ವಿರುದ್ಧ ಕ್ರಮ ತಗೊಬೇಕು, ಜೈಲಿಗೆ ಹಾಕಿ ಎಲ್ಲ ರೀತಿಯ ಶಿಕ್ಷೆ ಆಗಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
Politics Mar 5, 2024, 2:45 PM IST
ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಬೆಂಗಳೂರು ನಿವಾಸಿಗಳು ಗ್ರಾಮಿಣ ಪ್ರದೇಶಗಳಿಗೆ ತೆರಳಲು ಅನುಕೂಲ ಆಗುವಂತೆ ಕೆಎಸ್ಆರ್ಟಿಸಿಯಿಂದ 1,500 ಹೆಚ್ಚುವರಿ ಬಸ್ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.
state Mar 4, 2024, 7:28 PM IST
ಸಾರಿಗೆ ಇಲಾಖೆಯ ನಾಲ್ಕೂ ನಿಗಮಗಳ ನೌಕರರ ಹಲವು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಅಧಿಕಾರಿಗಳು ತಕ್ಷಣವೇ ಮುಂದಾಗಬೇಕು ಎಂದು ರಾಜ್ಯ ಸಾರಿಗೆ ನಿಗಮಗಳ ನೌಕರರ ಕೂಟದ ಕ್ಷೇಮಾಭಿವೃದ್ಧಿ ಸಂಘ ಮನವಿ ಮಾಡಿದೆ.
State Govt Jobs Mar 4, 2024, 4:06 PM IST
ಬಿಎಂಟಿಸಿ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದ ಅಡಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶನಿವಾರ ನೇಮಕಾತಿ ಆದೇಶಪತ್ರ ವಿತರಿಸಿದರು.
State Govt Jobs Mar 4, 2024, 10:43 AM IST
ಶಕ್ತಿ ಯೋಜನೆ ಆರಂಭಕ್ಕೂ ಮೊದಲು ಪ್ರತಿನಿತ್ಯ 85 ಲಕ್ಷ ಪ್ರಯಾಣಕರು ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದು, ಯೋಜನೆ ಜಾರಿಗೆ ಬಂದ ನಂತರ 1.10 ಕೋಟಿ ಜನ ಪ್ರಯಾಣಿಸುತ್ತಿದ್ದಾರೆ. ಇದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
Politics Mar 3, 2024, 9:23 PM IST
ತಾಲೂಕಿನ ಗ್ರಾಮೀಣ ಭಾಗಕ್ಕೆ ಸರ್ಕಾರಿ ಬಸ್ ಸೌಲಭ್ಯದ ಬಹುದಿನದ ಬೇಡಿಕೆಗೆ ಪೂರಕವಾಗಿ ಸಾರಿಗೆ ಸಚಿವರು 5 ಹೊಸ ಬಸ್ ಸಂಚಾರ ಆರಂಭಿಸುವ ಮೂಲಕ ಸ್ಪಂದಿಸಿದ್ದು, ಈ ದಿಸೆಯಲ್ಲಿ ಸಾರಿಗೆ ಸಚಿವರಿಗೆ ತಾಲೂಕಿನ ಎಲ್ಲ ಮಹಿಳೆಯರು, ಶಾಲಾ ಕಾಲೇಜು ವಿದ್ಯಾರ್ಥಿಗಳ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
Karnataka Districts Mar 1, 2024, 8:12 PM IST
ಸಾರಿಗೆ ಬಸ್ ಬ್ರೇಕ್ ಫೇಲ್ ಆಗಿ ನಿಲ್ದಾಣದ ಡಿವೈಡರ್ಗೆ ಡಿಕ್ಕಿಯಾದ ಘಟನೆ ಗದಗ ನಗರದ ಪುಟ್ಟರಾಜ ಬಸ್ ನಿಲ್ದಾಣದ ಬಳಿ ನಡೆದಿದ್ದು, ಘಟನೆಯಲ್ಲಿ ಓರ್ವ ಯುವತಿ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
CRIME Mar 1, 2024, 6:47 PM IST
ಪ್ರಾಯೋಗಿಕ ಹಂತದಲ್ಲಿ 12 ಇ-ಆಟೊಗಳನ್ನು ಯಲಚೇನಹಳ್ಳಿ ಮತ್ತು ಇಂದಿರಾನಗರ ಸ್ಟೇಷನ್ ಗಳಲ್ಲಿ ನಿಯೋಜಿಸಲಾಗಿದ್ದು ಪ್ರತಿ ಸ್ಟೇಷನ್ ನಿಂದ 4 ಕಿ.ಮೀ. ಸುತ್ತಲಿನ ಪ್ರದೇಶಗಳಲ್ಲಿ ಪ್ರಯಾಣಿಕರಿಗೆ ಸೇವೆ ಒದಗಿಸುತ್ತವೆ. ಸಂಪೂರ್ಣ ಮಹಿಳೆಯರು ಚಾಲಿಸುವ ಎಲೆಕ್ಟ್ರಿಕ್ ಆಟೋ ರಿಕ್ಷಾ ರೈಡ್ ಹಾಗೂ ಅತ್ಯುತ್ತಮ ಸೇವೆ ಪ್ರಯಾಣಿಕರಿಗೆ ಸಿಗಲಿದೆ.
Deal on Wheels Feb 28, 2024, 7:13 PM IST
2023ರ ಸೆಪ್ಟೆಂಬರ್ನಿಂದ ಫೆಬ್ರವರಿ 27ರ ವರೆಗೆ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯಲ್ಲಿ 46 ದ್ವಿಚಕ್ರ ವಾಹನ ವ್ಹೀಲಿಂಗ್ ಪ್ರಕರಣ ದಾಖಲಿಸಲಾಗಿದೆ. ಈ ಪೈಕಿ 34 ಮಂದಿ ವಯಸ್ಕರು ಹಾಗೂ 12 ಮಂದಿ ಅಪ್ರಾಪ್ತರಾಗಿದ್ದಾರೆ. 46 ಪ್ರಕರಣಗಳ ಪೈಕಿ 30 ದ್ವಿಚಕ್ರ ವಾಹನಗಳ ನೋಂದಣಿ ಪ್ರಮಾಣ ಪತ್ರಗಳನ್ನು ಅಮಾನತುಪಡಿಸಲು ಸಾರಿಗೆ ಇಲಾಖೆಗೆ ಕಳುಹಿಸಲಾಗಿತ್ತು. ಈ ಪೈಕಿ 8 ದ್ವಿಚಕ್ರ ವಾಹನಗಳ ನೋಂದಣಿ ಪ್ರಮಾಣ ಪತ್ರಗಳನ್ನು 3 ತಿಂಗಳ ಅವಧಿಗೆ ಅಮಾನತುಗೊಳಿಸಲಾಗಿದೆ.
CRIME Feb 28, 2024, 8:52 AM IST
ಕಳೆದ ನಾಲ್ಕು ವರ್ಷಗಳ ಹಿಂದೆ 2020ರಲ್ಲಿ ಸ್ಥಗಿತಗೊಂಡಿದ್ದ ಕೆಎಸ್ಆರ್ಟಿಸಿ ಚಾಲಕ-ಕಂ-ನಿರ್ವಾಹಕ 2000 ಹುದ್ದೆಗಳ ನೇಮಕಾತಿಗೆ ಮರುಚಾಲನೆ ನೀಡಲಾಗಿದೆ. ಮಾ.6ರಿಂದ ದಾಖಲಾತಿ ಪರಿಶೀಲನೆ ಮತ್ತು ಫಿಸಿಕಲ್ ಟೆಸ್ಟ್ ಆರಂಭವಾಗಲಿದೆ.
State Govt Jobs Feb 27, 2024, 7:20 PM IST
ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಧರ್ಮಾದಾಯ ದತ್ತಿಗಳ ಕಾಯ್ದೆಗೆ ತಿದ್ದುಪಡಿ ಮಾಡುತ್ತಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರೋಧ ಮಾಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು ಈ ರೀತಿ ತಿರುಗೇಟು ನೀಡಿದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ
Politics Feb 25, 2024, 9:13 PM IST
ಹೆಲ್ಮೆಟ್, ಸಿಗ್ನಲ್ ಜಂಪ್, ರಾಂಗ್ ಸೈಡ್ ಸೇರಿದಂತೆ ಯಾವುದೇ ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಜೋಕೆ. ಹೊಸ ನಿಯಮದ ಜಾರಿಗೆ ಬರುತ್ತಿದೆ. ನಿಯಮ ಉಲ್ಲಂಘಿಸಿದ ವಾಹನ ಸೀಜ್ ಮಾಡಿ ಗುಜುರಿಗೆ ಹಾಕಲಾಗುತ್ತದೆ. ಕರ್ನಾಟಕ ಸಾರಿಗೆ ಇಲಾಖೆ ಹೊಸ ನಿಯಮ ತರಲು ಸಜ್ಜಾಗಿದೆ.
Deal on Wheels Feb 25, 2024, 8:57 PM IST
ಧಾರ್ಮಿಕ ದತ್ತಿ ಕಾಯ್ದೆ ತಿದ್ದುಪಡಿ ಮಾಡಿದವರೇ ಬಿಜೆಪಿಯವರು. ಈ ಕಾಯ್ದೆ ಜಾರಿಗೆ ತಂದಿದ್ದೇ ವಿಜಯೇಂದ್ರ ಅವರ ಅಪ್ಪ, ಯಡಿಯೂರಪ್ಪ ಅವರೇ 2011ರಲ್ಲಿ ಈ ಕಾಯ್ದೆ ತಂದಿದ್ದು ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
Politics Feb 25, 2024, 2:58 PM IST
ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ರೋಪ್ ವೇ ನಿರ್ಮಾಣಕ್ಕೆ ವಿರೋಧವೂ ವ್ಯಕ್ತವಾಯಿತು ಮತ್ತು ನಿರ್ಮಾಣ ಮಾಡಲು ಮುಂದೆ ಬಂದವರ ಪ್ರಸ್ತಾವನೆಯೂ ಅಷ್ಟಾಗಿ ಸಮರ್ಪಕವಾಗಿ ಇಲ್ಲದೆ ಇರುವುದರಿಂದ ಇದಕ್ಕೆ ಅನುಮೋದನೆ ದೊರೆಯಲಿಲ್ಲ. ಹೀಗಾಗಿ, ಯೋಜನೆ ನನೆಗುದಿಗೆ ಬಿದ್ದಿತು. ಇದಾದ ಮೇಲೆ ಬಿಜೆಪಿ ಸರ್ಕಾರದಲ್ಲಿ ಬಜೆಟ್ ನಲ್ಲಿ ₹100 ಕೋಟಿ ಘೋಷಣೆಯಾದಾಗ ಅದರಲ್ಲಿ ರೋಪ್ ನಿರ್ಮಾಣವೂ ಒಳಗೊಂಡಿತ್ತು. ಆದರೆ ಅದು ಸಹ ಕಾರ್ಯಗತವಾಗಲೇ ಇಲ್ಲ.
Karnataka Districts Feb 23, 2024, 11:20 PM IST
ವಿಜಯಪುರ ಜಿಲ್ಲೆಯ ಗಡಿ ಗ್ರಾಮವಾದ ಧೂಳಖೇಡದಿಂದ ಸೋಲಾಪೂರಕ್ಕೆ 25 ಕಿಮೀ ಅಂತರವಿದೆ. ಈ ಭಾಗದ ಪ್ರತಿಯೊಂದು ಬಸ್ಸುಗಳು ಅಂತಾರಾಜ್ಯ ಸಾರಿಗೆ ಬಸ್ಗಳಾಗಿರುವುದರಿಂದ ಈ ಭಾಗದ ಮಹಿಳೆಯರು ಹೊರ್ತಿ, ಬಳ್ಳೊಳ್ಳಿ, ಝಳಕಿ, ಬತಗುಣಕಿ ಮತ್ತು ಧೂಳಖೇಡ ಮಾರ್ಗವಾಗಿ ಹೋಗುವ ಬಸ್ಗಳಲ್ಲಿ ಶಕ್ತಿ ಯೋಜನೆ ಸೌಲಭ್ಯ ಇರದೇ ಇರುವುದರಿಂದ ಈ ಭಾಗದ ಸಾರ್ವಜನಿಕರು ಆಸ್ಪತ್ರೆಗೆ ಹೋಗಲು ಸೋಲಾಪೂರವನ್ನೇ ಅವಲಂಬಿಸಿದ್ದಾರೆ. ಹೀಗಾಗಿ ಮಹಿಳೆಯರು ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ: ಶಾಸಕ ಯಶವಂತರಾಯಗೌಡ ಪಾಟೀಲ
Karnataka Districts Feb 23, 2024, 9:45 PM IST