ಶಿವಮೊಗ್ಗ ತುಂಗಾ ಸೇತುವೆ ಮೇಲೆ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಅಲ್ಲದೇ 2.70ಮೀ.ಎತ್ತರದ ಬ್ಯಾರಿಯರ್‌ ನಿರ್ಮಿಸಲಾಗಿದೆ.  

ಶಿವಮೊಗ್ಗ [ಅ.22]:  ನಗರದ ಪರಿಮಿತಿಯಲ್ಲಿರುವ ಎಸ್‌.ಎಚ್‌.-57ರ ತುಂಗಾನದಿಗೆ ಅಡ್ಡವಾಗಿ ನಿರ್ಮಿಸಿರುವ 146 ವರ್ಷಗಳಷ್ಟುಹಳೆಯದಾಗಿರುವ ಸೇತುವೆ ಸುಸ್ಥಿರತೆಗಾಗಿ 1.70 ಕೋಟಿ ರು. ವೆಚ್ಚದಲ್ಲಿ ಪುನಶ್ಚೇತನ ಕಾಮಗಾರಿ ಶೀಘ್ರ ಕೈಗೊಳ್ಳಲು ಉದ್ದೇಶಿಸಲಾಗಿದೆ. 

Add Asianetnews Kannada as a Preferred SourcegooglePreferred

ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಕಾಮಗಾರಿ ಆರಂಭಿಸಲಾಗುವುದು. ಅಲ್ಲಿಯವರೆಗೆ ಸೇತುವೆ ಮೇಲೆ ಲಘು ವಾಹನಗಳ ಸಂಚಾರಕ್ಕೆ ಅವಕಾಶವಿದ್ದು, ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಅಲ್ಲದೇ 2.70ಮೀ.ಎತ್ತರದ ಬ್ಯಾರಿಯರ್‌ ನಿರ್ಮಿಸಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ರಸ್ತೆಯಲ್ಲಿ ರಾತ್ರಿವೇಳೆಯಲ್ಲಿ ವಾಹನಗಳು ಅತಿವೇಗದಲ್ಲಿ ಸಂಚರಿಸುವುದರಿಂದ ಯಾವುದೇ ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹೈಟ್‌ ಬ್ಯಾರಿಯರ್‌ಗೆ ರಿಫ್ಲೆಕ್ಟರ್‌, ಎರಡು ಬದಿಗಳಲ್ಲಿ ರಂಬಲ್ಸ್‌, ಬ್ಲಿಂಕರ್ಸ್‌ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಲು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಚಾಲಕರು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಹಾಗೂ ಈ ಕಾಮಗಾರಿ ಮುಕ್ತಾಯಗೊಳ್ಳುವವರೆಗೆ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಅವರು ಮನವಿ ಮಾಡಿದ್ದಾರೆ.