Asianet Suvarna News Asianet Suvarna News

ದಸರಾ ಮೆರವಣಿಗೆ ವೇಳೆ ಹೃದಯಾಘಾತದಿಂದ ಸಾವು

ದಸರಾ ಉತ್ಸವ ಮೆರವಣಿಗೆ ಸಂದರ್ಭದಲ್ಲಿ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆಯಿತು.

Man Dies in Dasara Prosession Due To Heart Attack
Author
Bengaluru, First Published Oct 9, 2019, 1:10 PM IST

ತೀರ್ಥಹಳ್ಳಿ (ಅ.09): ದಸರಾ ಉತ್ಸವ ಮೆರವಣಿಗೆ ಸಂದರ್ಭದಲ್ಲಿ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ನಡೆಯಿತು. 

ಇಲ್ಲಿನ ಕಿರಣ್‌ ಸ್ಟುಡಿಯೋ ಮಾಲೀಕರಾದ ಸಂಜೀವ ಶೆಟ್ಟಿ(67) ನಿಧನರಾದವರು. ತೀರ್ಥಹಳ್ಳಿ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ದಸರಾ ಉತ್ಸವ, ಮೆರವಣಿಗೆ ಸಂದರ್ಭದಲ್ಲಿ ಭಾಗವಹಿಸಿದ್ದ ಸಂಜೀವ ಶೆಟ್ಟಿರಥಬೀದಿಯಲ್ಲಿ ಮೆರವಣಿಗೆ ಸಾಗಿದ್ದಾಗ ಮಾರ್ಗ ಮಧ್ಯದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತಕ್ಷಣವೇ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಫಲಕಾರಿಯಾಗದೆ ಮೃತಪಟ್ಟರು. ಸಂಜೀವ ಶೆಟ್ಟರು ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು. ಫೋಟೋಗ್ರಫಿಯಲ್ಲೂ ಪಳಗಿದ್ದ ಅವರು ಜನಾನುರಾಗಿಯಾಗಿದ್ದರು. ಶಾಸಕ ಆರಗ ಜ್ಞಾನೇಂದ್ರ, ಆರ್‌.ಎಂ. ಮಂಜುನಾಥ ಗೌಡ ಮತ್ತು ದಸರಾ ಉತ್ಸವ ಸಮಿತಿ ಮುಖಂಡರು ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Follow Us:
Download App:
  • android
  • ios