ಶಿವಮೊಗ್ಗದ ಸಾಗರದಲ್ಲಿ ದಾಖಲೆ ಇಲ್ಲದ 2 ಕೋಟಿ ರೂ ವಶ | ಕಾರಿನಲ್ಲಿ ಪ್ರಗತಿ ಗ್ರಾಮೀಣ ಬ್ಯಾಂಕ್‌ನ ಅಸಿಸ್ಟೆಂಟ್‌ ಮ್ಯಾನೇಜರ್‌ ಹಣ ತೆಗೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ. 

ಶಿವಮೊಗ್ಗ (ಮಾ. 22): ಸಾಗರ ತಾಲೂಕಿನ ಅಮಟಿಕೊಪ್ಪದ ಬಳಿ ಚೆಕ್‌ ಪೋಸ್ಟ್‌ನಲ್ಲಿ ದಾಖಲೆ ಇಲ್ಲದ ಅಂದಾಜು .2 ಕೋಟಿ ಹಣವನ್ನು ಅಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾರಿನಲ್ಲಿ ಪ್ರಗತಿ ಗ್ರಾಮೀಣ ಬ್ಯಾಂಕ್‌ನ ಅಸಿಸ್ಟೆಂಟ್‌ ಮ್ಯಾನೇಜರ್‌ ಹಣ ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಅನುಮಾನಗೊಂಡ ಫ್ಲೈಯಿಂಗ್‌ ಸ್ಕಾ$್ವಡ್‌ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಸರಿಯಾದ ದಾಖಲೆ ಇಲ್ಲದೆ ಇರುವುದರಿಂದ .2 ಕೋಟಿ ಹಣವನ್ನು ವಶಕ್ಕೆ ಪಡೆದಿದ್ದು, ತೆರಿಗೆ ಇಲಾಖೆ ವಶಕ್ಕೆ ಒಪ್ಪಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

- ಸಾಂದರ್ಭಿಕ ಚಿತ್ರ