ಟಿ20 ಫೈಟ್: ಜಯದ ತವಕದಲ್ಲಿ ಟೀಂ ಇಂಡಿಯಾ
ಭಾರತ-ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟಿ20 ಸರಣಿಗೆ ಕ್ಷಣಗಣನೆ ಆರಂಭವಾಗಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದರಿಂದ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಶುಭಾರಂಭ ಮಾಡುವ ನಿರೀಕ್ಷೆಯಲ್ಲಿವೆ ಉಭಯ ತಂಡಗಳು. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ಮೊಹಾಲಿ(ಸೆ.18): ವೆಸ್ಟ್ಇಂಡೀಸ್ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿದ ಭಾರತ ಕ್ರಿಕೆಟ್ ತಂಡ, ತವರಿನ ಋುತುವನ್ನು ಭರ್ಜರಿಯಾಗಿ ಆರಂಭಿಸಲು ಕಾತರಿಸುತ್ತಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯ ಮಳೆಗೆ ಬಲಿಯಾದ ಬಳಿಕ, ಬುಧವಾರ ನಡೆಯಲಿರುವ 2ನೇ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ.
2020ರ ಟಿ20 ವಿಶ್ವಕಪ್ಗೆ ಸಿದ್ಧತೆ ಆರಂಭಿಸಲಿರುವ ಭಾರತ, ಈಗಾಗಲೇ ತನ್ನ ಯೋಜನೆಗಳ ಬಗ್ಗೆ ಸುಳಿವು ನೀಡಿದೆ. ಇತ್ತೀಚೆಗೆ ನಾಯಕ ವಿರಾಟ್ ಕೊಹ್ಲಿ, ಆಟಗಾರರಿಗೆ 4ರಿಂದ 5 ಅವಕಾಶಗಳಷ್ಟೇ ಸಿಗಲಿದೆ. ಅದರಲ್ಲೇ ತಮ್ಮ ಸಾಮರ್ಥ್ಯ ಸಾಬೀತು ಪಡಿಸಿ ವಿಶ್ವಕಪ್ ತಂಡದಲ್ಲಿ ಸ್ಥಾನ ಖಚಿತ ಪಡಿಸಿಕೊಳ್ಳಬೇಕು ಎನ್ನುವ ಸ್ಪಷ್ಟ ಸಂದೇಶ ರವಾನಿಸಿದ್ದರು. ಹೀಗಾಗಿ ಆಟಗಾರರು ಒತ್ತಡದಲ್ಲಿದ್ದು, ಉತ್ತಮ ಪ್ರದರ್ಶನ ತೋರಲೇಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.
ಟೀಂ ಇಂಡಿಯಾಗೆ ಭದ್ರತೆ ನೀಡಲು ಚಂಡೀಗಢ ಪೊಲೀಸ್ ನಿರಾಕರಣೆ!
ಪ್ರಮುಖವಾಗಿ ಯುವ ವಿಕೆಟ್ ಕೀಪರ್ ರಿಷಭ್ ಪಂತ್ ಮೇಲೆ ತಂಡ ವಿಶ್ವಾಸ ಕಳೆದುಕೊಳ್ಳುತ್ತಿರುವಂತೆ ಕಾಣುತ್ತಿದೆ. ಪ್ರಧಾನ ಕೋಚ್ ರವಿಶಾಸ್ತ್ರಿ, ನೂತನ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಪಂತ್ ಬೇಜವಾಬ್ದಾರಿತನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪಂತ್ ಮೇಲೆ ಎಲ್ಲರ ಕಣ್ಣಿದೆ.ಯುವ ಸ್ಪಿನ್ನರ್ಗಳಾದ ರಾಹುಲ್ ಚಹಾರ್ ಹಾಗೂ ವಾಷಿಂಗ್ಟನ್ ಸುಂದರ್ ಮೇಲೆಯೂ ಒತ್ತಡವಿದೆ. ಕುಲ್ದೀಪ್ ಯಾದವ್ ಹಾಗೂ ಯಜುವೇಂದ್ರ ಚಹಲ್ರನ್ನು ಹೊರಗಿಟ್ಟು ಈ ಇಬ್ಬರಿಗೆ ಅವಕಾಶ ನೀಡಲಾಗಿದೆ.
ಟೀಂ ಇಂಡಿಯಾದ ಈ ಮೂವರು ಕ್ರಿಕೆಟಿಗರಿಗೆ ಮಾತ್ರ 7 ಕೋಟಿ ಸಂಬಳ!
ವಿಶ್ವಕಪ್ ವೇಳೆಗೆ ತನ್ನ ಕೆಳ ಕ್ರಮಾಂಕದ ಬ್ಯಾಟಿಂಗ್ ಬಲ ಹೆಚ್ಚಿಸಿಕೊಳ್ಳುವ ಉದ್ದೇಶ ಹೊಂದಿರುವ ಭಾರತ, 8, 9 ಹಾಗೂ 10ನೇ ಕ್ರಮಾಂಕದ ಆಟಗಾರರಿಂದ ಉಪಯುಕ್ತ ರನ್ ಕೊಡುಗೆ ನಿರೀಕ್ಷೆ ಮಾಡುತ್ತಿದೆ. ಹೀಗಾಗಿ ಮುಂಬರುವ ಸರಣಿಗಳಲ್ಲಿ ಮತ್ತಷ್ಟು ಪ್ರಯೋಗಗಳನ್ನು ಮಾಡುವ ಸಾಧ್ಯತೆ ಇದೆ.
ಇದೇ ವೇಳೆ ಆರಂಭಿಕನ ಸ್ಥಾನಕ್ಕೆ ಶಿಖರ್ ಧವನ್ ಹಾಗೂ ಕೆ.ಎಲ್.ರಾಹುಲ್ ನಡುವೆ ಪೈಪೋಟಿ ಮುಂದುವರಿಯಲಿದೆ. ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಹಾಗೂ ಮನೀಶ್ ಪಾಂಡೆ ನಡುವೆ ಸ್ಪರ್ಧೆ ಇದ್ದು, ಇಬ್ಬರಿಗೂ ಇದು ಮಹತ್ವದ ಸರಣಿ ಎನಿಸಿದೆ.
ಆಫ್ರಿಕಾಕ್ಕೆ ಅನುಭವದ ಕೊರತೆ: ಹಿರಿಯ ಆಟಗಾರರನ್ನು ಕೈಬಿಟ್ಟು ಟಿ20 ವಿಶ್ವಕಪ್ಗೆ ಯುವ ತಂಡವನ್ನು ಕಟ್ಟುವ ದೃಷ್ಟಿಯಿಂದ ದಕ್ಷಿಣ ಆಫ್ರಿಕಾ ಹಲವು ಹೊಸ ಮುಖಗಳಿಗೆ ಸ್ಥಾನ ನೀಡಿದೆ. ಅನುಭವದ ಕೊರತೆ ತಂಡವನ್ನು ಕಾಡಲಿದೆ. ಆದರೂ ಕಗಿಸೋ ರಬಾಡ, ಕ್ವಿಂಟನ್ ಡಿ ಕಾಕ್, ಡೇವಿಡ್ ಮಿಲ್ಲರ್ರಂತಹ ಆಟಗಾರರ ಏಕಾಂಗಿಯಾಗಿ ಪಂದ್ಯ ಗೆಲ್ಲಿಸುವ ಸಾಮರ್ಥ್ಯ ಹೊಂದಿದ್ದಾರೆ.
ಪಿಚ್ ರಿಪೋರ್ಟ್
ಮೊಹಾಲಿಯಲ್ಲಿ ಬುಧವಾರ ಮಳೆ ಮುನ್ಸೂಚನೆ ಇಲ್ಲ. ಇಲ್ಲಿನ ಪಿಚ್ ಸ್ಪರ್ಧಾತ್ಮಕ ಮೊತ್ತಕ್ಕೆ ಸಾಕ್ಷಿಯಾಗುವ ನಿರೀಕ್ಷೆ ಇದೆ. 2019ರ ಐಪಿಎಲ್ನಲ್ಲಿ ಇಲ್ಲಿ ನಡೆದ 7 ಐಪಿಎಲ್ ಪಂದ್ಯಗಳ ಮೊದಲ ಇನ್ನಿಂಗ್ಸ್ಗಳಲ್ಲಿ ಸರಾಸರಿ 171 ರನ್ ದಾಖಲಾಗಿತ್ತು. 7 ಪಂದ್ಯಗಳ ಪೈಕಿ 5ರಲ್ಲಿ ಗುರಿ ಬೆನ್ನತ್ತಿದ್ದ ತಂಡ ಗೆಲುವು ಸಾಧಿಸಿತ್ತು.
ಒಟ್ಟು ಮುಖಾಮುಖಿ: 13
ಭಾರತ: 08
ದ.ಆಫ್ರಿಕಾ: 05
ತಂಡಗಳ ಪಟ್ಟಿ
ಭಾರತ: ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕೃನಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ರಾಹುಲ್ ಚಹಾರ್, ಖಲೀಲ್ ಅಹ್ಮದ್, ದೀಪಕ್ ಚಹಾರ್, ನವ್ದೀಪ್ ಸೈನಿ.
ದ.ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ನಾಯಕ), ರಾಸ್ಸಿ ವಾನ್ ಡುಸ್ಸೆನ್, ತೆಂಬ ಬವುಮಾ, ಜೂನಿಯರ್ ಡಾಲಾ, ಬೊರ್ನ್ ಫೆäಟ್ರ್ಯುನ್, ಬ್ಯೂರನ್ ಹೆಂಡ್ರಿಕ್ಸ್, ರೀಜಾ ಹೆಂಡ್ರಿಕ್ಸ್, ಡೇವಿಡ್ ಮಿಲ್ಲರ್, ಏಂರಿಚ್ ನಾರ್ಟೆ, ಆ್ಯಂಡಿಲೆ ಫೆಲುಕ್ವಾಯೋ, ಡ್ವೇನ್ ಪ್ರಿಟೋರಿಯಸ್, ಕಗಿಸೋ ರಬಾಡ, ತಬ್ರೇಜ್ ಶಮ್ಸಿ, ಜಾಜ್ರ್ ಲಿಂಡೆ.
ಪಂದ್ಯ ಆರಂಭ: ಸಂಜೆ 7ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ 1