ಇತ್ತೀಚೆಗೆ ದುಬೈನಲ್ಲಿ ಮುಕ್ತಾಯಗೊಂಡ ಅಂಧರ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಮಣಿಸಿ ಭಾರತ ಚಾಂಪಿಯನ್ ಆಗಿತ್ತು. ರಾಜ್ಯದ ಪ್ರಕಾಶ್, ಸುನಿಲ್, ಬಸಪ್ಪ ಸ್ಥಾನ ಪಡೆದಿದ್ದರು.

ಬೆಂಗಳೂರು(ಜ.30): ಭಾರತ ತಂಡದ ಕ್ರಿಕೆಟ್ ಆಟಗಾರರಂತೆನಮಗೂ ಸೌಲಭ್ಯಗಳು ಬೇಕು. ರಾಜ್ಯ ಸರ್ಕಾರ ಅಂಧಕ್ರಿಕೆಟಿಗರರಿಗೂ ಸವಲತ್ತುಗಳನ್ನು ನೀಡಬೇಕು ಎಂದು ವಿಶ್ವವಿಜೇತ ಭಾರತ ಅಂಧರ ಕ್ರಿಕೆಟ್ ತಂಡದ ಆಟಗಾರ, ಕನ್ನಡಿಗ ಪ್ರಕಾಶ್ ಜಯರಾಮಯ್ಯ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಇತ್ತೀಚೆಗೆ ದುಬೈನಲ್ಲಿ ಮುಕ್ತಾಯಗೊಂಡ ಅಂಧರಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಮಣಿಸಿ ಭಾರತಚಾಂಪಿಯನ್ ಆಗಿತ್ತು. ರಾಜ್ಯದ ಪ್ರಕಾಶ್, ಸುನಿಲ್, ಬಸಪ್ಪ ಸ್ಥಾನ ಪಡೆದಿದ್ದರು. ಈ ವೇಳೆ ಮೂವರನ್ನುಗೌರವಿಸಲಾಯಿತು. ಬಳಿಕ ಮಾತನಾಡಿದ ಪ್ರಕಾಶ್, ಬೆಂಗಳೂರಿನಲ್ಲಿ ವಿಶ್ವಕಪ್ ಗೆದ್ದಾಗ ರಾಜ್ಯ ಸರ್ಕಾರ 7 ಲಕ್ಷ ನಗದು, ಸರ್ಕಾರಿ ನೌಕರಿ ನೀಡುವುದಾಗಿ ಹೇಳಿತ್ತು. ಆಭರವಸೆ ಇನ್ನೂ ಈಡೇರಿಲ್ಲ ಎಂದರು.