ಎಡಗೈ ವೇಗಿಯಾಗಿರುವ ಅರ್ಜುನ್ 8.2 ಓವರ್’ಗಳಲ್ಲಿ ಒಂದು ಮೇಡನ್ ಸಹಿತ 30 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಮೊದಲು ಬಂಗಾಳ ವಿರುದ್ಧದ ಪಂದ್ಯದಲ್ಲೂ ಮೂರು ವಿಕೆಟ್ ಕಬಳಿಸಿ ಮುಂಬೈ ಗೆಲುವಿಗೆ ಕಾರಣರಾಗಿದ್ದರು.

ಅಹ್ಮದಾಬಾದ್[ಅ.07]: 19 ವರ್ಷದೊಳಗಿನವರ ವಿನು ಮಂಕಡ್ ಟೂರ್ನಿಯಲ್ಲಿ ಗುಜರಾತ್ ವಿರುದ್ಧ ಮಿಂಚಿನ ಪ್ರದರ್ಶನ ತೋರುವ ಮೂಲಕ ಅರ್ಜುನ್ ತೆಂಡುಲ್ಕರ್ ಮುಂಬೈ ತಂಡಕ್ಕೆ ಗೆಲುವಿನ ಸಿಹಿ ನೀಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು ನಡೆದ ಪಂದ್ಯದಲ್ಲಿ ಗುಜರಾತ್’ನ ಪ್ರಮುಖ 5 ವಿಕೆಟ್ ಕಬಳಿಸುವ ಮೂಲಕ ಕೇವಲ 142 ರನ್’ಗಳಿಗೆ ನಿಯಂತ್ರಿಸಿದರು. ಸುಲಭ ಗುರಿ ಬೆನ್ನತ್ತಿದ ಮುಂಬೈ ತಂಡವು 9 ವಿಕೆಟ್’ಗಳ ಭರ್ಜರಿ ಜಯ ದಾಖಲಿಸಿತು.

ಎಡಗೈ ವೇಗಿಯಾಗಿರುವ ಅರ್ಜುನ್ 8.2 ಓವರ್’ಗಳಲ್ಲಿ ಒಂದು ಮೇಡನ್ ಸಹಿತ 30 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಮೊದಲು ಬಂಗಾಳ ವಿರುದ್ಧದ ಪಂದ್ಯದಲ್ಲೂ ಮೂರು ವಿಕೆಟ್ ಕಬಳಿಸಿ ಮುಂಬೈ ಗೆಲುವಿಗೆ ಕಾರಣರಾಗಿದ್ದರು.